ಆಹುತಾತ್ಮರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರಿಸಿದ್ದು
ಚು Wikipedia python library
೪ ನೇ ಸಾಲು:
ಧರ್ಮದ ವಿಚಾರದಲ್ಲಿನ ಭಿನ್ನಾಭಿಪ್ರಾಯಗಳನ್ನು ಭಿನ್ನಸಂಪ್ರದಾಯಗಳನ್ನು ಗೌರವದಿಂದ, ಸಹನೆಯಿಂದ ಕಾಣುವುದು ತುಂಬ ಹಿಂದಿನ ಕಾಲದಿಂದ ನಡೆದುಕೊಂಡು ಬಂದಿರುವ ಸದ್ಭಾವನೆ. ಬೌದ್ಧರು, ಜೈನರು, ವೈದಿಕರು ಒಂದು ಸಮಯದವರು ಇನ್ನೊಂದು ಸಮಯದವರ ಮೇಲೆ ವಾಗ್ಯುದ್ಧ ನಡೆಸಿದ ಪ್ರಸಂಗಗಳು ಉಲ್ಲೇಖಿತವಾಗಿವೆಯೇ ವಿನಾ ಒಂದು ಸಮಯದವರು ಪರಸಮಯದವರ ಮೇಲೆ ಎರಗಿ ಕೊಂದದ್ದು ಉಲ್ಲೇಖಿತವಾಗಿಲ್ಲವೆಂದು ಎನ್ಸೈಕ್ಲೋಪೀಡಿಯಾ ಆಫ್ ರಿಲಿಜನ್ ಅಂಡ್ ಎಥಿಕ್ಸ್ನಲ್ಲಿ ಸೇಂಟ್ಸ್ ಅಂಡ್ ಮಾರ್ಟರ್ಸ್ ಎಂಬ ಲೇಖನವನ್ನು ಬರೆದಿರುವ ಇ.ಜೆ. ಥಾಮಸ್ ಸ್ಪಷ್ಟಪಡಿಸಿದ್ದಾನೆ. ಆದರೆ ಬೌದ್ಧ ಜಾತಕಕಥೆಗಳಲ್ಲಿ (ಜಾತಕ 313) ಬೋಧಿಸತ್ತ್ವ ಧರ್ಮವನ್ನು ಬೋಧಿಸಿದ್ದಕ್ಕಾಗಿ ಅವನನ್ನು ದೊರೆ ಸಿಗಿದು ಹಾಕಿಸಿದನೆಂದು ವರ್ಣಿತವಾಗಿದೆ. ಬುದ್ಧ, ಮಹಾವೀರರು, ವೈದಿಕಧರ್ಮಕ್ಕೆ ಪ್ರತಿಯಾಗಿ ಬೋಧಿಸಿದರೂ ವೈದಿಕರು ಯಾರೂ ಅವರನ್ನು ಕೊಲ್ಲಲು ಪ್ರಯತ್ನಿಸಲಿಲ್ಲ. ಅವರು ಒಂದೆರಡು ಸಲ ಅಪಾಯಕ್ಕೆ ಗುರಿಯಾದದ್ದು ತಮ್ಮ ಶಿಷ್ಯರಿಂದಲೇ. ಬುದ್ಧನೂ ಮಹಾವೀರನೂ ಎಂಬತ್ತರ ಮುಪ್ಪಿನವರೆಗೆ ಬದುಕಿ ನಿರ್ವಾಣ ಹೊಂದಿದ್ದು ಭಾರತದ ಸಹನಾನೀತಿಗೆ ದೃಷ್ಟಾಂತಗಳು.
ಒಂದು ಧ್ಯೇಯಕ್ಕಾಗಿ ಜೀವಿಸಿ ಶ್ರಮಿಸಿ, ವಿರೋಧಿಗಳು ಕೊಟ್ಟ ಎಲ್ಲ ಹಿಂಸೆಯನ್ನೂ ಸಹಿಸಿ, ಅದಕ್ಕಾಗಿಯೇ ಪ್ರಾಣಕೊಟ್ಟವರಲ್ಲಿ ಅತಿ ಹಿಂದಿನವನೆಂದರೆ ಸಾಕ್ರಟೀಸ್, ಅತಿ ನವೀನರೆಂದರೆ ಮಹಾತ್ಮಗಾಂಧಿ, ಮಾರ್ಟಿನ್ ಲೂಥರ್ ಕಿಂಗ್.
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
"https://kn.wikipedia.org/wiki/ಆಹುತಾತ್ಮರು" ಇಂದ ಪಡೆಯಲ್ಪಟ್ಟಿದೆ