ಅಹಿಂಸೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Navamadi.s (ಚರ್ಚೆ | ಕಾಣಿಕೆಗಳು) No edit summary |
Navamadi.s (ಚರ್ಚೆ | ಕಾಣಿಕೆಗಳು) No edit summary |
||
೧ ನೇ ಸಾಲು:
[[File:Lord Mahavir Gold.jpg|thumb|right|[[Mahavira]], The Torch-bearer of Ahimsa]]
[[File:Portrait Gandhi.jpg|thumb|[[Mohandas Karamchand Gandhi|Gandhi]] promoted the principle of Ahimsa very successfully by applying it to all spheres of life, particularly to politics.]]
'''ಅಹಿಂಸೆ''' ಎಂದರೆ ಹಿಂಸೆ ಮಾಡದಿರುವುದು ಎಂದರ್ಥ. ಅದು ಯಾವುದೇ ರೀತಿಯ ಹಿಂಸೆಯ ಪ್ರಯೋಗವಿಲ್ಲದೆ ಜೀವನ ಸಾಗಿಸುವ ಅಥವಾ ಗುರಿಯನ್ನು ಸಾಧಿಸುವ ಒಂದು ತತ್ವ. ಆ ಗುರಿಯು ವೈಯುಕ್ತಿಕವಾಗಿರಬಹುದು, ಸಾಮಾಜಿಕ ಬದಲಾವಣೆ ಇರಬಹುದು ಅಥವಾ ಒಂದು ಧೋರಣೆಯ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುವಿಕೆಯೂ ಇರಬಹುದು. ಭಾರತೀಯ ಧರ್ಮಗಳಲ್ಲಿ ([[ಹಿಂದೂ_ಧರ್ಮ|ಹಿಂದೂಧರ್ಮ]], [[ಬೌದ್ಧಧರ್ಮ|ಬೌದ್ಧಧರ್ಮ]] ಮತ್ತು ವಿಶೇಷವಾಗಿ [[ಜೈನ_ಧರ್ಮ|ಜೈನಧರ್ಮ]])ಈ ತತ್ವವು ಒಂದು ಪ್ರಧಾನ ಪಾತ್ರವಹಿಸುತ್ತದೆ.
ಯೇಸು, ಬುದ್ಧ, ಬಸವ, ಗಾಂಧಿ ಮತ್ತು ಅಂಬೇಡ್ಕರ್ ಮೊದಲಾದ ಸಮಾಜ ಸುಧಾರಕರು ಅಹಿಂಸೆಗೆ ಹೆಚ್ಚು ಒತ್ತುಕೊಟ್ಟಿರುವುದನ್ನು ನಾವು ಕಾಣಬಹುದಾಗಿದೆ. ಅಹಿಂಸೆಯೇ ಪರಮ ಧರ್ಮ ಎನ್ನುತ್ತದೆ ಮಾನವನ ತಿಳಿವಳಿಕೆ. ಹೇಳುವುದು ಸುಲಭ; ಹೇಳಿದಂತೆ ಬಾಳುವುದು ಕಡುಕಷ್ಟ. ಹಿಂಸೆ ಕೇವಲ ದೇಹಕ್ಕೆ ಸಂಬಂಧಿಸಿದ್ದಲ್ಲ, ಮನಸ್ಸಿಗೂ ಅನ್ವಯಿಸಿದ್ದು. ದೈಹಿಕ ಹಿಂಸೆ ಕಣ್ಣಿಗೆ ಕಾಣುವುದು. ಮಾನಸಿಕ ಹಿಂಸೆ ಕಣ್ಣಿಗೆ ಕಾಣದ್ದು. ದೈಹಿಕ ಹಿಂಸೆಯ ಕ್ರೌರ್ಯ ಶಾಬ್ದಿಕ ಅಬ್ಬರದ್ದು. ಮಾನಸಿಕ ಹಿಂಸೆಯ ನೋವು ರಣಮೌನದ್ದು. ಜಗತ್ತಿನಲ್ಲಿ ಎಲ್ಲ ಧರ್ಮಗಳು ಹಿಂಸೆಯನ್ನು ವಿರೋಧಿಸಿವೆ; ಜೀವದಯೆಯನ್ನು ಪ್ರತಿಪಾದಿಸಿವೆ. [[ವರ್ಗ:ಸಮಾಜ]]
|