ಭಾರತದ ರಾಷ್ಟ್ರೀಯ ಚಿಹ್ನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು {{commonscat|Emblem of India}}
No edit summary
೫ ನೇ ಸಾಲು:
 
{{commonscat|Emblem of India}}
==ಅಶೋಕ ಸ್ತಂಭ ಚಿತ್ರದ ಅಂಚೆ ಚೀಟಿಯ ಕಥೆ==
 
೧೯೪೭ರ ಆಗಸ್ಟ ೧೫ರಂದು ಭಾರತ ಸ್ವತಂತ್ರವಾದಾಗ ಆ ಸಂತಸವನ್ನು ಅಂಚೆಚೀಟಿಗಳ ಮೂಲಕ ಹಂಚಿಕೊಳ್ಳಲು ಸಾಧ್ಯವಾಗಲಿಲ್ಲ. ಯಾಕೆಂದರೆ ಆಗ ಅಂಚೆಚೀಟಿಗಳನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡುವ ಸಂವಿಧಾನಿಕ ಸಂಸ್ಥೆ ಇನ್ನೂ ಅಸ್ತಿತ್ವದಲ್ಲಿ ಬಂದಿರಲಿಲ್ಲ. ಹೀಗಾಗಿ ಸ್ವತಂತ್ರ ಭಾರತದ ಮೊದಲ ಅಂಚೆಚೀಟಿ ಬಿಡುಗಡೆಯಾಗಲು ಸುಮಾರು ೯೯ ದಿನಗಳ ಕಾಲ ಕಾಯಬೇಕಾಯಿತು! ಹೀಗೆ ಮೊದಲ ಅಂಚೆಚೀಟಿಯು ತ್ರಿವರ್ಣ ಧ್ವಜವನ್ನು ಹೊತ್ತು ೧೯೪೭ರ ನವಂಬರ ೨೧ರಂದು ಬಿಡುಗಡೆಯಾಯಿತು. ಅದಾಗಿ ೨೪ ದಿನಗಳ ಬಳಿಕ ಡಿಸೆಂಬರ ೧೫ರಂದು ಭಾರತದ ರಾಷ್ಟ್ರೀಯ ಚಿಹ್ನೆಯಾದ ಅಶೋಕ ಸ್ತಂಭದ ಮೇಲಿರುವ ಚತುರ್ಮುಖ ಸಿಂಹಗಳ ಚಿತ್ರವನ್ನು ಹೊತ್ತು ಎರಡನೆಯ ಅಂಚೆಚೀಟಿ ಹೊರಬಂದಿತು.
 
ಈ ಅಂಚೆಚೀಟಿಗಳಲ್ಲಿ ಬಳಸಿದ ಚಿತ್ರವು ಭಾರತದ ಭಾರತದ ರಾಷ್ಟ್ರೀಯ ಚಿಹ್ನೆಯದ್ದಾಗಿದೆ. ಮೌರ್ಯ ವಂಶದ ಚಕ್ರವರ್ತಿ ಸಾಮ್ರಾಟ ಅಶೋಕನು ವಾರಣಾಸಿಯ ಬಳಿಯ ಸಾರಾನಾಥದಲ್ಲಿ ಸ್ಥಾಪಿಸಿದ ಕಂಬದ ತುದಿಯಲ್ಲಿನ ನಾಲ್ಕು ಮುಖದ ಸಿಂಹದ ಚಿತ್ರವನ್ನು ನಮ್ಮ ರಾಷ್ಟ್ರಚಿಹ್ನೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಮೌರ್ಯ ಸಾಮ್ರಾಟ ಚಂದ್ರಗುಪ್ತನ ಮೊಮ್ಮಗನೂ, ಬಿಂದುಸಾರನ ಮಗನೂ ಆಗಿದ್ದ ಅಶೋಕನು ಕಳಿಂಗ ರಾಜ್ಯದ ಮೇಲೆ ದಂಡೆತ್ತಿಹೋದಾಗ ನಡೆದ ಲಕ್ಷಾಂತರ ಸೈನಿಕರ ಮಾರಣಹೋಮ, ಹರಿದ ನೆತ್ತರಿನ ಕೋಡಿಯನ್ನು ಕಂಡು ಜಿಗುಪ್ಸೆಗೊಂಡು ಬೌದ್ಧಮತವನ್ನು ಸ್ವೀಕರಿಸುತ್ತಾನೆ. ತಾನು ನಂಬಿದ ತತ್ವಗಳನ್ನು ಪ್ರಸಾರಮಾಡಲು ಅನೇಕ ಶಿಲಾಶಾಸನಗಳನ್ನೂ, ಸ್ಥೂಪಗಳನ್ನೂ, ಕಂಬಗಳನ್ನೂ ಸ್ಥಾಪಿಸುತ್ತಾನೆ.
[[ವರ್ಗ:ರಾಷ್ಟ್ರೀಯ ಚಿಹ್ನೆಗಳು]]
[[ವರ್ಗ:ಭಾರತ|ಚಿಹ್ನೆ]]