ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೮೮ ನೇ ಸಾಲು:
*ಆಲಮಟ್ಟಿ ಎಡದಂಡೆ ಕಾಲುವೆ ಜಾಲದ ಮೂಲಕ 4.60 ಟಿಎಂಸಿ ನೀರನ್ನು ಮುದ್ದೇಬಿಹಾಳ ಮತ್ತು ಬಸವನಬಾಗೇವಾಡಿ ತಾಲ್ಲೂಕಿನ 20,235 ಹೆಕ್ಟೇರ್‌ ಪ್ರದೇಶಕ್ಕೆ ಒದಗಿಸಲಾಗುತ್ತಿದೆ. ಇದಕ್ಕಾಗಿ ₹232.67 ಕೋಟಿ ಖರ್ಚು ಮಾಡಲಾಗಿದೆ. ಇದಲ್ಲದೆ ಚಿಮ್ಮಲಗಿ ಏತ ನೀರಾವರಿ ಯೋಜನೆ ಜಾರಿಗೂ ಕ್ರಮ ಕೈಗೊಳ್ಳಲಾಗಿದೆ.
*ಭೂಸ್ವಾಧೀನ ಪಡಿಸಿಕೊಳ್ಳಬೇಕಾದ 1,34,107 ಎಕರೆ ಪೈಕಿ 60 ಸಾವಿರ ಎಕರೆ ಪ್ರದೇಶದ ಭೂಸ್ವಾಧೀಣಕ್ಕೆ 11(1) ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಮತ್ತು ಪುನರ್‌ವಸತಿಗೆ ತಗಲುವ ವೆಚ್ಚ ₹ 31,894 ಕೋಟಿ ಎಂದೂ ಅಂದಾಜಿಸಲಾಗಿದೆ. ಭೂಸ್ವಾಧೀನ ಮತ್ತು ಪುನರ್‌ವಸತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕ್ರಿಯಾ ಯೋಜನೆ ಪರಿಶೀಲನಾ ಸಮಿತಿ ರಚಿಸಲಾಗಿದೆ. ಮುಳುಗಡೆ ಹೊಂದುವ 20 ಗ್ರಾಮಗಳ ಪೈಕಿ 11 ಗ್ರಾಮಗಳ ಮುಳುಗಡೆ ತಡೆಯಲು ವಿನೂತನ ತಾಂತ್ರಿಕ ಪರಿಹಾರ ಕಂಡುಕೊಳ್ಳಲೂ ಯತ್ನಿಸಲಾಗುತ್ತಿದೆ.
==ತೆಲಂಗಾಣಾ ಉದಯದ ನಂತರದ ಸಮಸ್ಯೆ==
*ಆಂಧ್ರ ಪ್ರದೇಶವು, ಆಂದ್ರ ಮತ್ತು ತೆಲಂಗಾಣಾ ಎಂದು ವಿಭಝಿತವಾದ ಮೇಲೆ ಕೃಷ್ಣಾನದಿನೀರು ಹಂಚಿಕೆ ಸಮಸ್ಯೆ ಎದುರಾಗಿ ಕೃಷ್ಣಾ ನದಿ ನ್ಯಾಯಾಧಿಕರಣದಮುಂದೆ ತೆಂಗಾಣಾ ಆಂದ್ರ ಗಳ ನೀರಿನ ಹಂಚಿಕೆಯ ಅರ್ಜಿ ವಿಚಾರಣೆಗೆ ಬಂದಿತ್ತು. ಕೃಷ್ಣಾನದಿ ನೀರನ್ನು ಮರು ಹಂಚಿಕೆ ಮಾಡಬೇಕು ಎಂದು ತೆಲಂಗಾಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದ್ದು, ಯೋಜನಾವಾರು ನೀರು ಹಂಚಿಕೆ ಸಾಧ್ಯವಿಲ್ಲ ಎಂದು ಕೃಷ್ಣಾ ನದಿ ನ್ಯಾಯಾಧಿಕರಣ ಮಹತ್ವದ ತೀರ್ಪು ನೀಡಿದೆ. ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕು. ಕೃಷ್ಣಾ ನದಿ ನೀರಿನ ಬಗ್ಗೆ ಮತ್ತೆ ಪ್ರಾರಂಭದಿಂದಲೇ ವಿಚಾರಣೆ ನಡೆಸಬೇಕು ಎಂದು ತೆಲಂಗಾಣ ಸರ್ಕಾರ ಸುಪ್ರೀಂಕೋರ್ಟ್‌ ಹಾಗೂ ನ್ಯಾಯಾಧಿಕರಣದ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬೃಜೇಶ್‌ ಕುಮಾರ್‌ ನೇತೃತ್ವದ ನ್ಯಾಯಾಧಿಕರಣವು ಆಂಧ್ರಪ್ರದೇಶಕ್ಕೆ ನೀಡಲಾಗಿರುವ ನೀರನ್ನೇ ತೆಲಂಗಾಣವು ಹಂಚಿಕೊಳ್ಳಬೇಕು ಎಂದು ತೀರ್ಪು ನೀಡಿದ್ದು ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಮಾತ್ರ ನೀರು ಹಂಚಿಕೆ ಸಾಧ್ಯ ಎಂದು ಹೇಳಿದೆ.
 
*ಕೃಷ್ಣಾ ನ್ಯಾಯಾಧಿಕರಣವು 2010ರಲ್ಲಿ ಅಂತಿಮ ಐ ತೀರ್ಪು ಮತ್ತು 2013ರ ಸ್ಪಷ್ಟತಾ ತೀರ್ಪುಗಳ ಮೂಲಕ ಕೃಷ್ಣಾ ಕೊಳ್ಳದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ರಾಜ್ಯಗಳಿಗೆ ನೀರು ಹಂಚಿಕೆ ಮಾಡಿತ್ತು. ಇದರನ್ವಯ '''ಮಹಾರಾಷ್ಟ್ರಕ್ಕೆ 666 ಟಿಎಂಸಿ, ಕರ್ನಾಟಕಕ್ಕೆ 907 ಟಿಎಂಸಿ ಮತ್ತು ಆಂಧ್ರಪ್ರದೇಶಕ್ಕೆ 1005 ಟಿಎಂಸಿ ನೀರನ್ನು ಹಂಚಿಕೆಯಾಗಿದೆ.''' ಆದರೆ ಆಂಧ್ರಪ್ರದೇಶ ಪುನರ್‌ ರಚನೆ ಕಾಯ್ದೆ-2014ರ ಅಡಿಯಲ್ಲಿ ಆಂಧ್ರಪ್ರದೇಶ ವಿಭಜನೆಗೊಂಡು ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ವಿಂಗಡಣೆಯಾದ ಕಾರಣ ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕೆಂದು ತೆಲಂಗಾಣ ಕೋರಿತ್ತು, ಈ ಕೋರಿಕೆಗೆ ಮಹಾರಾಷ್ಟ್ರ ಮತ್ತು ಕರ್ನಾಟಕ ವಿರೋಧ ಸೂಚಿಸಿತ್ತು.<ref>[http://www.prajavani.net/news/article/2016/10/19/446045.html ಆಂಧ್ರಪ್ರದೇಶದ ನೀರನ್ನೇ ತೆಲಂಗಾಣ ಹಂಚಿಕೊಳ್ಳಬೇಕು;19 Oct, 2016]</ref>
 
==ಆಲಮಟ್ಟಿ ಉದ್ಯಾನವನದ ಚಿತ್ರಗಳು==
<gallery>
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ