'''ಶಿವನಸಮುದ್ರಶತ''' [[ಮಂಡ್ಯ]] ಜಿಲ್ಲೆಯ [[ಮಳವಳ್ಳಿ]] ತಾಲೂಕಿನ ಒಂದು ಸಣ್ಣ ಊರು. [[ಕಾವೇರಿ ನದಿ|ಕಾವೇರಿ ನದಿಯ]] ದಂಡೆಯಲ್ಲಿ ಇರುವ ಈ ಊರಿನ ಬಳಿ ನದಿಯು ಎರಡು ಕವಲುಗಳಾಗಿ ''ಗಗನಚುಕ್ಕಿ'' ಮತ್ತು ''ಭರಚುಕ್ಕಿ'' ಎಂಬ [[ಜಲಪಾತ|ಜಲಪಾತಗಳನ್ನು]] ಸೃಷ್ಟಿಸುತ್ತದೆ. ಇಲ್ಲಿ [[೧೯೦೨|೧೯೦೨ರಲ್ಲಿ]] [[ಜಲವಿದ್ಯುತ್ ಉತ್ಪಾದನಾ ಕೇಂದ್ರ]] ಒಂದನ್ನು ಸ್ಥಾಪಿಸಲಾಯಿತು. ಇಡೀ [[ಏಷ್ಯಾ]] ಖಂಡದಲ್ಲಿಯೇ ಸ್ಥಾಪನೆಯಾದ ಮೊಟ್ಟ ಮೊದಲ ಜಲವಿದ್ಯುತ್ ಉತ್ಪಾದನಾ ಕೇಂದ್ರ ಇದು.ಇಷ್ಟೇ ಅಲ್ಲದೆ,ಈ ಜಲವಿದ್ಯುತ್ ಉತ್ಪಾದನಾ ಕೇಂದ್ರದಿಂದ ಮೊದಲ ಬಾರಿಗೆ ಕೋಲರಕ್ಕೆ ವಿದ್ಯುತ್ತನ್ನು ಕಳೆಸಲಾಗಿತ್ತು.<ref>http://www.bangaloreindia.org.uk/excursions/shivanasamudra-waterfalls.html</ref>ಈ ಶಿಂಷಾ ಜಲವಿದ್ಯುದಾಗಾರದ ಬಳಿಯಿರುವ ಗಗನಚುಕ್ಕಿಯ ಹರವು ಕಡಿಮೆ. ಆದರೆ ಎತ್ತರ ಹಾಗೂ ರಭಸ ಹೆಚ್ಚು. [[ಮಧ್ಯರಂಗ]] ಕ್ಷೇತ್ರದ ಬಳಿಯಿರುವ ಭರಚುಕ್ಕಿ ಜಲಪಾತದಲ್ಲಿ ನೀರಿನ ಪ್ರಮಾಣ ಸ್ವಲ್ಪ ಕಡಿಮೆ. ಆದರೆ ನದಿಯ ಹರವು ವಿಶಾಲ. [[ಬೆಂಗಳೂರು]]-[[ಕೊಳ್ಳೇಗಾಲ]] ಹೆದ್ದಾರಿಯ ಅಂಚಿನಲ್ಲಿರುವ ಗಗನಚುಕ್ಕಿಯನ್ನು ತಲುಪುವುದು ಸುಲಭ. ಆದರೆ ಭರಚುಕ್ಕಿ ತಲುಪಲು ಸ್ವಂತ ವಾಹನವೇ ಬೇಕು. ನೀರಿನ ರಭಸ ಎರಡೂ ಕಡೆ ತೀವ್ರ. ಕಣಿವೆ ಕೊಳ್ಳ ಪ್ರದೇಶವಾದ್ದರಿಂದ ಜಲಪಾತಗಳ ತಳಕ್ಕೆ ಇಳಿಯುವುದು ಕಠಿಣ ಹಾಗೂ ಅತಿ ಅಪಾಯಕಾರಿ.