ಪಟ್ಟದಕಲ್ಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಇನ್ನಷ್ಟು ಮಾಹಿತಿ
ಚು ದೇವಾಲಯದ ಹೆಸರನ್ನು
೧೮ ನೇ ಸಾಲು:
ಈ ಸ್ಥಳ ಚಾಳುಕ್ಯರ ಮಟ್ಟಿಗೆ ಅತ್ಯಂತ ಪ್ರಮುಖ ಸ್ಥಳ. ಚಾಳುಕ್ಯರ ಎಲ್ಲ ದೊರೆಗಳು ಇಲ್ಲಿನ ಉತ್ತರವಾಹಿನಿಯಲ್ಲಿ ಸ್ನಾನಗೈದ ನಂತರವೇ ಪಟ್ಟಾಭಿಷಿಕ್ತರಾಗುತ್ತಿದ್ದರಂತೆ. ಆದ್ದರಿಂದಲೇ ಈ ಸ್ಥಳಕ್ಕೆ 'ಪಟ್ಟದಕಲ್ಲು' ಎಂಬ ಹೆಸರು ಬಂದಿದೆ. ಕ್ರಿ ಶ 150ರಷ್ಟು ಹಿಂದೆಯೇ ಇತಿಹಾಸದಲ್ಲಿ ಈ ಊರಿನ ಪ್ರಸ್ತಾಪ ಸಿಗುತ್ತದೆ. ಪ್ರಸಿದ್ಧ ಇತಿಹಾಸಕಾರ ಟಾಲೆಮಿ ಉಲ್ಲೇಖದಲ್ಲಿ ಇದು 'ಪೇತಗಲ್' ಎಂದು ಅನೇಕ ಶಾಸನಗಳ್ಲಿ 'ಪಟ್ಟದ ಕಿಸುವೊಳಲ್' ಎಂದೂ ಉಲ್ಲೇಖಿತವಾಗಿದೆ. ಇಲ್ಲಿರುವ ಅನೇಕ ದೇವಾಲಯಗಳಲ್ಲಿ ಹತ್ತು ದೇವಾಲಯಗಳು ಶೈವ ಸಂಪ್ರದಾದವುಗಳಾಗಿದ್ದರೆ ಉಳಿದವು ಜೈನ ಹಾಗು ಇತರ ಮತಗಳ ದೇವಾಲಯಗಳಾಗಿವೆ. ಇಲ್ಲಿನ ದೇವಾಲಯಗಳಲ್ಲಿ ವಾಸ್ತುವಿನ್ಯಾಸ ಉತ್ತುಂಗವನ್ನು ತಲುಪಿದ್ದನ್ನು ಕಾಣುತ್ತೇವೆ.ಆ ಕಾರಣಕ್ಕಾಗೇ ಇಂದಿಗೂ ಅಸಂಖ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ.
 
ಈ ಸಮುಚ್ಚಯದಲ್ಲಿನ ಗಮನಸೆಳೆಯುವ ಪ್ರಮುಖ ದೇವಾಲಯಗಳೆಂದರೆ ವಿರೂಪಾಕ್ಷ ಹಾಗು ಮಲ್ಲಿಕಾರ್ಜುನ ದೇವಾಲಯಗಳು. ಈ ಎರಡೂ ದೇವಾಲಯಗಳ ವಿಶೇಷತೆಯೆಂದರೆ ಇವುಗಳನ್ನು ೨ನೇ ವಿಕ್ರಮಾದಿತ್ಯನು ತಮ್ಮ ಸಾಂಪ್ರದಾಯಿಕ ವೈರಿಗಳಾಗಿದ್ದ ಪಲ್ಲವರ ಮೇಲೆ ಸಾಧಿಸಿದ ದಿಗ್ವಿಜಯದ ನೆನಪಿಗಾಗಿ ಅವನ ಇಬ್ಬರು ರಾಣಿಯರು ಕಟ್ಟಿಸಿರುವುದು. ಇವು ಕಂಚಿಯಲ್ಲಿನ ರಾಮೇಶ್ವರಕೈಲಾಸ್ ನಾಥರ್ ದೇವಾಲಯದ ವಾಸ್ತುವಿನಿಂದ ಪ್ರಭಾವಿತವಾಗಿರುವುದು ಎದ್ದು ಕಾಣುತ್ತದೆ.
 
ಅದರಲ್ಲೂ ವಿರೂಪಾಕ್ಷ ದೇವಾಲಯ ಒಂದು ಪರಿಪೂರ್ಣ ದೇವಾಲಯ ವಾಸ್ತುವಿಗೆ ಉದಾಹರಣೆಯಾಗಿದೆ. ಇದು ಕ್ರಿ ಶ 740ರಲ್ಲಿ ಹಿರಿಯ ರಾಣಿಯಾದ ಲೋಕಮಹಾದೇವಿಯಿಂದ ಕಟ್ಟಿಸಲ್ಪಟ್ಟಿದೆ. ಇದು ಪೂರ್ವಾಭಿಮುಖವಾಗಿದ್ದು ಮುಂದಿರುವ ತೆರೆದ ಮಂಟಪದಲ್ಲಿ ಸುಂದರವಾದ ನಂದಿ ವಿಗ್ರಹವಿದೆ. ಪಶ್ಚಿಮ ದಿಕ್ಕನ್ನು ಹೊರತುಪಡಿಸಿ ಉಳಿದೆಲ್ಲ ದಿಕ್ಕುಗಳಲ್ಲಿ ಮುಖಮಂಟಪವಿದ್ದು ದೇವಾಲಯದ ಒಳಗೆ ಸಭಾಮಂಟಪ ಹಾಗು ಪ್ರದಕ್ಷಿಣಾ ಪಥವಿದೆ. ಪ್ರವೇಶದಲ್ಲೇ ಇರುವ ವೇದಿಕೆ ಮೇಲೆ ವಸ್ತ್ರಾಭರಣಗಳಿಂದ ಶೋಭಿತರಾದ ರಾಜ ದಂಪತಿಗಳ ವಿವಿಧ ಭಂಗಿಯ ಶಿಲ್ಪಗಳು ಮನಸೆಳೆಯುತ್ತವೆ. ಇವು ವಿಕ್ರಮಾದಿತ್ಯ ಹಾಗು ರಾಣಿ ಲೋಕಮಹಾದೇವಿಯನ್ನು ಬಿಂಬಿಸುತ್ತವೆ(?). ಈ ದೇವಾಲಯದ ಶಿಲ್ಪಿ ಸರ್ವಸಿದ್ಧಿ ಆಚಾರಿ ಎಂಬುವವನು.ಇವನಿಗೆ ವಿಕ್ರಮಾದಿತ್ಯನು 'ಪೆರ್ಜೆರಿಪು' ಎಂಬ ಬಿರುದನ್ನು ಕೊಟ್ಟು ಸನ್ಮಾನಿಸಿರುವ ಬಗ್ಗೆ ಶಾಸನ ಬರೆಸಲಾಗಿದೆ. ಇಂಥ ಸುಂದರ ದೇವಾಲಯವೇ ಮುಂದೆ ರಾಷ್ಟ್ರಕೂಟರ ೧ನೇ ಕೃಷ್ಣನು ಎಲ್ಲೋರದಲ್ಲಿ ಕಟ್ಟಿಸಿದ ಕೈಲಾಸನಾಥ ಗುಹಾಲಯಕ್ಕೆ ಮುಖ್ಯ ಸ್ಫೂರ್ತಿಯಾಯಿತು.
"https://kn.wikipedia.org/wiki/ಪಟ್ಟದಕಲ್ಲು" ಇಂದ ಪಡೆಯಲ್ಪಟ್ಟಿದೆ