ಜ್ಯೋತಿಷ ಮತ್ತು ವಿಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೯ ನೇ ಸಾಲು:
*ಪಂಚಾಂಗ ರಚನೆಯಲ್ಲಿ ಅನೇಕ ಸಿದ್ಧಾಂತಗಳಿದ್ದೂ, ಅವುಗಳಲ್ಲಿ ಪರಸ್ಪರ ಚಂದ್ರ ಮತ್ತು ನಕ್ಷತ್ರದ ಚಲನೆಯ ಕಾಲಮಾನಗಳಲ್ಲಿ ವ್ಯತ್ಯಾಸವಿರುತ್ತದೆ. ಎಲ್ಲರೂ ತಮ್ಮ ಕ್ರಮವೇ ಸರಿ ಎನ್ನುತ್ತಾರೆ. ಇದು ಹೇಗಾದರೂ ಇರಲಿ. ಭಾರತದ ಬಹಳ ಜನ, ಪಂಚಾಂಗ ಕರ್ತರು ಸ್ಥಿರಬಿಂದುವಿನಿಂದ ಪ್ರಾರಂಭವಾಗುವ ನಿರಯನ ಪದ್ದತಿಯನ್ನೇ ಅನುಸರಿಸುತ್ತಾರೆ. ಆದರೆ ಖಗೋಲ ಶಾಸ್ತ್ರದ ಪ್ರಕಾರ ಸುಮಾರು ೭೨ ವರ್ಷಕ್ಕೆ ಒಂದು ಅಂಶದಷ್ಟು (ಡಿಗ್ರಿ) ನಕ್ಷತ್ರ ಉದಯದಲ್ಲಿ ಮುಂದೆ ಸರಿಯುತ್ತದೆ. ಭಾಸ್ಕರಾಚಾರ್ಯರು ಹಿಂದೆ ಪಂಚಾಂಗ ರಚನೆ ಮಾಡುವಾಗ ಈ ವ್ಯತ್ಯಾಸವನ್ನು ಅಯನಾಂಶ ಎಂದು ಲೆಕ್ಕ ಹಾಕಿ ಪಂಚಾಂಗ ರಚಿಸಿದ್ದರು. ಇದಕ್ಕೆ ಸಾಯನ ಪದ್ದತಿ ಎಂದು ಹೆಸರು. ಅವರು ನಂತರ ಕಾಲ ಕಾಲಕ್ಕೆ ಪಂಚಾಂಗ ಪರಿಷ್ಕರಣವನ್ನು ಸೂಚಿಸಿದ್ದರು. ಆದರೆ ಅದು ಆಗಿಲ್ಲ. ೧೯೯೮ನೇ ಸಾಲಿಗೆ ಭಾಸ್ಕಾರಾಚಾರ್ಯರು ರಚಿಸಿದ ನಕ್ಷತ್ರ, ಗ್ರಹ, ರಾಶಿಗಳ ಲೆಕ್ಕಕ್ಕೂ ಖಗೋಲ ಶಾಸ್ತ್ರದ ಪ್ರಕಾರ ಸುಮಾರು ೨೩ಅಂಶ(ಡಿಗ್ರಿ), ೪೯ ಕಲೆಗಳಷ್ಟು ವ್ಯತ್ಯಾಸವಾಗಿದೆ. ಎಂದರೆ ಈಗಿನ ನಿರಯನ ಪದ್ದತಿಯಲ್ಲಿ ಅಶ್ವಿನಿ ನಕ್ಷತ್ರದ ಒಂದನೇ ಪಾದದಲ್ಲಿ ಜನಿಸಿದವನ ನಕ್ಷತ್ರ , ಸಾಯನ ಪದ್ದತಿಯಲ್ಲಿ ಎಂದರೆ ಖಗೋಲ ಶಾಸ್ತ್ರದ ಪ್ರಕಾರ ಭರಣಿ ನಕ್ಷತ್ರದ ಮೂರನೇ ಪಾದವಾಗಬೇಕು. ಕುಂಡಲಿಯಲ್ಲಿ ಎಲ್ಲಾ ಗ್ರಹಗಳನ್ನೂ ೨೩ ಅಂಶ ೪೯ ಕಲೆಗಳಷ್ಟು ಮುಂದೆ ಗುರುತಿಸಬೇಕಾಗುವುದು. ಉದಾಹರಣೆಗೆ ೧೦-೦೬-೯೮ ಬೆಳಿಗ್ಗೆ ೬ಗಂಟೆ ೬ ನಿಮಿಷಕ್ಕೆ ಜನಿಸಿದವನ ಕುಂಡಲಿಯಲ್ಲಿ ನಿರಯನ ಪ್ರಕಾರ ಜನ್ಮ ನಕ್ಷತ್ರ ಜೇಷ್ಠಾ ೩ನೇ ಪಾದ, ಆದರೆ ವೈಜ್ಞಾನಿಕವಾಗಿ ಸಾಯನ ರೀತಿಯಲ್ಲಿ ಪೂರ್ವಾಷಾಢ ೨ನೇ ಪಾದವಾಗುತ್ತದೆ.
==ಒಂದು ವ್ಯಕ್ತಿಯ ಕುಂಡಲಿ==
-----------------
* ಇನ್ನೊಂದು ಉದಾಹರಣೆ :- 2-3-2000 ದಲ್ಲಿ ಬೆಳಿಗ್ಗೆ 8.4೦
ಕ್ಕೆ ಜನಿಸಿದ ಮಗುವಿನ ಜಾತಕದಲ್ಲಿ ಪೂರ್ವ ದಿಕ್ಕಿನಲ್ಲಿ ಉದಯಿಸುತ್ತಿರುವ ಅಂಶ -(ಲಗ್ನ)