ಕನ್ನಡದಲ್ಲಿ ಸಾಂಗತ್ಯಕಾವ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೭ ನೇ ಸಾಲು:
 
==1೬ನೆಯ ಶತಮಾನ==
16ನೆಯ ಶತಮಾನದಲ್ಲಿ ಶ್ರೇಷ್ಠ ಸಾಂಗತ್ಯಕೃತಿಗಳು ಸೃಷ್ಟಿಯಾದವು. ಈ ಶತಮಾನದಲ್ಲಿ ಸುಮಾರು ಇಪ್ಪತ್ತೆಂಟು ಸಾಂಗತ್ಯಕೃತಿಗಳು ಹುಟ್ಟಿಕೊಂಡಿವೆ. ಮೂರನೆಯ ಮಂಗರಸನ ನೇಮಿಜಿನೇಶ ಸಂಗತಿ, ಪ್ರಭಂಜನಚರಿತೆ, ಶ್ರೀಪಾಲ ಚರಿತೆಗಳು, ನಂಜುಂಡನ ರಾಮನಾಥಚರಿತೆ, ಕನಕದಾಸರ ಮೋಹನತರಂಗಿಣಿ, ರತ್ನಾಕರವರ್ಣಿಯ ಭರತೇಶವೈಭವ, ರಾಮರಸ ವಿರೂಪಾಕ್ಷ, ಬೊಂಬೆಯ ಲಕ್ಕ, ಹಲಗ,ಪಾಯಣ್ಣ ವತ್ರಿ(೧೬೦೦) ಸಮ್ಯಕ್ತ್ವಕೌಮುದಿ, ಓದುವಗಿರಿಯ ಇವರ ಸಾಂಗತ್ಯಕೃತಿಗಳು ಹೆಸರಿಸತಕ್ಕವು. ಈ ಶತಮಾನದ ಮತ್ತೊಂದು ಕೃತಿ ಕಿಕ್ಕೇರಿಯಾರಾಧ್ಯ ನಂಜುಂಡ ವಿರಚಿತ ಭೈರವೇಶ್ವರಕಾವ್ಯ. ಇದು ಛಂದಸ್ಸಿನ ದೃಷ್ಟಿಯಿಂದ ವಿದ್ವಾಂಸರ ಗಮನವನ್ನು ಸೆಳೆದಿದೆ. ಇದರ ಸಂಪಾದಕರು ಈ ಕಾವ್ಯವನ್ನು ಷಟ್ಪದಿಯೆಂದು ನಿರ್ಧರಿಸಿ ಪ್ರತಿಪದ್ಯವನ್ನೂ ಆರು ಪಾದಗಳಾಗಿ ವಿಂಗಡಿಸಿ ಅಚ್ಚುಮಾಡಿದ್ದಾರೆ. ಅವರ ಅಬಿಪ್ರಾಯದಂತೆ ಪ್ರತಿ ಪದ್ಯದ ಒಂದು ಎರಡು ನಾಲ್ಕು ಮತ್ತು ಐದನೆಯ ಪಾದಗಳು ಶರಷಟ್ಪದಿಯಲ್ಲೂ ಮೂರು ಮತ್ತು ಆರನೆಯ ಪಾದಗಳು ಕುಸುಮಷಟ್ಪದಿಯಲ್ಲೂ ರಚಿತವಾಗಿವೆ. ಒಂದು ಪದ್ಯದ ಬೇರೆ ಬೇರೆ ಪಾದಗಳು ಬೇರೆ ಬೇರೆ ಛಂದಸ್ಸಿನಲ್ಲಿ ರಚಿತವಾಗಿರುವುದು ಕನ್ನಡ ಸಾಹಿತ್ಯದಲ್ಲಿ ಎಲ್ಲೂ ಕಂಡುಬರುವುದಿಲ್ಲ. ವಾಸ್ತವವಾಗಿ ಈ ಕಾವ್ಯದ ಛಂದಸ್ಸು ಸಾಂಗತ್ಯ, ಷಟ್ಪದಿಯಲ್ಲ. ಪ್ರತಿ ಪದ್ಯದಲ್ಲೂ ಖಂಡ ಪ್ರಾಸವಿರುವುದೇ ಈ ಭ್ರಾಂತಿಗೆ ಕಾರಣ. ಈ ರೀತಿ ಖಂಡಪ್ರಾಸವನ್ನು ಒಳಕೊಂಡಿರುವ ಕೃತಿಗಳು ಇನ್ನೂ ಕೆಲವು ಕಂಡುಬರುತ್ತವೆ.
 
==17ನೆಯ ಶತಮಾನ==