ಸಾರಾ ಅಬೂಬಕ್ಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೧೩ ನೇ ಸಾಲು:
==ಜನನ, ಜೀವನ==
==ಕಾದಂಬರಿ==
ಅಣ್ಣ ತಂದುಕೊಡುತ್ತಿದ್ದ ವೈಕಂ ಮಹಮದ್ ಬಷೀರ್ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರಲ್ಲಿ ಬರೆಯಬೇಕೆಂಬ ಅಂತರಾಳದ ಒತ್ತಡ ನಿರಂತರವಾಗಿ ಹೊರಹೊಮ್ಮುತ್ತಿತ್ತು. ಹಲವಾರು ವರ್ಷ ಸಾಮಾಜಿಕ ಸಮಸ್ಯೆಗಳ ಮಥನದಿಂದಾಗಿ ಎಂ.ಕೆ.ಇಂದಿರಾ ಅವರಂತೆ ನಲವತ್ತು ದಾಟಿದ ನಂತರ ಸಾರಾ ಅಬೂಬಕ್ಕರ್ ಬರೆಯಲು ಪ್ರಾರಂಭಿಸಿದರು. ಹೀಗೆ ಅವರು ಬರೆದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ [[ಪಿ.ಲಂಕೇಶ್|ಲಂಕೇಶ್]] ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ದ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯಿತು. ಆ ನಂತರದಲ್ಲಿ ಸಾರಾ ಅವರು ಬರೆದ ಇತರ ಹಲವಾರು ಕಾದಂಬರಿಗಳೆಂದರೆ-
# ಚಂದ್ರಗಿರಿಯ ತೀರದಲ್ಲಿ- ೧೯೮೪
# ಸಹನಾ, - ೧೯೮೫
# [[ವಜ್ರ]]ಗಳು,
# ಕದನವಿರಾಮ, - ೧೯೮೮
# ಸುಳಿಯಲ್ಲಿ ಸಿಕ್ಕವರು,೧೯೯೪
೬೦ ನೇ ಸಾಲು:
# ಸಂದೇಶ ಪ್ರಶಸ್ತಿ,
# ಅನುಪಮ ಪ್ರಶಸ್ತಿ,
# [[ಕರ್ನಾಟಕ]] ರಾಜ್ಯೋತ್ಸವ ಪ್ರಶಸ್ತಿ,
# [[ಹಂಪಿ]] ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ,
# ಮಾಸ್ತಿ ಪ್ರಶಸ್ತಿ,
೬೯ ನೇ ಸಾಲು:
==ಹೆಣ್ಣು ಮಕ್ಕಳಿಗೆ ಶಿಕ್ಷಣ==
ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಬೇಕೆಂದು ನಿರಂತರವಾಗಿ ಪ್ರತಿಪಾದಿಸುವ ಸಾರಾ ಅಬೂಬಕ್ಕರ್ “ಹೆಣ್ಣು ಮಕ್ಕಳು ಪ್ರಾಣಿಗಳು, ಹೆರಲು ಇರುವ ಯಂತ್ರಗಳು ಎಂದು ಬಿಂಬಿಸಿರುವ ಸಮಾಜ ನಮ್ಮದು. ಇಸ್ಲಾಂನ ಮೂಲದಲ್ಲಿ ಹೆಣ್ಣಿಗೆ ಅಪಾರ ಗೌರವವಿವೆ. ಆದರೆ [[ಸೌದಿ ಅರೇಬಿಯಾ]] ಮೂಲದ `ವಹಾದಿಸಂ’ ಅನ್ನು ಮುಂದಿಟ್ಟುಕೊಂಡು ಈಗೀಗ ವಿಶ್ವದ ನಾನಾ ಭಾಗಗಳಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬಾರದು ಎಂದೆಲ್ಲಾ ವಾದಿಸುತ್ತಿದ್ದಾರೆ. ಮಹಿಳೆಗೆ ಶಿಕ್ಷಣ ಸಿಗಬೇಕು. ಅದರಲ್ಲೂ ತಾಯಂದಿರಿಗೆ ಅಕ್ಷರ ಜ್ಞಾನ ಬೇಕು. ಆದರೆ [[ಕೇರಳ]], ಕರ್ನಾಟಕ ಕರಾವಳಿ ಭಾಗದ ಬಹುತೇಕ ಮುಸ್ಲಿಂ ಕುಟುಂಬಗಳಲ್ಲಿನ ತಾಯಂದಿರಿಗೆ ಶಿಕ್ಷಣ ಇಲ್ಲ. ಎಲ್ಲೋ ದೂರದ ದುಬೈನಲ್ಲೋ, ಮತ್ತೊಂದೆಡೆಯೋ ಕುಳಿತ ಪತಿ ಹಣ ಕಳುಹಿಸುತ್ತಾನೆ. ಅದನ್ನು ಮಕ್ಕಳು ಮಜಾ ಮಾಡುತ್ತಾರೆ. ಹಣವನ್ನು ಸರಿಯಾಗಿ ನಿರ್ವಹಿಸಲೂ ಬಾರದ ಮಕ್ಕಳು ಕುಟುಂಬ ಸಮೇತ ಹಾಳಾಗಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಹಾಗಾಗಿ ಮಹಿಳೆಯನ್ನು ಶಿಕ್ಷಣದಿಂದ ವಂಚಿಸುವುದು ಸರಿಯಲ್ಲ.” ಎಂದು ಸ್ಪಷ್ಟಪಡಿಸುತ್ತಾರೆ.
==ಮಾಹಿತಿ ಕೊಂಡಿಗಳು==
|