ರಾಮನ್ ಪರಿಣಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಸ್ತರಣೆ
೧೦ ನೇ ಸಾಲು:
ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆಮಾಡಲು ಹೊರಟ ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯವನ್ನು ಕಂಡುಹಿಡಿದರು. ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು.
 
ಕೋಲ್ಕತಾದ ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್‌ನಲ್ಲಿ ರಾಮನ್ ಅವರು ತಮ್ಮ ಸಹೋದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ ೧೯೩೦ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲಮೊಟ್ಟಮೊದಲ ನೊಬೆಲ್ ಪುರಸ್ಕಾರವೂ ಹೌದು.
 
ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳಿರುವುದನ್ನು ನಾವು ನೋಡಬಹುದು (ಗಾಜಿನ ಪಟ್ಟಕದ ಮೂಲಕ ಬೆಳಕನ್ನು ಹಾಯಿಸುವ ಉದಾಹರಣೆ ನೆನಪಿಸಿಕೊಳ್ಳಿ). ಹೀಗೆ ಚದುರಿದ ಬಹುಪಾಲು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತದಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕಿಂತ ಬದಲಾಗಿರುತ್ತದೆ. ರಾಮನ್ ಪರಿಣಾಮವೆಂದು ಕರೆಯುವುದು ಇದನ್ನೇ. ತರಂಗಾಂತರದಲ್ಲಿನ ಈ ಬದಲಾವಣೆಗೂ ಪಾರದರ್ಶಕ ವಸ್ತುವಿನ ರಚನೆಗೂ ಸಂಬಂಧವಿರುವುದರಿಂದ ಈ ವಿದ್ಯಮಾನವನ್ನು ಅಧ್ಯಯನಮಾಡುವ ಮೂಲಕ ವಸ್ತುವಿನ ರಚನೆಯ ಬಗ್ಗೆ ತಿಳಿದುಕೊಳ್ಳುವುದು ಸಾಧ್ಯವಾಗುತ್ತದೆ.
"https://kn.wikipedia.org/wiki/ರಾಮನ್_ಪರಿಣಾಮ" ಇಂದ ಪಡೆಯಲ್ಪಟ್ಟಿದೆ