ರಾಜಾ ರವಿ ವರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಬಾಹ್ಯಸಂಪರ್ಕ: {{Commons category|Raja Ravi Varma}}
No edit summary
೩ ನೇ ಸಾಲು:
 
 
'''ರಾಜಾ ರವಿವರ್ಮ'''( ೨೯, ಏಪ್ರಿಲ್, ೧೮೪೮-೨, ಅಕ್ಟೋಬರ್, ೧೯೦೬ ) - ಭಾರತದ ಸುಪ್ರಸಿದ್ಧ ವರ್ಣಚಿತ್ರಗಾರ.
 
== ಆರಂಬಿಕ ಬದುಕು ==
ರಾಜಾ ರವಿವರ್ಮರು ಕಿಳಿಮಾನೂರು ಊರಿನ, ರಾಜವಂಶಕ್ಕೆ ಸೇರಿದವರು. ಈ ಗ್ರಾಮ, [[ತಿರುವನಂತಪುರ]]ದ ಉತ್ತರಕ್ಕೆ, ೨೫ ಮೈಲಿ ದೂರದಲ್ಲಿದೆ. ಕಂಡನೂರು ದೆಶತ್ತ್ ಮತ್ತು ಉಮಾ ಅಂಬಾಬಾಯಿಯವರ ಒಲವಿನ ಮಗನಾಗಿ, ೨೯, ಆಗಸ್ಟ್, [[೧೮೪೮]] ರಲ್ಲಿ ರವಿವರ್ಮರು ಜನಿಸಿದರು. ತಾಯಿ ಕವಯಿತ್ರಿ, ಮತ್ತು ಸುಸಂಸ್ಕೃತರು. ತಂದೆ, [[ಸಂಸ್ಕೃತ]]ವನ್ನು ಓದಿಕೊಂಡವರು. ಚಿಕ್ಕಂದಿನಿಂದಲೂ ರವಿಯವರು ದೈವಭಕ್ತರು. ಆಚಾರ, ನಿಷ್ಠೆ, ಆತ್ಮಸ್ಥೈರ್ಯ, ಮತ್ತು ಆತ್ಮವಿಶ್ವಾಸಗಳು, ಅವರಿಗೆ ಹುಟ್ಟಿನಿಂದಲೆ ಬಂದಿದ್ದವು. ಪ್ರತಿದಿನ ಬೆಳಿಗ್ಯೆ ಬೇಗ ಎದ್ದು, ನಿತ್ಯಕರ್ಮಗಳನ್ನು ಮುಗಿಸಿ, ಸೌಂದರ್ಯಲಹರಿ, ಸ್ವಯಂವರ, ಮಂತ್ರಗಳನ್ನು ಬಾಯಿಪಾಠವಾಗಿ ಹೇಳುತ್ತಿದ್ದರು.
 
ರವಿ, [ ರವಿವರ್ಮರನ್ನು ಬಾಲ್ಯದಲ್ಲಿ ಗೆಳೆಯರು ಹಾಗೆಯೇ ಕರೆಯುತ್ತಿದ್ದದ್ದು ] [[ಸಾಹಿತ್ಯ]], [[ವ್ಯಾಕರಣ]], [[ಶಾಸ್ತ್ರೀಯ ಸಂಗೀತ]], ಮತ್ತು ವೇದಪುರಾಣಗಳಲ್ಲಿ ಆಸಕ್ತರು. [[ರಾಮಾಯಣ]], [[ಮಹಾಭಾರತ]], ಅವರಿಗೆ ಬಲು ಪ್ರಿಯವಾದ ಗ್ರಂಥಗಳು. ಅಮರಕೋಶ, ಸಿದ್ಧರೂಪ, ಅವರಿಗೆ ೫ ನೆ ವಯಸ್ಸಿನಲ್ಲೇ ಬಾಯಿಪಾಠವಾಗಿತ್ತು. ಅವರ ಮಾವ, ರಾಜರಾಜವರ್ಮರು ಒಳ್ಳೆಯ ಕಲಾಸಾಧಕರು. ಅವರು ಆಗಿನ ತಿರುವಾಂಕೂರಿನ ಮಹಾರಾಜರಾದ, ಆಯಿಲ್ಯಂ ತಿರುನಾಳ್ ರವರಿಗೆ ರವಿಯನ್ನು ಪರಿಚಯಿಸಿದರು. ಆಗ ರವಿಗೆ ಕೇವಲ ೧೪ ವರ್ಷ ವಯಸ್ಸು. ದೊರೆಗಳು ರವಿಗೆ ಆಗಿನಕಾಲದ ಪ್ರಮುಖ ಚಿತ್ರಕಲಾವಿದರು ರಚಿಸಿದ, ಸಚಿತ್ರ ಪುಸ್ತಕವನ್ನು ಕೊಟ್ಟು ಅದನ್ನು ಅಭ್ಯಸಿಸಲು ಹೇಳಿದರು. ಅಳಗಿರಿ ನಾಯ್ಡು ಅವರನ್ನು ಪರಿಚಯಿಸಿ, ಅವರಬಳಿ ತಮ್ಮ ಕಲಾಭ್ಯಾಸವನ್ನು ಮುಂದುವರೆಸಲು ಅನುಮತಿ ನೀಡಲಾಯಿತು.
 
== ತಿ[[ತಿರುವನಂತಪುರ|ರುವನಂತಪುರ]]ದ ಅರಮನೆಯ ಆಸ್ಥಾನಕಲಾವಿದನಾಗಿ ==
೧೮೬೬ ರಲ್ಲಿ, "ವೀರಶೃಂಖಲೆ ", ಪ್ರಶಸ್ತಿಯ ಜೊತೆಗೆ, [[ತಿರುವನಂತಪುರ]]ದ ಅರಮನೆಯ ಆಸ್ಥಾನಕಲಾವಿದನಾಗಿ, ನೇಮಿಸಲ್ಪಟ್ಟರು ; ತಿಂಗಳಿಗೆ ೫೦ ರೂಗಳ ಮಾಸಾಶನದ ಏರ್ಪಾಡುಮಾಡಲಾಯಿತು. ೧೮೬೮ ರಲ್ಲಿ, ಥಿಯೊಡರ್ ಜೆನ್ಸನ್, ಎಂಬ ಐರೋಪ್ಯ ಚಿತ್ರಕಲಾಕಾರನು [[ಕೇರಳ]]ಕ್ಕೆ ಬಂದಿದ್ದನು. ತನ್ನ ಐರೋಪ್ಯ ಚಿತ್ರಕಲೆಯ ವಿವರಗಳನ್ನು ತೋರಿಸಿ ಅಲ್ಲಿನ ಭಾವ ವೈವಿಧ್ಯತೆಗಳನ್ನು ವಿವರಿಸಿದನು. ತೈಲ ವರ್ಣಚಿತ್ರಗಳ ಸಂಯೋಜನೆಯನ್ನು ಅವನು ರವಿಗೆ ಹೆಳಿಕೊಟ್ಟನು. ಭಾರತೀಯ ಚಿತ್ರಕಲೆಯಲ್ಲಿ ತುಂಬಬೇಕಾದ, ಗಂಭೀರ ವದನ, ಮಹಿಳೆಯಲ್ಲಿ ಇರಬೇಕಾದ ನಾಚಿಗೆ, ವಿಸ್ಮಯ, ಭೀತಿ, ಚಾಂಚಲ್ಯ, ಧೀರತೆ, ಮಂದಹಾಸ, ಇತ್ಯಾದಿಗಳನ್ನು ನಮ್ಮ ದೇಶದ ವರ್ಣಚಿತ್ರಗಳಲ್ಲಿ ಮಾತ್ರ ಕಾಣಬಹುದು. ರವಿಯವರು ಅದನ್ನು ತಾವೇ ವೀಕ್ಷಿಸಿ ಕಲಿತುಕೊಂಡರು. ಮತ್ತು ರವಿ ದೂರದಿಂದ ನೋಡಿಯೇ ಹಲವಾರು ಸೂಕ್ಷ್ಮತೆಗಳನ್ನು ಗಮನಿಸಿ ಮನನಮಾಡಿದರು. ಅರಮನೆಯಲ್ಲಿ ಚಿತ್ರಕಲೆಗಾಗಿಯೇ ಒಂದು ಪ್ರತ್ಯೇಕ ಕೊಠಡಿಯನ್ನು ಮೀಸಲಾಗಿಟ್ಟಿದ್ದರು. ಹಿರಿಯ ಕಲಾವಿದರಾದ, ರಾಮಸ್ವಾಮಿ ನ್ಯಾಕರ್, ಮತ್ತು ಆರ್ಮುಗಂ ಪಿಳ್ಳೆಯವರ ಪ್ರಭಾವವೂ, ರವಿಯವರಮೇಲೆ ಆಯಿತು. ಈ ಗುರುಗಳು ರವಿಯವರಿಗೆ ತಕ್ಕ ಕಲಾಮೂಲ ಅಡಿಪಾಯವನ್ನು ಸುಸ್ಥಿರವಾಗಿ ಹಾಕಿಕೊಟ್ಟಿದ್ದರಿಂದ ಕಲೆಯ ಹೊಸ ಹೊಸ ಪದ್ಧತಿಗಳು, ವಿನ್ಯಾಸಗಳೂ ಬಂದಾಗ, ಪ್ರಾಕಾರಗಳನ್ನು ಅರಿಯಲು ಅವರಿಗೆ ತೊಂದರೆಯೇನೂ ಆಗಲಿಲ್ಲ. ರವಿವರ್ಮರು ತಮ್ಮ ಸ್ವಂತ ಸಹಾಯದ ಕಲಿಕೆಯಿಂದಲೇ ಕಲೆಯನ್ನು ತಮ್ಮದಾಗಿಸಿಕೊಂಡರು. ಕಲೆಗೆ ಪೂರಕವಾದ ಮಾಹಿತಿಗಳನ್ನು ಅವರು, ಪುರಾಣ ಪುಣ್ಯಕಥೆಗಳನ್ನು ಪಠಿಸುವ ಮೂಲಕ ತಮ್ಮ ಕಲಾ-ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಂಡರು. ರವಿಯವರ ವಿವಾಹ, ರಾಜಕುಟುಂಬಕ್ಕೆ ಸೇರಿದ ಪುರೂರು ಟ್ಟಾತಿನಾಳ್ ರಾಣಿ,(ರಾಣಿ ಭಾಗೀರತಿಬಾಯಿ)(ಕೊಚ್ಚು ಪಂಗಿ ಅಮ್ಮ) ಎಂಬ ಕನ್ಯೆಯೊಡನೆ ನೆರವೇರಿತು. ಈಕೆ ಮಾವೇಲಿಕ್ಕರ ಮನೆತನದವಳು. ಈ ದಂಪತಿಗಳಿಗೆ ೩ ಗಂಡುಮಕ್ಕಳು ಹಾಗೂ ೨ ಹೆಣ್ಣು ಮಕ್ಕಳು ಜನಿಸಿದರು. ಚೊಚ್ಚಲು ಮಗ ಕೇರಳವರ್ಮ, ೧೮೭೬ ರಲ್ಲಿ ಜನಿಸಿದನು. ಎರಡನೆಯ ಮಗ ರಾಮವರ್ಮ ೧೮೭೯ ರಲ್ಲಿ ಹುಟ್ಟಿದ . ಮೂರನೆಯ ಮಗನೇ ರಾಜ ರಾಜ ವರ್ಮ. ಮಹಾಪ್ರಭ, ಮತ್ತು ಉಮಬಾಯಿ ಹೆಣ್ಣುಮಕ್ಕಳು. ಮಹಾಪ್ರಭ ತಂದೆಯವರ ೨ ಪ್ರಸಿದ್ಧ ತೈಲಚಿತ್ರಗಳಿಗೆ ರೂಪದರ್ಶಿಯಾಗಿದ್ದರು. ಇವರ ಮಗಳೇ ಮಹರಾಣೀ ಸೇತುಲಕ್ಷ್ಮಿ ಬಾಯಿ. ಈಕೆ [[ತಿರುವಂತಪುರ]]ದ ಮಹಾರಾಜರನ್ನು ಮದುವೆಯಾಡಳು. ಕೇರಳವರ್ಮ ೧೯೧೨ ರಲ್ಲಿ ಎಲ್ಲೋ ಕಾಣೆಯಾದನು. ಅವನ ಯಾವ ಸುಳಿವೂ ತಿಳಿಯಲಿಲ್ಲ. ರಾಮವರ್ಮ, [[ಬೊಂಬಾಯಿ]]ನ ಜೆ. ಜೆ. ಸ್ಕೂಲ್ ಆಫ್ ಆರ್ಟ್ಸ ನಲ್ಲಿ ಚಿತ್ರಕಲಾವಿದ್ಯಾಭ್ಯಾಸಮಾಡಿದನು. ಈತನು ದಿವಾನ್ ಪೀ. ಜಿ. ಎನ್ ಉನ್ನಿಥನ್ ರವರ ಸೋದರಿ, ಗೌರಿ ಕುಂಜಮ್ಮನವರೊಂದಿಗೆ ವಿವಾಹ ಮಾಡಿಕೊಂಡನು.
 
"https://kn.wikipedia.org/wiki/ರಾಜಾ_ರವಿ_ವರ್ಮ" ಇಂದ ಪಡೆಯಲ್ಪಟ್ಟಿದೆ