Srinivas ujire
Joined ೨೩ ಏಪ್ರಿಲ್ ೨೦೧೫
Content deleted Content added
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೩ ನೇ ಸಾಲು:
ಸೀತಾ ಪರಿತ್ಯಾಗ:-
ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ. ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು
ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ
|