ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೭೪ ನೇ ಸಾಲು:
==ಲಂಕೆಯಲ್ಲಿ ಯುದ್ಧ==
* ಸಮುದ್ರಕ್ಕೆ ಸೇತುವೆಯನ್ನು ಕಟ್ಟದೆ ಹೋದರೆ, ಹನುಮಂತನ ಹೊರತು ಬೇರಾರೂ ಅದನ್ನು ದಾಟಲಾರರು ಎಂದು ರಾಮನು ನಿರ್ಣಯಿಸಿದನು. ವ್ಯರ್ಥವಾಗಿ ಮೂರು ದಿನ ಕಾದರೂ ತನ್ನನ್ನು ಅಲಕ್ಷಿಸಿದ್ದಕ್ಕಾಗಿ ಸಿಟ್ಟಿಗೆದ್ದ ರಾಮನು ತನ್ನ ಬಾಣಗಳನ್ನು ಸಮುದ್ರಕ್ಕೆ ಗುರಿಯಿಡಲು
* ವಿಷ್ಣು ಮತ್ತು ಇಂದ್ರ , ರಾಮನ ಪಕ್ಷವನ್ನೂ ಅಸುರರು ರಾವಣನ ಪಕ್ಷವನ್ನೂ ವಹಿಸಿದರು. ಎರಡೂ ಪಕ್ಷಗಳಿಗೆ ಮಿಶ್ರಫಲಗಳೊಡನೆ ಯುದ್ಧ ಸ್ವಲ್ಪ ಕಾಲ ನಡೆದ ನಂತರ ರಾಮ-ರಾವಣರ ನಡುವೆ ನೇರ ಹೋರಾಟದ ಮೂಲಕ ಯುದ್ಧದ ಫಲಿತಾಂಶವನ್ನು ಘೋಷಿಸುವುದೆಂದು ತೀರ್ಮಾನಿಸ ಲಾಯಿತು. ಈ ಕಾಳಗದ ತೀವ್ರತೆಯಿಂದ ದೇವ-ದೇವತೆಗಳೂ ಭೀತರಾದರು. ರಾಮನ ಪ್ರತಿಯೊಂದು ಬಾಣವೂ ರಾವಣನ ಒಂದು ತಲೆ ಕತ್ತರಿಸಿದರೂ ಅದು ಮತ್ತೆ ಬೆಳೆಯುತ್ತಿತ್ತು.
* ಏನು ಮಾಡಬೇಕೆಂದು ತೋಚದೆ ಇದ್ದ ರಾಮನಿಗೆ ರಾವಣನ ದೇಹದತ್ತ ಗುರಿಯಿಡುವಂತೆ ವಿಭೀಷಣ ತಿಳಿಸಿಕೊಟ್ಟ.ಈ ಉಪಾಯ ಫಲಿಸಿ ರಾವಣ ಉರುಳಿ ಬಿದ್ದಂತೆ, ಆಕಾಶದಿಂದ ಪುಷ್ಪಗಳು ರಾಮನ ಮೇಲೆ ಮಳೆಗರೆದವು. ಅವನ ಕಿವಿಗಳಲ್ಲಿ ದೈವೀ ಸಂಗೀತ ಅನುರಣಿಸಿತು. ರಾವಣನ ಪತ್ನಿ ಮಂಡೋದರಿಯ ವಿಲಾಪವನ್ನು ಕೇಳಿದ ರಾಮ ರಾವಣನಿಗೆ ಶಾಸ್ತ್ರೋಕ್ತ ಅಂತ್ಯ ಸಂಸ್ಕಾರವನ್ನು ಮಾಡಿ ಲಂಕೆಯನ್ನು ಪ್ರವೇಶಿಸಿದನು. ಸಂತೋಷದಿಂದ ಬೀಗುತ್ತಿದ್ದ ಸೀತೆ ರಾಮನ ಜೊತೆಗೂಡಿದಳು.
* ಆದರೆ ಅವಳ ಸಂತೋಷ ತಾತ್ಕಾಲಿಕವಾಗಿತ್ತು. ತಲೆ ತಗ್ಗಿಸಿ ಅವಳನ್ನು ಬರಮಾಡಿಕೊಂಡ ರಾಮ, ರಾವಣನ ಮನೆಯಲ್ಲಿ ಅವಳು ಇದ್ದುದರಿಂದ ತನ್ನ ಪತ್ನಿಯಾಗಲು ಅವಳು ತಕ್ಕವಳಾಗಿ ಉಳಿದಿಲ್ಲವೆಂದು ಹೇಳಿದ. ತನ್ನ ಪಾತಿವ್ರತ್ಯದ ಬಗ್ಗೆ ಅವನಿಗೆ ಭರವಸೆಯಿತ್ತಳು ಸೀತೆ.
* ಸೀತೆ ಚಿತೆಯನ್ನೇರಿ ಕೆಲ ಕ್ಷಣಗಳಲ್ಲಿಯೇ ಅಗ್ನಿ ಆಕೆಯನ್ನು ತನ್ನ ಬಾಹುಗಳಲ್ಲಿ ಎತ್ತಿ ತಂದು ಬಿಟ್ಟನು. ಅಗ್ನಿಪರೀಕ್ಷೆಯಲ್ಲಿ ತನ್ನ ನಿರಪರಾಧವನ್ನು ತೋರಿಸಿದ ಸೀತೆಯನ್ನು ರಾಮ ಸ್ವಾಗತಿಸಿದನು. ರಾಮನ ನಡತೆಯನ್ನು ಸೀತೆ ಕ್ಷಮಿಸಿದಳು. ಯುದ್ಧವನ್ನು ಗೆದ್ದು, ರಾವಣನನ್ನು ಸೋಲಿಸಿ, ಸೀತೆಯನ್ನು ಮರಳಿ ಪಡೆದು, ರಾಮ ವಿಜೃಂಭಣೆಯಿಂದ ಅಯೋಧ್ಯೆಗೆ ಮರಳಿ ಭರತ ಮತ್ತು ಅಯೋಧ್ಯೆಯ ಜನರ ಅಪಾರ ಸಂತೋಷಕ್ಕೆ ರಾಜ್ಯಭಾರವನ್ನುವಹಿಸಿಕೊಂಡನು.
|