ಅಹಿಂಸೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪ ನೇ ಸಾಲು:
==ಅಹಿಂಸೆ ಅರ್ಥ==
'''ಅಹಿಂಸೆ''' ಎಂದರೆ ಹಿಂಸೆ ಮಾಡದಿರುವುದು ಎಂದರ್ಥ. ಅದು ಯಾವುದೇ ರೀತಿಯ ಹಿಂಸೆಯ ಪ್ರಯೋಗವಿಲ್ಲದೆ ಜೀವನ ಸಾಗಿಸುವ ಅಥವಾ ಗುರಿಯನ್ನು ಸಾಧಿಸುವ ಒಂದು ತತ್ವ. ಆ ಗುರಿಯು ವೈಯುಕ್ತಿಕವಾಗಿರಬಹುದು, ಸಾಮಾಜಿಕ ಬದಲಾವಣೆ ಇರಬಹುದು ಅಥವಾ ಒಂದು ಧೋರಣೆಯ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುವಿಕೆಯೂ ಇರಬಹುದು.
ಗಾಂಧೀಜಿಯವರೇನು ಅಹಿಂಸಾತತ್ತ್ವದ ಜನಕರಲ್ಲ. ಏಕೆಂದರೆ ಭಾರತೀಯ ದರ್ಶನದಲ್ಲಿ ಅದರಲ್ಲಿಯೂ ಜೈನ ಮತ್ತು ಬೌದ್ಧದರ್ಶನದಲ್ಲಿ, ಅಹಿಂಸಾತತ್ತ್ವ ಮತ್ತು ಅದರ ಆಚರಣೆ ಅತ್ಯಂತ ಸಮರ್ಥರೀತಿಯಲ್ಲಿ ನಿರೂಪಿತವಾಗಿದೆ. ಆದರೂ ಗ್ರಂಥಸ್ಥವಾದ ಈ ತತ್ತ್ವ ಗಾಂಧಿಜಿಯವರ ಬದುಕಿನಲ್ಲಿ ಜೀವಂತಗೊಂಡು ನಮ್ಮ ಸಮಕಾಲೀನ ಯುಗದಲ್ಲಿ ಒಂದು ಪವಾಡವನ್ನೇ ಎಸಗಿದೆ. ಸ್ಥೂಲವಾಗಿ ನೋಡಿದಾಗ ಅಹಿಂಸೆ ಎಂದರೆ ಕೊಲ್ಲದಿರುವುದು ಅಥವಾ ಹಿಂಸಿಸದಿರುವುದು ಎಂದಾದರೂ ಇದರ ಸೂಕ್ಷ್ಮ ಹಾಗೂ ವಿಸ್ತುೃತವಾದ ಅರ್ಥವನ್ನು ಗ್ರಹಿಸಲು ಗಾಂಧೀಜಿಯವರ ಬದುಕು ಮತ್ತು ಬೋಧನೆಗಳೆರಡನ್ನೂ ಅವಲೋಕಿಸಬೇಕಾಗುತ್ತದೆ. ಸತ್ಯನಿಷ್ಠನಾದ ಹಾಗುಹಾಗೂ ಅಹಿಂಸೆಯ ಪ್ರಯೋಗದಲ್ಲಿ ತೊಡಗಿದ ಗಾಂಧೀಜಿ ಯವರು ಇದು ಕೇವಲ ಒಂದು ಧಾರ್ಮಿಕ ನಿಯಮ ಮಾತ್ರವಲ್ಲ; ಇದು ಆರ್ಥಿಕ, ಸಾಮಾಜಿಕ, ರಾಜಕೀಯವೇ ಮುಂತಾದ ಎಲ್ಲ ರಂಗಗಳಲ್ಲಿಯೂ ಪ್ರತಿಧ್ವನಿತವಾಗುವಂಥ ವಿಶ್ವವ್ಯಾಪಿತತ್ತ್ವ. ಚರಾಚರಾತ್ಮಕವಾದ ಜಗತ್ತೆಲ್ಲವೂ ಈ ತತ್ತ್ವಕ್ಕೆ ತಲೆಬಾಗಿ ನಡೆಯುತ್ತದೆ- ಎಂಬುದನ್ನು ಕಂಡುಕೊಂಡರು. ಅಹಿಂಸೆಯ ವಿಶ್ವರೂಪದರ್ಶನ ಇವರಿಗಾದಂತೆಲ್ಲ. ಈ ಮಹತ್ತತ್ತ್ವದ ಪೂರ್ಣ ವ್ಯಾಖ್ಯಾನ ಮಾನವನಿಂದ ಸಾಧ್ಯವಾಗದು, ತಮ್ಮಿಂದಂತೂ ಸಾಧ್ಯವಾಗಿಲ್ಲ ಎಂಬುದನ್ನು ಬಹುದುಃಖದಿಂದ ಹೇಳಿಕೊಂಡರು. ಆದರೂ ಅಹಿಂಸೆಯ ಸಾಧನೆ ತಮಗೆ ಅಳವಟ್ಟಷ್ಟರಿಂದಲೇ.ಅಳವಡಿಸಲ್ಪಟ್ಟದ್ದರಿಂದಲೇ ಅದಕ್ಕಿರುವ ಅಗಾಧ ಶಕ್ತಿಯ ಅರಿವು ತಮಗಾಯಿತೆಂಬ ತೃಪ್ತಿಯೂ ಇವರಲ್ಲಿ ಕಾಣತ್ತದೆಕಾಣುತ್ತದೆ. ವಿನಾಶಕಾರಿ ಅಸ್ತ್ರಗಳಿಂದೊದಗುವ ಯಾವ ಶಕ್ತಿಯೂ ಈ ಅಹಿಂಸೆಯ ಶಕ್ತಿಗೆ ಸರಿಸಮನಾಗಲಾರದೆಂದು ಇವರು ಹೇಳಿದರು. ಅಹಿಂಸೆಯಿಂದ ಸಾಧಿಸಲಾರದುದು ಜಗತ್ತಿನಲ್ಲಿ ಯಾವುದೂ ಇಲ್ಲ ಎಂಬುದೇ ಇವರ ಅನುಭವ. ಆದರೆ ಅಹಿಂಸೆಯ ಸಾಧಕನಲ್ಲಿ ಅಮಿತವಾದ ಸಾಮರ್ಥ್ಯವಿರಬೇಕೆಂಬುದನ್ನು ಹೇಳಲು ಇವರು ಮರೆತಿಲ್ಲ. ಭಾರತೀಯ ಧರ್ಮಗಳಲ್ಲಿ ([[ಹಿಂದೂ_ಧರ್ಮ|ಹಿಂದೂಧರ್ಮ]], [[ಬೌದ್ಧಧರ್ಮ|ಬೌದ್ಧಧರ್ಮ]] ಮತ್ತು ವಿಶೇಷವಾಗಿ [[ಜೈನ_ಧರ್ಮ|ಜೈನಧರ್ಮ]])ಈ ತತ್ವವು ಒಂದು ಪ್ರಧಾನ ಪಾತ್ರವಹಿಸುತ್ತದೆ.
 
 
"https://kn.wikipedia.org/wiki/ಅಹಿಂಸೆ" ಇಂದ ಪಡೆಯಲ್ಪಟ್ಟಿದೆ