ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೨ ನೇ ಸಾಲು:
# ಹೇಮಕೂಟ
 
<big>'''=== ಬಡವಿ ಲಿಂಗ'''</big> ===
೯ ಅಡಿಯ ದೇವಸ್ಥಾನವಾಗಿದ್ದು, ಲಕ್ಷ್ಮಿನರಸಿಂಹ ದೇವಸ್ಥಾನದ ಸಮೀಪವೆ ಕಾಣಸಿಗುತ್ತದೆ. ಇದರ ವಿಶಿಷ್ಟತೆಯೆಂದರೆ, ಇದು ಒಂದು ಪ್ರಾಚೀನ ಕಾಲುವೆಯ ಮುಖಾಂತರ ಹರಿದು ಬರುವ ನೀರಿನಿಂದ ಸದಾಕಾಲ ಆವೃತವಾಗಿರುತ್ತದೆ. ಈ ಲಿಂಗದಲ್ಲಿ ಮೂರು ಕಣ್ಣುಗಳನ್ನು ಕೆತ್ತಲಾಗಿದ್ದು, ಭಗವಾನ ಶಿವನ ಮೂರು ನೇತ್ರಗಳನ್ನು ಪ್ರತಿನಿಧಿಸುತ್ತದೆ. ಇದು ಕೂಡ ಭೇಟಿ ಕೊಡಬಹುದಾದಂತಹ ಸ್ಥಳವಾಗಿದೆ. ಸ್ಥಳೀಯರ ನಂಬಿಕೆ ಪ್ರಕಾರ, ಹಂಪಿ ಎಂಬ ಬಡ ಬುಡಕಟ್ಟು ಜನಾಂಗದವನೊಬ್ಬ ತನ್ನ ಆಸೆಗಳನ್ನು ಈಡೇರಿಸಿದರೆ ಒಂದು ಶಿವಲಿಂಗವನ್ನು ಕಟ್ಟುತ್ತೆನೆಂದು ಮಾತು ಕೊಡುತ್ತಾನೆ. ಇದನ್ನರಿತ ಪರಮೇಶ್ವರನು ಅವನ ಆಸೆಗಳನ್ನು ಈಡೇರಿಸಲು ನಿರ್ಧರಿಸಿದ. ತದನಂತರ ಆ ಭಕ್ತನು ಈ ಬಡವಲಿಂಗವನ್ನು ನಿರ್ಮಿಸಿ ಈಶ್ವರನಿಗೆ ಅರ್ಪಿಸಿದ. ಇನ್ನೊಂದು ದಂತಕಥೆಯ ಪ್ರಕಾರ,ಈ ಲಿಂಗವು ಒಬ್ಬ ರೈತ ಮಹಿಳೆಯಿಂದ ನಿರ್ಮಿತವಾಗಿದ್ದು, ಅದಕ್ಕವಳು ಬಡವಿಲಿಂಗ ಎಂದು ನಾಮಕರಣ ಮಾಡಿದ್ದಳು ಎಂದು.
 
<big>'''=== ಸಾಸುವೆಕಾಳು ಗಣೇಶ'''</big>===
ಹೇಮಕೂಟ ಬೆಟ್ಟದ ಕೆಳಗಿರುವ ಸಾಸಿವೆಕಾಳು ಗಣೇಶ ಗುಡಿಗೆ ಭೇಟಿ ನೀಡಲೇ ಬೇಕು. ಸಾಸಿವೆ ಕಾಳುಗಳನ್ನು ನೆನಪಿಗೆ ತರುವಂತಹ, ಇಲ್ಲಿರುವ ಜನಪ್ರೀಯ ಗಣಪತಿ ವಿಗ್ರಹವು ೮ ಅಡಿ ಉದ್ದವಾಗಿದೆ. ಆದ್ದರಿಂದ ಭಕ್ತ ಸಮೂಹದಲ್ಲಿ, ಇದು ಸಾಸಿವೆಕಾಳು ಗಣೇಶನೆಂಬ ಹೆಸರಿನಿಂದಲೂ ಚಿರಪರಿಚಿತವಾಗಿದೆ. ಪುರಾಣದ ಪ್ರಕಾರ, ಒಮ್ಮೆ ಭಗವಾನ ಗಣೇಶನು, ಮಿತಿ ಮಿರಿ ತಿಂದಿದ್ದರ ಪರಿಣಾಮ ಹೊಟ್ಟೆ ಒಡೆಯುವಂತಾಗಿ, ಅದನ್ನು ತಡೆಯಲು ಸರ್ಪವನ್ನು ಹೊಟ್ಟೆಗೆ ಅಡ್ಡಲಾಗಿ ಸುತ್ತಿಕೊಂಡನೆಂಬುದು ಪ್ರತೀತಿ. ವಿಗ್ರಹವು ಒಂದೆ ಕಲ್ಲಿನಲ್ಲಿ ಕೆತ್ತಲ್ಪಟ್ಟಿದ್ದು, ಬಲಗೈಯಲ್ಲಿ ಮುರಿದ ಆನೆಯ ದಂತ ಮತ್ತು ಅಂಕುಶವನ್ನು ಕಾಣಬಹುದು.ಮೊದಲನೆ ಎಡಗೈ ವಂಕಿಯಾಕರದ ಪಾಶವನ್ನು ಹೊಂದಿದ್ದು, ಎರಡನೆ ಎಡಗೈಯ ಮತ್ತು ಸೊಂಡಿಲು ಕಲ್ಲಿನಿಂದ ಬೇರ್ಪಡಿಸಿ ಕೆತ್ತಲಾಗಿದೆ. ಸಾಸಿವೆ ಕಾಳು ಗಣೇಶ ಗುಡಿಯನ್ನು ತಲುಪಿದಾಗ, ವಿಗ್ರಹವು ವಿಶಾಲವಾದ ಆವರಣವನ್ನು ಹೊಂದಿರುವದು ಕಾಣಬಹುದು. ಅಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು ಚಂದ್ರಗಿರಿಯ ವ್ಯಾಪರಿಯೊಬ್ಬನು ಕ್ರಿ.ಶ.1506 ರಲ್ಲಿ ವಿಜಯನಗರ ಸಾಮ್ರಾಜ್ಯದ ದೊರೆಯಾದ ಎರಡನೇ ನರಸಿಂಹನಿಗೋಸ್ಕರ ಕಟ್ಟಿದನೆಂಬದು ತಿಳಿದು ಬರುತ್ತದೆ.
 
<big>'''===ಆನೆಗೊಂದಿ (ಆನೆಗುಂಡಿ)'''</big>===
ಆನೆಗುಂಡಿ ಹಳ್ಳಿಯು ಹಂಪಿಯಿಂದ ೧೦ ಕಿ.ಮೀ ದೂರದಲ್ಲಿದ್ದು, ತುಂಗಭದ್ರಾ ನದಿಯ ಉತ್ತರ ಭಾಗದ ದಡದಲ್ಲಿದೆ. ಇದು ಅಂದಿನ ವಿಜಯನಗರ ಸಾಮ್ರಾಜ್ಯದ ಪ್ರಾದೇಶಿಕ ರಾಜಧಾನಿಯಾಗಿತ್ತು. ಇದರ ಅರ್ಥ ಕನ್ನಡದಲ್ಲಿ ಆನೆಗೆ ತೋಡಿದ ಗುಂಡಿ ಎಂದಾಗುತ್ತದೆ. ಈ ಪ್ರದೇಶವು ಹಂಪಿಗಿಂತಲೂ ಪ್ರಾಚೀನವಾಗಿದ್ದು, ರಾಮಾಯಣದ ಪ್ರಕಾರ ಇದನ್ನು ಸುಗ್ರೀವನ (ಮಂಗಗಳ ರಾಜ) ರಾಜ್ಯ ಕಿಷ್ಕಿಂಧೆ ಎಂದು ನಂಬಲಾಗಿದೆ. ಸಮಯಾವಕಾಶವಿದ್ದರೆ ಪ್ರವಾಸಿಗರು ಖಂಡಿತವಾಗಿಯು ಈ ಸ್ಥಳಕ್ಕೆ ಭೇಟಿ ನೀಡಿ ಅಂಜನಾದ್ರಿ ಬೆಟ್ಟವನ್ನು ನೋಡಬಹುದು. ಈ ಬೆಟ್ಟವನ್ನು ದೇವರಾದ ಹನುಮಂತನ ಹುಟ್ಟು ಸ್ಥಳವೆಂದು ನಂಬಲಾಗಿದೆ. ಹಂಪಿಗಿಂತಲೂ ನೆಮ್ಮದಿಯಾದಂಥ ವಾತಾವರಣವನ್ನು ಆನೆಗುಂಡಿಯು ಹೊಂದಿದೆ. ಪ್ರಾಚ್ಯವಸ್ತು ಸಂರಕ್ಷಣಾ ಯೋಜನೆ ಮತ್ತು ಕಿಷ್ಕೀಂದ ಟ್ರಸ್ಟ್ ಇವುಗಳು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಅತ್ಯುತ್ತಮವಾದ ವ್ಯವಸ್ಥೆಗಳನ್ನು ಕಲ್ಪಿಸಿದ್ದು, ಆದರಾತಿಥ್ಯವು ಮನಸೂರೆಗೊಳಿಸುತ್ತದೆ. ಹೊಸ ಸೇತುವೆ(ಬ್ರಿಡ್ಜ್) ಅನ್ನು ತುಂಗಭದ್ರಾ ನದಿಗೆ ಕಟ್ಟಲಾಗುತಿತ್ತು , ಆದರೆ ಅದು ಮುರಿದು ಬಿದ್ದಿದ್ದು ಇನ್ನೊಂದು ಕಡೆ ಸೇತುವೆ ಕಟ್ಟುವ ಕೆಲಸ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ, ಪ್ರವಾಸಿಗರು ಆನೆಗುಂಡಿಯನ್ನು ಸುಲಭವಾಗಿ ತಲುಪಬಹುದಾಗಿದೆ. ಸದ್ಯ, ಈ ಪ್ರದೇಶವನ್ನು ಸುತ್ತು ಮಾರ್ಗದಿಂದ ತಲುಪಬಹುದಾಗಿದೆ.
 
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ