ಕಥಕ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to deleted page ಜಯಪುರ (TW)
೧ ನೇ ಸಾಲು:
[[File:Arushi Nishank 2011.jpg|thumb|Kathak danseuse [[Arushi Nishank]] performing at ''Lucknow Kathak Sansthan''.]]
'''ಕಥಕ್''' ಬಹು ಪ್ರಾಚೀನ ಕಾಲದಿಂದ [[ಭಾರತ|ಭಾರತದಲ್ಲಿನ]] [[ದೇವಾಲಯ]]ಗಳಲ್ಲಿ ದೇವತಾ ಪ್ರೀತ್ಯರ್ಥವಾಗಿ [[ದೇವದಾಸಿ]]ಯರಿಂದ ನೆರವೇರುತ್ತಿದ್ದ [[ನೃತ್ಯ|ನೃತ್ಯಕ್ಕೆ]] ಕಥಕ್ ಎಂದೂ ಅಂಥ ನೃತ್ಯವನ್ನು ಕಲಿಸಿಕೊಡುತ್ತಿದ್ದ ಒಂದು ವರ್ಗದ ಬ್ರಾಹ್ಮಣ ಉಪಾಧ್ಯಾಯರಿಗೆ ಕಥಕ ಅಥವ ಕಥಿಕ ಎಂದೂ ಹೆಸರಿದೆ. ಉತ್ತರ ಹಿಂದೂಸ್ತಾನದಲ್ಲಿನ [[ಲಖ್ನೋ]] ಮತ್ತು [[ಜಯಪುರ]]ಗಳಲ್ಲಿಜಯಪುರಗಳಲ್ಲಿ ಈ ನೃತ್ಯ ಕ್ರಮೇಣ ಅಭಿವೃದ್ಧಿಗೆ ಬಂದು ಪುಜ್ಯಸ್ಥಾನವನ್ನು ಪಡೆಯಿತಲ್ಲದೆ ಒಂದು ವಿಶಿಷ್ಟ ಸಂಪ್ರದಾಯವಾಗಿ ಬೆಳೆಯಿತು.
==ಮುಸ್ಲಿಂ ಆಡಳಿತದಲ್ಲಿ==
ಉತ್ತರ ಹಿಂದೂಸ್ಥಾನದಲ್ಲಿ [[ಮುಸ್ಲಿಂ|ಮುಸ್ಲಿಮರ]] ಆಡಳಿತ ಬಂದ ಮೇಲೆ ದೇವಾಲಯಗಳಲ್ಲಿ ನರ್ತಿಸುವ ದೇವದಾಸಿಯರು ಕಥಕ್ ನೃತ್ಯವನ್ನು ಅನುಮೋದಿಸದಿರುವಂಥ ಪರಿಸ್ಥಿತಿ ಒದಗಿ ಈ ಕಲೆಗೆ ಕಳಂಕ ಬಂತು. ಅಲ್ಲದೆ ಆಗಿನ ಕಾಲದಲ್ಲಿ ಸತತ ಯುದ್ಧ, ಹೋರಾಟಗಳಿದ್ದ ಕಾರಣ ಈ ಕಲೆ ಕ್ಷೀಣವಾಗುತ್ತ ಬಂತು. ಆದರೂ ಅಂದಿನ ಕಥಕರು ತಮ್ಮ ಕಲೆಯನ್ನು ಕಾಪಾಡಿಕೊಂಡು ಬರಲು ಬಹುವಾಗಿ ಶ್ರಮಿಸಿದರು.<ref>https://images.dawn.com/news/1175112</ref> ಕ್ರಮೇಣ ಸುಖ ಸೌಂದರ್ಯ ವಿಲಾಸಿಗಳಾದ ನವಾಬರು, ದೊರೆಗಳು ಮತ್ತು ಶ್ರೀಮಂತರು, ತಮ್ಮ ವಿನೋದಕ್ಕಾಗಿಯೂ ತಮ್ಮ ಮನೆತನಗಳ ಶುಭ ಸಂತೋಷ ಸಮಾರಂಭಗಳಲ್ಲಿಯೂ ಈ ಕಥಕರನ್ನು ಆಹ್ವಾನಿಸಿ ನೃತ್ಯ ಕಾರ್ಯಕ್ರಮಗಳನ್ನು ಜರುಗಿಸಲು ಆರಂಭಿಸಿದರು. ಕಾಲ ಸರಿದಂತೆ ಕೆಲವು ಕಥಕರು ದೊಡ್ಡ ದೊಡ್ಡ ಪಟ್ಟಣಗಳಲ್ಲಿರುವ ರಾಜರ, ನವಾಬರ ಆಸ್ಥಾನಗಳನ್ನು ಸೇರಿ, ಅಲ್ಲಿ ಅವರ ಆಸ್ಥಾನ ನರ್ತಕರಾಗಿ ನೇಮಕಗೊಂಡರು. ಈ ಕಾರಣದಿಂದ ಕಥಕ್ ಔಧ ದೇಶದ ನವಾಬರ ಮತ್ತು ರಾಜಸ್ಥಾನದ ರಾಜರ ಆಶ್ರಯ ಪಡೆಯಿತು. ಸುಪ್ರಸಿದ್ಧ ಕಥಕರಾದ ಪ್ರಕಾಶ್ಜೀ ಮತ್ತು ಕುಟುಂಬದವರು ನವಾಬ್ ಅಸಾಫ್-ಉದ್-ದೌಲನ ಆಡಳಿತದಲ್ಲಿ ಲಖ್ನೋವಿನಲ್ಲಿ ಬಂದು ನೆಲಸಿದರು. ಈ ಶ್ರೇಷ್ಠ ಕಲಾವಿದರ ಪೈಕಿ ಮಹಾರಾಜ ಬಿಂದಾದಿನ್ ಕಥಕ್ ನೃತ್ಯದಲ್ಲಿ ಅದ್ವಿತೀಯ ಪಾಂಡಿತ್ಯವನ್ನು ಗಳಿಸಿ ಇಡೀ ಭಾರತದಲ್ಲಿ ಪ್ರಖ್ಯಾತಿ ಪಡೆದು ಹೆಸರುವಾಸಿಯಾದ. ಮಹಾರಾಜ್ ಬಿಂದಾದಿನ್ ನವಾಬ್ ವಜೀದ್ ಆಲಿಷಹನ ಸಮಕಾಲೀನ. ಈತ ತನ್ನ ನೃತ್ಯದಲ್ಲಿ ಕಲಾಕೌಶಲವನ್ನೂ ಲಾಲಿತ್ಯವನ್ನೂ ಆಧ್ಯಾತ್ಮಿಕತೆಯ ತುತ್ತತುದಿ ಮುಟ್ಟುವ ಅಭಿನಯವನ್ನೂ ಪ್ರದರ್ಶಿಸುತ್ತಿದ್ದ. ಈ ಮಹಾಪುರುಷ ಪ್ರ.ಶ. 1918ರಲ್ಲಿ ದೈವಾಧೀನನಾದ. ಅಂದಿನಿಂದ ಕಥಕ್ ನೃತ್ಯದ ಹೊಣೆಗಾರಿಕೆ ಬಿಂದಾದಿನನ ಸೋದರಳಿಯ ದಿವಂಗತ ಅಚ್ಚನ್ ಮಹಾರಾಜ್, ಲಚ್ಚು ಮಹಾರಾಜ್ ಮತ್ತು ಶಂಭು ಮಹಾರಾಜ್ ಹಾಗೂ ಬಿಂದಾದಿನನ ಪ್ರೀತಿಯ ಶಿಷ್ಯ ಜಯಪುರದ ದಿವಂಗತ ಪಂಡಿತ ಜಯಲಾಲ್ಜೀ ಮತ್ತು ಅವನ ಸೋದರ ಪಂಡಿತ್ ಸುಂದರ ಪ್ರಸಾದ್ ಇವರ ಪಾಲಿಗೆ ಸೇರಿತು. ಇಂಥ ಸಾಂಪ್ರದಾಯಿಕ ಕಲಾಕಾರರ ದುಡಿಮೆಯಿಂದಲೂ ಮತ್ತು ದಿವಂಗತೆ ಮೆಡಾಮ್ ಮೇನಕಾ, ದಿವಂಗತ ರಾಯಗಢದ ಮಹಾರಾಜ ಇವರಿಂದಲೂ ಕಥಕ್ ನೃತ್ಯ ಭಾರತದಲ್ಲಿ ಒಂದು ಅತಿ ಶ್ರೇಷ್ಠ ಶಾಸ್ತ್ರೀಯ ನೃತ್ಯವಾಗಿ ಪ್ರಖ್ಯಾತಿಗೆ ಬಂತು. ಆಧುನಿಕ ಭಾರತದಲ್ಲಿ ಕಾಣುವ ಕಥಕ್ ಕಾರ್ಯಕ್ರಮಗಳು ಅನೇಕ ಕಲಾವಂತರ ಮತ್ತು ನಾಟ್ಯಾಚಾರ್ಯರ ವ್ಯಕ್ತಿತ್ವದಿಂದಲೂ ಕಲ್ಪನಾಶಕ್ತಿಯಿಂದಲೂ ಅನೇಕ ರೂಪಗಳನ್ನು ತಾಳಿವೆ. [[ದೇವಸ್ಥಾನ|ದೇವಸ್ಥಾನಗಳಿಂದ]] ಹೊರ ಬಂದಿರುವ ಈ ಸಂಪ್ರದಾಯ ಮೂಲಶಾಸ್ತ್ರದಲ್ಲಿ ಒಂದೇ ಆಗಿದ್ದರೂ ಇಂಥವರ ವೈಶಿಷ್ಟ್ಯದಿಂದ ಮಾರ್ಪಾಡುಗಳನ್ನು ಹೊಂದಿ ಅತಿ ಆಕರ್ಷಣೀಯವಾಗಿ ಪ್ರಸಿದ್ಧವಾಗಿದೆ. ಪರಕೀಯರಾದ ಮುಸ್ಲಿಮರ ಮತ್ತು [[ಬ್ರಿಟೀಷ್ ಸಾಮ್ರಾಜ್ಯ|ಬ್ರಿಟಿಷರ]] ಆಡಳಿತದಿಂದಾಗಿ ವೇಷಭೂಷಣಗಳಲ್ಲಿ, ಪಾರಿಭಾಷಿಕ ಶಬ್ದಗಳಲ್ಲಿ ಮತ್ತು ಪ್ರಾಯೋಗಿಕ ಪದ್ಧತಿಗಳಲ್ಲಿ ಅನೇಕ ಬದಲಾವಣೆಗಳು ಆಗಿವೆ. ದೇಶದಲ್ಲಿ ಅನೇಕ ಸಾಮಾಜಿಕ ಮತ್ತು ಧಾರ್ಮಿಕ ಘಟನೆಗಳಾಗಿದ್ದರೂ ಕಥಕ್ ನೃತ್ಯ ಅದರ ಸಂಪ್ರದಾಯವನ್ನು ಕಾಪಾಡಿಕೊಂಡು ಬಂದಿದೆ.<ref>http://www.bbc.co.uk/programmes/articles/2MMxwpfq6Dm0b5ywHRJkwHq/kathak-does-every-gesture-have-a-meaning</ref>
"https://kn.wikipedia.org/wiki/ಕಥಕ್" ಇಂದ ಪಡೆಯಲ್ಪಟ್ಟಿದೆ