ಅಷ್ಟಾದಶ ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೩ ನೇ ಸಾಲು:
*ಅವುಗಳಲ್ಲಿ ಒಂದೊಂದರಿಂದ ಪ್ರತ್ಯೇಕವಾಗಿ ಸುತ್ತುವರಿಯಲ್ಪಟ್ಟ ಜಂಬು, ಪ್ಲಕ್ಷ (ಗೋವೇದಕ) ಶಾಲ್ಮಲ, ಕುಶ, ಕ್ರೌಂಚ, ಶಾಕ ಮತ್ತು ಮುಷ್ಕರ ಎಂಬ ಹೆಸರಿನ ಏಳು ದ್ವೀಪರೂಪದ ಖಂಡಗಳಿವೆ. ಭಾರತ ಜಂಬೂದ್ವೀಪದ ಒಂದು ವರ್ಷ ಅಥವಾ ದೇಶ. ಇಂದ್ರದ್ವೀಪ, ಕಶೇರುಮತ್, ಠಾಮ್ರವರ್ಣ, ಗಭಸ್ತಿಮತ್, ನಾಗದ್ವೀಪ, ಸೌಮ್ಯ, ಗಾಂಧರ್ವ, ವಾರುಣ, ಕುಮಾರಕ-ಎಂಬೀ ಒಂಬತ್ತು ಪುರಾಣ ಭಾರತದ ಪ್ರಾಂತರಾಜ್ಯಗಳು.
 
==ಅಷ್ಟಾದಶ ಪುರಾಣಗಳು ==
*CE= c = ಕ್ರಿ.ಶ.
===ಬ್ರಹ್ಮಪುರಾಣ===
{| border="0" cellpadding="8" cellspacing="3"
|- bgcolor="#e4e8ff"
! ಕ್ರಮ ಸಂಖ್ಯೆ
! ಪುರಾಣದ ಹೆಸರು
! ಶ್ಲೋಕಗಳ ಸಂಖ್ಯೆ
! ಕಾಲ
|- bgcolor="#e4e8ff"
| ೦೧
| [[ಮತ್ಸ್ಯ ಪುರಾಣ]]
| ೧೪೦೦೦
|c.200–500 CE
|- bgcolor="#e4e8ff"
| ೦೨
| [[ಮಾರ್ಕಂಡೇಯ ಪುರಾಣ]]
| ೯೦೦೦
| c. 250 CE, (c. 550 CE ರ ದೇವಿ ಮಹಾತ್ಮ್ಯ ಬಿಟ್ಟು )
|- bgcolor="#e4e8ff"
| ೦೩
| [[ಭಾಗವತ ಪುರಾಣ]]
| ೧೮೦೦೦
|800 - 1000CE.
|- bgcolor="#e4e8ff"
| ೦೪
| [[ಭವಿಷ್ಯ ಪುರಾಣ]]
| ೧೪೫೦೦
| ಐದನೇಶತಮಾನ- CE
|- bgcolor="#e4e8ff"
|೦೫
| [[ಬ್ರಹ್ಮ ಪುರಾಣ]]
| ೧೦೦೦೦
|
|- bgcolor="#e4e8ff"
| ೦೬
| [[ಬ್ರಹ್ಮಾಂಡ ಪುರಾಣ]]
| ೧೨೦೦೦
|1000 CE
|- bgcolor="#e4e8ff"
| ೦೭
| [[ಬ್ರಹ್ಮವೈವರ್ತ ಪುರಾಣ]]
| ೧೮೦೦೦
|
|- bgcolor="#e4e8ff"
| ೦೮
| [[ವಿಷ್ಣು ಪುರಾಣ]]
| ೨೩೦೦೦
|
|- bgcolor="#e4e8ff"
| ೦೯
| [[ವರಾಹ ಪುರಾಣ]]
| ೨೪೦೦೦
|
|- bgcolor="#e4e8ff"
| ೧೦
| [[ವಾಮನ ಪುರಾಣ]]
| ೧೦೦೦೦
|
|- bgcolor="#e4e8ff"
| ೧೧
| [[ವಾಯು ಪುರಾಣ]]
|೨೪೦೦೦
|
|- bgcolor="#e4e8ff"
| ೧೨
| [[ಅಗ್ನಿ ಪುರಾಣ]]
| ೧೦೫೦೦
|800 - 1100 CE.
|- bgcolor="#e4e8ff"
| ೧೩
| [[ನಾರದ ಪುರಾಣ]]
| ೨೫೦೦೦
|1600 ಅಥವಾ 1700
|- bgcolor="#e4e8ff"
| ೧೪
| [[ಪದ್ಮ ಪುರಾಣ]]
| ೫೫೦೦೦
|
|- bgcolor="#e4e8ff"
| ೧೫
| [[ಲಿಂಗ ಪುರಾಣ]]
| ೧೧೦೦೦
|
|- bgcolor="#e4e8ff"
| ೧೬
| [[ಗರುಡ ಪುರಾಣ]]
| ೧೯೦೦೦
|
|- bgcolor="#e4e8ff"
| ೧೭
| [[ಕೂರ್ಮ ಪುರಾಣ]]
| ೧೭೦೦೦
|
|- bgcolor="#e4e8ff"
| ೧೮
| [[ಸ್ಕಂದ ಪುರಾಣ]]
| ೮೦೧೦೦
|}
 
===[[ಬ್ರಹ್ಮ ಪುರಾಣ]]===
*ಅಷ್ಟಾದಶ ಮಹಾಪುರಾಣಗಳ ಎಲ್ಲ ಪಟ್ಟಿಗಳಲ್ಲೂ ಹತ್ತು ಸಾವಿರ ಶ್ಲೋಕಗಳುಳ್ಳವೆಂದು ಹೆಸರಾದರೂ ನಿಜವಾಗಿ ಸುಮಾರು 7-8 ಸಾವಿರ ಶ್ಲೋಕಗಳನ್ನಷ್ಟೇ ಉಳ್ಳ ಇದು ಆದಿಪುರಾಣವೆಂದು ಹೆಸರಾಗಿದೆ. ಉಪೋದ್ಘಾತದಲ್ಲಿ ಲೋಮಹರ್ಷಣ ಸೂತನ ನೈಮಿಷಾರಣ್ಯಕ್ಕೆ ಹೋದಾಗ ಅಲ್ಲಿದ್ದ ಋಷಿಗಳು ಪ್ರಪಂಚದ ಆದ್ಯಂತಗಳನ್ನು ವಿವರಿಸಲು ಕೇಳಿಕೊಳ್ಳಲಾಗಿ ಸೂತಪುರಾಣಿಕ ಮಾನವಕುಲದ ಮೂಲಪಿತಾಮಹರಲ್ಲಿ ಒಬ್ಬನಾದ ದಕ್ಷನಿಗೆ ಒಮ್ಮೆ ಸೃಷ್ಟಿಕರ್ತನಾದ ಬ್ರಹ್ಮ ಹೇಳಿದ ಬ್ರಹ್ಮಪುರಾಣವನ್ನು ಹೇಳಲು ಒಪ್ಪುತ್ತಾನೆ.
*ಅವನ ಪುರಾಣ ಪ್ರವಚನದಲ್ಲಿ ಎಲ್ಲ ಪುರಾಣಗಳಿಗೂ ಹೆಚ್ಚು ಕಡಿಮೆ ಸಾಧಾರಣವೆನ್ನಿಸುವ ವಿಶ್ವಸೃಷ್ಟಿ, ಆದಿಮಾನವನಾದ ಮನು ಮತ್ತು ಅವನ ವಂಶಜರ ಹುಟ್ಟು, ದೇವತೆಗಳ ಉತ್ಪತ್ತಿ, ಗಂಧರ್ವಾದಿಗಳ ಉದಯ, ಸೂರ್ಯ, ಚಂದ್ರವಂಶಜರ ರಾಜ ಮಹಾರಾಜರ ಪೀಳಿಗೆಯ ವೃತ್ತಾಂತ, ಭೂವಿಭಾಗ, ಸ್ವರ್ಗ, ನರಕಗಳ ವಿವರ ಬರುತ್ತವೆ. ಪುರಾಣದ ಬಹ್ವಂಶ ತೀರ್ಥ ಮಾಹಾತ್ಮ್ಯವನ್ನು ಹೇಳುತ್ತದೆ. ಒರಿಸ್ಸದ ದೇವಾಲಯ ಮತ್ತು ಸುತ್ತಮುತ್ತಲಿನ ತೀರ್ಥಕ್ಷೇತ್ರಗಳು ಗಣ್ಯವಾಗಿ ವರ್ಣಿಸಲ್ಪಟ್ಟಿವೆ.
* ಆದಿತ್ಯೋತ್ಪತ್ತಿ, ಶಿವಪ್ರಿಯವನ, ಉಮಾಜನನ, ಉಮಾವಿವಾಹ, ಶಿವಸ್ತೋತ್ರ, ಕಂಡುಮಹರ್ಷಿಯ ಸ್ತ್ರೀಲೋಲುಪತೆ, ವಿರಾಗ, ಕೃಷ್ಣಲೀಲೆ, ಶ್ರಾದ್ಧನಿಯಮ, ಧಾರ್ಮಿಕ ಜೀವನದ ನೀತಿ, ವರ್ಣಾಶ್ರಮ ಧರ್ಮ, ಸ್ವರ್ಗ, ನರಕ, ವಿಷ್ಣುಪುಜಾದಿಗಳು-ಇವು ಇದರ ಸಾರ. ಯುಗ, ಪ್ರಲಯ, ಸಾಂಖ್ಯಯೋಗ, ಮೋಕ್ಷೋಪಾಯಗಳ ವಿವೇಚನೆಯೂ ಕೊನೆಯಲ್ಲಿವೆ. ಪ್ರಸ್ತುತ ಪುರಾಣದಲ್ಲಿ ಅತ್ಯಲ್ಪಭಾಗ ಪ್ರಾಚೀನ; ತೀರ್ಥಮಾಹಾತ್ಮ್ಯವಂತೂ ಪ್ರ.ಶ. 13ನೆಯ ಶತಮಾನಕ್ಕಿಂತ ಹಿಂದಿನದೆನ್ನಿಸದು.
===[[ಪದ್ಮ ಪುರಾಣ]]===
*ಇದಕ್ಕೆ ಸುಪ್ರಸಿದ್ಧವಾದ ಎರಡು ಪಾಠ ಸಂಪ್ರದಾಯಗಳಿವೆ. ಅವುಗಳಲ್ಲಿ ಆದಿ, ಭೂಮಿ, ಬ್ರಹ್ಮ, ಪಾತಾಳ, ಸೃಷ್ಟಿ, ಉತ್ತರಖಂಡಗಳೆಂಬ ಆರು ಭಾಗಗಳುಳ್ಳದ್ದು ಹೆಚ್ಚು ಅರ್ವಾಚೀನ; ಸೃಷ್ಟಿ, ಭೂಮಿ, ಸ್ವರ್ಗ, ಪಾತಾಳ, ಉತ್ತರ ಖಂಡಗಳೆಂಬ ಐದು ಭಾಗಗಳಿರುವ ಬಂಗಾಲಿ ಹಸ್ತಪ್ರತಿಯ ಪಾಠಸಂಪ್ರದಾಯ ಹೆಚ್ಚು ಪ್ರಾಚೀನ. ಈ ಖಂಡಗಳೆ ಲ್ಲವೂ ಬಹುಶಃ ಬೇರೆ ಬೇರೆ ಕಾಲಾವಧಿಗಳಲ್ಲಿ ಬರೆದ ಪ್ರತ್ಯೇಕ ಕೃತಿಗಳು. ಅನಂತರ ಯಾರೋ ಅವೆಲ್ಲವನ್ನೂ ಸಂಕಲಿಸಿ ಪದ್ಮಪುರಾಣವೆಂಬ ಹೆಸರನ್ನು ಕೊಟ್ಟಿರಬೇಕು.
* ಏಕೆಂದರೆ, ಅತ್ಯಂತ ಅರ್ವಾಚೀನವೆನ್ನಬಹುದಾದ ಭಾಗವತ ಪುರಾಣದಲ್ಲಿರುವ ಕೆಲ ಅಂಶಗಳಿಗೂ ಇತ್ತೀಚಿನವೆನ್ನಿಸುವ ಅಂಶಗಳಿದರಲ್ಲಿವೆ. ಸೃಷ್ಟಿಕ್ರಮ, ಸೂರ್ಯ ವಂಶದ ರಾಜರ ಅನುಚರಿತ, ಶ್ರಾದ್ಧವಿಚಾರ, ಚಂದ್ರವಂಶದ ರಾಜರ ವೃತ್ತಾಂತ, ದೇವಾಸುರಸಮರ, ಪುಷ್ಕರಸರಸ್ಸಿನ ವರ್ಣನೆ, ದುರ್ಗಾರಾಧನೆಯ ವ್ರತ ಮತ್ತು ಹಬ್ಬಗಳು, ಸೃಷ್ಟಿಯ ಪುನರ್ ವಿವರಣೆ, ವಿಷ್ಣು ಅಸುರಾಂತಕನಾದುದು, ಸ್ಕಂದನಜನನ ಮತ್ತು ಸ್ಕಂದವಿವಾಹ, ಸೋಮಶರ್ಮ ಪ್ರಹ್ಲಾದನಾಗಿ ಹುಟ್ಟಿದ ಕತೆ; ಪವಿತ್ರಸ್ಥಳಗಳಲ್ಲದೆ ತಂದೆ, ಗುರು, ಅಥವಾ ಹೆಂಡತಿಯರು ತೀರ್ಥ ಸ್ವರೂಪ ವಾದುದರ ನಿದರ್ಶನ; ದೇವಲೋಕದ ವರ್ಣನೆ, ಶಕುಂತಲಾವೃತ್ತಾಂತ, ಊರ್ವಶೀ ಪುರೂರವರ ಕಥೆ, ವರ್ಣಾಶ್ರಮಧರ್ಮ, ವಿಷ್ಣುಪೂಜೆ ನಾಗಲೋಕದ ವಿಸ್ತಾರ, ರಾಮೋಪಾಖ್ಯಾನ, ಋಷ್ಯಶೃಂಗಚರಿತ ತೀರ್ಥಮಾಹಾತ್ಮ್ಯ, ರಾಧಾಕೃಷ್ಣ ಲೀಲೆ, ಸಾಲಿಗ್ರಾಮಪಾವಿತ್ರ್ಯ, ವಿಷ್ಣುವ್ರತ, ವಿಷ್ಣುನಿಯಮ, ವಿಷ್ಣೋತ್ಸವಗಳು, ಭಗವದ್ಗೀತಾಪ್ರಾಶಸ್ತ್ಯ, ವಿಷ್ಣುಸಹಸ್ರನಾಮ ಮೊದಲಾದ ವಿಷಯಗಳಲ್ಲದೆ, ಉತ್ತರ ಖಂಡದ ಬಳಿಕ ಬರುವ ಕ್ರಿಯಾಯೋಗಸಾರವೆಂಬ ಅನುಬಂಧ ವಿಷ್ಣುವಿನ ನಿಜವಾದ ಆರಾಧನೆಗೆ ಧ್ಯಾನಯೋಗಕ್ಕಿಂತ ಕರ್ಮಯೋಗವೇ ಹೆಚ್ಚು ಪ್ರಶಸ್ತವೆಂದು ಬೋಧಿಸಿದೆ. ಇದರ ಪಂಚಖಂಡಗಳ ಒಟ್ಟು ಶ್ಲೋಕಸಂಖ್ಯೆ 48,452. ಇದರ ಇಂದಿನ ರೂಪದ ಕಾಲ ಸು. ಕ್ರಿ.ಶ. 12ನೆಯ ಶತಮಾನವೆನ್ನಬಹುದು.
===[[ವಿಷ್ಣು ಪುರಾಣ]]===
*ವಿಷ್ಣು ಪ್ರಾಧಾನ್ಯ ನಿರೂಪಣೆ ಇದರ ಉದ್ದೇಶ. ಇದರ ಆರು ಖಂಡಗಳಲ್ಲಿ ವಸಿಷ್ಠನ ಮೊಮ್ಮಗನಾದ ಪರಾಶರ ತನ್ನ ಶಿಷ್ಯನಾದ ಮೈತ್ರೇಯನಿಗೆ ಸೃಷ್ಟ್ಯಾದಿ ವಿವಿಧ ವಿಷಯಗಳನ್ನು ತಿಳಿಸುತ್ತಾನೆ. ಮೊದಲು ವಿಷ್ಣು ಸ್ತುತಿ ಬರುತ್ತದೆ. ಆಮೇಲೆ ಸರ್ವಸಾಧಾರಣವಾದ ಪೌರಾಣಿಕ ರೀತಿಯ ಸೃಷ್ಟಿ ವಿವರಣೆ, ಸಾಂಖ್ಯತತ್ತ್ವ ವಿಚಾರ, ವಿವಿಧ ದೇವದಾನವ ಕಥೆಗಳು, ಹಳೆಯ ರಾಜರ ಮತ್ತು ಋಷಿಗಳ ವೃತ್ತಾಂತಗಳು ಬರುತ್ತದೆ. ಸಮುದ್ರ ಮಥನ, ಲಕ್ಷ್ಮಿಯ ಉದಯ, ಧ್ರುವೋಪಾಖ್ಯಾನ, ಪ್ರಹ್ಲಾದನ ಕತೆ ಮೊದಲಾದುವು ಕತೆಗಳಲ್ಲಿ ಗಣ್ಯ.
*ಎರಡನೆಯ ಖಂಡದ ಮೊದಲ ಅಧ್ಯಾಯಗಳಲ್ಲಿ ಭೂವಿವರಣೆಯ ಕಲ್ಪನಾವಿಲಾಸ ಕಾವ್ಯಮಯವಾಗಿ ಬಂದಿವೆ. ನಾಗ, ನಾಕ, ನರಕ ಲೋಕಗಳ ವೈಚಿತ್ರ್ಯವನ್ನೂ ಇಲ್ಲಿ ಕಾಣಬಹುದು. ಕಲ್ಪನಾಭೃಂಗದ ಬೆನ್ನೇರಿ ಗುಹ್ಯ, ನಕ್ಷತ್ರ, ಗ್ರಹಲೋಕಗಳಿಗೂ ಹೋಗಬಹುದು. ಒಂದು ತಾತ್ತ್ವಿಕ ಸಂವಾದಕ್ಕೆ ಉಪೋದ್ಘಾತರೂಪ ವಾಗಿ ಜಡಭರತಮುನಿಯ ಕತೆ, ಋಭು ಮತ್ತು ನಿಠಾಪುರ ಕತೆ ಬಂದಿದೆ. ಮೂರನೆಯ ಖಂಡದಲ್ಲಿ ಮನು, ಮನ್ವಂತರಗಳ ವಿವರಗಳೂ ಚತುರ್ವೇದ ವಿಚಾರವೂ ಅಷ್ಟಾದಶಪುರಾಣಗಳ ಮತ್ತು ವಿವಿಧ ಶಾಸ್ತ್ರಗಳ ಉಲ್ಲೇಖ ತುಂಬಿದೆ.
Line ೬೦ ⟶ ೧೫೮:
*ಮಹತ್ತಿನಿಂದ ಆವೃತವಾದ ಭೂತಾದ್ಯಹಂಕಾರದಿಂದ ಶಬ್ದತನ್ಮಾತ್ರವೂ ಅದರಿಂದ ಆಕಾಶವೂ ಜನಿಸುತ್ತವೆ. ಭೂತಾದಿಯಿಂದ ಆವೃತವಾಗಿ ಆ ಮೂಲಕ ಶಬ್ದತನ್ಮಾತ್ರದಿಂದ ಭಿನ್ನವಾದ ಆಕಾಶ ಸ್ಪರ್ಶತನ್ಮಾತ್ರವನ್ನೂ ಅದು ವಾಯುವನ್ನೂ ಹೊಡೆಯುತ್ತವೆ. ಇದೇ ಮೇರೆಗೆ ವಾಯುವಿನಿಂದ ರೂಪ (ಬಣ್ಣ) ತನ್ಮಾತ್ರ, ಅದರಿಂದ ಜ್ಯೋತಿಯಿ (ಕಾವು, ಬೆಳಕು), ಜ್ಯೋತಿಯಿಂದ ರಸತನ್ಮಾತ್ರ, ಅದರಿಂದ ಜಲ, ಜಲದಿಂದ ಗಂಧತನ್ಮಾತ್ರ, ಗಂಧತನ್ಮಾತ್ರದಿಂದ ಭೂಮಿ (ಮಣ್ಣು) ಉಂಟಾದುವು.
*ತೈಜಸಾಹಂಕಾರದಿಂದ ಕರ್ಮ, ಜ್ಞಾನೇಂದ್ರಿಯಗಳ ದಶಕವೂ ವೈಕಾರಿಕಾಹಂಕಾರದಿಂದ ಮನಸ್ಸೂ (ಮನ+ಬುದ್ಧಿ+ಅಹಂಕಾರ+ಚಿತ್ತ) ಉದಯಿಸುತ್ತವೆ. ಜಗತ್ತನ್ನು ಹೊರಗಿನಿಂದ ಜಲ, ಅಗ್ನಿ, ವಾಯು, ಆಕಾರ, ಭೂತಾದಿ ಮಹದವ್ಯಕ್ತಗಳು ಅನುಕ್ರಮವಾಗಿ ಸುತ್ತುವರಿದಿವೆ. ಜಗತ್ತು ಅಥವಾ ಪ್ರಪಂಚವೆಂದರೆ ತೈಜಸಾಹಂಕಾರದಿಂದ ಹುಟ್ಟಿದ ದಶೇಂದ್ರಿಯ, ಮನ, ಪಂಚತನ್ಮಾತ್ರ, ಅಹಂಕಾರ ಮತ್ತು ಮಹತ್ತುಗಳ ಏಕೀಕೃತವೂ ಸಮನ್ವಿತವೂ ಆದ ಚರಾಚರಾತ್ಮಕ ಮೊಟ್ಟೆ. ಈ ಮೊಟ್ಟೆಯ ವಿಕಸಿತರೂಪವೇ ವಿಷ್ಣುವಿನ ಶರೀರವೆನ್ನಿಸುವ ಬ್ರಹ್ಮ. ಬ್ರಹ್ಮ-ವಿಷ್ಣು-ರುದ್ರಾತ್ಮಕನಾಗಿ ವಿಷ್ಣು ವಿಶ್ವದ ಸೃಷ್ಟಿ, ಸ್ಥಿತಿ, ಲಯಗಳನ್ನು ನಡೆಸುತ್ತಾನೆ. ಅಂದರೆ ಆತ ಆದಿಕಾರಣನಾದ ಪರಬ್ರಹ್ಮ. ಈ ಬಗೆಯ ಸಾಂಖ್ಯವಿಚಾರಗಳು ವಿಷ್ಣುಪುರಾಣದಲ್ಲಿವೆ.
===[[ವಾಯು ಪುರಾಣ]]===
*ಶ್ಲೋಕ ಸಂಖ್ಯೆ 24,000 ಎಂಬ ಹೇಳಿಕೆಯಿದ್ದರೂ ಮುದ್ರಿತಪ್ರತಿಯ ಸಂಖ್ಯೆ 12,000 ಮಾತ್ರ. ಇದು ಬಹುಶಃ ಪುರಾಣದ ಒಂದನೆಯ ಖಂಡದಷ್ಟೇ ಆಗಿರಬೇಕು. ಅನುಕ್ರಮಣಿಕೆಗಳ ಕಾಲದಲ್ಲಿ ದೇವಾದಿ ಮಾಹಾತ್ಮ್ಯಗಳು ಇದಕ್ಕೆ ಸೇರಿದ್ದವೆಂದು ತೋರುತ್ತದೆ. ಇದು ಎಲ್ಲ ಪುರಾಣಗಳಿಗಿಂತ ಹೆಚ್ಚು ಪ್ರಾಚೀನವೆಂದು ನಂಬಲಾಗಿದೆ. ವಾಯು ಬ್ರಹ್ಮಾಂಡಗಳೆರಡೂ ವಾಯುಪ್ರೋಕ್ತ ಪುರಾಣಗಳಾದುದರಿಂದ ಇವು ಮೊದಲು ಒಂದೇ ಕೃತಿಯಾಗಿದ್ದುವೆಂದು ಪಾರ್ಗಿಟರ್ನ ಮತ. ಮಹಾಭಾರತ, ಹರಿವಂಶಗಳು ವಾಯುಪುರಾಣವನ್ನು ಉಲ್ಲೇಖಿಸುತ್ತವೆ, ಶ್ಲೋಕಗಳನ್ನು ಉದ್ಧರಿಸುತ್ತವೆ. ಪ್ರ.ಶ. 4ನೆಯ ಶತಮಾನದ ಗುಪ್ತಚಕ್ರವರ್ತಿಗಳ ಆಳ್ವಿಕೆ ಇಲ್ಲಿ ವರ್ಣಿತವಾಗಿದೆ.
*ಆದುದರಿಂದ ಪ್ರಾಚೀನತಮವಾದ ಮೂಲವಾಯು ಪುರಾಣದ ಕಾಲ ಯಾವುದೇ ಆದರೂ ಅದರ ಇಂದಿನ ರೂಪದ ಬಹುಭಾಗ ಪ್ರ.ಶ. ಸು. 5ನೆಯ ಶತಮಾನದ್ದೆಂದು ವಿಂಟರ್ನಿಟ್ಜನ ಅಭಿಪ್ರಾಯ. ಜನತ್ಸೃಷ್ಟಿ ವಂಶವೃಕ್ಷ ಮುಂತಾದ ಪ್ರಾಚೀನ ಪೌರಾಣಿಕ ವಿಷಯಗಳೂ ಶಿವೋತ್ಕರ್ಷವನ್ನು ಸಾಧಿಸುವ ಕತೆಗಳೂ ಜಗತ್ಪ್ರಳಯವೂ ಯೋಗಮಾರ್ಗ ಪ್ರಶಂಸೆಯೂ ಶಿವಪುರ ವರ್ಣನ, ವಿಷ್ಣುಪ್ರಭಾವ, ಶ್ರಾದ್ಧ, ಗೀತಾಲಂಕಾರ, ಗಯಾ ಮಾಹಾತ್ಮ್ಯಗಳೂ ಈ ಪುರಾಣದ ಮುಖ್ಯಾಂಶಗಳು. ಇದಕ್ಕೆ ಸೇರಿದವೆಂದು ಹೇಳಲಾಗುವ ಇನ್ನೂ ಎಷ್ಟೋ ಸ್ತೋತ್ರಗಳೂ ಮಾಹಾತ್ಮ್ಯಗಳೂ ಕರ್ಮವಿಧಿಗ್ರಂಥಗಳೂ ದೊರಕುತ್ತವೆ. ಪ್ರಸ್ತುತ ವಾಯುಪುರಾಣದಲ್ಲಿರುವ ಪ್ರಾಚೀನ ಭಾಗಗಳ ಕಾಲ ಪ್ರ.ಶ. 200 ಅಥವಾ ಅದಕ್ಕೂ ಹಿಂದೆ ಹೋಗಬಹುದು.
Line ೭೦ ⟶ ೧೬೮:
*ಕೃತಯುಗದಿಂದ ಕಲಿಯುಗದವರೆಗೆ ಧರ್ಮ ಕ್ಷೀಣವಾಗುತ್ತ ಹೋದ ಹಾಗೆ ಅದನ್ನು ಅರ್ಜಿಸುವ ವಿಧಾನಗಳ ಬಿಗಿಯೂ ಕಡಿಮೆಯಾಗುತ್ತದೆ, ರಾಜಾಧಿಕಾರ ದೇವಾಧಿಕಾರಕ್ಕೆ ಸರಿದೊರೆಯಾಗುತ್ತದೆ; ಪ್ರಭು ಪ್ರಜೆಗಳಿಬ್ಬರೂ ಪರಸ್ಪರರ ಬಗ್ಗೆ ಮಾಡಬೇಕಾದ ಕರ್ತವ್ಯಗಳನ್ನು ಮಾಡದಿದ್ದರೆ ದಂಡನೀಯವಾಗುತ್ತಾರೆ-ಎಂಬೀ ಅಂಶಗಳನ್ನೂ ವಿಷ್ಣು ಭಾಗವತ, ಮಾರ್ಕಂಡೇಯ ಪುರಾಣಗಳಂತೆಯೇ ಇವೂ ಪ್ರತಿಪಾದಿಸಿವೆ. ಸರ್ವರೂ ಧರ್ಮಾಧೀನರೆಂಬ ಸ್ಮೃತಿಪರಂಪರೆಗಿದು ಸಮ್ಮತ.
 
===[[ಭಾಗವತ ಪುರಾಣ]]===
*ವಿಷ್ಣು ಮಹಾಪುರಾಣದಂತೆಯೇ ಭಾಗವತವೂ ವಿಷ್ಣುವಿನ ಮೇಲ್ಮೆಯನ್ನು ಹೇಳ ಹೊರಟದ್ದು. ಇದರಷ್ಟು ಸುಪ್ರಸಿದ್ಧವಾದ ಮಹಾಪುರಾಣವಿನ್ನೊಂದಿಲ್ಲ. ಯುರೋಪಿನಲ್ಲಿ ಸಂಪಾದಿಸಿ ಅನುವಾದಿಸಲಾದ ಮೊಟ್ಟ ಮೊದಲ ಪುರಾಣವಿದು. ಆದರೆ ಇದು ಅರ್ವಾಚೀನ ಗ್ರಂಥ. ವಿಷ್ಣುಪುರಾಣವನ್ನು ಬಹಳವಾಗಿ ಅವಲಂಬಿಸಿದೆ. ಹೀಗಿದ್ದರೂ ಈ ಪುರಾಣ ಪ್ರಾಚೀನಾಂಶಗಳನ್ನು ಬಹಳಮಟ್ಟಿಗೆ ಬಳಸಿಕೊಂಡಿದೆ. ಪುರಾಣ ಸಾಹಿತ್ಯದಲ್ಲಿ ಇದೊಂದೇ ಏಕಸೂತ್ರತೆ, ಸಾಹಿತ್ಯಸೌಂದರ್ಯಗಳಿಂದ ಕೂಡಿರುವ ಕೃತಿ. ಇದರ ಸ್ಕಂಧಗಳು (ಅಥವಾ ಖಂಡ) 12. ಶ್ಲೋಕಗಳ ಮೊತ್ತ 18000. *ಅಲ್ಪಸ್ವಲ್ಪ ಭಿನ್ನವಾದರೂ ಇದರ ಸೃಷ್ಟಿಕಥೆಗಳು ಪುರಾಣವನ್ನೇ ಹೆಚ್ಚಾಗಿ ಹೋಲುತ್ತವೆ. ವಿಷ್ಣುವಿನ ವರಾಹಾವತಾರದ ಕಥೆ ವಿಸ್ತಾರವಾಗಿ ಬಂದಿದೆ. ಮೂರನೆಯ ಸ್ಕಂಧದ ಕೊನೆಯಲ್ಲಿ ವಿಷ್ಣುವಿನ ಅವತಾರವೆಂದು ಹೇಳಲಾದ ಸಾಂಖ್ಯದರ್ಶನದ ಮೂಲಾಚಾರ್ಯನೆನ್ನಿಸಿರುವ ಕಪಿಲಮುನಿಯ ಬಾಯಿಯಿಂದ ಯೋಗಶಾಸ್ತ್ರವನ್ನು ಸುದೀರ್ಘವಾಗಿ ಹೇಳಿಸಲಾಗಿದೆ. ಪ್ರ.ಶ. 12ನೆಯ ಶತಮಾನದಲ್ಲಿದ್ದ ಜಯದೇವನ ಗೀತಗೋವಿಂದದಲ್ಲಿರುವಂತೆ ಇಲ್ಲಿ ಗೌತಮಬುದ್ಧ ವಿಷ್ಣುವಿನ ಬೌದ್ಧಾವತಾರವಾಗಿದ್ದಾನೆ.
*ಹಿಂದಿನ ಪರಂಪರೆಯಂತೆ ತುಲಸೀಪತಿಯಾದ ಜಲಂಧರನ ಸಂಹಾರಕ್ಕಾಗಿ ಆಕಾಶ, ಪಾತಾಳಗಳನ್ನೊಂದು ಮಾಡುವಂತೆ ನಗ್ನಮೂರ್ತಿಯಾಗಿ ತುಲಸಿಯೆದುರು ನಿಂತ ವಿಷ್ಣವಿನದು ಬೌದ್ಧಾವತಾರ. ಭಾಗವತದಲ್ಲಿ ವಿಷ್ಣು ಪ್ರಭಾವವನ್ನು ಹೇಳುವ ಧ್ರುವ, ಪ್ರಹ್ಲಾದಾದಿ ವಿಷ್ಣುಭಕ್ತರ ಕಥೆಗಳೂ ಭಗವದ್ಗೀತೆಯ ಕೆಲಶ್ಲೋಕಗಳೂ ಶಕುಂತಲೋಪಾಖ್ಯಾನವೂ ಬಂದಿರುತ್ತವೆ. ಅಲ್ಲದೆ, ಹರಿವಂಶ, ವಿಷ್ಣು ಪುರಾಣಗಳಲ್ಲಿರುವುದ ಕ್ಕಿಂತಲೂ ಹೆಚ್ಚು ವಿವರಗಳಿಂದ ಕೃಷ್ಣಚರಿತಾಮೃತ ಇದರ ಹತ್ತನೆಯ ಸ್ಕಂಧದಲ್ಲಿ ಬಂದಿದೆ.
*ಇದರಲ್ಲಿರುವ ಕೃಷ್ಣ ಗೋಪಿಯರ ಪ್ರೇಮದೃಶ್ಯಗಳು ಜನಪ್ರಿಯವಾಗಿವೆ. ಯಾದವರ ನಾಶವೂ ಕೃಷ್ಣನ ನಿರ್ಯಾಣವೂ ಕಲಿಯುಗದ ಭವಿಷ್ಯವೂ ಪ್ರಳಯವೂ ಕೊನೆಯ ಭಾಗಗಳಲ್ಲಿ ಬಂದಿವೆ. ಭಾಗವತದ ಹೇಳಿಕೆಯಂತೆ ರಾಜನಿಲ್ಲದ ರಾಜ್ಯ ಅರಾಜಕ. ರಾಜನಲ್ಲಿ ವಿಷ್ಣುವಿನ ಅಂಶವಿದೆ. ಅವನ ಶಕ್ತಿ ಅತಿಮಾನುಷ. ಪ್ರಜೆಗಳು ಅವನಿಗೆ ವಿಧೇಯರಾಗಿರಬೇಕು. ಅವರು ತೆರುವ ಕರಕಂದಾಯಗಳಿಗೆ ಪ್ರತಿಯಾಗಿ ಆತ ಅವರ ವಿತ್ತಜೀವಿತಗಳನ್ನು ಕಾಪಾಡಬೇಕು.
*ದುರಾಡಳಿತವೆಸಗಿದ ವೇಣರಾಜ ಋಷಿಶಾಪದಿಂದ ಸತ್ತ. ಅವನಾದ ಬಳಿಕ ಪಟ್ಟಕ್ಕೆ ಬಂದ ಪೃಥು ಯೋಗ್ಯವಾಗಿ ರಾಜ್ಯಭಾರ ಮಾಡಿ, ಸ್ವಧರ್ಮಶಿಕ್ಷಣವನ್ನು ಪ್ರಜೆಗಳಿಗೀಯದೆ ಅವರಿಂದ ತೆರಿಗೆ ವಸೂಲು ಮಾಡುವ ಅರಸ ಅವರ ಪಾಪಗಳಿಗೆ ಬಾಧ್ಯನಾಗಿ ತನ್ನ ಮಹತ್ತ್ವವನ್ನು ಕಳೆದುಕೊಳ್ಳುವನೆಂದು ಸಾರಿದ ಈ ಅಂಶವನ್ನೂ ಭಾಗವತ ಉಲ್ಲೇಖಿಸಿದೆ.
===[[ನಾರದ ಪುರಾಣ|ನಾರದೀಯ ಪುರಾಣ]]===
*ಉಪಲಬ್ಧವಾಗಿರುವ ಕೆಲವೇ ಶ್ಲೋಕಗಳನ್ನುಳಿದು ಮಿಕ್ಕ ಇಡೀ ಬೃಹನ್ನಾರದೀಯ ಉಪಪುರಾಣವನ್ನು ಗರ್ಭೀಕರಿಸಿಕೊಂಡಿದೆ. 25000 ಶ್ಲೋಕಗಳಿದ್ದು ವೆಂದೂ ನಾರದ ಧರ್ಮವಿಧಿಗಳನ್ನೂ, ಬೃಹತ್ ಕಲ್ಪವನ್ನೂ ಅದರಲ್ಲಿ ಹೇಳಿದ್ದನೆಂದೂ ಮತ್ಸ್ಯಪುರಾಣ ನಿರ್ದೇಶಿಸುತ್ತದೆ. ಪ್ರಸ್ತುತ ಪುರಾಣದಲ್ಲಿ ಕೇವಲ 3,600 ಶ್ಲೋಕಗಳಿವೆ. ಬೃಹತ್ಕಲ್ಪದ ಪ್ರಸ್ತಾವವಿಲ್ಲ. ಇದರಲ್ಲಿ ನಾರದ ವಕ್ತಾರನಲ್ಲ, ಶ್ರೋತಾರ. ವೈಷ್ಣವಮತಾಚಾರ ಗಣ್ಯವಾಗಿರುವ ಇದರಲ್ಲಿ ನಾರದ ಸನತ್ಕುಮಾರರ ಸಂವಾದವೊಂದರ ಮೂಲಕ ವಿಷ್ಣುವಿನ ಭಕ್ತಿ, ವ್ರತ, ಉತ್ಸವಗಳನ್ನು ವಿವರಿಸಲಾಗಿದೆ. *ತಾಂತ್ರಿಕರನ್ನೂ ಬೌದ್ಧರನ್ನೂ ಇಲ್ಲಿ ಪಾಷಂಡ ರೆಂದು ಕರೆಯಲಾಗಿದೆ. ಪಾಪ ಹಾಗೂ ಪಾಪಿಗಳಿಗೆ ಸಿಗುವ ನರಕಶಿಕ್ಷೆಗಳ ವರ್ಣನೆಯಲ್ಲದೆ ವರ್ಣಾಶ್ರಮಧರ್ಮ, ಶ್ರಾದ್ಧಕಲ್ಪ, ಪ್ರಾಯಶ್ಚಿತ್ತ, ಸಂಸಾರ, ಕ್ಲೇಶ, ಮೋಕ್ಷ, ಯೋಗ, ವಿಷ್ಣುಭಕ್ತಿ ಪ್ರಶಂಸೆಗಳಿಂದ ತುಂಬಿದ ಇದರ ರಚನಾ ಕಾಲ 750-900ರ ನಡುವೆ ಎನ್ನಬಹುದು. ಪೂರ್ವೋತ್ತರ ಭಾಗಗಳೆಂದು ವಿಭಕ್ತವಾಗಿರುವ ನಾರದೀಯರ ಪೂರ್ವಭಾಗದ 4 ಉಪಪರ್ವಗಳಲ್ಲಿ ಮೊದಲನೆಯದು ಸಂಪೂರ್ಣವಾಗಿ ಬೃಹನ್ನಾರದೀಯ.
*ಸನತ್ಕುಮಾರ ನಾರದನಿಗೆ 3ನೆಯ ಉಪ ವಿಭಾಗದಲ್ಲಿ ಉಪದೇಶಿಸಿದರೆ, 1, 2, 4ನೆಯ ಉಪವಿಭಾಗಗಳಲ್ಲಿ ಸನಕ, ಸನಂದನ, ಸನಾತನರು ವಿವಿಧ ವಿಷಯಗಳನ್ನು ವಿವರಿಸಿದ್ದಾರೆ. ಈ ಪುರಾಣದ ಪ್ರಕಾರ ನಾರಾಯಣ ವಿಶ್ವದ ಮೂಲಸತ್ಯ, ಆದಿಕಾರಣ. ಅವನು ಬ್ರಹ್ಮ, ವಿಷ್ಣು, ರುದ್ರರನ್ನು ಸೃಷ್ಟಿ, ಸ್ಥಿತಿ, ಲಯಗಳ ನಿರ್ವಹಣಕ್ಕಾಗಿ ತನ್ನ ಅಂಶದಿಂದ ಹುಟ್ಟಿಸುತ್ತಾನೆ. ನಾರಾಯಣನೂ ಮಹಾವಿಷ್ಣುವೂ ಅಭಿನ್ನರು. ಈತನ ಸೃಷ್ಟಿಶಕ್ತಿ ಸದಸದಾತ್ಮಕ, ವಿದ್ಯಾವಿದ್ಯಾತ್ಮಕ. ಮಹಾವಿಷ್ಣುವೂ ವಿಶ್ವವೂ ಭಿನ್ನವೆಂದು ತೋರುವುದು ಮಾನವರ ಅವಿದ್ಯೆಯ ದೆಸೆಯಿಂದ. *ಜ್ಞಾತೃಜ್ಞೇಯಗಳಲ್ಲಿಯ ಭೇದವಳಿದು ಅವೆರಡರ ಏಕತತ್ತ್ವ ಗೋಚರವಾಗುವುದು ವಿದ್ಯಾಬಲದಿಂದ. ಅಥವಾ ಅದೇ ವಿದ್ಯೆ. ಹರಿಯೂ ಅವನ ಶಕ್ತಿಯೂ ವಿಶ್ವವ್ಯಾಪ್ತಿಗಳು, ಅವಿನಾಭಾವಿಗಳು. ಶಕ್ತಿಯದು ವ್ಯಕ್ತಾವ್ಯಕ್ತ ಸ್ವರೂಪ. ಪ್ರಕೃತಿ, ಪುರುಷ, ಕಾಲಗಳು ಅದರ ಪ್ರಥಮಾವಿರ್ಭಾವಗಳು. ಪುರುಷಸಾನ್ನಿಧ್ಯದಿಂದ ಕ್ಷುಬ್ಧವಾದ ಪ್ರಕೃತಿ ಮಹತ್ತನ್ನೂ ಮಹತ್ತು ಆಮೇಲೆ ಬುದ್ಧಿಯನ್ನೂ ಬುದ್ಧಿ ಅಹಂಕಾರವನ್ನೂ ಪಡೆಯುತ್ತವೆ.
*ವಾಸುದೇವ ಅಥವಾ ಮಹಾವಿಷ್ಣು ಜ್ಞಾನಗಮ್ಯ ಇಲ್ಲದೆ ಕರ್ಮಗಮ್ಯ. ಅವನನ್ನು ಹೊಂದಿದಾಗಲೇ ಕ್ಲೇಶತ್ರಯ ನಷ್ಟವಾಗುತ್ತದೆ. ಯೋಗವೆಂದರೆ ಬ್ರಹ್ಮನಲ್ಲಿ ಲಯಹೊಂದುವುದು. ಮನಸ್ಸನ್ನು ವಿಷಯಗಳಿಂದ ಹಿಂದಿರುಗಿಸಿ, ಆತ್ಮನಲ್ಲಿ ಲೀನಗೊಳಿಸಿ, ಬ್ರಹ್ಮನಲ್ಲಿ ಕೊನೆಯದಾಗಿ ಲಯವಾಗುವುದು. ಇದು ಜೀವಿ ಗಳಿಸಬಹುದಾದ ವ್ಯಕ್ತಿಯ ಲಕ್ಷಣ. ಈ ಎಲ್ಲವಕ್ಕೂ ಭಕ್ತಿ ಅಥವಾ ಶ್ರದ್ಧೆ ಅತ್ಯಾವಶ್ಯಕ.
 
===[[ಮಾರ್ಕಂಡೇಯ ಪುರಾಣ]]===
*ಹಳೆಯ ಮಹಾಪುರಾಣಗಳಲ್ಲೊಂದು. ಪ್ರ.ಶ.ಪು. 2ನೆಯ ಶತಮಾನದ ಆದಿಭಾಗದಲ್ಲಿ ಇದರ ಪ್ರಾಚೀನವೆನ್ನಿಸುವ ಮೂಲಭಾಗದ ರಚನೆಯಾಯಿತು. ಪ್ರಸ್ತುತ ಪುರಾಣದಲ್ಲಿ ಅರ್ವಾಚೀನ ಅಂಶಗಳೆಷ್ಟೋ ಇವೆ. ಏಕಸೂತ್ರತೆ ಇಲ್ಲವೇ ಇಲ್ಲ. ಮಾರ್ಕಂಡೇಯ ಮುನಿ ನಿತ್ಯತರುಣ. ಆತ ತನ್ನ ಶಿಷ್ಯನಾದ ಕ್ರೌಷ್ಟುಕಿಗೆ ವಿಶ್ವಸೃಷ್ಟಿ, ಯುಗಮಾನ, ವಂಶಾವಳಿ-ಮುಂತಾದ ಶುದ್ಧ ಪೌರಾಣಿಕಾಂಶಗಳನ್ನು ಅರುಹುವ ಭಾಗವನ್ನು ಪ್ರಾಚೀನವೆನ್ನಬಹುದು. ವಿಷ್ಣು, ಶಿವರಿಗಿಲ್ಲಿ ಪ್ರಧಾನ್ಯವಿಲ್ಲ. ಇಂದ್ರ, ಬ್ರಹ್ಮ, ಅಗ್ನಿ, ಸೂರ್ಯಾದಿ ವೈದಿಕ ದೇವತೆಗಳಿಗಿಲ್ಲಿ ಅಗ್ರಸ್ಥಾನ.
* ವ್ಯಾಸಶಿಷ್ಯನಾದ ಜೈಮಿನಿ ಮಹಾಭಾರತದಲ್ಲಿಯ ನಾಲ್ಕು ಸಮಸ್ಯೆಗಳಿಗೆ ಉತ್ತರ ಪಡೆಯುತ್ತಾನೆ. ದ್ರೌಪದಿ ಪಂಚಪಾಂಡವರ ಪತ್ನಿಯಾದುದು ಹೇಗೆಂಬುದು ಮೊದಲ ಪ್ರಶ್ನೆ. ಅವಳ ಪಂಚಪುತ್ರರು ಕೌಮಾರ ದಶೆಯಲ್ಲೇ ಹತರಾದುದೇಕೆಂದು ಕೊನೆಯ ಪ್ರಶ್ನೆ. ಕೊನೆಯ ಪ್ರಶ್ನೆಯನ್ನು ಉತ್ತರಿಸುವ ಸಂದರ್ಭದಲ್ಲಿ, ಹರಿಶ್ಚಂದ್ರನನ್ನು ಕ್ರೂರವಾಗಿ ನಡೆಸಿಕೊಂಡ ಬಗ್ಗೆ ಐವರು ವಿಶ್ವೇದೇವರು ವಿಶ್ವಾಮಿತ್ರನನ್ನು ತಪ್ಪಿತಸ್ಥನೆಂದಾಗ ಆತ ಅವರನ್ನು ಮನುಷ್ಯರಾಗಿ ಜನಿಸಿರಿ ಎಂದು ಶಪಿಸಿದನೆಂದೂ ಶಾಪವಿಮೋಚನೆ ಬೇಗ ಆಗಲೆಂದು ಕೌಮಾರದಶೆಯಲ್ಲೇ ಸಾಯುವಂತೆ ಆತ ಅವರಿಗೆ ಅನುಗ್ರಹಿಸಿದನೆಂದೂ ಹೇಳುವ ಪ್ರಕರಣ ಹರಿಶ್ಚಂದ್ರ ರಾಜನ ಹೃದಯವಿದ್ರಾವಕ ಕಥೆಗೆಡೆಮಾಡಿಕೊಡುತ್ತದೆ.
Line ೮೮ ⟶ ೧೮೬:
*ವಾಸುದೇವ ಸರ್ವಾಂತರ್ಯಾಮಿ ಮತ್ತು ಸರ್ವಾತೀತ. ಸರ್ವದುಃಖಗಳೂ ಸಂಗಜನ್ಯ, ಸಂಗತ್ಯಾಗದಿಂದ ಮಹತ್ತ್ವವಳಿದಾಗ ನಿಜ ಸುಖ ಹಸ್ತಗತವಾಗುತ್ತದೆ. ಮೋಕ್ಷಾನುಕೂಲವಾದುದೇ ನಿಜವಾದ ಜ್ಞಾನ. ಮಿಕ್ಕಿದ್ದೆಲ್ಲ ಅಜ್ಞಾನ. ವಿಷ್ಣು ಪುರಾಣದಂತೆ ಮಾರ್ಕಂಡೇಯ ಪುರಾಣವೂ ಪ್ರಜೆಗಳನ್ನು ಚೆನ್ನಾಗಿ ಪಾಲಿಸುವ ಅರಸನಿಗೆ ಅವರ ಪುಣ್ಯಭಾಗ ಸಲ್ಲುವುದೆನ್ನುತ್ತದೆ. ದುಷ್ಟದಮನ, ಶಿಷ್ಟಪಾಲನಗಳಲ್ಲಿ ನಿತ್ಯನಿರತನಾದ ದೊರೆಗೆ ಶಿಷ್ಟಾರ್ಜಿತ ಪುಣ್ಯದ ಆರನೆಯ ಒಂದು ಅಂಶ ಲಭಿಸುತ್ತದೆ.
*ಶಿಷ್ಟರನ್ನು ರಕ್ಷಿಸದಿದ್ದಲ್ಲಿ ದುಷ್ಟರ ಎಲ್ಲ ಪಾಪಗಳೂ ಅವನಿಗಂಟಿಕೊಳ್ಳುತ್ತವೆ ಎಂಬ ಅಂಶವನ್ನು ಮರುತ್ತರಾಯನಿಗೆ ಅವನ ಅಜ್ಜಿ ಹೇಳುವ ಸಂದರ್ಭ ಸ್ವಾರಸ್ಯವಾಗಿದೆ. ಕ್ಷತ್ರಿಯನಾದ ಮನುಷ್ಯ ಸಪ್ತದುರ್ವಸನಗಳನ್ನು ಬಿಟ್ಟು, ಅನುಕ್ರಮವಾಗಿ ಮೊದಲು ತನ್ನನ್ನು, ಆಮೇಲೆ ತನ್ನ ಮಂತ್ರಿಗಳ ನ್ನು, ಬಳಿಕ ತನ್ನ ಸೇವಕ ಅಥವಾ ನೌಕರರನ್ನು, ಅನಂತರ ತನ್ನ ಪ್ರಜೆಗಳನ್ನು ಮತ್ತು ಕೊನೆಯಲ್ಲಿ ತನ್ನ ಹಗೆಗಳನ್ನು ನಿಯಂತ್ರಿಸಿದರೆ ಮಾತ್ರ ಯಶಸ್ವಿಯಾಗಬಲ್ಲನೆಂದು ರಾಣಿಯಾದ ಮದಾಲಸೆ ತನ್ನ ಮಗನಿಗಿಲ್ಲಿ ಉಪದೇಶಿಸುವುದು ಬಹಳ ಮಾರ್ಮಿಕವಾದ ರಾಜಶಿಕ್ಷಣಸೂತ್ರ. ಇದರ ಆಧುನಿಕ ಸ್ವರೂಪದ ಕಾಲ ಪ್ರ.ಶ. 8ನೆಯ ಶತಮಾನ. ಶ್ಲೋಕ ಸಂಖ್ಯೆ 9000.
===[[ಅಗ್ನಿ ಪುರಾಣ|ಆಗ್ನೇಯ ಮಹಾಪುರಾಣ]]===
*ಪ್ರ.ಶ. 7ನೆಯ ಶತಮಾನಕ್ಕಿಂತ ಈಚಿನದು. ಇದರ ಅಲಂಕಾರಶಾಸ್ತ್ರ ವಿಭಾಗ ಪ್ರ.ಶ. 900ರ ಬಳಿಕ ಇದರಲ್ಲಿ ಕ್ರಮಶಃ ಪ್ರಕ್ಷಿಪ್ತವಾದುದು ವಸಿಷ್ಮನಿಗೆ ಅಗ್ನಿ ಹೇಳಿದ್ದರಿಂದ ಪುರಾಣಕ್ಕೆ ಈ ಹೆಸರು. ಪುರಾಣಗಳ ವಿಶ್ವಕೋಶ ಸ್ವರೂಪಕ್ಕಿದು ಪರಮಾದರ್ಶ. ಇದರಲ್ಲಿ ವಿಷ್ಣುವಿನ ಅವತಾರಗಳು ಉಕ್ತವಾಗಿವೆ. ರಾಮಕೃಷ್ಣರ ಕತೆಗಳನ್ನು ರಾಮಾಯಣ, ಮಹಾಭಾರತ, ಹರಿವಂಶಗಳಲ್ಲಿರುವಂತೆಯೇ ಹೇಳಲಾಗಿದೆ. ದ್ವಾದಶಸಹಸೀ ಸ್ತೋತ್ರವಿಲ್ಲಿದೆ. ಹೀಗಿದ್ದರೂ ಅಗ್ನಿಪುರಾಣ ಒಟ್ಟಿನಲ್ಲಿ ಶಿವನಿಗೇ ಹೆಚ್ಚಿನ ಗುರುತ್ವವನ್ನು ಕೊಟ್ಟಿದೆ.
* ಲಿಂಗ, ದುರ್ಗಾರಾಧನೆಗಳ ಯೋಗಮಾರ್ಗಬೋಧನವಲ್ಲದೆ, ತಾಂತ್ರಿಕಕೃತ್ಯ, ಮೂರ್ತಿಶಿಲ್ಪ, ವಿಗ್ರಹಪ್ರತಿಷ್ಠೆ, ಗಣೇಶಪೂಜೆ, ಸೂರ್ಯೋಪಾಸನೆ, ಮರಣ, ಪುನರ್ಜನ್ಮ, ಯೋಗ, ಗೀತಾತತ್ತ್ವ, ಯಮಗೀತೆ ಮುಂತಾದ ವಿಷಯಗಳ ಜೊತೆಗೇ ಪೌರಾಣಿಕ ವಿಷಯಗಳಾದ ಸೃಷ್ಟಿವಿಚಾರ, ವಂಶಾನುಚರಿತ, ಭೂವಿವರಣೆಗಳೂ ಅಗ್ನಿಪುರಾಣಾಂತರ್ಗತ. ಭೂಗೋಲಶಾಸ್ತ್ರ, ಖಗೋಳಶಾಸ್ತ್ರ, ಜ್ಯೋತಿಶಶಾಸ್ತ್ರ, ವಿವಾಹಧರ್ಮ, ಉತ್ತರಕ್ರಿಯೆ, ಶಕುನಶಾಸ್ತ್ರ, ವಾಸ್ತುಶಿಲ್ಪ, ಜೀವನಾಚಾರ, ರಾಜನೀತಿ, ಯುದ್ಧಕಲೆ, ಯಾಜ್ಞವಲ್ಕಸ್ಮೃತಿಗನು ಗುಣವಾದ ಧರ್ಮ ವಿವರಣೆ, ವೈದ್ಯಶಾಸ್ತ್ರ, ಛಂದಶಾಶಸ್ತ್ರ, ಅಲಂಕಾರಶಾಸ್ತ್ರ, ವ್ಯಾಕರಣಶಾಸ್ತ್ರ ಮತ್ತು ಶಬ್ದಕೋಶಗಳ ವಿಷಯಗಳಿಗೆ ಬೇರೆ ಬೇರೆ ವಿಭಾಗಗಳು ಮೀಸಲಾಗಿವೆ.
Line ೧೦೩ ⟶ ೨೦೧:
*ಸಾಮಾನ್ಯ ಮತ್ತು ವೈಶೇಷಿಕ ಎಂದು ಕಾವ್ಯಗುಣಗಳ ವರ್ಷಗಳೆರಡು. ಸಾಮಾನ್ಯ ಶಬ್ದಗುಣಗಳು ಆರು. ಸಾಮಾನ್ಯ ಅರ್ಥಗುಣಗಳು ಆರು ಮತ್ತು ಉಭಯಗುಣಗಳು ಆರು. ವೈಶೇಷಿಕ ಗುಣಗಳು ಆಯಾ ಕೃತಿಗೆ ವಿಶಿಷ್ಟ. ದೋಷಗಳು ಮೂರು ಮುಖ್ಯ ಆಶ್ರಯಗಳನ್ನಾಧರಿಸಿವೆ. ವಕ್ತೃ, ವಾಚಕ, ವಾಚ್ಯ-ಎಂದು. ಅಗ್ನಿಪುರಾಣ ತನ್ನ ಅಲಂಕಾರ ವಿಭಾಗದಲ್ಲಿ ಹೆಚ್ಚಾಗಿ ಭರತ, ಭಾಮಹ, ದಂಡಿಗಳ ಗ್ರಂಥಗಳನ್ನಾಧರಿಸಿದೆ. ಇದರ ಪ್ರಕಾರ ಆಕ್ಷೇಪ ವ್ಯಾಪಾರದಲ್ಲಿ ಧ್ವನಿ ಅಡಕವಾಗುತ್ತದೆ.
*ಸಮವೆಂಬ ಅರ್ಥಾಲಂಕಾರದ ಕೊನೆಯ ಪ್ರಭೇದವಾದ ಪ್ರಕಟತ್ವವೆಂಬ ಉಭಯಾಲಂಕಾರ ವನ್ನು ಅಭಿವ್ಯಕ್ತಿ ಎಂದು ಕರೆದು ಶ್ರುತಿ, ಆಕ್ಷೇಪಗಳು ಅಭಿವ್ಯಕ್ತಿಯ ಉಪವಿಭಾಗಗಳೆಂದು ಸಾರುತ್ತದೆ. ಇದರ ಪರಿಭಾಷೆಯಂತೆ ಶ್ರುತಿಯಲ್ಲಿ ಅಭಿಧಾ, ಲಕ್ಷಣಾ ವ್ಯಾಪಾರಗಳು ಅಡಕವಾಗುತ್ತವೆ : ಆಕ್ಷೇಪವೆಂದರೆ ಧ್ವನಿ ಅಥವಾ ವ್ಯಂಜನಾವ್ಯಾಪಾರ. ಈ ದೃಷ್ಟಿಯಿಂದ ಅಲಂಕಾರ ವ್ಯಾಪಕವೂ ಧ್ವನಿವ್ಯಾಪ್ಯವೂ ಆಗುತ್ತದೆ. ಧ್ವನಿ ಅಲಂಕಾರದ ಜಾತಿಗೆ ಸೇರಿದ ಒಂದು ಅಂಗ ಎನ್ನಿಸುತ್ತದೆ. ವಿವಿಧ ಅಲಂಕರಣವ್ಯಾಪಾರಗಳಲ್ಲಿ ಧ್ವನನ ವ್ಯಾಪಾರವೂ ಒಂದೆಂದಾಗುತ್ತದೆ.
===[[ಭವಿಷ್ಯ ಪುರಾಣ]]===
*ಮುಂದಾಗುವುದನ್ನು ಹೇಳ ಹೊರಟದ್ದು, ಉಪಲಬ್ಧ ಪ್ರತಿ ಆಪಸ್ತಂಬೀಯ ಧರ್ಮಶಾಸ್ತ್ರ ಹೇಳಿದ ಹಳೆಯ ಭವಿಷ್ಯ ಪುರಾಣವಲ್ಲ. ಇದರಲ್ಲಿಯ ಸೃಷ್ಟಿವಿವರಣೆ ಮನುಸ್ಮೃತಿಯಿಂದ ಬಳಸಿಕೊಂಡಿದೆ. ಬಹುಭಾಗ ಬ್ರಾಹ್ಮಣರ ವೈದಿಕಕರ್ಮಗಳನ್ನೂ ಹಬ್ಬ ಹರಿದಿನಗಳನ್ನೂ ವಿವರಿಸುತ್ತದೆ. ಕೆಲವೇ ಕತೆಗಳಿವೆ. ನಾಗಪಂಚಮಿಯ ವರ್ಣನೆ ಹಾವುಗಳ ಕತೆಗಳಿಗೆ ಅವಕಾಶವಿತ್ತಿದೆ. ಈ ಪುರಾಣದಲ್ಲಿ ಜರತುಷ್ಟ್ರಮತದ ಸೂರ್ಯ, ಅಗ್ನಿಗಳ ಉಪಾಸನೆಗೆ ಸಂಬಂಧಿಸಿದ ಶಾಕದ್ವೀಪಸ್ಥ ಸೂರ್ಯಾರಾಧನೆಯ ವಿಷಯ ಬಂದಿದೆ.
* ಶಾಕದ್ವೀಪದ ನಿವಾಸಿಗಳು ಸಿಥಿಯನ್ನರಾಗಿರಬಹುದೆಂದು ಊಹಿಸಲಾಗಿದೆ. ಭವಿಷ್ಯಪುರಾಣ ತನ್ನ ಬಾಯಿ, ತೋಳು, ತೊಡೆ, ಪಾದಗಳಿಂದ ಬ್ರಹ್ಮ ಇಡೀ ಸೃಷ್ಟಿಯನ್ನು ಕಾಪಾಡುವ ಸಲುವಾಗಿ ಬ್ರಾಹ್ಮಣಾದಿ ನಾಲ್ಕು ಜಾತಿಗಳನ್ನು ನಿರ್ಮಿಸಿದನೆಂದೂ ಅವುಗಳ ಉದ್ಯೋಗಗಳನ್ನು ಆಯಾ ಜಾತಿಗಳ ಸ್ವಭಾವ ಸಹಜ ಗುಣಗಳಿಗೂ ಕೃತ್ಯಗಳಿಗೂ ಅನುಗುಣವಾಗಿ ವಿಂಗಡಿಸಿ ನಿರ್ದೇಶಿಸಿದನೆಂದೂ ಹೇಳುತ್ತದೆ. ಇದರ ಮುಖ್ಯ ದೇವತೆ ಶಿವ.
*ಪರಂಪರೆಯ ಪ್ರಕಾರ ಶ್ಲೋಕಸಂಖ್ಯೆ 14500 ಎಂದಿದ್ದರೂ ವಾಸ್ತವಿಕವಾಗಿರುವುದು 7,000 ಭವಿಷ್ಯೋತ್ತರ ಪುರಾಣ ಇದರ ಅಂಗವೆಂದು ತಿಳಿದು ಅದರ 7,000 ಶ್ಲೋಕಗಳನ್ನೂ ಸೇರಿಸಿದರೆ ಒಟ್ಟು 14,000 ಶ್ಲೋಕಗಳಾಗುತ್ತವೆ. ಪ್ರಸ್ತುತ ಪುರಾಣ ಸಾಂಬಪುರಾಣದಿಂದ ಕೆಲ ಅಧ್ಯಾಯಗಳನ್ನು ತೆಗೆದುಕೊಂಡಿರುವುದರಿಂದ ಇದರ ಕಾಲ ಪ್ರ.ಶ. 600-950ರ ನಡುವೆ ಎನ್ನಬಹುದು. ಆಪಸ್ತಂಬ ಧರ್ಮಸೂತ್ರ. ಈ ಪುರಾಣವನ್ನು ಹೆಸರಿಸಿರುವುದರಿಂದ ಇದರ ಮೂಲ ರೂಪದ ಕಾಲ ಪ್ರ.ಶ.ಪು. 3ನೆಯ ಶತಮಾನ ಎನ್ನಬಹುದು.
===[[ಬ್ರಹ್ಮವೈವರ್ತ ಪುರಾಣ]]===
===ಬ್ರಹ್ಮವೈವರ್ತಪುರಾಣ===
*ಇದನ್ನು ಬ್ರಹ್ಮಕೈವರ್ತಪುರಾಣವೆಂದೂ ಹೇಳುತ್ತಾರೆ. ದಕ್ಷಿಣ ಭಾರತದಲ್ಲಿ ಇದರ ಎರಡನೆಯ ಹೆಸರು ಪ್ರಸಿದ್ಧ. ಇದು ಬ್ರಹ್ಮಖಂಡ ಕೃಷ್ಣಾತ್ಮಕನಾದ ಬ್ರಹ್ಮನ ಉತ್ಪತ್ತಿಯನ್ನು ಹೇಳುತ್ತದೆ. ನಾರದನ ಬಗೆಗೆ ಅನೇಕ ಕಥೆಗಳು ಬಂದಿವೆ. 16ನೆಯ ಅಧ್ಯಾಯದಲ್ಲಿ ವೈದ್ಯಕೀಯ ವಿಷಯದ ಪ್ರಸ್ತಾಪವಿದೆ. ಪ್ರಕೃತಿ ಖಂಡದಲ್ಲಿ ಜಗತ್ತಿನ ಮೂಲದ್ರವ್ಯವಾದ ಪ್ರಕೃತಿ ದುರ್ಗೆ, ಲಕ್ಷ್ಮಿ, ಸರಸ್ವತಿ, ಸಾವಿತ್ರಿ, ರಾಧೆ-ಎಂಬ ಐದು ಅವತಾರಗಳನ್ನು ಕೃಷ್ಣನ ಅಪ್ಪಣೆಯ ಮೇರೆಗೆ ತಾಳಿದ ಸಂಗತಿಯಿದೆ.
*ಗಣೇಶಖಂಡ ಅತಿ ಪ್ರಾಚೀನ ಕಾಲದಲ್ಲಿ ಅಜ್ಞಾತನಾಗಿದ್ದ ಮತ್ತು ಅರ್ವಾಚೀನಕಾಲದಲ್ಲಿ ಅತಿ ಜನಪ್ರಿಯನಾದ ಗಜಮುಖ ಗಣಪನ ಕಥೆಗಳನ್ನು ಹೇಳಿದೆ. ಒಂದು ವಿಚಿತ್ರರೀತಿಯಿಂದ ಗಣೇಶನನ್ನಿಲ್ಲಿ ಕೃಷ್ಣನ ಒಂದು ಅವತಾರವೆಂದು ಹೇಳಲಾಗಿದೆ. ಕೊನೆಯದಾದ ಕೃಷ್ಣಜನ್ಮಖಂಡ ಕೃಷ್ಣನ ಹುಟ್ಟಿನಿಂದ ಹಿಡಿದು ಅವನ ಇಡೀ ಜೀವನ ವೃತ್ತಾಂತವನ್ನು ತಿಳಿಸುತ್ತದೆ. ಅವನು ಮಾಡಿದ ಯುದ್ಧಗಳ ಹಾಗೂ ಗೋಪಿಯರೊಡನೆ ನಡೆಸಿದ ಪ್ರಣಯ ಪ್ರಕರಣಗಳ ವಿವರಗಳಿಲ್ಲಿವೆ. ಇಡೀ ಪುರಾಣದ ಮುಖ್ಯೋದ್ದೇಶ ಕೃಷ್ಣ ರಾಧೆಯರ ವಿಲಾಸವನ್ನು ಬಣ್ಣಿಸುವುದರಲ್ಲಿ ಮುಗಿಯುತ್ತದೆ.
Line ೧೧೩ ⟶ ೨೧೧:
* ಕೃಷ್ಣ ರಾಧೆಯರ ನಿತ್ಯದಾಂಪತ್ಯವನ್ನೂ ಕೃಷ್ಣನ ಪರಬ್ರಹ್ಮತ್ವವನ್ನೂ ಪ್ರ.ಶ. 12ನೆಯ ಶತಮಾನದಲ್ಲಿದ್ದ ನಿಂಬಾರ್ಕ ಮೊಟ್ಟಮೊದಲಬಾರಿಗೆ ಹೇಳಿರುವುದರಿಂದ ಇದರ ಕಾಲ ಅದರಿಂದ ಇತ್ತೀಚಿನದೆನ್ನಬಹುದು. ರಾಧೆಯನ್ನು ಕೃಷ್ಣಶಕ್ತಿಯೆಂದು ಆರಾಧಿಸುವ ರಾಧಾವಲ್ಲಭೀಯ ಪಂಥವಂತೂ ಪ್ರ.ಶ. 16ನೆಯ ಶತಮಾನದಲ್ಲಿ ಉದಯವಾದದ್ದು. ಆದ್ದರಿಂದ ಪ್ರಸ್ತುತ ಪುರಾಣದ ಕಾಲ 16ನೆಯ ಶತಮಾನಕ್ಕೆ ಸಮೀಪವರ್ತಿಯಾಗಿರುವುದು ಸುಲಭೋಹ್ಯ.
 
===[[ಲಿಂಗ ಪುರಾಣ|ಲಿಂಗ ಮಹಾಪುರಾಣ]]===
===ಲಿಂಗಮಹಾಪುರಾಣ===
ಶಿವನ ವಿವಿಧ ರೂಪಗಳ-ಹೆಚ್ಚಾಗಿ ಲಿಂಗರೂಪದ - ಪೂಜೆಯನ್ನು ಮುಖ್ಯವಾಗಿ ವಿವರಿಸುತ್ತದೆ. ದೇವದಾರುವನಕ್ಕೊಮ್ಮೆ ಶಿವ ಹೋದಾಗ ಅವನನ್ನು ಕಂಡು ಅಲ್ಲಿದ್ದ ಋಷಿಪತ್ನಿಯರು ಮರುಳಾದರು. ಆಗ ಲಿಂಗವಾಗೆಂದು ಶಿವನಿಗೆ ಋಷಿಗಳು ಶಾಪಕೊಟ್ಟರು. ಶಿವನಿಗಿಲ್ಲಿ 28 ಅವತಾರಗಳನ್ನು ಹೇಳಲಾಗಿದೆ. ತಂತ್ರಗಳ ಪ್ರಭಾವ ಈ ಪುರಾಣದ ಮೇಲೆ ಬಿದ್ದಿರುವುದನ್ನು ಕೆಲವೆಡೆ ಕಾಣಬಹುದು.
* ಒಟ್ಟಿನಲ್ಲಿ ಇದು ಅಷ್ಟೇನೂ ಪ್ರಾಚೀನ ಪುರಾಣವಲ್ಲ. ಪ್ರ.ಶ. 8ನೆಯ ಶತಮಾನಕ್ಕೂ ಈಚಿನದು. ಶ್ಲೋಕಸಂಖ್ಯೆ 11000. ಬಲ್ಲಾಳಸೇನನ ಪ್ರಕಾರ ಮತ್ಸ್ಯಪುರಾಣದಲ್ಲಿರುವ ಗಾತ್ರವನ್ನು ಹೆಚ್ಚಿಸಲಾಯಿತು. ಇದರಲ್ಲಿ ಕಥನವಸ್ತುಗಳಿಲ್ಲ, ಕರ್ಮಕಾಂಡದ ಅಂಶಗಳು ತುಂಬಿಕೊಂಡಿವೆ.
Line ೧೩೫ ⟶ ೨೩೩:
*ಇದು ಅವನ ಪ್ರಾಕೃತಪ್ರಲಯ ಸ್ಥಿತಿ. ಇಲ್ಲಿಂದ ಮುಂದೆ ಅವನು ಪ್ರಕೃತಿ, ಪುರುಷರಲ್ಲಿ ದೇವತ್ವಪ್ರಕಟಣೆಗಾಗಿ ಪ್ರವೇಶಿಸಿದಾಗ ಜಗತ್ಸೃಷ್ಟಿಗಾರಂಭ. ದೇವರು ಪ್ರಕೃತಿಯಾಗಿ ನಡೆದುಕೊಳ್ಳುವುದೆಂದರೆ ಸಂಕೋಚ ವಿಕಾಸಶೀಲನಾಗುವುದೆಂದರ್ಥ. ಪ್ರಧಾನ ಪುರುಷಾತ್ಮಕವಾದ ಮಹತ್ ಕಾರಣವೆಂಬುದು ಅವನ ಆದ್ಯಸೃಷ್ಟಿ.
*ಅದರಿಂದ ಮಹತ್, ಆತ್ಮ, ಮತಿ, ಬ್ರಹ್ಮ, ಪ್ರಬುದ್ಧಿ, ಖ್ಯಾತಿ, ಈಶ್ವರ, ಪ್ರಜ್ಞೆ, ಧೃತಿ, ಸ್ಮೃತಿ, ಅಥವಾ ಸಂವಿತ್ ಎಂಬ ಪದಾರ್ಥ ಹುಟ್ಟುತ್ತದೆ. ಹೀಗೆ ವಿವಿಧ ನಾಮಗಳುಳ್ಳ ಈ ಮಹತ್ತಿನಿಂದ ವೈಕಾರಿಕ, ತೈಜಸ ಮತ್ತು ಭೂತಾದಿ ಎಂಬ ಅಹಂಕಾರತ್ರಯ ಉದಯಿಸುತ್ತದೆ. ಈ ತ್ರಿವಿಧಾಹಂಕಾರಕ್ಕೆ ಅಭಿಮಾನ, ಕರ್ತ, ಮಂತ, ಆತ್ಮ, ಎಂಬ ಹೆಸರುಗಳಿವೆ.
===[[ಮತ್ಸ್ಯ ಪುರಾಣ]]===
*ಸಲಕ್ಷಣವಾದ ಪ್ರಾಚೀನ ಮಹಾಪುರಾಣ. ಮತ್ಸ್ಯಾವತಾರ ತಾಳಿ ವಿಷ್ಣು ಮನುವನ್ನು ಪ್ರಲಯಪ್ರವಾಹದಿಂದ ಉದ್ಧರಿಸುವ ವೃತ್ತಾಂತದಿಂದ ಪುರಾಣಾರಂಭ. ಮನುವಿನ ಹಡಗನ್ನು ಮತ್ಸ್ಯ ಎಳೆದೊಯ್ಯುವಾಗ ಅವನಿಗೂ ಮನುವಿಗೂ ನಡೆದ ಸಂವಾದವೇ ಮತ್ಸ್ಯಪುರಾಣ. ಸೃಷ್ಟಿ, ವಂಶವೃಕ್ಷ, ಶ್ರಾದ್ಧ, ಭೂ, ಖಗೋಲಗಳ ವಿಷಯ, ಆಂಧ್ರಾದಿ ವಿವಿಧ ದೇಶಗಳ ಅರಸರ ಆಳಿಕೆ. ಯಯಾತಿ ವೃತ್ತಾಂತ, ಸಾವಿತ್ರಿಯ ಕಥೆ ಮತ್ತು ವಿಷ್ಣುವಿನ ಅವತಾರಗಳು ಪ್ರಸ್ತುತ ಪುರಾಣದ ವಸ್ತು ಪ್ರಪಂಚದಲ್ಲಿ ಗಣ್ಯ.
*ಯಯಾತಿ ವೃತ್ತಾಂತ ಮುಂತಾದುವು ಮಹಾಭಾರತ ಹರಿವಂಶಗಳಲ್ಲಿರುವಂತೆಯೇ ಇವೆ. ವಿವಿಧವ್ರತಗಳು, ಪ್ರಯೋಗಮಾಹಾತ್ಮ್ಯ, ವಾರಾಣಸೀಮಾಹಾತ್ಮ್ಯ, ನರ್ಮದಾಮಾಹಾತ್ಮ್ಯ, ರಾಜಧರ್ಮ, ಶಕುನಶಾಸ್ತ್ರ, ಗೃಹಾರಂಭಕರ್ಮ, ವಿಗ್ರಹಪ್ರತಿಷ್ಠೆ, ದೇವಾಲಯ, ಅರಮನೆಗಳ ರಚನೆ, ಷೋಡಶದಾನ ಮುಂತಾದ ವಿಷಯಗಳು ಇದರಲ್ಲಿ ಆಮೇಲಾದ ಪ್ರಕ್ಷೇಪಗಳು. ವೈಷ್ಣವ, ಶೈವ ಸಮಪ್ರಾಧಾನ್ಯವನ್ನಿದರಲ್ಲಿ ಕಾಣಬಹುದು. ಶ್ಲೋಕಸಂಖ್ಯೆ 15,000; ಪ್ರಸ್ತುತರೂಪದ ಕಾಲ ಪ್ರ.ಶ. 550-650 ನಡುವೆ.
Line ೧೪೧ ⟶ ೨೩೯:
*ಬ್ರಹ್ಮಪುರಾಣವನ್ನು ಮೊದಲು ನೆನೆದು, ಅನಂತರ ವೇದಗಳನ್ನು ತನ್ನ ಬಾಯಿಯಿಂದ ಹೊರಗೆಡಹಿದ ಎನ್ನುತ್ತದೆ ಮತ್ಸ್ಯಮಹಾಪುರಾಣ. ಇದರ ಪ್ರಕಾರ ಸರ್ವಚರಾಚರಗಳ ರಕ್ಷಣೆಗಾಗಿ ದಂಡನೆಯನ್ನು ಕೈಗೊಳ್ಳಲೆಂದು ಸ್ವಯಂಭುವಾದ ಬ್ರಹ್ಮ ದೇವತೆಗಳ ಅಂಶಗಳಿಂದ ರಾಜನನ್ನು ಸೃಜಿಸಿದ. ಆದುದರಿಂದ ರಾಜನನ್ನು ಯಾರೂ ಎದುರು ನಿಂತು ನೋಡಲಾರರು. ಆತ ಮಾನವರಲ್ಲಿ ಸೂರ್ಯ. ಆತ ದುಷ್ಟನಾದರೆ ಪ್ರಜೆಗಳೆಲ್ಲರೂ ದುಷ್ಟರಾಗುತ್ತಾರೆ.
*ಹೆಚ್ಚುಕಡಿಮೆಗೆಡೆಗೊಡದಂತೆ ದೊರೆ ದಂಡಶಕ್ತಿಯನ್ನು ನಿರ್ಭಯದಿಂದ ಬಳಸಿದರೆ ಮಾತ್ರ ಪ್ರಜೆಗಳು ದುರ್ಮಾರ್ಗಿಗಳಾಗುವುದಿಲ್ಲ. ಧರ್ಮರೂಪದ ದಂಡಶಕ್ತಿ ಯಿರುವುದು ಬಲಿಷ್ಠರು ದುರ್ಬಲರನ್ನು ಶೋಷಿಸದಂತೆ ನೋಡಿಕೊಳ್ಳಲೆಂದು. ಇಡೀ ರಾಜ್ಯಕ್ಕೆ ರಾಜನು ನಿಯಮಿಸುವ ನೌಕರರೇ ಆಧಾರ. ಧರ್ಮಜ್ಞರ ಸಲಹೆಯಂತೆಯೇ ಆತ ಆಡಳಿತ ನಡೆಸಬೇಕು-ಎಂಬುದು ಪ್ರಸ್ತುತಪುರಾಣದ ರಾಜಧರ್ಮದ ಮುಖ್ಯಾಂಶ.
===[[ಗರುಡ ಪುರಾಣ]]===
*ಗರುಡ ಮಹಾಪುರಾಣವೊಂದು ಸಂಪೂರ್ಣ ವೈಷ್ಣವಪುರಾಣ. ಗರುಡನಿಗಿದನ್ನು ಮೊದಲು ವಿಷ್ಣು ಹೇಳಿದನೆಂದೂ ಆ ಬಳಿಕ ಗರುಡ ಇದನ್ನು ಕಶ್ಯಪಮುನಿಗೆ ಹೇಳಿದನೆಂದೂ ಆದುದರಿಂದ ಇದಕ್ಕೀ ನಾಮಧೇಯ ಬಂದಿತೆಂದೂ ಉಲ್ಲೇಖಿಸಲಾಗಿದೆ. ಸೃಷ್ಟಿಕ್ರಮ, ಯುಗಚಕ್ರ, ವಂಶಾವಳಿ ಮುಂತಾದ ಪೌರಾಣಿಕ ವಿಷಯಗಳೊಟ್ಟಿಗೇ ವಿಷ್ಣುಪೂಜೆ, ವೈಷ್ಣವ ಧರ್ಮಕರ್ಮ, ಪವಿತ್ರಸ್ಥಳ, ಪಂಚಬ್ರಹ್ಮದೇವತಾರ್ಚನೆ ಮುಂತಾದ ವಿಷಯಗಳೂ ಇದರಲ್ಲಿವೆ. ಕೆಲಮಟ್ಟಿಗಿದು ಅಗ್ನಿಪುರಾಣದಂತೆಯೇ ವಿಶ್ವಕೋಶ ಲಕ್ಷಣವುಳ್ಳದ್ದು.
*ಇದರಲ್ಲಿ ರಾಮಾಯಣ, ಮಹಾಭಾರತ, ಹರಿವಂಶಗಳ ಕತೆಗಳಲ್ಲದೆ, ಸೃಷ್ಟಿವಿವರಣೆ, ಖಗೋಲವಿಚಾರ, ಜ್ಯೋತಿಶಾಸ್ತ್ರದ ಅಂಶ, ಶಕುನಶಾಸ್ತ್ರ, ಸಾಮುದ್ರಿಕ ಶಾಸ್ತ್ರ, ರತ್ನಪರೀಕ್ಷೆ, ರಾಜನೀತಿ, ಯಾಜ್ಞವಲ್ಕ್ಯ ಸ್ಮೃತಿಗನುಗುಣವಾದ ಧರ್ಮವಿವೇಕ ಮೊದಲಾದ ನಾನಾ ಜ್ಞಾನಾಂಗಗಳು ತುಂಬಿಕೊಂಡಿದೆ. ಈ ಪುರಾಣದ ಉತ್ತರಖಂಡವನ್ನು ಎರಡನೆಯ ಭಾಗ ಅಥವಾ ಪ್ರೇತಕಲ್ಪ ಎನ್ನುತ್ತಾರೆ.
Line ೧೪೮ ⟶ ೨೪೬:
*ಅವನ ಆಳಿಕೆ ಸತ್ಯ, ನ್ಯಾಯಬದ್ಧವಾಗಿರಬೇಕು. ಇಂಥ ಶೀಲವುಳ್ಳ ದೊರೆ ಜಗತ್ತಿಗೆ ಭೂಷಣಪ್ರಾಯ, ದುರ್ಬಲನಿಗಿರುವ ಮಹಾಬಲ-ಎಂದು ಮುಂತಾಗಿ ಗರುಡಮಹಾಪುರಾಣ ಬೋಧಿಸುತ್ತದೆ. ಗರುಡ ಪುರಾಣದ ಸಾರವನ್ನು ಮಿಕ್ಕ ಪುರಾಣಗಳ ಅಂಶದೊಂದಿಗೆ ಸಾರೋದ್ಧಾರ ಎಂಬ ಹೆಸರಿನಲ್ಲಿ ನೌನಿಧಿರಾಮನೆಂಬಾತ ಸಂಗ್ರಹಿಸಿರುವುದಿಲ್ಲಿ ಸ್ಮರಣೀಯ.
 
===[[ಬ್ರಹ್ಮ ಪುರಾಣ|ಬ್ರಹ್ಮಾಂಡ ಪುರಾಣ]]===
*ವಾಯು ಮಹಾಪುರಾಣದ ಹಳೆಯ ಪಾಠವೆಂದು ಅನುಮಾನಿಸಲಾಗಿದೆ. ಏಕೆಂದರೆ ಇದನ್ನು ವಾಯವೀಯ ಬ್ರಹ್ಮಾಂಡ ಎಂದು ಕರೆದಿದೆ, ಕೂರ್ಮಮಹಾಪುರಾಣ. ಮತ್ಸ್ಯಪುರಾಣದ ಪ್ರಕಾರ ಇದನ್ನು ಹೇಳಿದವನು ಬ್ರಹ್ಮ. ಈ ಹೆಸರಿನ 12,200 ಶ್ಲೋಕಗಳುಳ್ಳ ಪ್ರಾಚೀನಮಹಾಪುರಾಣ ಕಳೆದುಹೋಗಿರಬೇಕು. ಏಕೆಂದರೆ ಉಪಲಬ್ಧ ಪ್ರತಿಯಲ್ಲಿ ಕೇವಲ ಮಾಹಾತ್ಮ್ಯಗಳೂ ಸ್ತೋತ್ರಗಳೂ ಉಪಾಖ್ಯಾನಗಳೂ ಇವೆ. ಪಾರ್ಗಿಟರ್ಗೆ ದೊರೆತ ಇದರ ಹಸ್ತಪ್ರತಿಯೊಂದರಲ್ಲಿಯ ಪೂರ್ವಾರ್ಧ ವಾಯುಪುರಾಣಕ್ಕೆ ಸಂಪೂರ್ಣ ಸಮವಾಗಿದೆ.
*ಉತ್ತರಾರ್ಧದಲ್ಲಿ ಲಲಿತಾದೇವಿಯ ಆರಾಧನೆಯನ್ನೂ ತಾಂತ್ರಿಕಕೃತ್ಯ ವಿಧಾನಗಳಿಗನುಗುಣವಾಗಿ ವಿವರಿಸಲಾಗಿದೆ. ಬಲಿದ್ವೀಪದಲ್ಲಿ ಸ್ಥಳೀಯ ಶಿವಭಕ್ತರಿಗೆ ಬ್ರಹ್ಮಾಂಡ ಮಹಾಪುರಾಣವೊಂದೇ ಮಹಾಧರ್ಮಗ್ರಂಥವಾಗಿದೆ. ಅಧ್ಯಾತ್ಮರಾಮಾಯಣವನ್ನು ಇದರ ಅಂಗವೆಂದು ಗಣಿಸುತ್ತಾರೆ. ಇದರಲ್ಲಿ ಅದ್ವೈತತತ್ತ್ವಗಳ ಮತ್ತು ರಾಮಭಕ್ತಿಯ ಉಪದೇಶವಿದೆ. ಅಧ್ಯಾತ್ಮರಾಮಾಯಣವಿಡೀ ಉಮಾಶಿವರ ಸಂವಾದದ ರೂಪದಲ್ಲಿದೆ.
Line ೧೫೪ ⟶ ೨೫೨:
* ಇದರ ಪ್ರಾಚೀನಮೂಲ ವಾಯುಪುರಾಣದ ಪ್ರಾಚೀನಮೂಲರೂಪ ದಷ್ಟೇ ಹಳೆಯದಾಗಿರಬಹುದಾದರೂ ಮರಾಠಿಕವಿ ಏಕನಾಥನ ಹೇಳಿಕೆಯ ಪ್ರಕಾರ ಇದರ ಪ್ರಸ್ತುತ ರೂಪದ ಕಾಲ ಹೆಚ್ಚು ಕಡಿಮೆ ವಾಯುಪುರಾಣದ ಆಧುನಿಕರೂಪದ ಕಾಲಕ್ಕೆ ಸರಿಸಮವಾದೀತು ಎಂದು ಊಹಿಸಬಹುದು. ಬ್ರಹ್ಮಾಂಡವೆಂಬ ಪದ ಪರಂಪರಾಗತ.
*ಬ್ರಾಹ್ಮಣ ಮತ್ತು ಉಪನಿಷತ್ತುಗಳಲ್ಲಿ ವಿಶ್ವದ ಹುಟ್ಟು ಚಿನ್ನದ ಮೊಟ್ಟೆಯಿಂದ ಎನ್ನಲಾಗಿದೆ. ಬ್ರಹ್ಮ ಅಥವಾ ಬ್ರಹ್ಮರೂಪಿಯಾದ ವಿಷ್ಣು ಇಡೀ ವಿಶ್ವವನ್ನು ಗರ್ಭೀಕರಿಸಿಕೊಂಡಿದ್ದ ಚಿನ್ನದ ಮೊಟ್ಟೆಯಲ್ಲಿ ವಾಸಿಸಿದ್ದನೆಂದೂ ಅವನ ಇಚ್ಛೆಯಂತೆ ಅದರಿಂದ ವಿಶ್ವ ಆವಿರ್ಭವಿಸಿತೆಂದೂ ಮನುಸ್ಮೃತಿ ಮತ್ತು ವಿಷ್ಣು ಹಾಗೂ ವಾಯು ಪುರಾಣಗಳು ವರ್ಣಿಸಿರುವುದನ್ನಿಲ್ಲಿ ಸ್ಮರಣೀಯ.
 
==ನೋಡಿ==
*[[ಪುರಾಣಗಳು]]
"https://kn.wikipedia.org/wiki/ಅಷ್ಟಾದಶ_ಪುರಾಣಗಳು" ಇಂದ ಪಡೆಯಲ್ಪಟ್ಟಿದೆ