ವಲ್ಲಭ್‌ಭಾಯಿ ಪಟೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಟ್ಯಾಗ್: 2017 source edit
ಚುNo edit summary
ಟ್ಯಾಗ್: 2017 source edit
೩೪ ನೇ ಸಾಲು:
[[ಚಿತ್ರ:A021 (Small).jpg|thumb|ಸರ್ದಾರ್ ಪಟೇಲ್ ರಾಷ್ಟ್ರೀಯ ಸ್ಮಾರಕದ ಸೆಂಟ್ರಲ್ ಹಾಲ್ ಸಭಾಂಗಣ.]]
 
'''ಸರ್ದಾರ್ ವಲ್ಲಭಭಾಯ್ ಪಟೇಲ್''' ([[ಅಕ್ಟೋಬರ್ ೩೧]], [[೧೮೭೫]] - [[ಡಿಸೆಂಬರ್ ೧೫]], [[೧೯೫೦]]) '''ಉಕ್ಕಿನ ಮನುಷ್ಯ''' - ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರು. ಭಾರತದ ಪ್ರಪ್ರಥಮ ಉಪಪ್ರಧಾನ ಮಂತ್ರಿಯಾಗಿದ್ದರು. ಅವರೊಬ್ಬ ನ್ಯಾಯವಾದಿ ವಕೀಲ(ಬ್ಯಾರಿಸ್ಟರ್) ಹಾಗೂ [[ಭಾರತೀಯ ರಾಷ್ಟ್ರೀಯ ಕಾಂಗ್ರೆಸ್]]ನ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದರಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದರು. ಭಾರತ ಮತ್ತು ಇತರೆ ಕಡೆಗಳಲ್ಲಿ, ಅವರನ್ನು ಹೆಚ್ಚಾಗಿ ಸರ್ದಾರ್ ಎಂದು ಕರೆಯಲಾಗುತ್ತಿತ್ತು, ಇದರರ್ಥ ಹಿಂದಿ, ಉರ್ದು, ಮತ್ತು ಪರ್ಷಿಯನ್ ಭಾಷೆಗಳಲ್ಲಿ "ಮುಖ್ಯ"ವಾದ ವ್ಯಕ್ತಿ. 1947ರ ಇಂಡೋ-ಪಾಕಿಸ್ತಾನ ಯುದ್ಧದ ಅವಧಿಯಲ್ಲಿ ಅವರು ಭಾರತೀಯ ಸೈನ್ಯದ ಕಮಾಂಡರ್-ಇನ್-ಚೀಫ್ ಆಗಿ ಸಹ ಕಾರ್ಯ ನಿರ್ವಹಿಸಿದರು.
ಗುಜರಾತ್‌ನ ಗ್ರಾಮಾಂತರ ಭಾಗದಲ್ಲಿ ಬೆಳೆದ ಪಟೇಲ್, ಯಶಸ್ವಿ ವಕೀಲರಾಗಿದ್ದರು. ಅವರು ತರುವಾಯ ಗುಜರಾತ್‌ನ ಖೇಡಾ, ಬೊರ್ಸಾದ್ ಮತ್ತು ಬರ್ಡೋಲಿಗಳಿಂದ ರೈತರನ್ನು ಬ್ರಿಟಿಷ್ ಆಳ್ವಿಕೆಯ ವಿರುದ್ಧ ಅಹಿಂಸಾತ್ಮಕ, ನಾಗರಿಕ ಅಸಹಕಾರ ಚಳುವಳಿಗಾಗಿ ಸಂಘಟಿಸಿದರು. ಈ ಮೂಲಕ ಗುಜರಾತ್‌ನ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದರು. ಅವರು [[ಭಾರತೀಯ ರಾಷ್ಟ್ರೀಯ ಕಾಂಗ್ರೆಸ್]]ನ 49 ನೇ ಅಧ್ಯಕ್ಷರಾಗಿ ನೇಮಕಗೊಂಡರು. ಕ್ವಿಟ್ ಇಂಡಿಯಾ ಚಳವಳಿಯನ್ನು ಉತ್ತೇಜಿಸುವುದರ ಜೊತೆಯಲ್ಲೇ, ಕಾಂಗ್ರೆಸ್ ಪಕ್ಷವನ್ನು 1934 ಮತ್ತು 1937ರ ಚುನಾವಣೆಗಳಲ್ಲಿ ಮುನ್ನಡೆಸಿದರು.
 
== ಬಾಲ್ಯ ==
*ವಲ್ಲಭಭಾಯ್ ಝವೇರಭಾಯ್ ಪಟೇಲ್ ಹುಟ್ಟಿದ್ದು [[ಗುಜರಾತ್|ಗುಜರಾತಿನ]] ನಡಿಯಾದ್ ಎಂಬಲ್ಲಿ ಅವರ ಸೋದರಮಾವನ ಮನೆಯಲ್ಲಿ. ಖೇಡಾ ಜಿಲ್ಲೆಯ ಕರಮಸಾಡ್ ಎಂಬ ಹಳ್ಳಿಯ ನಿವಾಸಿ ಝವೇರಭಾಯ್ ಮತ್ತು ಲಾಡಬಾ ಇವರ ನಾಲ್ಕನೆಯ ಮಗನಾಗಿ ಜನಿಸಿದ ವಲ್ಲಭಭಾಯಿಯ ಹುಟ್ಟಿದ ದಿನ, ಮುಂದೆ ಅವರು ಮ್ಯಾಟ್ರಿಕ್ ಪರೀಕ್ಷೆಯಲ್ಲಿ ಅಕ್ಟೋಬರ್ ೩೧ ಎಂದು ನಮೂದಿಸಿದರೂ, ನಿಖರವಾಗಿ ದಾಖಲಾಗಿಲ್ಲ.