ಭಾರತ ಬಿಟ್ಟು ತೊಲಗಿ ಚಳುವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಮುಂಬೈ → ಮುಂಬಯಿ using AWB
೨೧ ನೇ ಸಾಲು:
ಆದರೆ ಬ್ರಿಟಿಷರು ತ್ವರಿತವಾಗಿ ಪ್ರದರ್ಶನಕಾರರನ್ನು ಬಂಧಿಸಿದರು. ಒಂದು ಲಕ್ಷಕ್ಕಿಂತಲೂ ಹೆಚ್ಚು ಜನರನ್ನು ಬಂಧಿಸಲಾಯಿತು, ಬೃಹತ್ ಪ್ರಮಾಣದಲ್ಲಿ ದಂಡಗಳನ್ನು ವಿಧಿಸಲಾಯಿತು, ಬಾಂಬುಗಳನ್ನು ವಿರೋಧಿಗಳ ಮೇಲೆ ಬಳಸಲಾಯಿತು, ಮತ್ತು ಪ್ರದರ್ಶನಾಕಾರರನ್ನು ಸಾರ್ವಜನಿಕವಾಗಿ ದಂಡಿಸಲಾಯಿತು. ಬಹಳಷ್ಟು ರಾಷ್ಟ್ರೀಯ ನಾಯಕರು ಭೂಗತರಾಗಿ [[ರೇಡಿಯೋ]] ಸ್ಟೇಷನ್ ಗಳಿಂದ ಜನರಿಗೆ ಸಂದೇಶ ಕೊಡುತ್ತಿದ್ದರು. ಬ್ರಿಟಿಷರು ಇದರಿಂದ ಎಷ್ಟು ಕಂಗಾಲಾಗಿದ್ದರೆಂದರೆ, ಗಾಂಧೀಜಿ ಮತ್ತು ಇತರ ನಾಯಕರನ್ನು ಬಂಧಿಸಿ [[ದಕ್ಷಿಣ ಆಫ್ರಿಕಾ]] ಅಥವಾ ಯೆಮೆನ್ ದೇಶಕ್ಕೆ ಕೊಂಡೊಯ್ಯಲು ಯುದ್ಧನೌಕೆಯನ್ನು ಕರೆಸುವ ಏರ್ಪಾಡು ಮಾಡಲಾಯಿತು. ಆದರೆ ಇದರಿಂದ ಸಂಘರ್ಷಣೆ ಇನ್ನೂ ತೀವ್ರವಾಗುವುದೆಂಬ ಭಯದಿಂದ ಹೀಗೆ ಮಾಡದಿರಲು ನಿರ್ಧಾರ ಮಾಡಲಾಯಿತು. {{fact}}.
 
[[ಕಾಂಗ್ರೆಸ್ ಪಕ್ಷದಪಕ್ಷ]]ದ ನಾಯಕರು ಇಡೀ ಪ್ರಪಂಚದಿಂದ ಮೂರು ವರ್ಷಗಳ ಕಾಲ ಸಂಪರ್ಕ ಕಳೆದುಕೊಂಡರು. ಗಾಂಧೀಜಿಯವರ ಪತ್ನಿ [[ಕಸ್ತೂರ್ ಬಾ ಗಾಂಧಿ]] ಮತ್ತು ಕಾರ್ಯದರ್ಶಿ ಮಹಾದೇವ ದೇಸಾಯಿ ಮರಣದ ನಂತರ ಗಾಂಧಿಯವರ ಆರೋಗ್ಯ ಹದಗೆಟ್ಟಿತು. ಇದರ ಹೊರತಾಗಿಯೂ, [[ಮಹಾತ್ಮಾ ಗಾಂಧಿ]]ಯವರು ೨೧ ದಿನಗಳ ಉಪವಾಸವನ್ನು ಕೈಗೊಂಡು ಚಳುವಳಿಯನ್ನು ಮುಂದುವರೆಸಲು ಅತಿಮಾನುಷ ಪ್ರಯತ್ನ ತೋರಿದರು. ಅವರ ಆರೋಗ್ಯ ಇನ್ನೂ ಹದಗೆಟ್ಟ ಕಾರಣ ಬ್ರಿಟಿಷರು ಗಾಂಧಿಯವರನ್ನಿ [[೧೯೪೪]]ರಲ್ಲಿ ಬಿಡುಗಡೆಗೊಳಿಸಿದರೂ ಕೂಡ, ಅವರು ಕಾಂಗ್ರೆಸ್ ನಾಯಕರ ಬಿಡುಗಡೆಗೆ ಒತ್ತಾಯಿಸಿ ಧರಣಿಯನ್ನು ಮುಂದುವರೆಸಿದರು.
 
೧೯೪೪ರ ಪ್ರಾರಂಭದಲ್ಲಿ ಭಾರತ ಬಹುತೇಕವಾಗಿ ಶಾಂತವಾಗಿತ್ತು. ಚಳುವಳಿಯು ಸೋತುಹೋಯಿತೆಂಬ ನಂಬಿಕೆ ವ್ಯಾಪಕವಾಯಿತು. ಆದರೆ ಜಿನ್ನಾ ಮತ್ತು ಮುಸ್ಲಿಮ್ ಲೀಗ್ ಹಾಗೂ ಕಾಂಗ್ರೆಸ್ಸಿನ ಇತರ ವಿರೋಧಿಗಳಾದ ಕಮ್ಯೂನಿಸ್ಟರು ಮತ್ತು ಹಿಂದೂ ಕ್ರಾಂತಿಕಾರಿಗಳು ಗಾಂಧೀಜಿ ಮತ್ತು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ರಾಜಕೀಯ ಲಾಭ ಪಡೆಯಲು ಹವಣಿಸಿದರು.