ಅ.ನ.ಕೃಷ್ಣರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೩ ನೇ ಸಾಲು:
===ಜನನ, ಜೀವನ===
*ಅನಕೃ ಹುಟ್ಟಿದ್ದು [[ಕೋಲಾರ]], ಹಾಗು ಕುಟುಂಬದ ಮೂಲ [[ಹಾಸನ]] ಜಿಲ್ಲೆಯ [[ಅರಕಲಗೂಡು]]. ತಂದೆ ನರಸಿಂಗರಾಯರು ಮತ್ತು ತಾಯಿ ಅನ್ನಪೂರ್ಣಮ್ಮನವರು. ಅನಕೃ ಮಹಾನ್ ಕನ್ನಡಾಭಿಮಾನಿಯಾಗಿದ್ದರು. [[ಕರ್ನಾಟಕ|ಕರ್ನಾಟಕದಲ್ಲಿ]] ಎಲ್ಲಾ ಭಾಷೆಯ ಜನರೂ ಇರಲಿ, ಆದರೆ ಅವರು ನಮ್ಮೊಂದಿಗೆ ಹೊಂದಿಕೊಂಡು ಹೋಗಲಿ, ಮಾತೃ ಭಾಷೆಯನ್ನು ಮೆಟ್ಟಿ, ಮುನ್ನುಗ್ಗುವುದು ಸರಿಯಲ್ಲ ಎಂಬುದು ಅವರ ಮೂಲತತ್ವವಾಗಿತ್ತು.
*ತಮ್ಮ ಜೀವಮಾನದುದ್ದಕ್ಕೂ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಿದರು.<ref>[https://www.karnataka.com/personalities/aa-na-kru-kannada-writer/ The Renowned Writer and Rebel – Aa.Na.Kru, SEPTEMBER 23, 2011 BY RAGGI MUDDE] </ref>, ಅದಕ್ಕಾಗಿ ಕರ್ನಾಟಕದಲ್ಲೆಲ್ಲಾ ಸುತ್ತಾಡಿದರು. ತಮ್ಮ ಚಳುವಳಿ, ಭಾಷಣಗಳ ಮೂಲಕ ಕನ್ನಡಿಗರನ್ನು ಹುರಿದುಂಬಿಸಿದರು. ಕನ್ನಡಿಗರಲ್ಲಿ ಸುಪ್ತವಾಗಿದ್ದ ಸ್ವಾಭಿಮಾನವನ್ನು ಜಾಗೃತಗೊಳಿಸಿದರು. ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳು ಸಿಗದಿದ್ದ ಕಾಲದಲ್ಲಿ ಅನಕೃ ಅದಕ್ಕಾಗಿ ಹೋರಾಟ ನಡೆಸಿದರು.
*ಅನಕೃ ಅವರ ಚಳುವಳಿಯಿಂದ [[ಬೆಂಗಳೂರು|ಬೆಂಗಳೂರಿನ]] ಅಲಂಕಾರ್ ಚಿತ್ರಮಂದಿರದಲ್ಲಿ ಮೊತ್ತ ಮೊದಲ ಬಾರಿಗೆ ಕನ್ನಡ ಚಿತ್ರ ಪ್ರದರ್ಶನಗೊಂಡಿತು. ಹೀಗೆ ಪ್ರದರ್ಶಿತವಾದ ಮೊದಲ ಚಿತ್ರ [[:Category:ವರ್ಷ-೧೯೬೩ ಕನ್ನಡಚಿತ್ರಗಳು|೧೯೬೩ರಲ್ಲಿ]] ತೆರೆಕಂಡ [[ಜಿ.ವಿ.ಅಯ್ಯರ್]] ನಿರ್ದೇಶನದ [[ಬಂಗಾರಿ]]. ವಿಶೇಷವೆಂದರೆ "ತುಂಬಿದ ಕೊಡ" ಚಿತ್ರದಲ್ಲಿ ಸಾಹಿತಿ ಅ.ನ.ಕೃ.[http://www.youtube.com/watch?v=FZXNBoF5ksw ಸಣ್ಣ ಪಾತ್ರವೊಂದರಲ್ಲಿ ] ಅಭಿನಯಿಸಿದ್ದರು.
*ಅಂದು ಸಂಗೀತಕ್ಕೆ ಸಂಬಂಧಪಟ್ಟ ಸಂಘಸಂಸ್ಥೆಗಳು ಕನ್ನಡ ಸಂಗೀತಗಾರರನ್ನು ನಿರ್ಲಕ್ಷಿಸಿ, [[ಚೆನ್ನೈ|ಮದರಾಸಿನಿಂದ]] ಗಾಯಕರನ್ನು ಕರೆಸಿ ಹಾಡಿಸುತ್ತಿದ್ದವು. ಅನಕೃ ಇದನ್ನು ವಿರೋಧಿಸಿದರು. ಒಮ್ಮೆ ಹೀಗೆ ಮದರಾಸಿನಿಂದ [[ಎಂ.ಎಸ್.ಸುಬ್ಬುಲಕ್ಷ್ಮಿ|ಎಮ್ ಎಸ್ ಸುಬ್ಬುಲಕ್ಷ್ಮಿಯವರು]] ಹಾಡಲು ಬಂದಿದ್ದಾಗ ಅನಕೃ ಅವರಿಗೆ ತಮ್ಮ ಚಳುವಳಿಯ ಉದ್ದೇಶವನ್ನು ವಿವರಿಸಿದರು. ಆಗ ಸುಬ್ಬುಲಕ್ಶ್ಮಿಯವರು ಚಳುವಳಿಯ ಉದ್ದೇಶವನ್ನು ಒಪ್ಪಿಕೊಂಡು, ತಮ್ಮ ಸಂಗೀತವನ್ನು ರದ್ದುಮಾಡಿ ಹಿಂತಿರುಗಿದ್ದರು.
"https://kn.wikipedia.org/wiki/ಅ.ನ.ಕೃಷ್ಣರಾಯ" ಇಂದ ಪಡೆಯಲ್ಪಟ್ಟಿದೆ