ತೆಲುಗು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
jhuyhl |
ಚು →ಶಬ್ದಕೋಶ |
||
೧೬ ನೇ ಸಾಲು:
<br />
==ದ್ರಾವಿಡ ಭಾಷೆ==
[[File:Telugu speakers in India.png|thumb|
ದ್ರಾವಿಡಭಾಷಾವರ್ಗಕ್ಕೆ ಸೇರಿದ ತೆಲುಗನ್ನು ಆಂಧ್ರಭಾಷೆಯೆಂದು ಕರೆಯುವುದು ಅಷ್ಟು ಸರಿಯಲ್ಲದಿದ್ದರೂ ರೂಢಿಯಲ್ಲಿ ಆ ಹೆಸರೂ ನಿಂತು ಬಿಟ್ಟಿದೆ. ಇದಕ್ಕೇನು ಕಾರಣವೆಂದರೆ ಆಂಧ್ರ ಚಕ್ರಾಧಿಪತ್ಯವೂ ತೆಲುಗು ದೇಶವೂ ಸಮಾನವ್ಯಾಪ್ತಿಯುಳ್ಳವಲ್ಲ. ಚಕ್ರಾಧಿಪತ್ಯದ ಒಂದು ಭಾಗವಾದ ಮಹಾರಾಷ್ಟ್ರ ಎಂದಿಗೂ ತೆಲುಗು ದೇಶದ ಒಂದು ಭಾಗವಾಗಲಿಲ್ಲ. ತೆಲುಗು ದೇಶದ ಭಾಗಗಳಾದ [[ಕಳಿಂಗ]]ದ ಮಧ್ಯ ಮತ್ತು ದಕ್ಷಿಣ ಭಾಗಗಳು ಆಂಧ್ರ ಚಕ್ರಾಧಿಪತ್ಯಕ್ಕೆ ಎಂದೂ ಸೇರಿರಲಿಲ್ಲ. ತೆಲುಗು ದೇಶದಲ್ಲಿ ನೂರಾರು [[ಸಂಸ್ಕೃತ]] ಮತ್ತು ಪ್ರಾಕೃತಿಕ ಪದಗಳು ಬಳಕೆಯಲ್ಲಿವೆ ಮತ್ತು ಇನ್ನೂ ಹೆಚ್ಚಿನ ಪದಗಳು ತೆಲುಗು ಸಾಹಿತ್ಯದಲ್ಲಿ ಪ್ರಯುಕ್ತವಾಗಿವೆ. ಆದರೆ ಈ ಸಾಲ ತೆಗೆದುಕೊಂಡ ಶಬ್ದಗಳಿಂದ, ಇವು ಎಷ್ಟೇ ಇರಲಿ, ನಾಡಿನಲ್ಲಿ ಎಷ್ಟೇ ಹರಡಲಿ, ಭಾಷಾ ಬಾಂಧವ್ಯವನ್ನು ನಿರ್ಧರಿಸಲಾಗದು. ತೆಲುಗು ತೆಲಂಗಾಣದ (ತ್ರಿಲಿಂಗ) ಭಾಷೆ. ಅದು ಈಗಿನ ಆಂಧ್ರ ಪ್ರದೇಶದ ಭಾಷೆಯಾಗಿರುವುದರಿಂದ ಅದರ ಸ್ಥೂಲ ಪರಿಚಯವನ್ನಿಲ್ಲಿ ಮಾಡಿಕೊಡಲಾಗಿದೆ.
೨೨ ನೇ ಸಾಲು:
ರಾಜಮಹೇಂದ್ರಿಯಲ್ಲಿದ್ದ ಪೂರ್ವ [[ಚಾಲುಕ್ಯ]] ವಂಶದ ರಾಜರಾಜ ನರೇಂದ್ರನ (1033-43) ಆಸ್ಥಾನದಲ್ಲಿದ್ದ [[ನನ್ನಯ]]ನ ಕಾಲಕ್ಕೆ ಹಿಂದೆ ತೆಲುಗು ಭಾಷೆ ಹೇಗೆ ಬೆಳೆಯಿತು ಎಂಬ ವಿಷಯವನ್ನು ನಿರೂಪಿಸಲು ನಮಗೆ ತಕ್ಕಷ್ಟು ಆಧಾರಗಳು ದೊರೆತಿಲ್ಲ. ಬೆಜವಾಡದಲ್ಲಿರುವ ([[ವಿಜಯವಾಡ]]) ಒಂದು ಕಂಬದಲ್ಲಿ ಕೊರೆದಿರುವ "ಯುದ್ಧಮಲ್ಲ ಶಾಸನಮು" ಎಂಬ [[ಶಾಸನ]] ಮತ್ತು ನನ್ನಯ್ಯನಿಗೆ ಹಿಂದಿನ ಇತರ ಶಾಸನಗಳಲ್ಲಿ ಪದ್ಯಗಳಿವೆ; ಅವುಗಳ ಭಾಷೆ ನನ್ನಯ್ಯ ಬಳಸಿರುವ ಭಾಷೆಯ ಹಾಗೆಯೇ ಇದೆ. ತೆಲುಗು ಭಾಷೆ ಅಥವಾ ಸಾಹಿತ್ಯ ಯಾವಾಗ ಹುಟ್ಟಿತ್ತೆಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅದು ಕ್ರಿ.ಶ 600ರ ಹೊತ್ತಿಗೆ ದ್ರಾವಿಡ ಭಾಷೆಯ ಒಂದು ಪ್ರತ್ಯೇಕ ಶಾಖೆಯಾಗಿ ಇದ್ದಿತ್ತೆಂಬುದನ್ನು ಆ ಕಾಲದ [[ಚೋಳ ವಂಶ|ಚೋಳ]] ಮಹಾರಾಜರ ತೆಲುಗು ಶಾಸನವೊಂದರಿಂದ ನಿರ್ದಿಷ್ಟವಾಗಿ ಹೇಳಬಹುದು.
ನನ್ನಯ್ಯನ ಕಾಲದಿಂದಾಚೆಗೆ ತೆಲುಗು ಭಾಷೆ ಹೇಗೆ ಬೆಳೆಯಿತು ಎಂಬುದಕ್ಕೆ ತಕ್ಕಷ್ಟು ಸಾಕ್ಷ್ಯಗಳಿವೆ. [[ತಮಿಳು|ತಮಿಳಿನಲ್ಲಿ]] ದ್ರಾವಿಡಾಂಶ ಹೇರಳವಾಗಿ ನಿಂತುಬಿಟ್ಟಿದೆ. ಸಂಸ್ಕೃತ ಅಥವಾ ಪ್ರಾಕೃತದ ಪ್ರಭಾವಕ್ಕೆ ಅದು ಅಷ್ಟಾಗಿ ಈಡಾಗಲಿಲ್ಲ; ಆದರೆ ಇತರ ಮೂರು ದ್ರಾವಿಡ ಭಾಷೆಗಳು ಸಂಸ್ಕೃತ ಮತ್ತು [[ಪ್ರಾಕೃತ]] ಶಬ್ದಗಳನ್ನು ಹೇರಳವಾಗಿ ತೆಗೆದುಕೊಂಡಿದೆ.[[ಮಲೆಯಾಳ ಭಾಷೆ|ಮಲೆಯಾಳ]] ತನ್ನ ದ್ರಾವಿಡಾಂಶದಲ್ಲಿ ಕನ್ನಡ ತೆಲುಗುಗಳಿಗಿಂತಲೂ ತಮಿಳಿಗೆ ಹೆಚ್ಚು ಸಮೀಪವಾಗಿದೆ. ತೆಲುಗಿಗೂ [[ಕನ್ನಡ]]ಕ್ಕೂ ಸಮಾನಾಂಶಗಳು ಹೆಚ್ಚಾಗಿದ್ದರೂ ತೆಲುಗುಗಿಂತಲೂ ಕನ್ನಡದಲ್ಲಿ ದ್ರಾವಿಡಾಂಶ ಹೆಚ್ಚು. ಈ ಬಾಂಧವ್ಯಗಳು ಮತ್ತು ವ್ಯತ್ಯಾಸಗಳನ್ನು ಈ ಭಾಷೆಗಳು ಬೆಳೆದ ಕ್ಷೇತ್ರಗಳ ಭೌಗೋಳಿಕ ವೈಲಕ್ಷಣಗಳಿಂದಲೂ ಪ್ರಾಚೀನ ಹಾಗೂ ಮಧ್ಯಕಾಲದ ಭಿನ್ನಭಿನ್ನ ರಾಜಕೀಯ ಪರಿಸ್ಥಿತಿಗಳಿಂದಲೂ ಸುಲಭವಾಗಿ ತರ್ಕಿಸಬಹುದು. ತೆಲುಗು ದೇಶ ದಖನ್ನಿನ ಮಧ್ಯಭಾಗದಲ್ಲಿದೆ. ಓಂಡ್ರ ದೇಶದವರು ಈಶಾನ್ಯದಲ್ಲೂ [[ಮಧ್ಯಪ್ರದೇಶ]]ದ [[ಹಿಂದಿ ಭಾಷೆ]]ಯ ಜನರು ಉತ್ತರದಲ್ಲೂ ಮಹಾರಾಷ್ಟ್ರರು ವಾಯುವ್ಯದಲ್ಲೂ ಕನ್ನಡಿಗರು ಪಶ್ಚಿಮದಲ್ಲೂ ತಮಿಳರು ದಕ್ಷಿಣದಲ್ಲೂ ಅದನ್ನು ಸುತ್ತುವರಿದಿದ್ದಾರೆ. ದಕ್ಷಿಣಕ್ಕೆ ಪ್ರಸರಿಸುವಾಗ ಆರ್ಯಸಂಸ್ಕೃತಿ ಅನಿವಾರ್ಯವಾಗಿ ಮೊದಲು ತೆಲುಗು ದೇಶವನ್ನು ಹಾಯ್ದೇ ದಕ್ಷಿಣ ತುದಿಯನ್ನು ಮುಟ್ಟಬೇಕು. ಆದುದರಿಂದ ತೆಲುಗುಭಾಷೆ ಮತ್ತು ಸಂಸ್ಕೃತಿಗಳು [[ಆರ್ಯಭಾಷೆ]] ಮತ್ತು ಸಂಸ್ಕೃತಿಗಳಿಂದ ದಕ್ಷಿಣದ ಇತರ ಪ್ರದೇಶಗಳಿಗಿಂತ ಹೆಚ್ಚಾಗಿ ಪ್ರಭಾವಿತವಾದವು. ತೆಲುಗಿಗಿರುವ ಮತ್ತೊಂದು ಲಾಭಾಂಶವೇನೆಂದರೆ ಮಿಕ್ಕೆಲ್ಲ ದ್ರಾವಿಡ ಭಾಷೆಗಳಿಗಿಂತಲೂ ತೆಲುಗನ್ನು ಆಡುವ ಜನರೇ ಹೆಚ್ಚು ಮಂದಿ (ಸುಮಾರು ಮೂರು ಕೋಟಿ ಅರವತ್ತು ಲಕ್ಷ ಜನ) ಇದ್ದಾರೆ. ತನ್ನ ಮೃದು ಮಧುರ ಧ್ವನಿಗೆ ಅದು ಹೆಸರಾಗಿದೆ. ಪಾಶ್ಚಾತ್ಯ ಪ್ರವಾಸಿಗರು ಇದನ್ನು ಪೂರ್ವದ ಇಟಾಲಿಯನ್ ಎಂದು ಕರೆದಿದ್ದಾರೆ.
ತೆಲುಗು ಭಾಷೆ ಪ್ರಾಚೀನ ಕಾಲದಲ್ಲಿ ಹೇಗೆ ಬೆಳೆಯಿತು ಎಂಬುದನ್ನು ನಿರೂಪಿಸುವಾಗ ನನ್ನಯ್ಯನಿಗೆ ಪೂರ್ವದ ಕಾಲದ ಒಂದು ವಿಶಿಷ್ಟ ಲಕ್ಷಣವನ್ನು ಗಮನಕ್ಕೆ ತೆಗೆದುಕೊಳ್ಳುವುದು ಆವಶ್ಯಕ. ಇತರ ಭಾಷೆಗಳಲ್ಲಿ ಇನ್ನೂ ಉಳಿದುಕೊಂಡಿರುವ ಗಳ್(ಕಳ್) ಎಂಬ ಬಹುವಚನ ಪ್ರತ್ಯಯದ ಸ್ಥಾನವನ್ನು ನನ್ನಯ್ಯನಿಗೆ ಬಹು ಹಿಂದೆಯೇ - ಲು ಎಂಬುದು ಆಕ್ರಮಿಸಿಕೊಂಡಿತು. ಅದು ಬಹುಕಾಲದಿಂದಲೂ ತೆಲುಗಿನಲ್ಲಿತ್ತೆಂಬುದನ್ನು ತೋರಿಸಲು -ಮ್ರಾ (ನ್) ಕುಲು (ಮರಗಳು) ; ಕೊಲ (ನ್) ಕುಲು (ಕೊಳಗಲು); ಈಗಲು (ನೊಣಗಳು); ಏನುಗಲು (ಆನೆಗಳು) ಎಲುಕಲು(ಇಲಿಗಳು) ಇತ್ಯಾದಿ ಬಹುವಚನ ರೂಪಗಳು ನಿದರ್ಶನವಾಗಿ ಉಳಿದು ಬಂದಿದೆ. ಮುಂದೆ ಬಹುವಚನ ಪ್ರತ್ಯಯ ಲ (ಉ) ಎಂದು ತೆಲುಗರು ಕಂಡುಕೊಂಡಾಗ ಏಕವಚನ ರೂಪಗಳನ್ನು ರಚಿಸಲು ಲು ವನ್ನು ಕಳೆದಿಟ್ಟರು. ಉದಾಹರಣೆಗೆ, ಈಗ, ಏನುಗ, ಏಲುಕ; ತಮಿಳಿನ ಈ ಯಾನೈ, ಮುಂತಾದುವನ್ನು ನೋಡಬಹುದು.
==ವ್ಯಾಕರಣ==
ತಮಿಳು ಮತ್ತು ಇತರ ದ್ರಾವಿಡ ಭಾಷೆಗಳಲ್ಲಿರುವಂತೆ ತೆಲುಗು ಸಹ ಬಹುವಚನ ದ್ವಿಲಿಂಗ ಪ್ರತ್ಯಯ [ರ(ಉ)] ವನ್ನು ಉಳಿಸಿಕೊಂಡಿದೆ. ಉದಾರಣೆಗೆ, ವಾರು (ಅವರು), ವೀರು (ಇವರು), ಎವರು (ಯಾರು?), ಮೀರು (ನೀವು), ಆದರೆ ಸರ್ವತ್ರ ಹರಡಿರುವ ಲು ವಿನ ಪ್ರಭಾವ ಎಷ್ಟೆಂದರೆ, ಅದಿಲ್ಲದಿದ್ದರೆ ಬಹುವಚನದ ಭಾವ ಸಮಗ್ರವಾಗಿ ಮನಸ್ಸಿಗೆ ತಟ್ಟುವುದಿಲ್ಲ. ಆದುದರಿಂದ ಕಾಲಕ್ರಮದಲ್ಲಿ ವಾರಲು, ವೀರಲು, ಮೀರಲು, ಮುಂತಾದವುಗಳು ಬೆಳೆದವು. ಇವು ಇಂಗ್ಲೀಷಿನಲ್ಲಿ ಚಿಲ್ರನ್ಸ್, ಮೆನ್ಸ್, ಡೇಟಾಸ್, ಎಂಬ ಹಾಗಿವೆ. ಕೆಲವು ಸಂದರ್ಭಗಳಲ್ಲಿ ದ್ವಿಲಿಂಗೀ ಬಹುವಚನ ಪ್ರತ್ಯಯದ ಸ್ಥಾನವನ್ನು ಸಹ ಲು ಆಕ್ರಮಿಸುತ್ತದೆ. ಉದಾಹರಣೆಗೆ, ವಾಂಡ್ಲು; ವಾಳ್ಳು (ಅವರು); ಕೂತುಂಡ್ಳು, ಕೂತೂಳ್ಳು, (ಹೆಣ್ಣು ಮಕ್ಕಳು) ಇತ್ಯಾದಿ. ಅನೇಕಾಕ್ಷರ ರೂಪಗಳನ್ನು ಮೊಟಕುಗೊಳಿಸಿದ ರೂಪಗಳು ನನ್ನಯ್ಯನ ಕಾಲದಷ್ಟು ಮುಂಚಿನಿಂದಲೇ ತಲೆದೋರುತ್ತದೆ. ಉದಾಹರಣೆಗೆ ಪೂಜಿಂಚಿತೇ? ಎಂಬ ನನ್ನಯ್ಯನ ಪ್ರಯೋಗ ಪೂಜಿಂಚಿತಿವೇ? (ಪೂಜಿಸಿದೆಯಾ) ಎಂಬುದರಿಂದ ಹುಟ್ಟಿದೆ. ಪೂಜಿಂಚಿತಿವೇನಿನ್ (ಪೂಜಿಸಿದ್ದೇ ಆದರೆ) ಎಂಬ ದೀರ್ಘರೂಪ ಕ್ರಮೇಣ ಪೂಜಿಂಚಿತಿವೇನಿ ಎಂದಾಗಿ, ಬಳಿಕ ವೇನ್-ವೇ; ತೇನ್-ತೇ ಮುಂತಾದ್ದಾಗಿ ಈಗಿನ ಪೂಜಿಸ್ತೇ ಎಂಬ ರೂಪಕ್ಕಿಳಿದಿದೆ. ಪೂಜಿಂಚಿತೇನ್ ಎಂಬುದಕ್ಕಿಂತ ಹಿಂದಿನ ಶಬ್ದರೂಪಗಳಲ್ಲಿ `ವಿ ಎಂಬುದಿದ್ದು ಮಧ್ಯಮ ಪುರುಷದ ಏಕವಚನವನ್ನು ನಿರ್ದೇಶಿಸುತ್ತಿತ್ತು. ಆದರೆ ಆ ತರುವಾಯದ ರೂಪಗಳಲ್ಲಿ ವಿ ಅಳಿದುಹೋಗಿ ಆ ರೂಪ ಎಲ್ಲ ಜನಕ್ಕೂ ಏಕವಚನ ಬಹುವಚನಗಳೆರಡಲ್ಲೂ ಪ್ರಯುಕ್ತವಾಗತೊಡಗಿತು. ಹೀಗೆ ಮಟ್ಟ ಸಮ ಮಾಡುವ ಪ್ರವೃತ್ತಿ ಈ ಮಾತುಗಳಲ್ಲಿ ಕಂಡು ಬರುತ್ತದೆ. ಅಂಟಿವೇನಿನ್ ಎಂಬುದರಿಂದ ಅನ್ಟೆ (ನೀನು ಹೇಳಿದರೆ); ಐತಿವೇನಿನ್ ಎಂಬುದರಿಂದ ಐತೆ (ನೀನು ಹೀಗಾಗುವುದಾದರೆ) ಇತ್ಯಾದಿ. ಕವಿಗಳು ಈ ಎಲ್ಲ ರೂಪಗಳನ್ನೂ ಛಂದಸ್ಸಿನ ಸೌಕರ್ಯಕ್ಕಾಗಿ ಉಪಯೋಗಿಸುತ್ತಾರೆ. ಕಾವ್ಯಗಳಲ್ಲೂ ಅವುಗಳನ್ನು ಅನುಸರಿಸಿ ಬರೆದ ವ್ಯಾಕರಣಗಳಲ್ಲೂ ಜನರಾಡುವ ಮಾತಿನಲ್ಲಿ ತೋರಿ ಬರುವ ಬದಲಾವಣೆಗಳು ಕಂಡುಬರುವುದಿಲ್ಲ. ಏಕೆಂದರೆ ಬಹು ಹಿಂದಣ ಕವಿಗಳು ಅನಿವಾರ್ಯವಾಗಿ ತಾವಾಡುತ್ತಿದ್ದ ಭಾಷೆಯನ್ನೇ ತಮ್ಮ ಕಾವ್ಯಗಳಲ್ಲಿ ಬಳಸುತ್ತಿದ್ದರೂ ಮುಂದೆ ಬಂದ ಕವಿಗಳು ಹಿಂದಿನ ಕವಿಗಳ ಭಾಷೆಗೆ ತಮ್ಮ ಕಾಲದ ಆಡುಮಾತಿಗಿಂತಲೂ ಹೆಚ್ಚಿನ ಗಮನವನ್ನು ಕೊಡುತ್ತಿದ್ದರು; ವೈಯಾಕರಣರು ಭಾಷೆ ಒಂದೇ ಸಲಕ್ಕೆ ಸ್ಥಿರರೂಪವನ್ನು ಪಡೆದುಬಿಟ್ಟಿರುವಂತೆ ಭಾವಿಸಿ ಪ್ರಾಚೀನ ಕವಿಗಳ ಪ್ರಯೋಗಗಳನ್ನೇ ಅವಲಂಬಿಸಿ ವ್ಯಾಕರಣ ಸೂತ್ರಗಳನ್ನು ರಚಿಸಿದರು. ಆದರೆ ಕವಿಗಳು ತಿಳಿದೋ ತಿಳಿಯದೆಯೋ ವ್ಯಾಕರಣ ಸೂತ್ರಗಳನ್ನು ಮುರಿಯುತ್ತಿದ್ದರು. ಎಷ್ಟು ಪ್ರಾಚೀನವಾದರೆ ಅಷ್ಟು ಶ್ರೇಷ್ಠ ಎಂಬ ಸೂತ್ರವನ್ನು ಸಂಪ್ರದಾಯ ನಿಷ್ಠ ಕವಿಗಳೂ ವೈಯಾಕರಣರೂ ಭಾಷಾಕ್ಷೇತ್ರದಲ್ಲೂ ಎತ್ತಿ ಹಿಡಿದಿದ್ದರು. ಆದರೆ ಕವಿಗಳು ಹಳೆಯ ವ್ಯಾಕರಣಸೂತ್ರಗಳನ್ನು ಬದಿಗೊತ್ತಿ ಜೀವಂತವಾಗಿರುವ ಆಡುಮಾತನ್ನೇ ಬಳಸಲು ಹಿಂಜರಿಯಲಿಲ್ಲ. ಏಕೆಂದರೆ ಅವು ಅವರ ಭಾವಗಳನ್ನು ಪ್ರಕಟಿಸಲು ಹೆಚ್ಚು ಪರಿಣಾಮಕಾರಿಯಾಗಿದ್ದುವಲ್ಲದೆ ಪ್ರಾಚೀನ ಶಬ್ದಗಳಿಗಿಂತಲೂ ಸುಲಭವಾಗಿ ಅರ್ಥವಾಗುತ್ತಿದ್ದವು. ಆದರೆ ಇಂಥ ಕವಿಗಳು ಬಹು ವಿರಳ. ಅವರು ಆಡುಮಾತುಗಳನ್ನು ಎಚ್ಚರದಿಂದಲೂ ಅಂಜಿಕೆಯಿಂದಲೂ ಪ್ರಯೋಗಿಸುತ್ತಿದ್ದರು. ಶಾಸನಗಳು, ಹಾಡುಗಳು, ಶತಕಗಳು ಮತ್ತು ತಮ್ಮ ತತ್ತ್ವಗಳು ಜನಕ್ಕೆ ತಿಳಿದು ಅವು ಅವರಲ್ಲಿ ಹರಡಬೇಕೆಂಬ ಆಸೆಯುಳ್ಳ ಶೈವ ಕವಿಗಳ ದ್ವೀಪದ ಕಾವ್ಯಗಳು ಆಡುಮಾತುಗಳನ್ನು ಅವುಗಳ ರೂಢಿಯ ಅರ್ಥದಲ್ಲೇ ಹೆಚ್ಚಾಗಿ ಬಳಸುತ್ತಿದ್ದರು. 1700-1850 ರಲ್ಲಿ ಬೆಳೆದ ಗದ್ಯ ಪ್ರಕಾರ ಕಥೆ, ಪ್ರಬಂಧ, ವ್ಯಾಖ್ಯಾನ, ಕಾಗದಗಳು ಮುಂತಾದ ಎಲ್ಲ ಪ್ರಕಾರಗಳ ಲೇಖನಗಳಿಗೂ ಒದಗಿ ಬಂತು. ಈ ಗದ್ಯ ಲೇಖನಗಳ ಬಹುಭಾಗವನ್ನು ಪ್ರಚಲಿತ ಭಾಷೆಯಲ್ಲೇ ಬರೆಯಲಾಗುತ್ತಿತ್ತು; ಅದು ತೆಲುಗು ಭಾಷಾ ಚರಿತ್ರೆಯನ್ನು ವ್ಯಾಸಂಗಿಸಲು ಬಯಸುವವರಿಗೆ ಆ ಭಾಷೆಯ ಬೆಳವಣಿಗೆಗಳನ್ನು ಗುರುತಿಸಲು ಕಾವ್ಯಗಳ ಭಾಷೆಗಿಂತ ಹೆಚ್ಚು ಸಹಕಾರಿಯಾಗಿದೆ. ಈ ಸಂಪ್ರದಾಯವನ್ನು ಸಿ. ಪಿ. ಬ್ರೌನ್ ಪ್ರೋತ್ಸಾಹಿಸಿದ. ತನ್ನ ಇಂಗ್ಲಿಷ್ ಶಬ್ದಕೋಶಗಳಲ್ಲಿ ಆತ ಪದಗಳ ಅರ್ಥವನ್ನು ವಿವರಿಸಲು ಪ್ರಚಲಿತ ಭಾಷೆಯನ್ನೇ ಉಪಯೋಗಿಸಿದ. ಆದರೆ ಕಾವ್ಯ ಭಾಷೆಯಲ್ಲಿ ನೀತಿ ಚಂದ್ರಿಕೆ ಎಂಬುದನ್ನು ಬಾಲ ವ್ಯಾಕರಣ ಎಂಬ ವ್ಯಾಕರಣ ಗ್ರಂಥವನ್ನು ಬರೆದ ಪರವಸ್ತು ಚಿನ್ನಯ್ಯಸೂರಿ ಈ ಸಂಪ್ರದಾಯಕ್ಕೆ ತಡೆಹಾಕಿದ. ಆತನ ನೀತಿ ಚಂದ್ರಿಕೆ ಕೃತಕವಾದ ಭಾಷೆಯಲ್ಲಿ ರಚಿತವಾಗಿದೆ. ಬಳಕೆಯಲ್ಲಿಲ್ಲದ ಆಡಂಬರದ ಪದಗಳು, ಅಲಂಕಾರ ನಿಬಿಡದ ಶೈಲಿ, ನಯವಾದ ಬಳಸು ಮಾತಿನ
ತೆಲುಗಿನಲ್ಲಿ ಕೆಲವು ಸಂಸ್ಕೃತ ಶಬ್ದಗಳಿಗೆ ಬೇರೆ ಅರ್ಥಗಳು ಬಂದಿವೆ. ಉದಾಹರಣೆಗೆ, ಅಭ್ಯಂತರಂ ಎಂಬುದಕ್ಕೆ ಸಂಸ್ಕೃತದಲ್ಲಿ ಒಳಕೋಣೆ ಎಂದು ಅರ್ಥ; ತೆಲುಗಿನಲ್ಲಿ ಇದಕ್ಕೆ ಆಕ್ಷೇಪಣೆ ಎಂಬ ಅರ್ಥ ಬಂದಿದೆ. ಈ ಅರ್ಥದ ಬದಲಾವಣೆ ಹೇಗಾಯಿತೆಂದು ಈಗ ನೋಡೋಣ. ಯಾವನಾದರೊಬ್ಬ ಆಗಂತುಕ ರಹಸ್ಯವಾಗಿ ಮಾತಾಡಲು ಅಪೇಕ್ಷಿಸಿದಾಗ, ಮನೆಯ ಯಜಮಾನ ಆತನನ್ನು ಒಳಕೋಣೆಗೆ ಕರೆದುಕೊಂಡು ಹೋಗುತ್ತಾನೆ. ಮಾತಾಡಲು ಬಂದಾಗ ಯಜಮಾನ ಒಳಕೋಣೆಗೆ ಹೋಗೋಣವೇ ಎಂದು ಕೇಳುತ್ತಾನೆ. ಬಂದವನು, "ಏಕೆ, ಬೇಡ ಬೇಡ ಅದು ಅವಶ್ಯಕವಲ್ಲ ಈ ಮೊಗಸಾಲೆಯಲ್ಲೇ ಹೇಳಬೇಕಾದುದನ್ನು ಹೇಳುತ್ತೇನೆ." ಎನ್ನುತ್ತಾನೆ. ಮುಂದೆ ಇದು ಇಲ್ಲಿಯೇ ಹೇಳಲು ನನ್ನ ಆಕ್ಷೇಪಣೆಯೇನೂ ಇಲ್ಲ ಎಂಬರ್ಥಕ್ಕೆ ತಿರುಗಿತು. ಪ್ರಾಚೀನತಮ ಕವಿಗಳು ಪ್ರಯೋಗಿಸಿರುವ ಕೆಲವು ತೆಲುಗು ಶಬ್ದಗಳನ್ನು ಈಗಲೂ ಉಪಯೋಗಿಸುತ್ತಾರೆ. ಆದರೆ ಬೇರೆ ಅರ್ಥದಲ್ಲಿ. ಉದಾಹರಣೆಗೆ, ಕಂಪು ಎಂಬುದಕ್ಕೆ ಹಿಂದೆ ಯಾವ ಬಗೆಯ ವಾಸನೆಗಾದರೂ ಪ್ರಯುಕ್ತವಾಗುತ್ತಿತ್ತು, ಮುಂದೆ ಅದಕ್ಕೆ ನಾತ ಎಂಬ ಅರ್ಥ ಬಂದಿದೆ.
೩೮ ನೇ ಸಾಲು:
ಚೇಸಿತಿನಿ (ನಾನು ಮಾಡಿದೆ)>ಚೇಸ್ತಿನಿ>ಚೇಸ್ತಿ ಎಂಬುದು ಸೀಡೆಡ್ (ಬಿಟ್ಟು ಕೊಟ್ಟ) ಜಿಲ್ಲೆಗಳಲ್ಲೂ ತೆಲಂಗಾಣದಲ್ಲೂ ಬಳಕೆಯಲ್ಲಿದೆ. ಆದರೆ ತೀರದ ಜಿಲ್ಲೆಗಳಲ್ಲಿ ಕಣ್ಮರೆಯಾಗಿದೆ. ಅದರ ಜಾಗದಲ್ಲಿ ಚೇಸಿ-ನ-ವಾಡನು ಎಂಬುದು ಪುಲ್ಲಿಂಗದಲ್ಲೂ ಚೇಸಿ-ನ-ದಾನನು ಎಂಬುದು ಸ್ತ್ರೀಲಿಂಗದಲ್ಲೂ ಪ್ರಯುಕ್ತವಾಗುತ್ತಿದೆ. ಇವುಗಳು ಕ್ರಮವಾಗಿ ಅಖ್ಯಾತ ಪ್ರತ್ಯಯಗಳನ್ನು ಹಚ್ಚುವುದರಿಂದ ಆದುವಲ್ಲ. ಮಾಡಿದ್ದನ್ನು ಹೇಳಲು ಉಪಯೋಗಿಸುವ ರೂಪಗಳು ಮೊದಲನೆಯದರ ಪದಶಃ ಅರ್ಥ ಏನೆಂದರೆ ಅದನ್ನು ಮಾಡಿದವನು ನಾನು ಎಂದು. ಎರಡನೆಯದಕ್ಕೆ ಅದನ್ನು ಮಾಡಿದವಳು ನಾನು ಎಂದು. ಇವೆರಡರಲ್ಲಿ ಪ್ರತಿಯೊಂದು ಕಾಲಕ್ರಮೇಣ ಬದಲಾಯಿಸಿದೆ. ಚೇಸಿನವಾಡನು>ಚೇಸಿನಾಡನು>ಚೇಸಿನ್ಡ ಅಥವಾ ಚೇಸಿನಾನು>ಚೇಶಾನು; ಚೇಸಿನದಾನನು. ಚೇಸಿನದಾನ ಅಥವಾ ಚೇಸಿನಾನು>ಚೇಶಾನು. ಇವೆರಡು ಸಂದರ್ಭಗಳಲ್ಲೂ ಕೊನೆಯ ರೂಪಗಳು ಚೇಸಿನನು ಮತ್ತು ಚೇಶಾನು ಎಂದಾಗಿ ಲಿಂಗಸೂಚಕವಾದ ಯಾವ ಪ್ರತ್ಯಯಗಳನ್ನೂ ಹೊಂದದೆ ಇವೆ. ಹೀಗೆಮಟ್ಟಸಮಾಡುವ ಪ್ರಕ್ರಿಯೆಯನ್ನು ಆಧುನಿಕರು ಸಮೀಚೀನವಾದ ವಿಕಾಸವೆಂದೂ ಶುದ್ಧಪದ ಪ್ರಿಯರು ಹಸೆಗೆಟ್ಟ ಬದಲಾವಣೆಯೆಂದೂ ಭಾವಿಸುತ್ತಾರೆ. ಪ್ರಾಚೀನತಮ ಲೇಖಕರು ತಪ್ಪದೆ ಬಳಸುತ್ತಿದ್ದ ಅರ್ಧಾನುಸ್ವಾರ (0) ಮತ್ತು ಶಕಟರೇಫ (¾) ಗಳನ್ನು ಆಧುನಿಕರು ಕೈಬಿಟ್ಟಿದ್ದಾರೆ. ಅದನ್ನು ಎಲ್ಲಿ ಉಪಯೋಗಿಸಬೇಕೆಂಬುದನ್ನು ಬರೆಹಗಾರರು ಅರಿತಿದ್ದ ಕಾಲವೊಂದಿತ್ತು. ಏಕೆಂದರೆ ಜನ ಅವನ್ನು ಉಚ್ಚರಿಸುತ್ತಿದ್ದರು. ಕಾಲಕ್ರಮೇಣ ಜನರ ಮಾತಿನ ರೂಢಿ ತೆಲುಗು ದೇಶದ ಅನೇಕ ಭಾಗಗಳಲ್ಲಿ ಅಷ್ಟೋ ಇಷ್ಟೋ ಬದಲಾಯಿಸುತ್ತ ಬಂತು. ನಾಗರಿಕತೆಯಲ್ಲೂ ಮುಂದುವರಿದಿದ್ದ ಮಧ್ಯಭಾಗದ ಜನರಲ್ಲಿ ಮಾತಿನ ಉಚ್ಚಾರಗಳಲ್ಲಿ ವ್ಯತ್ಯಾಸಗಳು ಬೇಗನೆಯೂ ವಿಸ್ತಾರವಾಗಿಯೂ ಹರಡಿದುವು. ದೇಶದ ಕೊನೆ ಮೂಲೆಗಳಲ್ಲಿ ಮಾತ್ರ ಈ ವ್ಯತ್ಯಾಸಗಳು ನಿಧಾನವಾಗಿ ವ್ಯಾಪಿಸಿದವು, ಏಕೆಂದರೆ ಭೌಗೋಳಿಕವಾದ ಅಡಚಣೆಗಳಿಂದ ಆ ಭಾಗದ ಜನರು ಭಾಷೆಯ ಮುಖ್ಯ ಪ್ರವಾಹದ ಸಂಸರ್ಗದಿಂದ ದೂರ ಉಳಿದರು. ನದಿಯಲ್ಲಿ ನೆರೆಯುಕ್ಕಿದಾಗ ನೀರು ಅಕ್ಕಪಕ್ಕದ ಹಳ್ಳ ಕೊಳ್ಳಗಳಿಗೆ ಹರಿದು ಹಿಂಗಿ ಹೋಗುವವರೆಗೂ ಅಥವಾ ಮತ್ತೊಂದು ನೆರೆ ಬಂದಾಗ ಅದರೊಡನೆ ಬೆರೆಯುವವರೆಗೂ ಕೆಲವು ವರ್ಷಗಳ ಕಾಲ ಅಲ್ಲೆ ತಂಗಿರುತ್ತದೆ. ಆದರೆ ನದಿಯ ನೀರು ಮಾತ್ರ ಸತತವಾಗಿ ಬದಲಾಯಿಸುತ್ತಲೇ ಇರುತ್ತದೆ. ಜೀವಂತವಾಗಿರುವ ಭಾಷೆಯ ವಿಚಾರದಲ್ಲೂ ಹೀಗೆಯೇ ಪೂರ್ವದ ಕವಿಗಳು ಉಪಯೋಗಿಸಿರುವ ಹಲವು ಪದಗಳು ನಾಡಿನ ಮಧ್ಯಭಾಗದಲ್ಲಿ ಬಳಕೆಯಲ್ಲಿಲ್ಲದೆ ಹಿಂದೆ ಸರಿದಿವೆ. ಆದರೆ ಕೊನೆ ಮೂಲೆಗಳಲ್ಲಿ ಅವನ್ನು ಜನ ಇನ್ನೂ ಬಳಸುತ್ತಿದ್ದಾರೆ. ಉದಾಹರಣೆಗೆ: ಕುರು (ಸ್ವಲ್ಪ; ಕೊಂಚ); ಕುರು ಮಾಪು ಪುಟ್ಟಂ (ಸ್ವಲ್ಪ ಕೊಳೆಯಾಗಿರುವ ಬಟ್ಟೆ) ಎಂಬುದನ್ನು ನನ್ನಯ್ಯನ ಪ್ರಯೋಗ; ಅದು ತೆಲುಗು ದೇಶದ ಮಧ್ಯಭಾಗದಲ್ಲಿ ಕಣ್ಮರೆಯಾಯಿತು; ಆದರೆ ದೇಶದ ಉತ್ತರ ಭಾಗದ ಕೊನೆಯ ಜಿಲ್ಲೆಯ ಹಳ್ಳಿಗಳ ಜನ ಬಳಸುತ್ತಾರೆ.
==ಶಬ್ದಕೋಶ==
ಮಿಕ್ಕೆಲ್ಲ ಭಾಷೆಗಳಂತೆಯೇ ತೆಲುಗು ಸಹ ಸ್ವಂತವಾಗೂ ಪರಭಾಷೆಯಿಂದ ಎರವಲು ಪಡೆದೂ ಶಬ್ದಸಂಪತ್ತನ್ನು ಬೆಳೆಸಿಕೊಂಡಿದೆ. ಕೆಲವು ಶಬ್ದಗಳಿಗೆ ಹೊಸ ಅರ್ಥಗಳು ಬಂದಿವೆ. ಕೆಲವಕ್ಕೆ ಮೂಲ ಅರ್ಥದಿಂದ
-ತನಂ (
-ಅರಿಕಮು ಎಂಬುದು ಮತ್ತೊಂದು ಪ್ರತ್ಯಯ. ಇದನ್ನು ಯಾವ ಶಬ್ದಕ್ಕೆ ಹಚ್ಚುತ್ತಾರೋ ಅದರ ಭಾವವನ್ನು ಇದು ದ್ಯೋತಿಸುತ್ತದೆ. ಉದಾಹರಣೆಗೆ, ಇಲ್ಲರಿಕಮು (ಮಾವನ ಮನೆಯಲ್ಲಿ ವಾಸವಿರುವದು), ಪೇದರಿಕಮು (ಪಾಪರುತನ), ಮೇನರಿಕಮು (ಹೆಂಗಸೊಬ್ಬಳ ಮಗನಿಗೂ ಆಕೆಯ ಅಣ್ಣನ ಮಗಳಿಗೂ ಇರುವ ಬಾಂಧವ್ಯ (ಉದ್ದೇಶವೇನೆಂದರೆ ಇವರಿಬ್ಬರೂ ಮದುವೆ ಮಾಡಿಕೊಳ್ಳಬಹುದು ಎಂಬುದನ್ನು ಸೂಚಿಸುವುದು) ಇತ್ಯಾದಿ.
ಇತರ ಭಾಷೆಗಳಿಂದ ತೆಲುಗು ನೂರಾರು ಶಬ್ದಗಳನ್ನು ತೆಗೆದುಕೊಂಡಿದೆ. ಮೊದಲು ಅದು
ಅದು ಸಾಮಾನ್ಯವಾಗಿ ಪ್ರತ್ಯಯರಹಿತ ಶಬ್ದಗಳನ್ನು ತೆಗೆದುಕೊಂಡು ತನ್ನದೇ ಆದ ವಿಭಕ್ತಿ ಮತ್ತು ಅಖ್ಯಾತ ಪ್ರತ್ಯಯಗಳನ್ನು ಸೇರಿಸಿಕೊಳ್ಳುತ್ತದೆ. ಉದಾಹರಣೆಗೆ, ಪುರುಷುಡು, ಪುಷ್ಪಂ, ಗುರುವು, ಸುರಲು, ಜನಿಸ್ತು (ಜನಿಸುವದು), ರಕ್ಷಿಸ್ತು ಇದಕ್ಕೆ ಕೆಲವು ಅಪವಾದಗಳಿವೆ; ಉದಾಹರಣೆಗೆ, ಮನಸಾ, ಕ್ರಮಶಃ ಅಥವಾ ಕ್ರಮೇಣ ಇತ್ಯಾದಿ.
ಎರವು ತೆಗೆದುಕೊಂಡ ಪದಗಳನ್ನು ಜೀರ್ಣಿಸಿಕೊಳ್ಳುವ ವಿಧಾನದಲ್ಲಿ ಒಂದು ವಿಶೇಷಾಂಶ ಗೋಚರಿಸುತ್ತದೆ. ಇಂಗ್ಲಿಷಿನ ರೂಲ್ ಎಂಬ ಶಬ್ದಕ್ಕೆ ಅದರ ಬಹುವಚನ ಪ್ರತ್ಯಯವನ್ನು ಸೇರಿಸಿ ಹೇಳುತ್ತಾರೆ. ನೀಕು ರೂಲ್ಸು ತೆಲುಸನಾ? (ನಿನಗೆ ರೂಲ್ಸು ಗೊತ್ತೇ?) ನೀವು
ಕೆಲವು ಪರಕೀಯ ಶಬ್ದಗಳು ಜನಕ್ಕೆ ಎಷ್ಟು ಪರಿಚಿತವಾಗಿವೆಯೆಂದರೆ ಅವು ತೆಲುಗು ಶಬ್ದಗಳಲ್ಲ ಎಂದು ಅವರಿಗೆ ಹೇಳಿದಾಗ ಅವರು ಅಚ್ಚರಿಗೊಳ್ಳುತ್ತಾರೆ. ಉದಾಹರಣೆಗೆ: ರೈಲು ಬಂಡಿ, ಕಾನಿಸ್ತೇಬು, ಪೋಸ್ಟ್ ಆಫೀಸು, ಕವರು, ಇಸ್ಕೂಲು, ಕಾಲೇಜಿ, ಇಸ್ಪೇಟು, ಕಳಾವರು, ಕೋರ್ಟು, ವೋಟು, ಟಿಕೆಟ್ಟು, ಲಾಯರು, ಅಸುಪತ್ರಿ -ಮುಂತಾದುವು. ತೆಲುಗಿನಲ್ಲಿ ಒಗಟುಗಳೂ ಗಾದೆಗಳೂ ತುಂಬ ಇವೆ. ಇವುಗಳಲ್ಲಿ ತಮ್ಮದೇ ಆದ ಅಂತರಪ್ರಾಸ, ಅಂತ್ಯಪ್ರಾಸ, ಛಂದೋಲಯಗಳು ಮುಂತಾದ ಲಕ್ಷಣಗಳು ಇವೆ. ಪೋರಾನಿ ಛೋಟುಲಕುಪೋತೆ, ರಾರಾನಿ ನಿಂದಲು ರಾಕ ಮಾನವು (ಹೋಗಬಾರದ ಜಾಗಕ್ಕೆ ಹೋದರೆ ನೀನು ನಿಂದೆಗೂ ಅವಮಾನಕ್ಕೂ ಪಾತ್ರನಾಗಬೇಕಾಗುತ್ತದೆ); ಮಾಟಲು ಕೋಟಲು ದಾಟುತ; ಕಾಲುಳ್ಳು ಗಡಪ ದಾಟಲೇವು (ಮಾತು ಕೋಟೆಗಳನ್ನು ಒಡೆಯುತ್ತದೆ; ಕಾಲು ಹೊಸಿಲನ್ನು ದಾಟುವು- ಬರಿ ಬಾಯಿ ಮಾತಿನವನ್ನು ಕುರಿತು ಹೀಯಾಳಿಕೆ), ಒಕನಾಡು ವಿಂದು ಒಕನಾಡು ಮಂದು (ಒಂದು ದಿನ ಹಬ್ಬ, ಒಂದು ದಿನ ಮದ್ದು), ತಾನು ವಲಚಿಂದಿ ರಂಭ; ತಾನು ಮುನಿಗಿಂದಿ ಗಂಗ (ತಾನೊಲಿದವಳು ರಂಭೆ; ತಾನು ಮಿಂದುದು ಗಂಗೆ); ತಾಡುಲೇನಿ ಕಟ್ಟು; ಕೋಲಲೇನಿ ಪೆಟ್ಟು (ಹಗ್ಗವಿಲ್ಲದ ಕಟ್ಟು, ಬಾಣವಿಲ್ಲದ ಗುರಿ); ಶುಲ್ಕ ಪ್ರಿಯಾಲು, ಶೂನ್ಯ ಹಸ್ತಾಲು (ಶುಲ್ಕ ಹೊಗಳಿಕೆ, ಶೂನ್ಯ ಹಸ್ತ) ಇತ್ಯಾದಿ.▼
ಒಗಟೆಗಳೂ ಅಂತರಪ್ರಾಸ, ಅಂತ್ಯಪ್ರಾಸ ಮತ್ತು ಛಂದಸ್ಸುಗಳಿಂದ ನಿಬದ್ಧವಾಗಿವೆ. ಉದಾಹರಣೆಗೆ ತೆಲ್ಲನಿಮಡಿಲೋ ನಲ್ಲನಿವಿತ್ತುಲು; ಚೇತಿತೊತಲ್ಲಿನಾ, ನೋಟಿತೋ ಏರಿನಾಂ (ಬಿಳಿ ಹೊಲದಲ್ಲಿ ಕಪ್ಪು ಬೀಜಗಳನ್ನು ನಮ್ಮ ಕೈಯಿಂದ ಬಿತ್ತಿದೆವು, ಬಾಯಿಂದ ಎತ್ತಿದೆವು)- ಬಿಳಿಯ ಕಾಗದದ ಮೇಲೆ ಕಪ್ಪು ಶಾಯಿಯಿಂದ ಬರೆದು ಆಮೇಲೆ ಅದನ್ನು ಓದುವದನ್ನು ಕುರಿತ ಒಗಟೆಯಿದು. ದಾನಿ ಭೋಗಂ ರಾಜ ಭೋಗಂ, ದಾನಿ ಪಾಲು ಪೆಂಟಪಾಲು (ಅದರ ಭೋಗ ರಾಜಭೋಗ, ಅದರ ಪಾಲು ತಿಪ್ಪೆ)- ರಾಜನು ಊಟ ಮಾಡಿದ ಬಾಳೆ ಎಲೆಯ ವರ್ಣನೆ ಇದು▼
▲ಕೆಲವು ಪರಕೀಯ ಶಬ್ದಗಳು ಜನಕ್ಕೆ ಎಷ್ಟು ಪರಿಚಿತವಾಗಿವೆಯೆಂದರೆ ಅವು ತೆಲುಗು ಶಬ್ದಗಳಲ್ಲ ಎಂದು ಅವರಿಗೆ ಹೇಳಿದಾಗ ಅವರು ಅಚ್ಚರಿಗೊಳ್ಳುತ್ತಾರೆ. ಉದಾಹರಣೆಗೆ: ರೈಲು ಬಂಡಿ,
▲ಒಗಟೆಗಳೂ ಅಂತರಪ್ರಾಸ, ಅಂತ್ಯಪ್ರಾಸ ಮತ್ತು ಛಂದಸ್ಸುಗಳಿಂದ ನಿಬದ್ಧವಾಗಿವೆ. ಉದಾಹರಣೆಗೆ ತೆಲ್ಲನಿಮಡಿಲೋ ನಲ್ಲನಿವಿತ್ತುಲು; ಚೇತಿತೊತಲ್ಲಿನಾ, ನೋಟಿತೋ ಏರಿನಾಂ (ಬಿಳಿ ಹೊಲದಲ್ಲಿ ಕಪ್ಪು ಬೀಜಗಳನ್ನು ನಮ್ಮ ಕೈಯಿಂದ ಬಿತ್ತಿದೆವು, ಬಾಯಿಂದ ಎತ್ತಿದೆವು)- ಬಿಳಿಯ ಕಾಗದದ ಮೇಲೆ ಕಪ್ಪು ಶಾಯಿಯಿಂದ ಬರೆದು ಆಮೇಲೆ ಅದನ್ನು ಓದುವದನ್ನು ಕುರಿತ ಒಗಟೆಯಿದು. ದಾನಿ ಭೋಗಂ ರಾಜ ಭೋಗಂ, ದಾನಿ ಪಾಲು ಪೆಂಟಪಾಲು (ಅದರ ಭೋಗ ರಾಜಭೋಗ, ಅದರ ಪಾಲು ತಿಪ್ಪೆ)- ರಾಜನು ಊಟ ಮಾಡಿದ ಬಾಳೆ ಎಲೆಯ ವರ್ಣನೆ ಇದು.
{{ದ್ರಾವಿಡ ಭಾಷೆಗಳ ವಂಶಾವಳಿ}}
==ಬಾಹ್ಯ ಸಂಪರ್ಕಗಳು==
Line ೬೧ ⟶ ೫೯:
* [http://en2te.sourceforge.net/ English to Telugu online dictionary]
* [http://www.telugudictionary.org/ 'Telugu to English' & 'English to Telugu' Dictionary]
* [http://books.google.com/books?id=j28IAAAAQAAJ&printsec=frontcover&source=gbs_ge_summary_r&cad=0#v=onepage&q&f=false Dictionary of mixed Telugu By Charles Philip
* [http://www.engr.mun.ca/~adluri/telugu/language/script/script1a.html Origins
* [http://andhrabharati.com/dictionary/index.php Online English - Telugu dictionary portal which includes many popular dictionaries ]
* [http://greatertelugu.com Telugu literature online]
|