ತಂಬುಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೦ ನೇ ಸಾಲು:
ಉಳಿದಂತೆ ಎಲ್ಲಾ ಗೆಡ್ಡೆಗಳು, ಕಾಯಿಗಳು ಹಾಗೂ ಒಂದೆಲಗ ಮತ್ತು ಮಾದಿರದ ತಂಬುಳಿ ಮಾಡುವ ವಿಧಾನದಲ್ಲಿ ಸ್ವಲ್ಪ ವ್ಯತ್ಯಾಸವಿದೆ. ಮೂಲವಸ್ತುವಿನೊಂದಿಗೆ ಹಸಿಮೆಣಸು ಹಾಗೂ ಒಂದು ಮುಷ್ಟಿ ತೆಂಗಿನಕಾಯಿ ತುರಿ ಹಾಕಿ ರುಬ್ಬಬೇಕು. ಈ ಮಿಶ್ರಣಕ್ಕೆ ಒಂದು ಲೋಟ [[ಮಜ್ಜಿಗೆ]] ಹಾಗೂ ರುಚಿಗೆ ತಕ್ಕಷ್ಟು [[ಉಪ್ಪು]] ಹಾಕಬೇಕು. ಕೊನೆಗೆ ಒಗ್ಗರಣೆ ಹಾಕಿದರೆ ತಂಬುಳಿ ತಯಾರಾದಂತೆಯೇ.<ref>https://www.prajavani.net/article/%E0%B2%A4%E0%B2%82%E0%B2%AA%E0%B3%81-%E0%B2%A4%E0%B2%82%E0%B2%AC%E0%B3%81%E0%B2%B3%E0%B2%BF</ref>
===ಆರೋಗ್ಯವರ್ಧಕ ತಂಬುಳಿ===
ಅಜೀರ್ಣವಾಗಿದ್ದರೆ ಅಥವಾ ನಾಲಗೆಯಲ್ಲಿ ಅಗ್ರವಿದ್ದರೆ ಒಂದೆಲಗ, ಮಾದಿರ, ನೆಕ್ಕರೆ, ನೀರುಳ್ಳಿ, ನೆಲ್ಲಿ, ಸಾಂಬಾರ ಬಳ್ಳಿ, ಇಲಿಕಿವಿ, ಜೀರಿಗೆ, ದಾಳಿಂಬ ಸಿಪ್ಪೆ, ಕಿತ್ತಳೆ ಸಿಪ್ಪೆ ಇವುಗಳಲ್ಲಿ ಯಾವುದಾದರೊಂದು ಬಗೆಯ ತಂಬುಳಿ ಮಾಡಿ ಸೇವಿಸಿದರೆ ಅಗ್ರ ನಿವಾರಣೆಯಾತ್ತದೆ. ಜೊತೆಗೆ ಉತ್ತಮ ಜೀರ್ಣಕಾರಿ.ಹೊಟ್ಟೆ ಹುಳದ ಬಾಧೆಯಿದ್ದರೆ ಅತ್ತಿ, ಬೆಳ್ಳುಳ್ಳಿ, ಗರ್ಗ, ಇಲಿಕಿವಿ, ಬಿಳಿ ದಾಸವಾಳದ ತಂಬುಳಿಯಿಂದ ಹುಳದ ಸಮಸ್ಯೆ ಶಮನವಾಗುತ್ತದೆ. ಜೊತೆಗೆ ಈ ಸಮಸ್ಯೆ ಬಾಧಿಸದಂತೆ ತಡೆಯುತ್ತದೆ.ಶೀತ, ಜ್ವರ, ಕೆಮ್ಮಿದ್ದರೆ ವೀಳ್ಯದೆಲೆ, ಮಾದಿರ, [[ಶುಂಠಿ]], ಬೆಳ್ಳುಳ್ಳಿ, ಸಾಂಬಾರ ಬಳ್ಳಿ, ತುಂಬೆ ಹೂವಿನ ತಂಬುಳಿ ಸೇವನೆ ಉತ್ತಮ. ಎಲೆಮುರಿ ಅಥವಾ ಜೀರಿಗೆಯ ತಂಬುಳಿ ಬಾಯಿಯಲ್ಲಾಗುವ ಹುಣ್ಣನ್ನು ನಿವಾರಿಸುತ್ತದೆ. ಸಿಹಿಮೂತ್ರದ ಸಮಸ್ಯೆ ಇರುವವರು ಬಿಲ್ವಪತ್ರೆ, ನೀರುಳ್ಳಿ, ಗರ್ಗ, ಮೆಂತೆ ತಂಬುಳಿ ಸೇವಿಸಿದರೆ ಈ ರೋಗ ನಿಯತ್ರಣದಲ್ಲಿರುತ್ತದೆ. ಅಜೀರ್ಣದಿಂದ ಅಥವಾ ವಾಯುವಿನಿಂದಾಗುವ ಹೊಟ್ಟನೋವಿನ ಶಮನಕ್ಕೆ ನೆಕ್ಕರೆ, ನೆಲ್ಲಿ, ಇಲಿಕಿವಿ, ಜೀರಿಗೆ ತಂಬುಳಿ ಉಪಕಾರಿ. ಮಾದಿರ, ಸಾಂಬಾರ ಬಳ್ಳಿ, ಜೀರಿಗೆ ತಂಬುಳಿ ಮಲಬದ್ಧತೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಾಯುವಿನ ಸಮಸ್ಯೆ, ಗ್ಯಾಸ್ಟ್ರಿಕ್ ತೊಂದರೆಯಿರುವವರು ಜೀರಿಗೆ, ಓಮ ತಂಬುಳಿ ಸೇವಿಸಿದರೆ ಉತ್ತಮ. ಇದರಿಂದ ಗ್ಯಾಸ್ಟ್ರಿಕ್ ನಿಯಂತ್ರಣದಲ್ಲಿರುತ್ತದೆ. ಮೆಂತೆ, ಬಿಳಿ ದಾಸವಾಳ,
ಮನೆಯಂಗಳದಲ್ಲಿಯೇ
==ಉಲ್ಲೇಖಗಳು==
{{Reflist}}
|