ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೨ ನೇ ಸಾಲು:
== ಗೋಕಾಕ್ ವಿಶೇಷತೆ ==
 
ಗೋಕಾಕ್ ಪಟ್ಟಣವು ಹಲವಾರು ವೈವಿದ್ಯಮಯ ವಿಷಯಗಳಿಗಾಗಿ ನಾಡಿನಲ್ಲಿ ಹೆಸರು ಮಾಡಿದೆ. ಕಟ್ಟಿಗೆಯ ಹಣ್ಣಿನ ಫಲಕ, ಗೊಂಬೆ ಮುಂತಾದ ಕರಕುಶಲ ವಸ್ತುಗಳು ಇಲ್ಲಿ ತಯಾರಾಗುತ್ತವೆ. ಇನ್ನು ಪ್ರಸಿದ್ದ ಸಿಹಿ ತಿನಿಸು 'ಕರದಂಟು' ಸಹ ಇಲ್ಲಿಯೇ ರೆಡಿಯಾಗುತ್ತದೆತಯಾರಾಗುತ್ತದೆ. ಜೊತೆಗೆ ಇತ್ತಿಚಿಗೆ ಲಡಗಿ ಲಾಡು (ಉಂಡಿ]) ಸಹ ತಯಾರಿಸಲಾಗುತ್ತಿದ್ದು ಈ ಎರಡು ಸಿಹಿ ತಿನಿಸುಗಳು ಲೋಕ ಪ್ರಸಿದ್ದವಾಗಿವೆ. ಸಾಗರದಾಚೆಗೂ ಇವು ತಮ್ಮ ಕಂಪನ್ನು ಬೀರಿವೆ. ಇನ್ನು ಪಟ್ಟಣ ಜಿಲ್ಲಾ ಕೇಂದ್ರವಾಗುವತ್ತ ದಾಪುಗಾಲಿಟ್ಟಿದೆ. ಈ ಹಿಂದೆ ಸರ್ಕಾರ ನೇಮಿಸಿದ್ದ ಹುಂಡೇಕಾರ್ ಸಮಿತಿ , ಗದ್ದಿಗೌಡರ ಸಮಿತಿಗಳು ನಗರವನ್ನು ಜಿಲ್ಲಾ ಕೇಂದ್ರಕ್ಕೆ ಶಿಫಾರಸ್ಸು ಮಾಡಿವೆ. ಆದ್ರೆ ಬೆಳಗಾವಿ ಗಡಿ ವಿವಾದ ಇದಕ್ಕೆ ಅಡ್ಡಿಯಾಗಿದೆ. ವಿಚಿತ್ರ ಅಂದ್ರೆ ಗೋಕಾಕ್ ನಗರ ಆಯಕಟ್ಟಿನ ಸ್ಥಾನದಲ್ಲಿದ್ದರೂ ಸರ್ಕಾರ ಜಿಲ್ಲಾ ವಿಂಗಡನೆಗೆ ಮೀನಮೇಷ ಎಣಿಸುತ್ತಿದೆ. ಇನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಇಲ್ಲಿಯ ಕೊಡುಗೆ ಅಪಾರ. ಕನ್ನಡದ ಖ್ಯಾತ ಸಾಹಿತಿಗಳಾದ, ಕೃಷ್ಣಮೂರ್ತಿ ಪುರಾಣಿಕ, ಬೇಟಗೇರಿ ಕೃಷ್ಣಶರ್ಮ, ಬಸವರಾಜ್‌ ಕಟ್ಟಿಮನಿ, ಪ್ರೊ.ಕೆ.ಜಿ.ಕುಂದಣಗಾರ್, ಮುಂತಾದ ಹಿರಿಕರು ಈ ಗೋಕಾವಿ ನಾಡಿಗೆ ಸೇರಿದವರಾಗಿದ್ದಾರೆ.
 
'''''ಅಖಿಲ ಭಾರತ ಕನ್ನಡ ಸಾಹಿತ್ಯ ಪರೀಷತ್'''''
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ