ಭಗತ್ ಸಿಂಗ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೨೨ ನೇ ಸಾಲು:
*ಪಂಜಾಬಿನ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಲಾಹೋರ್ ಪಿತೂರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕರ್ತಾರ್ ಸಿಂಗ್ ಸರಭ್ ರವರನ್ನು 1915 ರಲ್ಲಿ ಅವರ 20 ನೇ ವಯಸ್ಸಿನಲ್ಲೇ ನೇಣಿಗೇರಿಸಲಾಗಿತ್ತು. "ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ. ಯಾವುದೇ ವ್ಯಕ್ತಿ, ರಾಷ್ಟ್ರ, ಧರ್ಮ ಅಥವಾ ಜನಾಂಗದ ಮೇಲೆ ದ್ವೇಷ ಸಾಧಿಸಲು ನಾನಾವುದನ್ನೂ ಮಾಡಿಲ್ಲ. ನನಗೆ ಬೇಕಾಗಿರುವುದೊಂದೆ - ಸ್ವಾತಂತ್ರ್ಯ. ಅದೊಂದೇ ನನ್ನ ಕನಸು" ಎಂಬ ಸರಭ್‌ರ ಕೊನೆಗಾಲದ ಮಾತುಗಳು ಅವರಲ್ಲಿ ಕ್ರಾಂತಿಯ ಉದ್ದೀಪನ ಹಚ್ಚಿದ್ದವು. ಇದು ಭಗತ್‌ರನ್ನು ಮೈನವಿರೇಳಿಸಿ ಸಾವಿಗೇ ಸವಾಲು ಹಾಕುವ ಗುಣವನ್ನು ಮೈಗೂಡುವಂತೆ ಮಾಡಿತ್ತು.
 
==ಹಿಂದೂಸ್ತಾನ್ ಗಣತಂತ್ರ ಸಂಘಟನೆ:==
*ವಿದ್ಯಾರ್ಥಿ ಜೀವನದಲ್ಲಿ ಅವರು ೧೯೨೧ ರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಭಾವನೆಗಳನ್ನು ಪ್ರಚೋದಿಸುತ್ತಿದ್ದರಿಂದ ಬ್ರಿಟೀಷರು ನಿಷೇಧಿಸಿದ್ದ ರಾಷ್ಟ್ರೀಯ ನಾಟಕ ಕೂಟದ ಸಕ್ರಿಯ ಕಾರ್ಯಕರ್ತನಾಗಿದ್ದುಕೊಂಡೇ ತಾನೂ ಸಹ ಹಲವಾರು ಪಾತ್ರಗಳನ್ನು ನಿರ್ವಹಿಸುತ್ತಿದ್ದರು. ಮನೆಯಲ್ಲಿ ಮದುವೆ ಒತ್ತಾಯ ಹೆಚ್ಚಾದಾಗ ಮನೆ ಬಿಟ್ಟು ವಿಧ್ಯಾಭ್ಯಾಸ ತೊರೆದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳಲು 1924 ರಲ್ಲಿ ಕಾನ್ಪುರಕ್ಕೆ ತೆರೆಳಿದರು.
*ಕಾನ್ಪುರದಲ್ಲಿ ಚಂದ್ರಶೇಖರ್ ಆಜಾದ್, ಬಿ.ಕೆ. ದತ್, ಜೆ.ಸಿ.ಚಟರ್ಜಿ, ಬಿಜೊಯ್ ಕ
ಮಾರ್ ಸಿನ್ಹಾ ರಂಥಹ ಕಾರ್ಯಕಾರಿಗಳ ಸಂಪರ್ಕ ಪಡೆದರು. ಈ ಸಮ್ಮಿಲನ ಗಾಳಿ ಮತ್ತು ಬೆಂಕಿ ಒಂದೂಗೂಡಿದಂತಾಗಿ ಸಮರ ಶೀಲ ಹೋರಾಟ ನಡೆಸಲು ಭದ್ರವಾದ ಬುನಾದಿ ಹಾಕಿದವು. ಆ ಸಂದರ್ಭದಲ್ಲಿ ಕ್ರಾಂತಿಕಾರಿ ಸಂಘಟನೆಯೆಂಬ ಹೆಗ್ಗಳಿಕೆಯಿಂದ ಕೆಲಸ ಮಾಡುತ್ತಿದ್ದ ಹಿಂದೂಸ್ತಾನ್ ಗಣತಂತ್ರವಾದಿ ಸಂಘಟನೆಯ ಚಟುವಟಿಕೆಗಳನ್ನು ಹತ್ತಿರದಿಂದ ಗಮನಿಸುತ್ತಿದ್ದರು.
* ವಸಾಹತುಶಾಹಿ ಪ್ರಭುತ್ವವನ್ನು ಶಸ್ತ್ರಸಜ್ಜಿತ ಕ್ರಾಂತಿಯ ಮೂಲಕ ಕಿತ್ತೊಗೆಯಲು ಸಚಿಂದ್ರ ನಾಥ ಸನ್ಯಾಲ್, ಜೋಗೇಶ್ ಚಂದ್ರ ಚಟರ್ಜಿ ಮತ್ತು ರಾಮಪ್ರಸಾದ್ ಬಿಸ್ಮಿಲ್ರವರ ನಾಯಕತ್ವದಡಿ 1924 ರ ಅಕ್ಟೋಬರ್ ನಲ್ಲಿ ಹಿಂದೂಸ್ತಾನ್ ಗಣತಂತ್ರ ಸಂಘಟನೆಯನ್ನು ಸ್ಥಾಪಿಸಲಾಗಿತ್ತು. ಕ್ರಾಂತಿಕಾರಿ ಸಮರಶೀಲ ಚಳುವಳಿಯ ಹಳೆಯ ಸಂಪ್ರದಾಯಗಳನ್ನು ಮುಂದುವರಿಸುತ್ತಾ ಸಮೂಹ ಸಶಸ್ತ್ರ ಹೋರಾಟದ ಮೂಲಕ ಹೊಸ ಸಮಾಜವಾದಿ ದೃಷ್ಟಿಕೋನವನ್ನು ಬೆಸೆಯುತ್ತಿದ್ದ ಚಂದ್ರಶೇಖರ್ ಆಜಾದ್, ಭಗತ್ ಸಿಂಗ್, ಶಿವ ವರ್ಮ ಮತ್ತು ಸು
*ರ್ಯಾಚರಣೆಯಕಾರ್ಯಾಚರಣೆಯ ದಿನ ತಾವು ನಿಲ್ಲಬೇಕಾದ ಆಯಕಟ್ಟಿನ ಜಾಗವನ್ನು ಇಬ್ಬರೂ ಕ್ರಾಂತಿಕಾರಿಗಳು ನೋಡಿಕೊಂಡರು.
 
*ರ್ಯಾಚರಣೆಯ ದಿನ ತಾವು ನಿಲ್ಲಬೇಕಾದ ಆಯಕಟ್ಟಿನ ಜಾಗವನ್ನು ಇಬ್ಬರೂ ಕ್ರಾಂತಿಕಾರಿಗಳು ನೋಡಿಕೊಂಡರು.
*ಭಗತ್ ನನ್ನು ತಾನಿನ್ನೆಂದೂ ನೋಡಲಾರೆನೇನೋ ಎಂಬ ಭಾರವಾದ ಹೃದಯದಿಂದ ಚಂದ್ರಶೇಖರ್ ಆಜಾದ್ರು ಇವರನ್ನು ಬೀಳ್ಕೊಟ್ಟರು. ಈವೆರಡೂ ಕಾಯಿದೆಗಳು ಅಂಗೀಕಾರಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲವಾದ್ದರಿಂದ ಚರ್ಚೆಯ ನಡುವೆ ಭಗತ್ & ಬಿ.ಕೆ. ದತ್ ಎದ್ದುನಿಂತು ಬಾಂಬೊಂದನ್ನು ಸಭೆಯತ್ತ ಎಸೆದರು. 'ಇಂಕ್ವಿಲಾಬ್-ಜಿಂದಾಬಾದ್', 'ಬ್ರಿಟೀಷ್ ಸಾಮ್ರಾಜ್ಯಶಾಹಿಗೆ ಧಿಕ್ಕಾರ' ಎಂಬ ಘೋಷಣೆಗಳನ್ನು ಕೂಗುತ್ತಾ ಕರಪತ್ರ ತೂರಿದರು.
* ಸುಲಭವಾಗಿ ತಪ್ಪಿಸಿಕೊಳ್ಳಬಹುದಾಗಿದ್ದರೂ ಅದಕ್ಕಾಗಿ ಯಾವುದೇ ಪ್ರಯತ್ನ ಮಾಡದೆ ಇಬ್ಬರೂ ಮಂಜುಗಡೆಯಂತೆ ದಸ್ತಗಿರಿಯಾಗಲು ನಿಂತಾಗ ಕೆಲವು ಸಮಯದ ನಂತರವಷ್ಟೇ ಪೋಲೀಸರು ಎಚ್ಚೆತ್ತು ಅವರನ್ನು ಬಂಧಿಸಲನುವಾದರು. ನ್ಯಾಯಾಲಯವನ್ನು ಪ್ರಚಾರ ಮಾಧ್ಯಮವನ್ನಾಗಿ ಭಗತ್ ಸಂಪೂರ್ಣವಾಗಿ ಬಳಸಿಕೊಂಡು ಕಿವುಡಾಗಿದ್ದ ಬ್ರಿಟೀಷ್ ಪ್ರಭುತ್ವ ಕಿವಿ ನಿಮಿರುವಂತೆ ಮಾಡುವದಷ್ಟೆ ಅವರ ಮತ್ತು ಸಂಘಟನೆಯ ಮುಖ್ಯ ಧ್ಯೇಯವಾಗಿತ್ತು.
Line ೩೭ ⟶ ೩೬:
*ಬಂಡೆಕಲ್ಲುಗಳನ್ನೇ ಪುಡಿಗಟ್ಟುವಷ್ಟು ತೀಕ್ಷ್ಣ ಶಕ್ತಿ ಹೊಂದಿದ್ದ ಭಗತ್ಸಿಂಗ್ ಸೆರೆಮನೆಯ ಸಂಕಷ್ಟ, ಯಾತನೆಗಳಿಂದಾಗಿ ಕೊನೆಕೊನೆಗೆ ಬಸವಳಿದು ಕೃಷವಾಗಿದ್ದ ದೇಹ ಎಂಥಹವರಲ್ಲೂ ಕಣ್ಣೀರು ಹರಿಸುವಂತಿತ್ತು. ಆದರೆ ಅವರ ಕಣ್ಣುಗಳಲ್ಲಿನ ತೇಜಸ್ಸಿನ ಪ್ರಖರತೆ ಮತ್ತಷ್ಟು ಮಗಧಷ್ಟು ಇಮ್ಮಡಿಗೊಳ್ಳುತ್ತಿತ್ತು. ಸೆರೆಮನೆಯಲ್ಲಿದ್ದಷ್ಟೂ ದಿನವೂ 'ಕಾಕೋರಿ ದಿನೋತ್ಸವ', 'ಲೆನಿನ್ ದಿನೋತ್ಸವ', ಹೀಗೆ ಮುಂತಾದ ಕ್ರಾಂತಿಕಾರಿ ಉತ್ಸವಗಳನ್ನು ಆಚರಿಸುತ್ತಾ ಖುಷಿ ಪಡುತ್ತಿದ್ದರು.
* ಸಂಪೂರ್ಣ ಮಾರ್ಕ್ಸ್ ವಾದಿಗಳಾಗಿ ಪರಿವರ್ತಿತರಾಗದಿದ್ದರೂ ಮಾರ್ಕ್ಸ್ ವಾದವನ್ನು ಇಂಚಿಂಚೂ ಅಭ್ಯಸಿಸುತ್ತಾ ವಿಷಯದಿಂದ ವಿಷಯವನ್ನು ಗ್ರಹಿಸುವ ಪ್ರಕ್ರಿಯೆಯ ಹಾದಿಯಲ್ಲಿದ್ದರು. ಅವರು ಅಧ್ಯಯನದ ಮೂಲಕ ಸಿದ್ದಾಂತವನ್ನು ಒಂದು ಅಸ್ತ್ರವಾಗಿ ವಿರೋಧಿಗಳ ಕಪಟತೆಯನ್ನು ಛಿದ್ರಗೊಳಿಸಲು ಕ್ರಿಯೆಯಾಗಿ ಬಳಸುತ್ತಿದ್ದರು. ಲಾಹೋರ್ ಉಚ್ಚ ನ್ಯಾಯಾಲಯದಲ್ಲಿ ಭಗತ್ ಸಿಂಗ್ ನುಡಿದ ಮಾತುಗಳು ಅವರ ಪ್ರಖರ ಪಾಂಡಿತ್ಯಕ್ಕೆ ಹಿಡಿದ ಕನ್ನಡಿಯಂತಿವೆ: 'ಕ್ರಾಂತಿಯ ಖಡ್ಗವನ್ನು ವಿಚಾರದ ಸಾಣೆಕಲ್ಲಿನ ಮೇಲೆ ಹರಿತಗೊಳಿಸಲಾಗುತ್ತದೆ'.
*ಗಾಂಧೀಜಿಯವರ ಬಗ್ಗೆ ಅವರಿಗೆ ಗೌರವವಿದ್ದರೂ ಸೈದ್ದಾಂತಿಕ ನಿಲುಮೆಯ ಕುರಿತು ಅವರು ಈ ರೀತಿ ನುಡಿದಿದ್ದಾರೆ: 'ಗಾಂಧೀಜಿಯು ಒಬ್ಬ ಉದಾರ ಹೃದಯದ ಪರೋಪಕರಿ ಮನುಷ್ಯ. ನಮಗೆ ಅಗತ್ಯವಿರುವುದು ಪರೋಪಕಾರವಲ್ಲ, ಆದರೆ ಚಲನಾತ್ಮಕ ವೈಜ್ಞಾನಿಕ ಸಾಮಾಜಿಕ ಶಕ್ತಿ'. 1929೧೯೨೯ ರಲ್ಲಿ ಅವರನ್ನು ಬಂಧಿಸುವ ಹೊತ್ತಿಗಾಗಲೇ ಅವರು ಭಯೋತ್ಪಾದಕ ಮತ್ತು ವ್ಯಕ್ತಿಗತವಾದ ವೀರೋಚಿತ ಕಾರ್ಯಗಳಲ್ಲಿ ನಂಬಿಕೆ ಕಳೆದುಕೊಂಡು "ಕ್ರಾಂತಿಯೊಂದು ಸಮೂಹಕ್ಕಾಗಿ ಸಮೂಹ ನಡೆಸುವ ಕ್ರಿಯೆ" ಎಂಬ ದೃಢ ನಿಲುಮೆಗೆ ಬಂದಿದ್ದರು. ಇದಕ್ಕೆ ಪೂರಕವಾಗಿಯೇನೋ ಎಂಬಂತೆ ಅವರನ್ನು ಗಲ್ಲಿಗೇರಿಸುವ ಸ್ವಲ್ಪ ಮುಂಚಿತವಾಗಿ "ನಿಜವಾದ ಕ್ರಾಂತಿಕಾರಿ ಸೇನೆಯು ಹಳ್ಳಿ ಮತ್ತು ಕಾರ್ಖಾನೆಗಳಲ್ಲಿವೆ" ಎಂದಿದ್ದರು.
* ಭಗತ್ ಸಿಂಗ್ ಒಬ್ಬ ಮಾರ್ಕ್ಸ್ ವಾದಿ ಯಾಗಿದ್ದರು ಹಾಗೂ ಅಂದಿನ ಹಿಂದು ಮಹ ಸಭಾ ಮತ್ತು ಮುಸ್ಲಿಂ ಲೀಗ್ ನ ವಿರೋಧಿಯಾಗಿದ್ದರು
 
==ಕ್ರಾಂತಿಕಾರಿಯ ಸಾವಿನ ಘಳಿಗೆಗಳು:==
*ಭಗತ್ ಸಿಂಗ್ ರವರ ಕೊನೆಯ ದಿನಗಳಲ್ಲಿ ಸಂಘಟನೆಯ ಬಹುತೇಕ ಮಂದಿ ಸೆರೆಮನೆಯಲ್ಲಿ ನ್ಯಾಯಾಲಯದ ಕುರಿತು ಚರ್ಚಿಸುತ್ತಿದ್ದಾಗ ರಾಜಗುರು ಮತ್ತು ಭಗತ್ಸಿಂಗ್ರಿಬ್ಬರೂ ಗಲ್ಲಿಗೇರುವುದು ಖಚಿತವೆಂದು ತಿಳಿದಿದ್ದರಿಂದ ಅವರನ್ನು ಹೊರತುಪಡಿಸಿ ತಮಾಷೆಗಾಗಿ ಒಬ್ಬರ ಮೇಲೊಬ್ಬರು ಗಲ್ಲು ಶಿಕ್ಷೆ ವಿಧಿಸಿಕೊಂಡು ನಗೆಯಾಡುತ್ತಿದ್ದರು.'ರಾಜಗುರು ಮತ್ತು ನನಗೆ ಏಕೆ ಶಿಕ್ಷೆ ವಿಧಿಸಲಿಲ್ಲ? ನಮ್ಮನ್ನು ಬಿಡುಗಡೆಗೊಳಿಸುತ್ತೀರೇನು?' ಎಂದು ನಗುತ್ತಾ ಕೇಳಿದ ಭಗತ್ ಸಿಂಗ್ ಮಾತುಗಳು ಅವರಲ್ಲಿ ಕಂಪನ ಸೃಷ್ಟಿಸಿದವು.
*ಯಾರಲ್ಲಿಯೂ ಉತ್ತರವಿಲ್ಲದೆ ನಿಶ್ಯಬ್ಧ, ನಿರ್ಲಿಪ್ತತೆ ಆವರಿಸಿದವು. ಮತ್ತಷ್ಟು ಛೇಡಿಸುವ ಧ್ವನಿಯಲ್ಲಿ 'ವಾಸ್ತವವನ್ನು ಗುರುತಿಸಲು ಭಯವೇ?' ಎಂದು ಭಗತ್ ನುಡಿದಾಗ ಇನ್ನಷ್ಟು ನಿಶ್ಯಬ್ಧ ಮನೆಮಾಡಿ ಸೂತಕದ ವಾತಾವರಣ ಉಂಟಾಯಿತು. ನಿಶ್ಯಬ್ಧ ಮತ್ತು ಮೌನವನ್ನು ತನ್ನ ನಗುವಿನಿಂದ ಭೇಧಿಸುತ್ತಾ ಹೇಳಿದ:"ನಾವು ಸಾಯೋವರೆಗೆ ಕುತ್ತಿಗೆಗೆ ಕುಣಿಕೆ ಬೀರಿ ನಮ್ಮನ್ನು ನೇತು ಹಾಕುವುದು ನಿಜ, ಕಾಮ್ರೇಡ್ಸ್. ಇದು ನನಗೂ ಗೊತ್ತು. ನಿಮಗೂ ಗೊತ್ತು. ಮತ್ತೇಕೆ ಅದರತ್ತ ಕಣ್ಣು ಮುಚ್ಚಿಕೊಳ್ಳಬೇಕು?
Line ೫೪ ⟶ ೫೩:
*ಭಗತ್ ಸಿಂಗ್ ಯಾವುದೇ ಕ್ಷಣದಲ್ಲೂ ಸಹ ಸಾಧಕನ ಮೂರ್ತಿವೆತ್ತ ಪ್ರತಿಮೆಯಂತಿದ್ದರು. ಮನುಷ್ಯನಿಂದ ಮನುಷ್ಯನ ಶೋಷಣೆಯನ್ನು ಕೊನೆಗಾಣಿಸುವುದೇ ಅಂತಿಮ ಧ್ಯೇಯವೆನ್ನುವ ಅವರ ಮಾತುಗಳು, ಅವರಲ್ಲಿಯ ಮಾನವತೆಯು ಹೆಬ್ಬಂಡೆಯೊಳಗೆ ಅರಳಿ ನಿಂತಿರುವ ಹೂವುಗಳಂತೆ ಸದಾ ರಾರಾಜಿಸುತ್ತಿತ್ತು. ಸದಾ ಕತ್ತಿಯ ಅಲುಗಿನ ಮೇಲೆಯೇ ನಡೆಯುತ್ತಿದ್ದ ಯುವಜನರ ಆಸ್ಫೋಟಕ ಧ್ವನಿ ಇನ್ನಿಲ್ಲದಂತಾದರೂ ಅಂಥಹ ಸಾವಿರಾರು ಪ್ರತಿಧ್ವನಿಗೆ ಕಾರಣವಾಗುವಲ್ಲಿ ಯಶಸ್ವಿಯಾದರು.
*ಅವರ ಸಾವು ಸ್ವಾತಂತ್ರ್ಯದ ಕಿಡಿಯನ್ನು ದೇಶಾದ್ಯಂತ ಮತ್ತಷ್ಟು ವ್ಯಾಪಿಸಿ ಯುವಜನರಲ್ಲಿ ವಿದ್ಯುತ್ ಸಂಚಲನ ಉಂಟುಮಾಡಿತು. ಭಗತ್ ಸಿಂಗ್ ಭವಿಷ್ಯವಾಣಿ ಸುಳ್ಳಾಗಲಿಲ್ಲ. ಅವರ ಹೆಸರು ಸಾವಿಗಳುಕದ ಧೈರ್ಯ, ತ್ಯಾಗ ಬಲಿದಾನ, ರಾಷ್ಟ್ರಾಭಿಮಾನ ಮತ್ತು ತದೇಕಚಿತ್ತತೆಯ ಹೋರಾಟಗಳ ಪ್ರತೀಕವಾಯಿತು. ಅವರ 'ಇಂಕ್ವಿಲಾಬ್ ಜಿಂದಾಬಾದ್ (ಕ್ರಾಂತಿ ಚಿರಾಯುವಾಗಲಿ)' ಘೋಷಣೆಯು ಇಡೀ ರಾಷ್ಟ್ರದ ಯುದ್ದದ ಕೂಗಾಗಿ ಮಾರ್ಪಟ್ಟು ಸಮಾಜವಾದಿ ಸಮಾಜ ನಿರ್ಮಾಣದ ಕನಸನ್ನು ವಿದ್ಯಾವಂತ ಯುವಜನರಲ್ಲಿ ಹಿಡಿದಿಟ್ಟಿತು.
*1930 ೧೯೩೦- 32೩೨ ರಲ್ಲಿ ಎಲ್ಲ ಜನರು ಒಂದೇ ಮನುಷ್ಯನಂತೆ ನಿಂತರು. ಸೆರೆಮನೆವಾಸಗಳು, ಛಡಿಯೇಟುಗಳು, ಮತ್ತು ಲಾಠಿಯೇಟುಗಳು ಅವರ ಸ್ಫೂರ್ತಿಯನ್ನು ಕಂಗೆಡಿಸಲು ಸಾಧ್ಯವಾಗಲಿಲ್ಲ. 1945 ೧೯೪೫- 46೪೬ ರಲ್ಲಿ ನವಭಾರತ ಉದಯಿಸಿದ್ದನ್ನು ಇಡೀ ಪ್ರಪಂಚವೇ ಕಣ್ಣಾರೆ ಕಂಡಿತು. ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಯುವಜನರು, ಜಲಸೇನೆ, ಭೂಸೇನೆ, ವಾಯುಸೇನೆ, ಮತ್ತು ಪೊಲೀಸರು ಸಹ ಬಲವಾದ ಹೊಡೆತಗಳನ್ನನುಭವಿಸಿದರು.
*1930೧೯೩೦ ರವರೆಗೆ ಕೆಲವೇ ಕೆಲವರಲ್ಲಿದ್ದ ತ್ಯಾಗ, ಬಲಿದಾನ ಮತ್ತು ಅರ್ಪಣಾ ಮನೋಭಾವನೆಗಳು ಸಮೂಹ ಪ್ರಕ್ರಿಯೆಯಾಗಿ ರಾಷ್ಟ್ರಾದ್ಯಂತ ದಂಗೆಯು ವ್ಯಾಪಿಸಿತು. ಭಗತ್ ಸಿಂಗ್ ಅವರಿಗೆ ಸ್ವಾತಂತ್ರ್ಯ ಸಿಗುವ ಕುರಿತು ಯಾವುದೇ ಅನುಮಾನವಿರಲಿಲ್ಲವಾದರೂ ಅವರು ಆತಂಕ ಗೊಂಡಿದದ್ದು ಬಿಳಿ ಸಾಹೇಬರು ಖಾಲಿ ಮಾಡಿದ ಆಸನದಲ್ಲಿ ಕಂದು ಸಾಹೇಬರು ಕುಳಿತುಕೊಳ್ಳುವರೆಂಬ ಭಯದಿಂದ. 'ಕೇವಲ ಯಜಮಾನರ ಬದಲಾವಣೆಯಿಂದ ಸ್ವಾತಂತ್ರ್ಯ ಬಂದಂತಾಗುವುದಿಲ್ಲ.
*ಪುರಾತನ ವ್ಯವಸ್ಥೆಯನ್ನು ನಾಶಮಾಡದೆ ಹೊಸ ಬದಲಾವಣೆಯನ್ನು ತರುವುದು ಸಾಧ್ಯವಿಲ್ಲ' ಎಂದು ಭಗತ್ ಸಿಂಗ್ ರವರಿಗೆ ಮನವರಿಕೆಯಾಗಿತ್ತು. ಆದರೆ ಪ್ರತಿಭಟನೆಯ ದಿವ್ಯ ಜ್ಯೋತಿ ಆರದಂತೆ ಉರಿಯಲು ತನ್ನಂಥವರು ಸಾಯಲೇಬೇಕೆಂದು ಭಗತ್ ನಂಬಿದ್ದ. [[ಮಾರ್ಚ್ ೨೩]] ೧೯೩೧ ರಂದು ಇವರನ್ನು ಬ್ರಿಟಿಷ್ ಸರ್ಕಾರವು ಗಲ್ಲಿಗೇರಿಸಿತು. . ಭಗತ್ ಸಿಂಗ್ ಸಂಪೂರ್ಣ ನಾಸ್ತಿಕ ಮತ್ತು ಜಾತಿವಿರೋಧಿಯಾಗಿದ್ದರು ಸಾಯುವ ಕೆಲವೇ ನಿಮಿಷಗಳ ಮೊದಲು ಪ್ರಾರ್ಥನೆಯಂತೆ ಭಗತ್ ನುಡಿದ ಮಾತುಗಳು ಎಂಥವರನ್ನೂ ಕೆಚ್ಚೆದೆಯ ಉತ್ತುಂಗಕ್ಕೇರಿಸಬಲ್ಲವು. *'ಮೊದಲು ನಿಮ್ಮ ವೈಯುಕ್ತಿಕತೆಯನ್ನು ನುಚ್ಚುನೂರು ಮಾಡಿ, ವೈಯುಕ್ತಿಕ ಸುಖದ ಕನಸನ್ನು ಭಗ್ನಗೊಳಿಸಿ, ನಂತರ ಕೆಲಸ ಮಾಡಲು ತೊಡಗಿ. ನೀವು ಒಂದೊಂದೇ ಅಂಗುಲ ಮುಂದಕ್ಕೆ ಸಾಗಬೇಕು. ಅದಕ್ಕೆ ಧೈರ್ಯ ಬೇಕು; ದೃಡ ನಿರ್ಧಾರ ಬೇಕು; ನಿರಂತರ ಪರಿಶ್ರಮ ಬೇಕು. ಯಾವ ಕಷ್ಟ ಕಾರ್ಪಣ್ಯಗಳೂ ನಿರಾಶೆಗೊಳಿಸುವುದಿಲ್ಲ. ಯಾವ ವೈಫಲ್ಯಗಳೂ, ನಿಮ್ಮನ್ನು ಕಂಗೆಡಿಸುವುದಿಲ್ಲ. ತ್ಯಾಗ ಮತ್ತು ನರಳಾಟಗಳ ಅಗ್ನಿದಿವ್ಯವನ್ನು ಹಾದು ನೀವು ವಿಜಯಶಾಲಿಗಳಾಗುತ್ತೀರಿ. ಈ ವೈಯುಕ್ತಿಕ ಗೆಲುವುಗಳು ಕ್ರಾಂತಿಯ ಬಹುದೊಡ್ಡ ಆಸ್ತಿ....'
 
"https://kn.wikipedia.org/wiki/ಭಗತ್_ಸಿಂಗ್" ಇಂದ ಪಡೆಯಲ್ಪಟ್ಟಿದೆ