ತೆರಿಗೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೨೦ ನೇ ಸಾಲು:
ಇದು ಅತ್ಯಂತ ಪ್ರಾಚೀನ ತೆರಿಗೆ ಎಂಬುದು ಕೆಲವರ ಅಭಿಮತ. ಆದರೆ ತಲೆಗಂದಾಯ ಮತ್ತು ಗುಡಿಸಲು ತೆರಿಗೆ ಭೂಕಂದಾಯಕ್ಕಿಂತ ಪ್ರಾಚೀನವಾದುದು ಎಂದು ಮತ್ತೆ ಕೆಲವರು ಅಭಿಪ್ರಾಯಪಡುತ್ತಾರೆ. ಇವುಗಳಲ್ಲಿ ಯಾವುದು ಮೊದಲು ರೂಢಿಗೆ ಬಂತೆಂದು ಹೇಳುವುದು ಕಷ್ಟವಾದರೂ ಇವೆರಡೂ ಪ್ರಾಚೀನ ತೆರಿಗೆಗಳೆಂಬುದರಲ್ಲಿ ಸಂಶಯವಿಲ್ಲ.
ಪ್ರಾಚೀನ ಕಾಲದಿಂದಲೂ ಎಲ್ಲ ರಾಷ್ಟ್ರಗಳಲ್ಲೂ ಭೂಕಂದಾಯ ರಾಜಸ್ವದ ಒಂದು ಮುಖ್ಯ ಮೂಲವಾಗಿದೆ.
ಭಾರತದಲ್ಲೂ ಭೂ ಉತ್ಪಾದನೆಯ ಸ್ವಲ್ಪ ಭಾಗವನ್ನು ಕಂದಾಯ ರೂಪದಲ್ಲಿ ಪಡೆಯುವುದು ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಮನುವಿನ ಪ್ರಕಾರ ಒಟ್ಟು ಭೂ ಉತ್ಪನ್ನದ ಆರನೆಯ ಒಂದು ಭಾಗವನ್ನು ಸರ್ಕಾರಕ್ಕೆ ಒಪ್ಪಿಸಬೇಕಾಗಿತ್ತು. ಯುದ್ಧಕಾಲದಲ್ಲಿ ಇದನ್ನು ನಾಲ್ಕನೆಯ ಒಂದು ಭಾಗಕ್ಕೆ ಹೆಚ್ಚಿಸಲಾಗುತ್ತಿತ್ತು. ಒಂದೊಂದು ಹಳ್ಳಿಯೂ ಇಂತಿಷ್ಟು ಕಂದಾಯ ಕೊಡಬೇಕೆಂದು ನಿರ್ಧರಿಸಲಾಗುತ್ತಿತ್ತು. ಹಳ್ಳಿಯ ಪ್ರತಿ ಭೂಮಾಲೀಕನೂ ಎಷ್ಟು ಕಂದಾಯ ಕೊಡಬೇಕೆಂಬುದನ್ನು ನಿರ್ಧರಿಸಿ ಇಡೀ ಹಳ್ಳಿಯ ಕಂದಾಯವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಒಪ್ಪಿಸುವುದು ಆಗ ಹಳ್ಳಿಯ ಮುಖ್ಯಸ್ಥನ ಕರ್ತವ್ಯ. ಉತ್ಪಾದನೆಯ ಒಂದು ನಿರ್ದಿಷ್ಟ ಭಾಗವನ್ನು ಕೊಡಬೇಕಾಗಿದ್ದುದರಿಂದ ಪ್ರತಿಯೊಬ್ಬನೂ ಕೊಡಬೇಕಾದ ಕಂದಾಯವನ್ನು ನಿರ್ಧರಿಸುವುದು ಸುಲಭ. ರಾಜನಿಂದ ನೇಮಿತನಾದ ಅಧಿಕಾರಿಯ ಸಮ್ಮುಖದಲ್ಲಿ ಕಟಾವಾದ ಬೆಳೆಯನ್ನು ಹರಡಿ ನಿರ್ದಿಷ್ಟವಾದ ಪಾಲನ್ನು ಸರ್ಕಾರಕ್ಕೆ ಒಪ್ಪಿಸಲಾಗುತ್ತಿತ್ತು. ಬೆಳೆ ಕೆಟ್ಟುಹೋದಾಗ ಕಂದಾಯ ಇಲ್ಲವಾಗುತ್ತಿದ್ದುದು ಸ್ವಯಂ ವೇದ್ಯ. ಆದರೆ ಕ್ರಮೇಣ ವ್ಯವಸಾಯ ಅಭಿವೃದ್ಧಿಯಾದಂತೆ ಮತ್ತು ಹೆಚ್ಚು ಹೆಚ್ಚು ಭೂಮಿಯನ್ನು ವ್ಯವಸಾಯಕ್ಕೆ ಉಪಯೋಗಿಸುವುದು ಆರಂಭವಾದ ಮೇಲೆ ಸರಳವಾದ ಹಿಂದಿನ ಪದ್ಧತಿಯನ್ನು ಅನುಸರಿಸುವುದು ಕಷ್ಟವಾಯಿತು. ಕಂದಾಯ ಕೊಡುವುದನ್ನು ತಪ್ಪಿಸಿಕೊಳ್ಳುವುದು ಪ್ರಾರಂಭವಾಯಿತು. ಅಧಿಕಾರಿಗಳೂ ಸರ್ಕಾರಕ್ಕೆ ವಂಚನೆ ಮಾಡಲಾರಂಭಿಸಿದರು. ಆದ್ದರಿಂದ ಬೆಳೆಯ ಆಧಾರದ ಮೇಲೆ ಇಂತಿಷ್ಟು ಕಂದಾಯ ಕೊಡಬೇಕೆಂದು ನಿರ್ಧರಿಸುವ ಮತ್ತು ಹಣದ ರೂಪದಲ್ಲಿ ಕಂದಾಯ ಪಡೆಯುವ ಪದ್ಧತಿಗಳು ಆಚರಣೆಗೆ ಬಂದುವು. ಅಕ್ಬರನ ಕಾಲದಲ್ಲಿ ಎಲ್ಲ ನೆಲವನ್ನೂ ಅದರ ಸಾರಗುಣದ ಆಧಾರದ ಮೇಲೆ ನಾಲ್ಕು ಗುಂಪಾಗಿ ವಿಂಗಡಿಸಿ ಹಿಂದಿನ ಹತ್ತು ವರ್ಷಗಳ ಉತ್ಪನ್ನದ ಸರಾಸರಿಯನ್ನು ಲೆಕ್ಕ ಹಾಕಿ ಅದರ ಆಧಾರದ ಮೇಲೆ ಕಂದಾಯ ವಿಧಿಸುವುದಕ್ಕಾಗಿ ಉತ್ಪನ್ನವನ್ನು ನಿರ್ಧರಿಸಲಾಗುತ್ತಿದ್ದಿತು. ಈ ಉತ್ಪನ್ನದ ಬೆಲೆಯನ್ನು ನಿರ್ಧರಿಸಲು ಹಿಂದಿನ ಹತ್ತೊಂಬತ್ತು ವರ್ಷಗಳ ಬೆಲೆಯ ಸರಾಸರಿಯನ್ನು ಆಧಾರವಾಗಿಟ್ಟುಕೊಳ್ಳಲಾಗಿತ್ತು. ಮೊಗಲರ ಕಾಲದಲ್ಲಿ ಆದ ಈ ಬದಲಾವಣೆ ಬಹಳ ಕಾಲದವರೆಗೆ ಭೂ ಕಂದಾಯನೀತಿಗೆ ಆಧಾರವಾಗಿತ್ತು. ಈಸ್ಟ್ ಇಂಡಿಯ ಕಂಪನಿಯ ಆಳ್ವಿಕೆಯ ಕಾಲದಲ್ಲಿ ಪುನಃ ಭೂ ಕಂದಾಯದ ನೀತಿಯಲ್ಲಿ ಪ್ರಮುಖ ಬದಲಾವಣೆಯಾಯಿತು. ಬಂಗಾಲ, ಬಿಹಾರ ಮತ್ತು ಒರಿಸ್ಸ ಪ್ರದೇಶಗಳಲ್ಲಿ ಖಾಯಂ ತೆರ ಪದ್ಧತಿ ಜಾರಿಗೆ ಬಂತು. ಜಮೀನ್ದಾರರು ಸರ್ಕಾರಕ್ಕೆ ಒಪ್ಪಿಸಬೇಕಾದ ಕಂದಾಯವನ್ನು ಒಂದು ಬಾರಿ ನಿಗದಿ ಮಾಡಿದ ಮೇಲೆ ಎಂದೆಂದಿಗೂ ಅದನ್ನು ಬದಲಾಯಿಸದಿರುವುದು ಈ ಪದ್ಧತಿಯ ಉದ್ದೇಶ. ಮುಂದೆ ಭೂ ಅಭಿವೃದ್ಧಿಯಿಂದ ಲಭಿಸಿದ ಆದಾಯ ಮತ್ತು ಮೌಲ್ಯಗಳ ಹೆಚ್ಚಳದಲ್ಲಿ ಅವರು ಸರ್ಕಾರಕ್ಕೆ ಏನನ್ನೂ ಕೊಡಬೇಕಾಗುತ್ತಿರಲಿಲ್ಲ. ಅವರು ರೈತರಿಂದ ಪಡೆಯುವ ಗುತ್ತಿಗೆಯ ಹನ್ನೊಂದನೆಯ ಹತ್ತು ಭಾಗವನ್ನು ಕಂದಾಯವಾಗಿ ಸರ್ಕಾರಕ್ಕೆ ಒಪ್ಪಿಸಬೇಕಾಗಿದ್ದಿತು. ಈ ದರದ ಕಂದಾಯದ ಹೊರೆ ಅತಿಯೇ ಎನ್ನಬೇಕು. ನಿಗದಿಯಾದ ಅವಧಿಯಲ್ಲಿ ಪಾವತಿ ಮಾಡದಿದ್ದರೆ ಬಾಕಿಗಾಗಿ ಜಮೀನನ್ನು ಸರ್ಕಾರ ಮಾರಾಟ ಮಾಡಬಹುದಾಗಿತ್ತು. ಅತಿಯಾದ ಹೊರೆಯನ್ನು ತಾಳಲಾರದೆ ಅನೇಕರು ಭೂಮಿಯನ್ನು ಕಳೆದುಕೊಂಡರು. ಖಾಯಂ ತೆರ ಪದ್ಧತಿಯನ್ನು ಕ್ರಮೇಣ ಬನಾರಸ್ (ವಾರಾಣಸಿ), ಚೆನ್ನೈ, ಅಸ್ಸಾಂ ಮುಂತಾದ ಪ್ರದೇಶಗಳಿಗೂ ವಿಸ್ತರಿಸಲಾಯಿತು. ಹಲವಾರು ವರ್ಷಗಳ ಅನಂತರ ಕಂಪನಿಯ ಆಡಳಿತ ಸುಭದ್ರಗೊಂಡ ಮೇಲೆ ಖಾಯಂ ಆಗಿ ಕಂದಾಯವನ್ನು ನಿರ್ಧರಿಸುವ ಬದಲಾಗಿ ಕಾಲಕಾಲಕ್ಕೆ ಬದಲಾವಣೆ ಮಾಡುವುದು ಅನುಕೂಲವೆಂದು ಮನಗಾಣಲಾಯಿತು ಮತ್ತು ಮಹಲ್ವಾರಿ ಮತ್ತು ರೈತವಾರಿ ಪದ್ಧತಿಗಳು ಜಾರಿಗೆ ಬಂದುವು. ಒಂದು ಇಡೀ ಹಳ್ಳಿ ಅಥವಾ ಮಹಲ್ ಎಷ್ಟು ಕಂದಾಯ ಕೊಡಬೇಕೆಂದು ನಿರ್ಧರಿಸಲಾಗುತ್ತಿತ್ತು. ಹಳ್ಳಿಯವರೆಲ್ಲರೂ ಒಟ್ಟಾಗಿ ಕಂದಾಯ ಕೊಡಲು ಬದ್ಧರು. ಇದೇ ಮಹಲ್ವಾರಿ ಪದ್ಧತಿ. ರೈತವಾರಿ ಪದ್ಧತಿಯಲ್ಲಿ ಪ್ರತಿ ರೈತನೂ ಎಷ್ಟು ಕಂದಾಯ ಕೊಡಬೇಕೆಂಬುದನ್ನು ಪ್ರತ್ಯೇಕವಾಗಿ ನಿರ್ಧರಿಸಲಾಗುತ್ತಿತ್ತು. ಈ ಎರಡು ಪದ್ಧತಿಗಳಲ್ಲೂ ನಿರ್ದಿಷ್ಟ ಅವಧಿಗೆ ಅನ್ವಯಿಸುವಂತೆ ಕಂದಾಯವನ್ನು ನಿರ್ಧರಿಸಿ, ಅವಧಿಯ ಅನಂತರ ಅದನ್ನು ಬದಲಾಯಿಸಲಾಗುತ್ತಿತ್ತು. ಸ್ವಾತಂತ್ರ್ಯಾನಂತರ ವ್ಯಾಪಕವಾದ ಭೂ ಸುಧಾರಣೆಯ ಕ್ರಮಗಳನ್ನು ಕೈಗೊಂಡ ಮೇಲೆ ರೈತರಿಗೂ ಸರ್ಕಾರಕ್ಕೂ ನಡುವೆ ಇದ್ದ ಮಧ್ಯವರ್ತಿಗಳೆಲ್ಲ ಹೋಗಿ ರೈತರೇ ನೇರವಾಗಿ ಸರ್ಕಾರಕ್ಕೆ ಕಂದಾಯ ಕೊಡುವ ಪದ್ಧತಿ ಜಾರಿಗೆ ಬಂದಿದೆ.
|