ಹುಣಸೂರು ಕೃಷ್ಣಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧೪ ನೇ ಸಾಲು:
| relatives = [[ದ್ವಾರಕೀಶ್]] (ಸೋದರಳಿಯ)
}}
'''ಹುಣಸೂರು ಕೃಷ್ಣಮೂರ್ತಿ''' ಭಾರತೀಯ ನಾಟಕಕಾರ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ನಟ, ಚಿತ್ರಕಥೆಗಾರ ಮತ್ತು ಗೀತರಚನೆಕಾರರಾಗಿದ್ದರು.<ref>{{cite news |title=Hunsur Krishnamurthy : Kannada Writer{{!}} Director Age, Movies, Biography |url=https://chiloka.com/celebrity/hunsur-krishnamurthy |accessdate=11 January 2020 |work=chiloka.com}}</ref> ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಗುಬ್ಬಿ ವೀರಣ್ಣ, ಮೊಹಮ್ಮದ್ ಪೀರ್ ಮತ್ತು ಬಿ.ಆರ್.ಪಂಥುಲುರವರೊಂದಿಗೆ ಕೆಲಸ ಮಾಡಿದ್ದಾರೆ. ಚಲನಚಿತ್ರ ನಿರ್ದೇಶಕರಾಗಿ, ಅವರು ಹೆಚ್ಚಾಗಿ ಪೌರಾಣಿಕ ಪ್ರಕಾರಗಳಾದ ಸತ್ಯ ಹರಿಶ್ಚಂದ್ರ (1965), ಭಕ್ತ ಕುಂಬರ (1974) ಮತ್ತು ಬಾಬ್ರುವಹನ (1977) ಚಲನಚಿತ್ರಗಳನ್ನು ಮಾಡಿದರು. ಈ ಎಲ್ಲಾ ಚಿತ್ಗಳಲ್ಲು ರಾಜ್ಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಲನಚಿತ್ರಗಳು ಪ್ರಮುಖ ವಿಮರ್ಶಾತ್ಮಕ ಮತ್ತು ವಾಣಿಜ್ಯ ಯಶಸ್ಸನ್ನು ಕಂಡವು ಮತ್ತು ಕನ್ನಡ ಚಿತ್ರರಂಗದಲ್ಲಿ ಮತ್ತು ರಾಜ್ಕುಮಾರ್ ಅವರ ವೃತ್ತಿಜೀವನದಲ್ಲಿ ಮೈಲಿಗಲ್ಲಾಗಿದ್ದವು.<ref>{{cite news |title=ಹುಣಸೂರು ಕೃಷ್ಣಮೂರ್ತಿ |url=http://kanaja.in/?tribe_events=%E0%B2%B9%E0%B3%81%E0%B2%A3%E0%B2%B8%E0%B3%82%E0%B2%B0%E0%B3%81-%E0%B2%95%E0%B3%83%E0%B2%B7%E0%B3%8D%E0%B2%A3%E0%B2%AE%E0%B3%82%E0%B2%B0%E0%B3%8D%E0%B2%A4%E0%B2%BF |accessdate=11 January 2020}}</ref>
==ಆರಂಭಿಕ ಜೀವನ==
'''ತಂದೆ ಎಂ.ರಾಜಾರಾವ್''' ಲೋಕೋಪಯೋಗಿ ಇಲಾಖೆ ಯಲ್ಲಿ ಸೇವೆ ಸಲ್ಲಿಸುತ್ತಿದರು.
==ವೃತ್ತಿ ಜೀವನ==
ಮುಂದೆ ಮೈಸೂರಿಗೆ ಹಿಂತಿರುಗಿ ಬಸವಯ್ಯ ಶಾಲೆಯಲ್ಲಿ ಶಿಕ್ಷಣ ಮುಂದುವರೆಸಿದರೂ ಅವರಿಗೆ ಚಿತ್ರರಂಗದ ಆಕರ್ಷಣೆ ತಪ್ಪಿಸಿಕೊಳ್ಳಲಾಗಲಿಲ್ಲ. ಹದಿನಾಲ್ಕನೇ ವರ್ಷಕ್ಕೆ ಮತ್ತೆ ಮುಂಬೈಗೆ ತೆರಳಿ ಅಲ್ಲಿನ "ಮುಂಬಯಿ ಟಾಕೀಸ್ " ಸೇರಿ ಚಿತ್ರ ರಂಗದ ಎಲ್ಲಾ ಅನುಭವ ಪಡೆದರು. ಮತ್ತೆ ಕನ್ನಡ ನಾಡಿಗೆ ಹಿಂತಿರುಗಿ "ಚಂದ್ರಕಲಾ ನಾಟಕ ಮಂಡಳಿ" ಸೇರಿದರು. ಪೀರ್ ಸಾಹೇಬರ ಆಕಸ್ಮಿಕ ನಿದನದಿಂದ "ಗುಬ್ಬಿ" ಕಂಪನಿಗೆ ಬಂದ ಹುಣಸೂರರು ಹಲವಾರು ನಾಟಕಗಳನ್ನು ರಚಿಸಿದರು. ಅದರಲ್ಲಿ "ರಾಜಾ ಗೋಪಿಚಂದ್" ಅಪಾರ ಜನಮನ್ನಣೆ ಪಡೆಯಿತು."ಸಂಸಾರ ನೌಕೆ"ಚಿತ್ರದ ಸಹ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಬಂದ ಹುಣಸೂರರು ೧೯೪೫ರಲ್ಲಿ ಗುಬ್ಬಿ ವೀರಣ್ಣನವರ "ಹೇಮರೆಡ್ಡಿ ಮಲ್ಲಮ್ಮ "ಚಿತ್ರಕ್ಕೆ ಸಂಭಾಷಣೆ ಬರೆಯುವ ಮೂಲಕ ಚಿತ್ರ ಸಾಹಿತಿಯಾದರು. ಇಲ್ಲಿಂದ ಮುಂದೆ "ಹುಣಸೂರರ ಯುಗ" ವೇ ಆರಂಭವಾಯಿತು ೫೦ರ ದಶಕದ ಬಹುತೇಕ ಚಿತ್ರಗಳು ಇವರ ಲೇಖನಿಯಿಂದಲೀ ಮೂಡಿಬಂದವು, "ಜಗನ್ಮೋಹಿನಿ"ಯಂತೂ ದಿಗ್ವಿಜಯ ಸಾಧಿಸಿತು,ನಾಗ ಕನ್ನಿಕಾ, ಶ್ರೀ ಶ್ರೀನಿವಾಸ ಕಲ್ಯಾಣ, ಚಂಚಲ ಕುಮಾರಿ, ದಲ್ಲಾಳಿ, ಗಂದರ್ವ ಕನ್ಯೆ, ಕನ್ಯಾದಾನ, ರಾಜ ವಿಕ್ರಮ, ನಳದಮಯಂತಿ, ಮಹಾನಂದ ಮುಂತಾದ ಚಿತಗಳು ಇವರ ಸಾಹಿತ್ಯದಿಂದ ಸಂಪನ್ನಗೊಂಡವು. ೧೯೫೮ರಲ್ಲಿ "ನಂದಿ ಪಿಕ್ಚರ್ಸ್" ಲಾಂಛನದಲ್ಲಿ ಕೆ, ಎಂನಾಗಣ್ಣನವರು ನಿರ್ಮಿಸಿದ "ಶ್ರೀ ಕೃಷ್ಣ ಗಾರುಡಿ"ಚಿತ್ರದ ಮೂಲಕ ಹುಣಸೂರರು ನಿರ್ದೇಶಕರಾದರು. ಬೆಳ್ಳಾವೆ ನರಹರಿ ಶಾಸ್ತ್ರಿಗಳ ನಾಟಕವನ್ನು ಅದಾರಿಸಿದ ಚಿತ್ರ ಕೇವಲ ಪೌರಾಣಿಕ ಕತೆಯಷ್ಟೇ ಆಗದೆ ಸ್ವಾತಂತ್ರೋತ್ತರ ಭಾರತದ ಆಶಯದ ಅಭಿವ್ಯಕ್ತಿಯನ್ನಾಗಿಯೇ ಮಾಡುವಲ್ಲಿ ಹುಣಸೂರರು ಹೊಸ ಹಾದಿ ಹಿಡಿದರು."ಆಶಾ ಸುಂದರಿ" ಹುಣಸೂರರು ನಿರ್ದೇಶಿಸಿದ ಎರಡನೆಯ ಚಿತ್ರ. ಸಲಿಂಗ ಕಾಮದಂತಹ ಸೂಕ್ಷ್ಮವಸ್ತುವನ್ನು ಭಾರತೀಯ ಚಿತ್ರರಂಗಕ್ಕೆ ಆ ಕಾಲದಲ್ಲಿಯೇ ತಂದವರು ಹುಣಸೂರರು. ಹುಣಸೂರರ ಪ್ರತಿಭೆಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮೊದಲ ಚಿತ್ರ "ವೀರ ಸಂಕಲ್ಪ" ಅದುವರೆಗಿನ ಕನ್ನಡ ಚಿತ್ರರಂಗದ ಸ್ವರೂಪಕ್ಕಿಂತ ತೀರಾ ವಿಭಿನ್ನವಾಗಿ ಮೂಡಿಬಂದ ಈ ಚಿತ್ರ ಅವರೇ ಕರೆದುಕೊಂಡಂತೆ "ವಿಶ್ವಾಮಿತ್ರ ಸೃಷ್ಟಿ" ಯಾಗಿತ್ತು. ವಿಜಯನಗರದ ಪತನ ಸಂದರ್ಭದಲ್ಲಿ ಬಂದ "ಎಚ್ಹಮನಾಯಕ " ಎಂಬ ಸ್ವಾಮಿ ಭಕ್ತನ ಕತೆ ಆಧರಿಸಿದ ಚಿತ್ರದ ನಾಯಕನ ಪಾತ್ರವನ್ನು ಸ್ವತಃ ಹುಣಸೂರರೆ ನಿರ್ವಹಿಸಿದ್ದರು.ಉಜ್ವಲ ಸಂಭಾಷಣೆ,ಸಶಕ್ತ ಗೀತೆಗಳಿಂದ ಶ್ರೀಮಂತವಾದ ಹಲವಾರು ಪ್ರತಿಭಾವಂತ ಕಲಾವಿದರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿತು.
|