ಸದಸ್ಯ:Skanda K N/ನನ್ನ ಪ್ರಯೋಗಪುಟ2: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Skanda K N (ಚರ್ಚೆ | ಕಾಣಿಕೆಗಳು) ಹೊಸ ಪುಟ: '''ಆಗುಂಬೆ ಘಾಟಿ''' ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಪ್ರಸಿದ್ಧವಾಗಿರುವ ಆಗುಂ... |
Skanda K N (ಚರ್ಚೆ | ಕಾಣಿಕೆಗಳು) ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧ ನೇ ಸಾಲು:
ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಪ್ರಸಿದ್ಧವಾಗಿರುವ ಆಗುಂಬೆ ಹಲವು ಅದ್ಭುತಗಳ ಆಗರ. ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯನ್ನು ಬೆಸೆಯುವ ಆಗುಂಬೆ ಘಾಟಿಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಅತ್ಯಂತ ಕಡಿದಾದ ಹಾಗೂ ಕಿರುದಾದ ತಿರುವುಗಳನ್ನು ಒಳಗೊಂಡ ಆಗುಂಬೆ ಘಾಟಿಯಲ್ಲಿ ಒಟ್ಟು ಹದಿನಾಲ್ಕು ತಿರುವುಗಳಿದ್ದು, ಮೇಲ್ಭಾಗದ ಏಳು ಸುತ್ತುಗಳು ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೂ, ಕೆಳಗಿನ ಏಳು ಸುತ್ತುಗಳು ಉಡುಪಿ ಜಿಲ್ಲಾ ವ್ಯಾಪ್ತಿಗೂ ಸೇರುತ್ತವೆ. ಆಗುಂಬೆ ಘಾಟಿಯು ಅಪರೂಪದ ವನ್ಯಸಂಪತ್ತಿನ ತಾಣವೂ ಆಗಿದೆ. ಇಲ್ಲಿ ಹಲವು ಬಗೆಯ ಅಪರೂಪದ ಹಾಗೂ ಔಷಧೀಯ ಗುಣವುಳ್ಳ ಸಸ್ಯಗಳನ್ನು ಕಾಣಬಹುದು. ಸಿಂಗಳೀಕ, ಸಿಂಹ ಬಾಲದ ಕೋತಿ, ಕೆಂಜಳಿಲು ಸೇರಿದಂತೆ ಅಳಿವಿನಂಚಿನಲ್ಲಿರುವ ಕೆಲ ಜೀವ ಪ್ರಬೇಧಗಳೂ ಇಲ್ಲಿ ನೆಲೆಸಿವೆ. ಆಗುಂಬೆ ಘಾಟಿಯಲ್ಲಿ ನಿಂತರೆ ಹಸಿರು ಹೊದ್ದ ಪರ್ವತ ಶ್ರೇಣಿಯಿಂದ ಹಿಡಿದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳ ಪಕ್ಷಿನೋಟವನ್ನು ಕಾಣಬಹುದು.
ಆಗುಂಬೆ ಘಾಟಿಯ ಮೂರನೇ ಸುತ್ತಿನಲ್ಲಿ (ಕೆಳಗಿನಿಂದ) ಆನೆಕಲ್ಲು ಎಂದು ಗುರುತಿಸಲಾದ ರಸ್ತೆಗೆ ಚಾಚಿಕೊಂಡಿರುವ ಬೃಹದಾಕಾರದ ಬಂಡೆಕಲ್ಲು ಸಿಗುತ್ತದೆ. ದೂರದಿಂದ ನೋಡಲು ಆನೆಯ ಮುಖದ ಆಕಾರವಿರುವ ಕಾರಣ ಆ ಬಂಡೆಗೆ ಆನೆಕಲ್ಲು ಎಂಬ ಹೆಸರು ಬಂತೆಂಬ ಪ್ರತೀತಿ ಇದೆ. ಹಾಗೂ ಆನೆಕಲ್ಲು ಭೂಮಿಯ ಒಳಗೂ
==ಕೊಳ==
ಘಾಟಿ ಆರಂಭವಾಗುವ ಮೊದಲು ಮೇಲ್ಭಾಗದಲ್ಲಿ ಈಜು ಕೊಳವಿದ್ದು ಪ್ರವಾಸಿಗರಿಗೆ ಬೋಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆಗುಂಬೆಯ ಸೂರ್ಯಸ್ತಮಾನ, ಅಧಿಕ ಮಳೆ, ದಟ್ಟ ಮಂಜು, ಚಳಿ ಇವಿಷ್ಟನ್ನೇ ತಿಳಿದ ಪ್ರವಾಸಿಗರಿಗೆ ಆಗುಂಬೆಗೆ ಬಂದರೆ ಇನ್ನಷ್ಟು ಅಚ್ಚರಿಗಳು ತೆರೆದುಕೊಳ್ಳುತ್ತವೆ. ಆಗುಂಬೆಯಲ್ಲಿ ಕಾಳಿಂಗ ಸರ್ಪಗಳ ಅಧ್ಯಯನ ಕೇಂದ್ರವೂ ಇದ್ದು, ದೇಶ, ವಿದೇಶಗಳಿಂದ ಆಗಮಿಸುವ ಉರಗಪ್ರಿಯರು ಇಲ್ಲಿ ಕಾಳಿಂಗ ಸರ್ಪಗಳ ಜೀವನಶೈಲಿ ಸೇರಿದಂತೆ ಹಲವು ವಿಶೇಷ ಮಾಹಿತಿಗಳನ್ನು ಪಡೆಯಬಹುದು. ಆಗುಂಬೆ ಘಾಟಿಯ ಸುತ್ತಮುತ್ತ ಇರುವ ಜಲಪಾತಗಳು ಸಹ ಮಲೆನಾಡಿನ ಪ್ರಕೃತಿ ಸೌಂದರ್ಯಕ್ಕೆ ಹಿಡಿದ ಕೈಗನ್ನಡಿ. ಒನಕೆ ಅಬ್ಬಿ, ಬರ್ಕಣ, ಜೋಗಿಗುಂಡಿ ಎಂಬ ಜಲಪಾತಗಳು ಆಗುಂಬೆಯ ಸುತ್ತಮುತ್ತಲಿದ್ದು ಪ್ರಸ್ತುತ ಭದ್ರತೆ ದೃಷ್ಟಿಯಿಂದ ಈ ಜಾಗಗಳಿಗೆ ಅನುಮತಿ ನೀಡಲಾಗುತ್ತಿಲ್ಲ.
==ಪರಿಸರವಾದ==
ಆಗುಂಬೆ ಘಾಟಿಯ ರಸ್ತೆ ಅಗಲೀಕರಣ ಆಗಬೇಕೆಂಬುದು ದಶಕಗಳ ಆಗ್ರಹ. ಆದರೆ, ಇದಕ್ಕೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು ರಸ್ತೆ ಅಗಲೀಕರಣದಿಂದ ಅಪರೂಪದ ಸಸ್ಯ ಪ್ರಬೇಧಗಳು ಹಾಗೂ ಪ್ರಾಣಿಗಳ ಆವಾಸಸ್ಥಾನಕ್ಕೆ
|