ಕೊಪ್ಪಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೨೯ ನೇ ಸಾಲು:
ಕೊಪ್ಪಳದ ಬಳಿಯ ಮಲಿಮಲ್ಲಪ್ಪ ಬೆಟ್ಟದ ತುದಿಯ ಮೇಲೆ ಅನೇಕ ಹಾಸುಗಲ್ಲಿನ ಕಟ್ಟಡಗಳು ಕಂಡುಬಂದಿವೆ. ಅವನ್ನು ಸ್ಥಳೀಯವಾಗಿ 'ಮೊರಿಯರ ಅಂಗಡಿ' ಎಂದು ಕರೆಯುತ್ತಾರೆ. ಇದು [[ಮೌರ್ಯ ಸಾಮ್ರಾಜ್ಯ|ಮೌರ್ಯ]]ರ ಕಾಲದ ವಸತಿಯ ಬಗ್ಗೆ ಮತ್ತು ಆಗ ಉತ್ತರ ಭಾರತದ ಜನ ಇಲ್ಲಿ ಮಾರುಕಟ್ಟೆಗಳನ್ನು ಸ್ಥಾಪಿಸಿ ವಾಣಿಜ್ಯ ವ್ಯವಹಾರಗಳನ್ನು ನಡೆಸುತ್ತಿದ್ದ ಬಗ್ಗೆ ಸುಳಿವು ನೀಡುತ್ತದೆ. ಪೌರಾಣಿಕ ಐತಿಹ್ಯಗಳು ಈ ಪ್ರದೇಶದಲ್ಲೂ ಇತರೆಡೆಗಳಂತೆಯೆ ಅಸ್ತಿತ್ವದಲ್ಲಿವೆ. ಪಾಲ್ಕಿಗುಂಡು ಬೆಟ್ಟ ಮತ್ತು ಮಲಿ ಮಲ್ಲಪ್ಪನ ಬೆಟ್ಟದ ನಡುವಿನ ಬಯಲನ್ನು ಪಾಂಡವರ ವಠಾರ ಎಂದು ಕರೆಯಲಾಗಿದೆ. ಇಲ್ಲೂ ಹಾಸುಗಲ್ಲು ಕಟ್ಟಡಗಳಿವೆ. ಗಂಗಾವತಿ ತಾಲ್ಲೂಕಿನ [[ಆನೆಗೊಂದಿ]] ರಾಮಾಯಣ ಕಾಲದ [[ಕಿಷ್ಕಿಂಧೆ|ಕಿಷ್ಕಿಂದೆ]]ಯ ಭಾಗವಾಗಿತ್ತೆಂದು ನಂಬಿಕೆಯಿದೆ. ಗವಿಮಠ ಬೆಟ್ಟ ಮತ್ತು ಪಾಲ್ಕಿಗುಂಡು ಬೆಟ್ಟದಲ್ಲಿ ಒಂದೊಂದು ಅಶೋಕನ ಶಾಸನಗಳು ದೊರೆತಿವೆ. [[ಚಾಣಕ್ಯ|ಕೌಟಿಲ್ಯ]] ತನ್ನ ಅರ್ಥಶಾಸ್ತ್ರದಲ್ಲಿ ಮೌರ್ಯ ಸಾಮ್ರಾಜ್ಯದ ಕಾಲದಲ್ಲಿ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ನಡೆಯುತ್ತಿದ್ದ ವಾಣಿಜ್ಯ ಹಾಗೂ ಆಗಿನ ವ್ಯಾಪಾರ ಸರಕುಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಮೌರ್ಯ ಸಾಮ್ರಾಜ್ಯದ ಹೊರಗಿನ ದಕ್ಷಿಣ ರಾಜ್ಯಗಳನ್ನು [[ಚೋಳ ವಂಶ|ಚೋಳ]], [[ಪಾಂಡ್ಯ ರಾಜವಂಶ|ಪಾಂಡ್ಯ]], ಸಾತಿಯಪುತ, ಕೇರಲಪುತ ಮತ್ತು ತಂಬಪನ್ನಿ (ಶ್ರೀಲಂಕಾ) ಎಂದು [[ಸಾಮ್ರಾಟ್ ಅಶೋಕ|ಅಶೋಕ]]ನ ಶಾಸನಗಳಲ್ಲಿ ಹೆಸರಿಸಲಾಗಿದೆ. ಈ ದೃಷ್ಟಿಯಿಂದ ನೋಡಿದಾಗ ಪೂರ್ವೋಕ್ತ ದೇಶಗಳು ದಖನ್ನಿನ ಹೊರಗಿದ್ದು ಆಂದಿನ ದಖನ್ನಿನ ಪ್ರದೇಶ ಮೌರ್ಯ ಸಾಮ್ರಾಜ್ಯದ ಒಂದು ಪ್ರಾಂತ್ಯವಾಗಿದ್ದದ್ದು ತಿಳಿದುಬರುತ್ತದೆ. ಮೌರ್ಯರ ಶಾಸನಗಳಲ್ಲಿ ಬರುವ ಸುವರ್ಣಗಿರಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಎಂದು ಕೆಲವು ವಿದ್ವಾಂಸರು ಗುರುತಿಸಿದ್ದರೆ, ಇನ್ನು ಕೆಲವರು ಇದನ್ನು ಮಸ್ಕಿ ಇರಬಹುದೆಂದು ಅಬಿsಪ್ರಾಯಪಟ್ಚಿದ್ದಾರೆ. ಅದೇನೇ ಇದ್ದರೂ ಈ ಪ್ರದೇಶ ಬಹು ಪುರಾತನ ನಾಗರಿಕತೆ ಮತ್ತು ಸಂಸ್ಕøತಿಗಳ ನೆಲೆಬೀಡೆಂಬುದು ಸ್ಪಷ್ಟವಾಗಿದೆ.
 
ಮೌರ್ಯ ಸಾಮ್ರಾಜ್ಯದ ಪತನಾನಂತರ ದಖನ್‍ನಲ್ಲಿ ಸ್ಥಾಪಿತವಾದ ಪ್ರಥಮ ಸ್ವತಂತ್ರ ಸಾಮ್ರಾಜ್ಯವೆಂದರೆ [[ಶಾತವಾಹನರು|ಸಾತವಾಹನರದು]]. ಇಂದಿನ [[ಮಹಾರಾಷ್ಟ್ರ]] ರಾಜ್ಯದ ಪ್ರತಿಷಾವಿನ ಅಥವಾ ಪೈಠಣ್ ಅನ್ನು ರಾಜಧಾನಿಯಾಗಿ ಹೊಂದಿದ್ದ ಈ ಸಾಮ್ರಾಜ್ಯದ ಭಾಗವಾಗಿ ಕೊಪ್ಪಳ ಉನ್ನತ ಸ್ಥಿತಿಗೆ ಬಂದಿತು. ಕ್ರಿ.ಪೂ.3ನೆಯ ಶತಮಾನದಿಂದ ಕ್ರಿ.ಶ 2ನೆಯ ಶತಮಾನದವರೆಗೂ ಆಳಿದ ಈ ವಂಶದ ಸಾಮ್ರಾಟರು ಉತ್ತರ ಭಾರತದವರೆಗೂ ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿದರು. ಕೊನೆಗೆ ದಕ್ಷಿಣ ಪಥಕ್ಕೆ ಸೀಮಿತವಾದ ಇವರು ತುಂಗಭದ್ರಾ ದಕ್ಷಿಣಕ್ಕೂ ತಮ್ಮ ಆಳಿಕೆಯನ್ನು ಚಾಚಿದ್ದರು. ಸಾತವಾಹನರಶಾತವಾಹನರ ಕಾಲದಿಂದ ಕೊಪ್ಪಳ ಪ್ರಸಿದ್ಧಿ ಪಡೆದಿತ್ತು. ಇಲ್ಲಿನ ಸುತ್ತಮುತ್ತಲ ಬೆಟ್ಟಗುಡ್ಡಗಳಿಗೆ ಕೊಪಣ್ರಾದಿ ಮತ್ತು ಕುಪಣಾಚಲ ಎಂಬ ಹೆಸರುಗಳಿವೆ. ಕೊಪ್ಪಳಕ್ಕೆ ಕೊಪಣ ಅಥವಾ ಕೋಪಣ ನಗರವೆಂಬ ಹೆಸರಿದ್ದಿತು. ಈ ಜಿಲ್ಲೆಯ ಕವಲೂರು, ಆಳವಂಡಿ, ಮಾದಿನೂರು, ಕುಕ್ಕನೂರು, ಪುರ, ಆನೆಗೊಂದಿ, [[ಇಟಗಿ]] ಮತ್ತು ಮುಧುವೊಳಲು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿವೆ.
 
ಸಾತವಾಹನರ ಅನಂತರ ಕರ್ನಾಟಕದ ಉತ್ತರ ಭಾಗದಲ್ಲಿ ಮತ್ತು ಕರಾವಳಿಯಲ್ಲಿ [[ಕದಂಬ|ಕದಂಬರು]] ಪ್ರಬಲ ರಾಜ್ಯಸ್ಥಾಪಿಸಿ ಆಳಿದರು. ಆದರೆ ದಕ್ಷಿಣದಲ್ಲಿ ತಲಕಾಡಿನ [[ಗಂಗ (ರಾಜಮನೆತನ)|ಗಂಗರು]], ಪೂರ್ವದಲ್ಲಿ [[ವಾಕಾಟಕ ರಾಜವಂಶ|ವಾಕಾಟಕರು]] ಕದಂಬರ ಸಮಕಾಲೀನರಾಗಿ ಆಳಿದರು. ಕದಂಬರು ಈ ಜಿಲ್ಲೆಯ ಮೇಲೆ ಎಷ್ಟು ನಿಯಂತ್ರಣ ಹೊಂದಿದ್ದರು ಎಂದು ಹೇಳಲು ಸ್ಪಷ್ಟ ಆಧಾರಗಳು ಲಭ್ಯವಿಲ್ಲ. ಆದರೆ [[ಚಿತ್ರದುರ್ಗ]]ದ ಬಳಿಯ ಚಂದ್ರವಳ್ಳಿಯಲ್ಲಿ ಕದಂಬರ ಶಾಸನ ದೊರೆತಿರುವುದರಿಂದ ಈ ಜಿಲ್ಲೆಯ ಮೇಲೆ ಒಂದಲ್ಲ ಒಂದು ಕಾಲದಲ್ಲಿ ಭಾಗಶಃವಾಗಿ ಅಥವಾ ಪೂರ್ಣವಾಗಿ ಅವರು ನಿಯಂತ್ರಣ ಹೊಂದಿದ್ದರು ಎಂದು ಹೇಳಬಹುದು. ಇದೇ ವೇಳೆಗೆ ಮಧ್ಯ ಭಾರತದಲ್ಲಿ ಪ್ರಬಲ ರಾಜ್ಯ ಸ್ಥಾಪಿಸಿದ ವಾಕಾಟಕರು [[ಕುಂತಲ ದೇಶ|ಕುಂತಳ ದೇಶ]]ದವರೆಗೂ ತಮ್ಮ ರಾಜ್ಯ ವಿಸ್ತರಿಸಿದ್ದರೆಂದು ತಿಳಿದುಬರುತ್ತದೆ. ಅವರು ಈ ಪ್ರದೇಶವನ್ನು ಸಾಕಷ್ಟು ಕಾಲ ಆಳಿರಬೇಕು.
"https://kn.wikipedia.org/wiki/ಕೊಪ್ಪಳ" ಇಂದ ಪಡೆಯಲ್ಪಟ್ಟಿದೆ