ಕೇರಳದ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ನಾಯಾರರು ಅಂದರೆ ಈಗಿನ ನಾಯಕ ಜನಾಂಗದವರು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ವೈನಾಡ್ ನಾಯಕರು.. ನಾಯಕ‌ಜನಾಂಗಕ್ಕೆ ಸೇರಿದವಾರಾಗಿದ್ದರು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೨ ನೇ ಸಾಲು:
ಚೇರ-ಚೋಳ ಘರ್ಷಣೆಯಿಂದ ಕೇರಳದಲ್ಲಿ ೧೮ [[ನಾಯಕ]]ರು ತಲೆ ಎತ್ತಿದರು. ಇವರಿಗೆ ಒಬ್ಬ ಸಾಮಾನ್ಯ ಪ್ರಭು ಇಲ್ಲದಿದ್ದುದರಿಂದ ಪರಸ್ಪರ ಕಾದಾಡುತ್ತಿದ್ದರು. ಇವರಲ್ಲಿ ಎರ್ನಾಡ್ ನಾಯಕ ಒಬ್ಬ ಇವನನ್ನು ಸ್ವಾಮಿ ತಿರುಮುಲ್‍ಪಡ್ (ಗೌರವಯುತ ರಾಜ) ಎಂದು ಕರೆಯುತ್ತಿದ್ದರು. ಅನಂತರ ಇವನು ಸಾಮುರಿ ಎಂದು ಹೆಸರು ಪಡೆದ. ಪೋರ್ಚುಗೀಸರ ಬಾಯಲ್ಲಿ ಈ ಹೆಸರು ಜಾಮುರಿನ್ (ಜಾಮೊರಿನ್) ಎಂದಾಯಿತು. ಜಾಮೊರಿನ್ ಪೊಲನಾಡನ್ನು ಆಕ್ರಮಿಸಿಕೊಂಡು ಕೋಳಿಕ್ಕೋಡ್ ಪಟ್ಟಣವನ್ನು ನಿರ್ಮಿಸಿದ. ಇದನ್ನು ಐರೋಪ್ಯರು ಕ್ಯಾಲಿಕಟ್ ಎಂದರು. ಪಶ್ಚಿಮ ತೀರದಲ್ಲಿ ಇದು ಬಹು ಮುಖ್ಯ ರೇವಾಗಿದ್ದು ಇದರ ಹೆಸರು ಯೂರೋಪಿಗೂ ಹರಡಿತು. ೧೫ನೆಯ ಶತಮಾನದ ಕೊನೆಗೆ ಜಾಮೊರಿನ್ ಕೇರಳದ ಸುಮಾರು ಅರ್ಧ ಭಾಗವನ್ನು ಆಳುತ್ತಿದ್ದ. ಅವನ ಬಳಿ ೬೦೦೦೦ ಸಂಖ್ಯೆಯ ನಾಯರ್ ಸೈನ್ಯವಿತ್ತು. ೧೪೯೮ರ ಮೇ ೨೦ರಂದು ಕೋಳಿಕ್ಕೋಡಿಗೆ ಅನಿರೀಕ್ಷಿತವಾಗಿ ಬಂದ ನಾಲ್ಕು ಪೋರ್ಚುಗೀಸ್ ಹಡಗುಗಳು ಕೇರಳದ ಚರಿತ್ರೆಯ ಸ್ವರೂಪವನ್ನೇ ಬದಲಾಯಿಸಿದುವು. [ಕೇರಳ]] ಸುಮಾರು ಎರಡೂವರೆ ಶತಮಾನಗಳವರೆಗೆ ಐರೋಪ್ಯ ಸಾಮ್ರಾಜ್ಯಶಾಹಿಯೊಡನೆ ಹೋರಾಟ ನಡೆಸಿತು.<ref>{{cite web |last1=Coward |first1=Harold |title=Hindu-Christian Dialogue: Perspectives and Encounters |url=https://books.google.co.in/books?id=6eHgNyNimoAC&redir_esc=y |publisher=Motilal Banarsidass Publ. |accessdate=11 January 2020 |language=en |date=1993}}</ref>
 
==ವೈನಾಡ್ ನಾಯಕರುನಾಯಕ‌ಜನಾಂಗ==
 
ವೈನಾಡ್ ನಾಯಕರು ತಿರುವಿತಂ ಕೊಡೆಯಲ್ಲಿ ವಾಸಿಸುತ್ತಿದ್ದರು. ೧೬ನೆಯ ಶತಮಾನದಲ್ಲಿ ಬಂದ ಐರೋಪ್ಯರು ವೈನಾಡನ್ನು ಟ್ರಾವಂಕೂರ್ ಎಂದು ಕರೆದರು. ಮಾರ್ತಾಂಡವರ್ಮ ರಾಜನನ್ನು (೧೭೨೯-೧೭೫೮) ಆಧುನಿಕ ತಿರುವಾಂಕೂರಿನ ಸ್ಥಾಪಕನೆಂದು ತಿರುವಾಂಕೂರಿನ ಚರಿತ್ರೆಯಲ್ಲಿ ಕರೆಯಲಾಗಿದೆ. ಈತ ಡಚ್ಚರೊಡನೆ ಸ್ನೇಹ ಬೆಳೆಸಿ ಒಪ್ಪಂದ ಮಾಡಿಕೊಂಡ. ಈತ ತನ್ನ ಅಧಿಕಾರವನ್ನು ಪದ್ಮನಾಭ ದೇವರಿಗೆ ಎರೆದುಕೊಟ್ಟು ಆತನ ದಾಸನಾಗಿ ರಾಜ್ಯಭಾರ ಮಾಡಿದ; ಜನ ದಂಗೆ ಎದ್ದರೆ ಅದು ದೇವರ ವಿರುದ್ಧ ದಂಗೆಯಾಗುತ್ತಿತ್ತು. ೧೭೫೪ರಲ್ಲಿ ಕೊಚ್ಚಿಯ ರಾಜ ಇವನಿಗೆ ಅಧೀನನಾದ. ಈತ ರಾಜ್ಯದ ಆಡಳಿತವನ್ನು ಉತ್ತಮಪಡಿಸಿ ಶಕ್ತಿಯುತವಾದ ಕೇಂದ್ರ ಸರ್ಕಾರವನ್ನು ಸ್ಥಾಪಿಸಿದ್ದಲ್ಲದೆ ಇಂಗ್ಲಿಷರೊಡನೆ ಮೈತ್ರಿ ಗಳಿಸಿದ್ದ. ಇವನು ರಾಜಕಾರಣ ನಿಪುಣನೂ, ದೈವಭಕ್ತನೂ ಉತ್ತಮ ಸೈನಿಕನೂ ಕಲಾಪೋಷಕನೂ ಆಗಿದ್ದ. ಡಚ್ಚರು ಈತನ ಶತ್ರುಗಳೊಡನೆ ಮೈತ್ರಿ ಬೆಳೆಸಿದರು. ೧೭೪೮ರಲ್ಲಿ ಈತ ಡಚ್ಚರನ್ನು ಸೋಲಿಸಿದ. ೧೭೬೬ರಲ್ಲಿ ಹೈದರ್ ಆಲಿ ಕೋಳಿಕ್ಕೋಡನ್ನು ಆಕ್ರಮಿಸಿಕೊಂಡ. ತಿರುವಾಂಕೂರಿನ ಮೇಲೆ ಹೈದರನ ದಾಳಿ ಆರಂಭವಾಗುವುದಕ್ಕೆ ಮುಂಚೆ ೧೭೮೯ರಲ್ಲಿ ಡಚ್ಚರು ಕೊಡಂಗಲ್ಲೂರನ್ನು ತಿರುವಾಂಕೂರಿನ ರಾಜನಿಗೆ ಮಾರಿದರು. ೧೭೯೫ರಲ್ಲಿ ಇಂಗ್ಲಿಷರು ಕೊಚ್ಚಿ ಮತ್ತು ಥಂಕಚೇರಿ ಕೋಟೆಗಳನ್ನು ವಶಪಡಿಸಿಕೊಂಡ ಫಲವಾಗಿ ಡಚ್ಚರು ಕೇರಳವನ್ನು ಬಿಡಬೇಕಾಯಿತು. ಮಾರ್ತಾಂಡವರ್ಮನ ಆಳ್ವಿಕೆಯಲ್ಲಿ ತಂಪುರನ್ನರ ಪ್ರಾಬಲ್ಯ ಕೊನೆಗೊಂಡಿತು. ಹೈದರ್ ಮತ್ತು ಟಿಪ್ಪೂಗಳ ದಾಳಿಯಿಂದ ಮಲಬಾರಿನಲ್ಲಿ ತಂಪುರನ್ನರ ಅವನತಿ ಪ್ರಾರಂಭವಾಯಿತು. ಅಂತಿಮವಾಗಿ ಇಂಗ್ಲಿಷರು ಕೊಚ್ಚಿ ಮತ್ತು ತಿರುವಾಂಕೂರಿನಲ್ಲಿ ತಮ್ಮ ಅಧಿಕಾರವನ್ನು ಸ್ಥಾಪಿಸಿದರು.
 
"https://kn.wikipedia.org/wiki/ಕೇರಳದ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ