ಸದಸ್ಯ:Lokesha Kunchadka/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೯೭ ನೇ ಸಾಲು:
==ಅಮರ ಸುಳ್ಯದ
ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಅನೇಕರಿಗೆ ಮಾಹಿತಿ ಇರಬಹುದು.
1857ರಲ್ಲಿ ಝಾನ್ಸಿರಾಣಿ ಲಕ್ಷ್ಮೀಬಾಯಿಯ ನೇತೃತ್ವದಲ್ಲಿ ನಡೆಯಿತೆಂಬುದು .
ಕೊಡಗಿನ ಕೊನೆಯ ಅರಸ ಚಿಕ್ಕವೀರ ರಾಜೇಂದ್ರನು ಆಡಳಿತ ನಡೆಸುತ್ತಿದ್ದಾಗ ಸಮಯವನ್ನು ಹೊಂಚುಹಾಕುತ್ತಿದ್ದ ಬ್ರಿಟಿಷರು ಚಿಕ್ಕವೀರ ರಾಜೇಂದ್ರವನ್ನು ಪದಚ್ಯುತಗೊಳಿಸುತ್ತಾರೆ. ಕೊಡಗಿನ ಅರಸರ ವಂಶಕ್ಕೆ ಸೇರಿದವರು ಯಾರು ಇಲ್ಲದ್ದರಿಂದ ಕೊಡಗು ರಾಜ್ಯವನ್ನು ಬ್ರಿಟಿಷರು ವಶಪಡಿಸಿಕೊಳ್ಳುತ್ತಾರೆ. ಆ ಸಮಯದಲ್ಲಿ ಬೆಳ್ಳಾರೆ, ಸುಳ್ಯ ಸೇರಿದಂತೆ ಪಂಜ ಸೀಮೆಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿಸಿದರು. ಕೊಡಗಿನ ಭಾಗವಾಗಿದ್ದ ಸುಳ್ಯವನ್ನು ಕೊಡಗಿನಿಂದ ಬೇರ್ಪಡಿಸಿದ್ದು ಸುಳ್ಳದ ಜನತೆಗೆ ಇಷ್ಟದ ವಿಚಾರವಾಗಿರಲಿಲ್ಲಿ.
ಅಪರಂಪರನನ್ನು ಬಂಧಿಸಿದಾಗ ಕಲ್ಯಾಣಸ್ವಾಮಿ ಎಂಬಾತನು ತಾನು ಅಪ್ಪಾಜಿಯ ಎರಡನೇ ಮಗ ನಂಜುಂಡಪ್ಪ ಎಂದು ಹೇಳಿಕೊಂಡು ಸುಳ್ಯದಲ್ಲಿ ಜನರು ದಂಗೆ ಏಳುವ ಲಕ್ಷಣ ಕಾಣಿಸಿಕೊಂಡಾಗ ಅವನು ಕೊಡಗಿನವರನ್ನು ಒಟ್ಟುಗೂಡಿಸಲು ಪ್ರಯತ್ನಿಸಿದನು.ಬ್ರಿಟಿಷರಿಗೆ ಇದು ತಿಳಿದು ಆತನನ್ನು 1837ರಲ್ಲಿ ಬಂಧಿಸಿದರು.
ಸುಳ್ಯದ ರೈತಾಪಿ ಜನರು ಈ ಸಂದರ್ಭವನ್ನು ಉಪಯೋಗಿಸಿಕೊಂಡು ಪುಟ್ಟ ಬಸಪ್ಪನೆಂಬ ಜಂಗಮನನ್ನು ಕಲ್ಯಾಣಸ್ವಾಮಿ ಎಂದು ಹೇಳಿ ನಂಬಿಸಿ ಕೆದಂಬಾಡಿ ರಾಮಗೌಡರ ಮನೆಗೆ ಕರೆತಂದು ಆತನನ್ನು ಕಲ್ಯಾಣಸ್ವಾಮಿ ಎಂದು ಬಿಂಬಿಸಿದರು. ರಾಮಗೌಡರಿಗೆ ಓರ್ವ ಬ್ರಿಟಿಷ್ ಅಮಲ್ದಾರನೊಡನೆ ದ್ವೇಷವಿದ್ದು ಆತನನ್ನು ರಾಮಗೌಡರು ಕೊಲ್ಲುತ್ತಾರೆ. ಇದನ್ನೇ ಮಹತ್ಕಾರ್ಯವೆಂದು ಭಾವಿಸಿದ ಸುಳ್ಯದ ಜನರು ದಂಗೆಯೇಳುವುದಕ್ಕೆ ಬೆಂಬಲಿಸಿದರು 1837 ಮಾರ್ಚ್ 30ರಂದು ಹೋರಾಟ ಆರಂಭವಾಯಿತು. ರಾಮಗೌಡರಿಗೆ ಕೂಜಗೋಡು ಮಲ್ಲಪ್ಪಗೌಡರ ಬೆಂಬಲ ದೊರೆಯಿತು. ಇಡೀ ಗೌಡ ಸಮುದಾಯ ಹೋರಾಟಕ್ಕೆ ಬೆಂಬಲ ನೀಡಿತು.
1837ರ ಮಾರ್ಚ್ 30ರಂದು ರಾಮಗೌಡರು ಬೆಳ್ಳಾರೆಗೆ ಕಲ್ಯಾಣಸ್ವಾಮಿಯನ್ನು (ಪುಟ್ಟ ಬಸಪ್ಪ) ಕರೆ ತರುತ್ತಾರೆ.
1837ರ ಮಾರ್ಚ್ 30ರಂದು ರಾಮಗೌಡರು ಬೆಳ್ಳಾರೆಗೆ ಕಲ್ಯಾಣಸ್ವಾಮಿಯನ್ನು (ಪುಟ್ಟ ಬಸಪ್ಪ) ಕರೆ ತರುತ್ತಾರೆ. ಬೆಳ್ಳಾರೆಯ ಕೋಟೆಯಲ್ಲಿ ಕಲ್ಯಾಣ ಸ್ವಾಮಿಗೆ ಪಟ್ಟಕಟ್ಟುತ್ತಾರೆ. ಬೆಳ್ಳಾರೆಯ ಕೋಟೆಯಲ್ಲಿದ್ದ ಬ್ರಿಟಿಷರ ಖಜಾನೆಯನ್ನು ವಶಪಡಿಸಿಕೊಂಡರು. ಕೊಡಗಿನ ಬೇರೆ ಬೇರೆ ಭಾಗಗಳಿಗೆ ನಿರೂಪ ಕಳಿಸಿ ಬೆಂಬಲ ಕೇಳಿದರು. ಬೆಳ್ಳಾರೆಯ ಬೀರಣ್ಣ ಬಂಟರ ನೇತೃತ್ವದಲ್ಲಿ ಒಂದು ಗುಂಪು ಸುಬ್ರಹ್ಮಣ್ಯ ಕಡೆಗೆ ಹೋಯಿತು. ಶ್ರೀ. ಕೆ.ಆರ್. ವಿದ್ಯಾಧರ ಮಡಿಕೇರಿ ಅವರು ‘ಕಂಚುಡ್ಕ ರಾಮಗೌಡ ಹಾಗೂ ಕುಡಕಲ್ಲು ಪುಟ್ಟಗೌಡರ ನೇತೃತ್ವದಲ್ಲಿ ಸೈನ್ಯವನ್ನು ಕುಂಬಳೆ ಕಾಸರಗೋಡಿಗೆ ಕಳುಹಿಸಲಾಯಿತು. ಇನ್ನೊಂದು ತಂಡ ಬಂಟ್ವಾಳ ಕಾರ್ಕಳಕ್ಕೆ ಮತ್ತು ಮತ್ತೊಂದು ತಂಡ ಉಪ್ಪಿನಂಗಡಿ ಬಿಸಲೆಗೆ ಹೋಯಿತೆಂದು’ ಅಭಿಪ್ರಾಯ ಪಟ್ಟಿದ್ದಾರೆ. ಡಿ.ಎನ್. ಕೃಷ್ಣಯನವರ ಪ್ರಕಾರ ಪುತ್ತೂರು, ಪಾಣೆ ಮಂಗಳೂರು ಮತ್ತು ಮಂಗಳೂರಿಗೆ ರಾಮಗೌಡ ಹಾಗೂ ಕಲ್ಯಾಣಸ್ವಾಮಿಯ ನೇತೃತ್ವದಲ್ಲಿ ದಂಡು ಹೊರಟಿತು. ಪುತ್ತೂರನ್ನು ವಶಪಡಿಸಿಕೊಂಡು ಪಾಣೆಮಂಗಳೂರಿಗೆ ಬಂದಾಗ ನಂದಾವರದ ಲಕ್ಷ್ಮಪ್ಪ ಬಂಗರಸನು ಕೂಡಿಕೊಂಡನು. 1837 ಎಪ್ರಿಲ್ 5ರಂದು ಮಂಗಳೂರನ್ನು ವಶಪಡಿಸಿಕೊಂಡು ಬಾವುಟಗುಡ್ಡದಲ್ಲಿ ಧ್ವಜ ಹಾರಿಸಿದರು ಇಲ್ಲಿ 13 ದಿನ ಆಡಳಿತ ನಡೆಸಿದರು.▼
ಕೊಡಗಿನಲ್ಲಿ ಗುಡ್ಡೆಮನೆ ಅಪ್ಪಯ್ಯ ಹೋರಾಟಕ್ಕೆ ಬೆಂಬಲ ನೀಡಿದರಾದರೂ ಬ್ರಿಟಿಷರ ಕುಮ್ಮಕ್ಕಿನಿಂದಾಗಿ ಇತರರಿಂದ ಬೆಂಬಲ ಸಿಗಲಿಲ್ಲ ಜೊತೆಗೆ ತಲಚೇರಿ-ಕಣ್ಣನ್ನೂರುಗಳಿಂದ ಬ್ರಿಟಿಷ್ ಸೈನ್ಯ ಮಂಗಳೂರು ತಲುಪಿತು. ಇವರಲ್ಲಿ ಸಾವಿರಾರು ಜನರು ಇದ್ದರೂ ಕೂಡ ಕೋವಿಯಂಥ ಮಾರಕಾಯುಧಗಳು ಬೆರಳೆಣಿಕೆಯಷ್ಟು ಮಾತ್ರ ಇದ್ದವು. ಆದ್ದರಿಂದ ಕಲ್ಯಾಣಸ್ವಾಮಿ ತಪ್ಪಿಸಿಕೊಂಡು ಕಡಬದತ್ತ ಸಾಗಿದನು. ಆಧುನಿಕ ಶಸ್ತ್ರಾಸ್ತ್ರಗಳಿಂದ ಸುಸಜ್ಜಿತವಾದ ಬ್ರಿಟಿಷ್ ಪರವಾದ ಹಿಂದುಗಳೇ ಇದ್ದ ಸೈನ್ಯವನ್ನು ಎದುರಿಸಲು ಆಗದೆ ಸೋಲಬೇಕಾಯಿತು. ನಾಲ್ಕು ನಾಡಿನ ಉತ್ತು, ಶಾಂತಳ್ಳಿ ಮಲ್ಲಯ್ಯ ಗುಡ್ಡೆಮನೆ ಅಪ್ಪಯ್ಯ, [[ಚೆಟ್ಟಿಕುಡಿಯ
1837 ಮೇ ತಿಂಗಳ ಎರಡನೇ ವಾರದಲ್ಲಿ
ಬೆಳ್ಳಾರೆಯ ಕೋಟೆಯಲ್ಲಿದ್ದ ಬ್ರಿಟಿಷರ ಖಜಾನೆಯನ್ನು ವಶಪಡಿಸಿಕೊಂಡದ್ದು ಬಿಟ್ಟರೆ
==ಹೋರಾಟದಲ್ಲಿ ಭಾಗವಹಿಸಿದವರು==
▲ಬೆಳ್ಳಾರೆಯ ಕೋಟೆಯಲ್ಲಿದ್ದ ಬ್ರಿಟಿಷರ ಖಜಾನೆಯನ್ನು ವಶಪಡಿಸಿಕೊಂಡದ್ದು ಬಿಟ್ಟರೆ ಬೇರೆಯಾರ ಸಂಪತ್ತನ್ನು ಈ ಹೋರಾಟಗಾರರ ಗುಂಪು ದೋಚಲಿಲ್ಲ. ಬೆಳ್ಳಾರೆಯ ಕೋಟೆಯಲ್ಲಿದ್ದ ಬ್ರಿಟಿಷ್ ಖಜಾನೆಯನ್ನು ವಶಪಡಿಸಿಕೊಳ್ಳುವ ತನಕ ಬ್ರಿಟಿಷರಿಗೆ ಹೋರಾಟಕ್ಕಾಗಿ ಜನರ ಗುಂಪೊಂದು ಸಂಘಟಿತವಾದದ್ದು ತಿಳಿಯಲಿಲ್ಲ. ಖಜಾನೆಯನ್ನು ವಶಪಡಿಸಿಕೊಂಡಾಗ ಕೂಡ ದರೋಡೆ ಎಂದು ತಿಳಿದರೇ ಹೊರತು, ಅಲ್ಲೊಂದು ಸ್ವಾತಂತ್ರ್ಯ ಹೋರಾಟಕ್ಕೆ ವೇದಿಕೆ ಸಿದ್ಧವಾದುದ್ದು ಬ್ರಿಟಿಷರ ಗಮನಕ್ಕೆ ಬರಲಿಲ್ಲ. ಅಷ್ಟರ ಮಟ್ಟಿಗಿನ ಮುಂಜಾಗರೂಕತೆಯನ್ನು ವಹಿಸಲಾಗಿತ್ತು. ಬೆಳ್ಳಾರೆಯ ಹಿರಿಯರ ಪ್ರಕಾರ ಪುತ್ತೂರು, ಸುಬ್ರಹ್ಮಣ್ಯ ಹಾಗೂ ಇತರೆಡೆಗೆ ದಂಡು ಸಾಗುವಾಗ ಮದುವೆ ದಿಬ್ಬಣದ ರೂಪದಲ್ಲಿ ಸಾಗುತ್ತಿತ್ತು. ಹೀಗೆ ಬ್ರಿಟಿಷ್ ಅಧಿಕಾರಿಗಳಿಗೆ ಚಳ್ಳೆಹಣ್ಣನ್ನು ತಿನ್ನಿಸಿದ್ದರು. ಈ ಹೋರಾಟಗಾರರು ತೆಂಗಿನ ಮಡಲಿನ ಕೊತ್ತಲಿಂಗೆಯ ಮಂಡೆಯನ್ನು ಆಯುಧವಾಗಿ ಉಪಯೋಗಿಸಿಕೊಂಡಿದ್ದರು. ಈ ಹೋರಾಟಗಾರರ ಕೆಚ್ಚೆದೆಗೆ ಸಾಹಸಕ್ಕೆ ಸಾಕ್ಷಿಯಾದ ಬೆಳ್ಳಾರೆಯ ಕೋಟೆ ಈಗ ಕೂಡ ಇದೆ. ಇವರು ವಶಪಡಿಸಿಕೊಂಡ ಬ್ರಿಟಿಷರ ಖಜಾನೆ ಕೂಡ ಇದೆ. ಬೆಳ್ಳಾರೆಯ ಸರಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣಕ್ಕೆ ಸೇರಿಕೊಂಡು ಬೆಳ್ಳಾರೆಯ ಕೋಟೆ ಇದೆ. ಈ ಪ್ರದೇಶವನ್ನು ಈಗ ಬಂಗ್ಲೆಗುಡ್ಡೆ ಎಂದು ಕರೆಯುತ್ತಾರೆ. ಬ್ರಿಟಿಷರ ಖಜಾನೆ ಇದ್ದ ಬಂಗಲೆಯ ಕಾರಣಕ್ಕೆ ಇಲ್ಲಿಗೆ ಬಂಗ್ಲೆಗುಡ್ಡೆ ಎಂ ಬ ಹೆಸರು ಬಂದಿದೆ. ಸ್ವತಂತ್ರ ಧ್ವಜ ಹಾರಾಡಿದ ಬೆಳ್ಳಾರೆಯ ಈ ಕೋಟೆಯನ್ನು ಸ್ಮಾರಕವಾಗಿ ರಕ್ಷಿಸಬೇಕಾಗಿದೆ .ಜೊತೆಗೆ ಇಲ್ಲಿ ಸ್ವತಂತ್ರ ಧ್ವಜ ಹಾರಿಸಿದ ನೆನಪಿಗಾಗಿ ಇದೇ ಜಾಗದಲ್ಲಿ ಪ್ರತಿ ಸ್ವಾತಂ ತ್ರ್ಯ ದಿನಾಚರಣೆಯಂದು ಇಲ್ಲಿ ನಮ್ಮ ದೇಶದ ಧ್ವಜವನ್ನು ಹಾರಿಸಬೇಕಾ
*ಕೆದಂಬಾಡಿ ರಾಮ ಗೌಡ.
*ಗುಡ್ಡೆಮನೆ ಅಪ್ಪಯ್ಯ ಗೌಡ.
*ಕುಡಕಲ್ಲು ಪುಟ್ಟ ಗೌಡ
*ಕುಂಚಡ್ಕ ತಿಮ್ಮ ಗೌಡ
==ಪರಿಣಾಮ==
▲
==ಉಲ್ಲೇಖ==
|