'''ದೇವಗಿರಿಯ ನಾಯಕರು ಇಗಿನ ವಾಲ್ಮೀಕಿ ನಾಯಕ'''ಯಾದವರು ಎಂದೇ ಪ್ರಸಿದ್ಧರಾಗಿರುವಹೆಸರಾಗಿರುವ ಸೇಉಣರು,ಸೇವುಣರು ಉತ್ತರ [[ಕರ್ನಾಟಕ]], ಮಹಾರಾಷ್ಟ್ರಗಳನ್ನೊಳಗೊಂಡ ಪ್ರದೇಶವನ್ನು ಆಳಿದ ಕನ್ನಡ ರಾಜಮನೆತನ. ರಾಷ್ಟ್ರಕೂಟರ ಸರದಾರರಾಗಿಯೂ, ಮುಂದೆ [[ಹೊಯ್ಸಳ|ಹೊಯ್ಸಳರಂತೆಯೆ]] ಕಲ್ಯಾಣದ [[ಚಾಲುಕ್ಯ]] ದೊರೆಗಳ ಸಾಮಂತರಾಗಿಯೂ ಇದ್ದರು. ಚಾಲುಕ್ಯ ಸಾಮ್ರಾಜ್ಯ ಅವನತಿಯ ಹಾದಿ ಹಿಡಿದಂತೆ ಪ್ರಾಬಲ್ಯಕ್ಕೆ ಏರಿದರು. ಐದನೆಯ ಭಿಲ್ಲಮ ಕಲ್ಯಾಣವನ್ನು ವಶಪಡಿಸಿಕೊಂಡು ತಾನು ಸ್ವತಂತ್ರನೆಂದು ಘೋಷಿಸಿಕೊಂಡ. ದೇವಗಿರಿಯ ಅಭೇದ್ಯ ಕೋಟೆಯನ್ನು ನಿರ್ಮಿಸಿ ರಾಜಧಾನಿಯನ್ನು ಅಲ್ಲಿಗೆ ಸ್ಥಳಾಂತರಿಸಿದ. ಸೇಉಣರು ಹೊಯ್ಸಳರೊಂದಿಗೆ ಅನೇಕ ಯುದ್ದಗಳನ್ನು ನಡೆಸೆದರು. ಕೃಷ್ಣಾ-ತುಂಗಭದ್ರಾ ನದೀಮಧ್ಯ ಪ್ರದೇಶ ಒಬ್ಬರಿಂದೊಬ್ಬರಿಗೆ ಕೈಬದಲಾಯಿಸುತ್ತಿತ್ತು. ನಂತರ ಒಂದು ಮಾದರಿಯ ಒಪ್ಪಂದ ಏರ್ಪಟ್ಟು, ಸೇಉಣರುಸೇವುಣರು ತುಂಗಭದ್ರೆಯ ಉತ್ತರಕ್ಕೂ, ಹೊಯ್ಸಳರು ದಕ್ಷಿಣಕ್ಕೂ ತಮ್ಮ ಪ್ರಭಾವ ಪ್ರಾಬಲ್ಯಗಳನ್ನು ವಿಸ್ತರಿಸಿದರು. ಒಂದು ಕಾಲದಲ್ಲಿ ಸೇಉಣಸೇವುಣ ರಾಜ್ಯ ನರ್ಮದೆಯವರೆಗೆ ಹಬ್ಬಿತ್ತು. ಮುಂದೆ ದೆಹಲಿಯ ಸುಲ್ತಾನ ಅಲ್ಲಾಉದ್ದೀನ್ ಖಿಲ್ಜಿ ದೇವಗಿರಿಯನ್ನು ಗೆದ್ದು ತನ್ನ ರಾಜ್ಯಕ್ಕೆ ಸೇರಿಸಿಕೊಂಡಾಗ ಸೇಉಣರಸೇವುಣರ ರಾಜ್ಯ ಕೊನೆಗಂಡಿತು. ಛತ್ರಪತಿ ಶಿವಾಜಿಯ ತಾಯಿ ಜೀಜಾಬಾಯಿಯ ತವರು ಮನೆತನ ದೇವಗಿರಿಯ ರಾಜವಂಶಕ್ಕೆ ಸೇರಿದ್ದು.
ಸಾಂಸ್ಕೃತಿಕವಾಗಿ ಸೇಉಣರುಸೇವುಣರು ಕಲ್ಯಾಣದ ಚಾಲುಕ್ಯರ ಸಂಪ್ರದಾಯವನ್ನು ಮುಂದುವರೆಸಿರದರು. ಗಣಿತಜ್ಞ [[ಭಾಸ್ಕರಾಚಾರ್ಯ]], ಭಾರತೀಯ ಸಂಗೀತಶಾಸ್ತ್ರದ ಪ್ರಮಾಣ ಗ್ರಂಥ "ಸಂಗೀತ ರತ್ನಾಕರ"ವನ್ನು ರಚಿಸಿದ ಶಾರ್ಙ್ಗದೇವ ಸೇಉಣರಸೇವುಣರ ಕಾಲದವರು.