ಪ್ರಸನ್ನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪ್ರಸನ್ನ
ಉಲ್ಲೇಖ ಸೇರಿಸಿದೆ
೫ ನೇ ಸಾಲು:
| occupation = ರಂಗ ನಿರ್ದೇಶಕರು
| nationality = ಭಾರತೀಯ
| alma_mater = ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ
| subject = ರಂಗಭೂಮಿ
}}
 
'''ಪ್ರಸನ್ನ''' ( [[ಮಾರ್ಚ್ ೨೩]], [[೧೯೫೧]]) ಕನ್ನಡ ರಂಗಭೂಮಿ ನಿರ್ದೇಶಕರು ಮತ್ತು ಕ್ರಿಯಾಶೀಲ ರಂಗ ಕಾರ್ಯಕರ್ತರು.<ref>{{cite news|url=http://www.hindu.com/2007/12/31/stories/2007123155250200.htm|title=An acting activist all the way|author=Parul Sharma|date=2007-12-31|newspaper=[[The Hindu]]|accessdate=2008-12-21|location=Chennai, India}}</ref>
 
==ಜೀವನ==
ಎಪ್ಪತ್ತರ ದಶಕದಲ್ಲಿ ಹವ್ಯಾಸಿ ರಂಗಭೂಮಿಗೆ ಹಬ್ಬದ ಸಡಗರ. ಹಲವಾರು ಹವ್ಯಾಸಿ ರಂಗಸಂಸ್ಥೆಗಳು ಹುಟ್ಟಿಕೊಂಡದ್ದು ಆಗಲೇ. ಈ ಸಂದರ್ಭದಲ್ಲಿ ರಂಗಭೂಮಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪ್ರಮುಖರ ಸಾಲಿಗೆ ಸೇರುವ ಪ್ರಸನ್ನ ಅವರು ಹುಟ್ಟಿದ್ದು ಮಾರ್ಚ್ 23, 1951ರಂದು ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ. ತಂದೆ ಪ್ರಹ್ಲಾದಾಚಾರ್ಯ, ತಾಯಿ ಹೇಮಾವತಿ ಬಾಯಿ. ಸೆಂಟ್ರಲ್ ಕಾಲೇಜಿನಿಂದ ಎಂ.ಎಸ್ಸಿ. ಪದವಿ ಪಡೆದರೂ ಅವರಿಗೆ ರಂಗಭೂಮಿಯಲ್ಲಿ ಅಪಾರವಾದ ಆಸಕ್ತಿ ತುಂಬಿಕೊಂಡಿತ್ತು.<ref>{{cite web|url=http://www.deccanherald.com/content/Mar162008/district2008031657711.asp|title=Introduce theatre edn in govt schools: Prasanna|author=DH News Service|website=Deccanherald.com|archiveurl=https://web.archive.org/web/20080724122514/http://www.deccanherald.com/Content/Mar162008/district2008031657711.asp|archivedate=2008-07-24|accessdate=2008-12-21|url-status=dead}}</ref>
 
==ರಂಗ ಅಧ್ಯಯನ==
ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿ ಎಂಬ ಹೆಗ್ಗಳಿಕೆ ಸಂಪಾದಿಸಿದ ಕೀರ್ತಿ ಅವರದು. ಪ್ರಸನ್ನರು ದೆಹಲಿಯ ನಾಟಕ ಶಾಲೆಯಲ್ಲಿದ್ದ ದಿನಗಳಲ್ಲಿ ನಿರ್ದೇಶಿಸಿದ ನಾಟಕಗಳಲ್ಲಿ ಗಾಂಧಿ, ಉತ್ತರ ರಾಮಚರಿತಂ, ಅಗ್ನಿ ಔರ್ ಬರ್ ಕಾ, ಫ್ಯೂಜಿಯಾಮ ಪ್ರಮುಖವಾದವು. ಇಂಗ್ಲಿಷ್, ಹಿಂದಿ, ಕನ್ನಡ ಭಾಷೆಗಳ ಮೇಲೆ ಅವರು ಪ್ರಭುತ್ವ ಸಾಧಿಸಿದ್ದರು. ರಾಷ್ಟ್ರೀಯ ನಾಟಕಶಾಲೆಯಲ್ಲಿ ಕೆಲಕಾಲ ಬೋಧನೆ ಮಾಡಿ, ರಂಗಭೂಮಿ ಅಧ್ಯಯನಕ್ಕಾಗಿ ರಷ್ಯ, ಜರ್ಮನಿ ಮುಂತಾದ ಕಡೆಗಳಲ್ಲಿ ಪ್ರವಾಸ ಕೈಗೊಂಡಿದ್ದರು.<ref>{{cite web|url=http://www.rangayana.org/directors.htm|title=the pioneers of Modern Kannada Theatre|author=Rangayana Mysore|website=Rangayana.org|archiveurl=https://web.archive.org/web/20090501200935/http://www.rangayana.org/directors.htm|archivedate=2009-05-01|accessdate=2008-12-21|url-status=dead}}</ref>
 
==ರಂಗಭೂಮಿಯಿಂದ ಜನಾಂದೋಲನ==
ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಎಡಪಂಥೀಯ ವಿಚಾರ ಧಾರೆಗೆ ಪ್ರಾಶಸ್ತ್ಯ ನೀಡಿದ ಪ್ರಸನ್ನರಿಂದ ಮೂಡಿಬಂದದ್ದು ‘ಸಮುದಾಯ’ ತಂಡ. ರಾಜ್ಯಾದ್ಯಂತ ಅದರ ಶಾಖೆಗಳು ಮೂಡಿದವು. ನಾಟಕ, ಜಾಥಾ, ಕಲಾ ಮೇಳಗಳ ಮೂಲಕ ಅವರು ಜನಾಂದೋಲನವನ್ನು ಕೈಗೊಂಡರು. ಕಾರ್ಮಿಕರು, ಪ್ರಗತಿಪರ ಚಿಂತಕರು, ಸಾಹಿತಿ-ಕಲಾವಿದರನ್ನು ಒಗ್ಗೂಡಿಸಲು ವೇದಿಕೆ ಸ್ಥಾಪಿಸಿದ್ದೇ ಅಲ್ಲದೆ, ಜಡ್ಡುಗಟ್ಟಿದ ಸಾಮಾಜಿಕ ವ್ಯವಸ್ಥೆಯ ಪರಿವರ್ತನೆಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದರು.<ref>{{Cite news|url=http://www.thehindu.com/features/magazine/artistic-labour-is-power/article4605839.ece|title=Artistic labour is power|last=Pradeep|first=K.|date=2013-04-13|work=The Hindu|access-date=2017-12-02|language=en-IN|issn=0971-751X}}</ref>
 
==ಪ್ರಸಿದ್ಧ ನಾಟಕಗಳು==
ಪ್ರಸನ್ನರು ನಿರ್ದೇಶಿಸಿದ ನಾಟಕಗಳಲ್ಲಿ ತುಘಲಕ್, ಗೆಲಿಲಿಯೋ, ಹುತ್ತವ ಬಡಿದರೆ, ತದ್ರೂಪಿ, ಕದಡಿದ ನೀರು, ತಾಯಿ, ದಂಗೆಯ ಮುಂಚಿನ ದಿನಗಳು, ಹ್ಯಾಮ್ಲೆಟ್ ಮುಂತಾದವು ಪ್ರಮುಖವೆನಿಸಿವೆ. ತಮಿಳುನಾಡು, ಕೇರಳ, ಮಧ್ಯಪ್ರದೇಶ, ಬಿಹಾರಗಳಲ್ಲಿ ರಂಗಭೂಮಿ ಅಧ್ಯಯನಕ್ಕಾಗಿ ಅವರು ವ್ಯಾಪಕವಾಗಿ ಪ್ರವಾಸ ಕೈಗೊಂಡಿದ್ದರು.<ref>{{cite web|url=http://cities.expressindia.com/fullstory.php?newsid=87262|title=The Ultimate Frontier-Prasanna's Seema Paar explores the many faces of death|author=Ankur Kalitaa|website=Cities.expressindia.com|archiveurl=https://web.archive.org/web/20090501040800/http://cities.expressindia.com/fullstory.php?newsid=87262|archivedate=2009-05-01|accessdate=2008-12-21|url-status=dead}}</ref>
 
==ವಾರ್ತಾಪತ್ರ==
"https://kn.wikipedia.org/wiki/ಪ್ರಸನ್ನ" ಇಂದ ಪಡೆಯಲ್ಪಟ್ಟಿದೆ