ವಸಿಷ್ಠ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩ ನೇ ಸಾಲು:
==ವಿವರ==
ಅರುಂಧತಿ ಈತನ ಪತ್ನಿ. ಇವರಿಬ್ಬರ ಮಗ ಶಕ್ತಿ. ಶಕ್ತಿಯ ಪತ್ನಿ ಅದೃಶ್ಯಂತಿ. ಇವರ ಮಗ ಪರಾಶರ. ಪರಾಶರನಿಗೆ ಮತ್ಸ್ಯಗಂಧಿಯಲ್ಲಿ ಜನಿಸಿದವ ವೇದವ್ಯಾಸ. ವಸಿಷ್ಠ ಯಜ್ಞದಲ್ಲಿ ತೊಡಗಿದ್ದಾಗ, ಜರೂಥನೆಂಬ ರಾಕ್ಷಸ ಅದನ್ನು ಕೆಡಿಸಲು ಯತ್ನಿಸಿದಾಗ ವಸಿಷ್ಠ ಅಗ್ನಿಯ ಸಹಾಯದಿಂದ ಅವನನ್ನು ಕೊಲ್ಲಿಸಿದ. ಕಾರ್ತವೀರ್ಯಾರ್ಜುನ ವಸಿಷ್ಠನ ಆಶ್ರಮ ದಹಿಸಿದ್ದರಿಂದ ವಸಿಷ್ಠ ಅವನಿಗೆ ಶಾಪ ಕೊಟ್ಟ. ಋಷಿಗಳು ಭಿನ್ನಜಾತಿ ಸ್ತ್ರೀಯರಲ್ಲಿ ಜನಿಸಿದರೂ ಅವರ ತಪಸ್ಸು ಮತ್ತು ವಿದ್ಯೆಗಳೇ ಅವರ ಮಹಿಮೆಗೆ ಕಾರಣ ಎಂದು ವಸಿಷ್ಠ ಕರಾಳಜನಕನೊಂದಿಗೆ ನಡೆದ ಸಂವಾದದಲ್ಲಿ ವಾದಿಸಿದ.
==ವಶಿಷ್ಠವಸಿಷ್ಠ ವಿಶ್ವಾಮಿತ್ರರ ದ್ವೇಷ==
ವಸಿಷ್ಠ ತನ್ನ ತೇಜಸ್ಸಿನಿಂದ ರಾಕ್ಷಸರನ್ನು ನಿಗ್ರಹಿಸಿ ಇಂದ್ರನನ್ನು ಕಾಪಾಡಿದ. ಗೋಮಹಿಮೆಯ ವಿಷಯವಾಗಿ ಕಲ್ಮಾಷಪಾದನ ಸಂಗಡ ವಸಿಷ್ಠ ಸಂವಾದ ನಡೆಸಿದ. ವಸಿಷ್ಠನ ಬಳಿ ಇದ್ದ ನಂದಿನಿಧೇನುವನ್ನು ಪಡೆಯಲಾರದೆ ವಿಶ್ವಾಮಿತ್ರ ವಸಿಷ್ಠನನ್ನು ದ್ವೇಷಿಸುವುದರೊಂದಿಗೆ ಬ್ರಹ್ಮರ್ಷಿಯಾಗಲು ಘೋರತಪಸ್ಸನ್ನು ಮಾಡಿ ವಸಿಷ್ಠನ ಅನುಗ್ರಹದಿಂದಲೇ ಬ್ರಹ್ಮರ್ಷಿಯಾದ (ಮಹಾಭಾರತ). ನೃಗ ಮಹಾರಾಜನೂ ವಸಿಷ್ಠನೂ ಒಬ್ಬರಿಗೊಬ್ಬರು ಶಾಪಕೊಟ್ಟರೆಂದು ರಾಮಾಯಣದಲ್ಲಿದೆ. ಆಪವ-ನಾಮಕ ಪ್ರಜಾಪತಿಗಳಾದ ಬ್ರಹ್ಮದೇವ ಒಬ್ಬ ಸುಂದರ ಸ್ತ್ರೀಯನ್ನು ಸೃಷ್ಟಿ ಮಾಡಿದ. ಈಕೆ ಮಹಾತಪಸ್ವಿನಿ. ವಸಿಷ್ಠರು ಈಕೆಯನ್ನು ಪತ್ನಿಯಾಗಿ ಸ್ವೀಕರಿಸಿದರು. ಇವರಲ್ಲಿ ಇವಳಿಗೆ ವೀರನೆಂಬ ಮಗ ಹುಟ್ಟಿದ(ಹರಿವಂಶ). ಆತ ಕರ್ದಮ ಮುನಿಯ ಏಳನೆಯ ಮಗಳಾದ ಊರ್ಜಾದೇವಿಯನ್ನು ಮದುವೆಯಾಗಿ ಚಿತ್ರಕೇತು, ಸುರೋಚಿ, ವಿರಜ, ಮಿತ್ರ, ಉಲ್ಬಣ, ವಸುಭೃಧ್ಯಾನ, ದ್ಯುಮಂತರೆಂಬ ಏಳು ಮಕ್ಕಳನ್ನು ಪಡೆದ(ಭಾಗವತ). ಹರಿಶ್ಚಂದ್ರನ ಸತ್ಯಸಂಧತೆಯ ಬಗ್ಗೆ ವಿಶ್ವಾಮಿತ್ರನೊಡನೆ ವಾಗ್ವಾದ ನಡೆಸಿ ಕಡೆಗೆ ವಸಿಷ್ಠನೇ ಗೆದ್ದನೆಂದು ದೇವೀ ಭಾಗವತದಿಂದ ತಿಳಿದುಬರುತ್ತದೆ.[
<ref>[https://kn.wikisource.org/s/1k5 ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ವಸಿಷ್ಠ]</ref> <ref>ರಾಮಾಯಣ</ref>
{{wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ವಸಿಷ್ಠ|ವಸಿಷ್ಠ}}
 
==ಉಲ್ಲೇಖ==
"https://kn.wikipedia.org/wiki/ವಸಿಷ್ಠ" ಇಂದ ಪಡೆಯಲ್ಪಟ್ಟಿದೆ