ಉದಯವಾಣಿ (ದಿನಪತ್ರಿಕೆ)
ಪ್ರಕಟಣೆ: ಮಣಿಪಾಲ್, ಬೆಂಗಳೂರು
ಈಗಿನ ಸಂಪಾದಕರು: ಮಣಿಪಾಲ್ ಆವೃತ್ತಿ - ಎನ್. ಗುರುರಾಜ್, ಬೆಂಗಳೂರು ಆವೃತ್ತಿ - ರವಿಶಂಕರ್ ಭಟ್
ಜಾಲತಾಣ: http://www.udayavani.com/
ಇವನ್ನೂ ನೋಡಿ ವರ್ಗ:ಕನ್ನಡ ಪತ್ರಿಕೆಗಳು

ಉದಯವಾಣಿ ಹೆಚ್ಚು ಪ್ರಸಾರವಾಗುವ ಕನ್ನಡ ದಿನಪತ್ರಿಕೆಗಳಲ್ಲೊಂದು. ಇದು ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ನವರಿಂದ ಪ್ರಕಟಗೊಳ್ಳುತ್ತದೆ. ಇದು ಮಣಿಪಾಲ,ಬೆಂಗಳೂರು ಮತ್ತು ಮುಂಬಯಿ ಗಳಿಂದ ಪ್ರಕಟಗೊಳ್ಳುತ್ತದೆ.

ಉದಯವಾಣಿ

ಇತಿಹಾಸ ಬದಲಾಯಿಸಿ

1970 ಜನವರಿ 1ರಂದು ಪ್ರಾರಂಭವಾದ ಉದಯವಾಣಿ ರಾಜಧಾನಿ ಬಿಟ್ಟು ದೂರದಲ್ಲಿ ಸಮೃದ್ಧವಾಗಿ ಬೆಳೆದು ಬಂದ ಮುಖ್ಯವಾಹಿನಿಯ ಕನ್ನಡ ದಿನಪತ್ರಿಕೆ. ಅಂದಿನಿಂದ ಇಂದಿನವರೆಗೂ (2006) ಅದರ ಸಂಪಾದಕರು ಟಿ. ಸತೀಶ ಪೈ. ಅವರೇ ಪ್ರಕಾಶನ ಸಂಸ್ಥೆ ಮಣಿಪಾಲ ಪ್ರಿಂಟರ್ಸ್‌ ಅಂಡ್ ಪಬ್ಲಿಕೇಷನ್ಸ್‌ (ಈಗ ಮಣಿಪಾಲ ಮೀಡಿಯಾ ನೆಟ್ವರ್ಕ್) ಮಾಲೀಕರು ಕೂಡ. ಉದಯವಾಣಿ 1993ರಲ್ಲಿ ಬೆಂಗಳೂರಿನಲ್ಲಿ ರಾಜಧಾನಿ ಆವೃತ್ತಿ ಪ್ರಾರಂಭಿಸಿತು. ಮೊದಲ ಆರುವರ್ಷಗಳ ಕಾಲ ಈಶ್ವರ ದೈತೋಟ ಇದರ ಸ್ಥಾನಿಕ ಸಂಪಾದಕರಾಗಿದ್ದರು. ಈಗ ಡಾ. ಪುರ್ಣಿಮಾ ಸ್ಥಾನಿಕ ಸಂಪಾದಕರಾಗಿದ್ದಾರೆ. ಉದಯವಾಣಿ ಸೋದರಿ ಪ್ರಕಟಣೆಗಳಾಗಿ ತುಷಾರ (1973) ಮಾಸಪತ್ರಿಕೆ, ರೂಪತಾರಾ (1976) ಸಿನಿಮಾ ಮಾಸಿಕ, ತರಂಗ (1982) ವಾರಪತ್ರಿಕೆ ಹಾಗೂ ತುಂತುರು (1999) ಎಂಬ ಮಕ್ಕಳ ಪತ್ರಿಕೆಯನ್ನು ಕೂಡಾ ಓದುಗರಿಗೆ ಕೊಡುತ್ತದೆ. ಜೊತೆಗೆ ಉದಯವಾಣಿಯ ಇಂಟರ್ನೆಟ್ ಆವೃತ್ತಿಯೂ ಲಭ್ಯವಿದೆ ಹಾಗೂ ಮುಂಬಯಿ ಆವೃತ್ತಿಯನ್ನೂ (2000) ನಡೆಸುತ್ತಿದೆ. ಪ್ರತಿದಿನವೂ ಅಂಕಣಗಳನ್ನು ಪ್ರಾರಂಭಿಸಿದ್ದು ಈ ದೈನಿಕ. ದಿವಂಗತ ಕು.ಶಿ.ಹರಿದಾಸ ಭಟ್, ಪ್ರೊ ಸಿ.ಎನ್ ರಾಮಚಂದ್ರನ್ ಕೂಡಾ ಅಂಕಣ ಬರೆಯುತ್ತಿದ್ದವರಲ್ಲಿ ಸೇರಿದ್ದಾರೆ. ಸಂಸ್ಕೃತ ಪಾಂಡಿತ್ಯವುಳ್ಳ ಬನ್ನಂಜೆ ಸಹೋದರರಾದ ರಾಮಾಚಾರ್ ಹಾಗೂ ಗೋವಿಂದಾಚಾರ್ ಇದರ ಸಹ ಸಂಪಾದಕರಾಗಿ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಸವಲತ್ತುಗಳನ್ನು ಹೊಂದಿರುವ ಉದಯವಾಣಿ ಸಮೂಹದ ಪ್ರಕಟಣೆಗಳು ಅಚ್ಚುಕಟ್ಟಾದ ಸುಂದರ ಮುದ್ರಣಕ್ಕೆ ಅನೇಕ ಬಾರಿ ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿವೆ.

ಸಂಪಾದಕರು ಬದಲಾಯಿಸಿ

ಉದಯವಾಣಿಯ ಬೆಂಗಳೂರು ಆವೃತ್ತಿಗೆ ತಿಮ್ಮಪ್ಪ ಭಟ್ ಸಂಪಾದಕರಾಗಿದ್ದಾರೆ. ಮಣಿಪಾಲ ,ಹುಬ್ಬಳ್ಳಿ, ಮುಂಬಯಿ ಆವೃತ್ತಿಗೆ ಎ. ವಿ. ಬಾಲಕ್ರಿಷ್ಣ ಹೊಳ್ಳ ಸಂಪಾದಕರು.

ಹೊರಗಿನ ಸಂಪರ್ಕಗಳು ಬದಲಾಯಿಸಿ

 
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ:
"https://kn.wikipedia.org/w/index.php?title=ಉದಯವಾಣಿ&oldid=1204273" ಇಂದ ಪಡೆಯಲ್ಪಟ್ಟಿದೆ