ಶೃಂಗೇರಿ

ಚಿಕ್ಕಮಗಳೂರು ಜಿಲ್ಲೆಯ ಒಂದು ತಾಲ್ಲೂಕು

ಶೃಂಗೇರಿಯು ,ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಒಂದು ತಾಲೂಕು.https://www.karnataka.com/sringeri/about-sringeri/ ೮ನೇ ಶತಮಾನದಲ್ಲಿ ಅದ್ವೈತ ವೇದಾಂತದ ಪ್ರತಿಪಾದಕರಾದ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪ್ರಮುಖ ಮಠಗಳಲ್ಲಿ ಶೃಂಗೇರಿಯು ಪ್ರಪ್ರಥಮವಾದ್ದು. ಮತ್ತಿತರೆ ಮಠಗಳನ್ನು ಅವರು ಬದರಿ, ಪುರಿ ಮತ್ತು ದ್ವಾರಕೆಯಲ್ಲಿ ಸ್ಥಾಪಿಸಿದರು. ಶೃಂಗೇರಿಯು ತುಂಗಾ ನದಿ ತಟದಲ್ಲಿರುವ ಚಿಕ್ಕ ಊರು.

ಶೃಂಗೇರಿ
Sringeri
ತಾಲ್ಲೂಕು
ಶೃಂಗೇರಿಯ ಶ್ರೀ ವಿದ್ಯಾಶಂಕರ ದೇವಾಲಯ
ಶೃಂಗೇರಿಯ ಶ್ರೀ ವಿದ್ಯಾಶಂಕರ ದೇವಾಲಯ
ದೇಶ ಭಾರತ
ರಾಜ್ಯ ಕರ್ನಾಟಕ
ಜಿಲ್ಲೆಚಿಕ್ಕಮಗಳೂರು
ಸರ್ಕಾರ
 • ಶಾಸಕಡಿ. ಎನ್. ಜೀವರಾಜ್
Elevation
೬೭೨ m (೨,೨೦೫ ft)
Population
 (2001)
 • Total೪,೨೫೩
ಭಾಷೆ
 • ಅಧಿಕೃತಕನ್ನಡ
 • ಪ್ರಾದೇಶಿಕಕನ್ನಡ
ಸಮಯ ವಲಯಯುಟಿಸಿ+5:30 (IST)
ಪಿನ್
577139
ದೂರವಾಣಿ ಕೋಡ್08265
ವಾಹನ ನೋಂದಣಿKA-18
ಶಾರದಾಂಬ ದೇವಸ್ಥಾನ
ಶಿಷ್ಯಂದಿರ ಜೊತೆ ಶ್ರೀ ಆದಿ ಶಂಕರಾಚಾರ್ಯರು, ರಾಜ ರವಿವರ್ಮರಿಂದ ೧೯೦೪
ತುಂಗಾ ನದಿಯಲ್ಲಿನ  ಮೀನುಗಳು 
ಶೃಂಗೇರಿಯ ಶ್ರೀ ಶಾರದಾಂಬೆ

ಇತಿವೃತ್ತಸಂಪಾದಿಸಿ

  • ಶೃಂಗೇರಿ ಎಂಬ ಹೆಸರು.ಋಷ್ಯಶೃಂಗಗಿರಿ ಎಂಬ ಹೆಸರಿನಿಂದ ಬಂದಿದೆ - ಇದು ಸಮೀಪದಲ್ಲೇ ಇರುವ ಒಂದು ಬೆಟ್ಟದ ಹೆಸರು. ಪ್ರತೀತಿಗನುಸಾರವಾಗಿ ಈ ಬೆಟ್ಟದಲ್ಲೇ ಋಷಿ ವಿಭಾಂಡಕ ಮತ್ತು ಅವನ ಮಗ ಋಷ್ಯಶೃಂಗ ಇದ್ದದ್ದು. ಋಷ್ಯಶೃಂಗನ ಪ್ರಸ್ತಾಪ ರಾಮಾಯಣದ ಬಾಲಕಾಂಡದಲ್ಲಿ ಬರುತ್ತದೆ. ವಸಿಷ್ಠ ತಿಳಿಸುವ ಉಪಕಥೆಗಳಲ್ಲಿ ಒಂದರಲ್ಲಿ ಋಷ್ಯಶೃಂಗ ರೋಮಪಾದ ರಾಜ್ಯದಲ್ಲಿ ಮಳೆ ತರಿಸಿದ ಕಥೆ ಇದೆ.
  • ಶೃಂಗೇರಿಯ ಅನೇಕ ದೇವಸ್ಥಾನಗಳಲ್ಲಿ ಮುಖ್ಯವಾದದ್ದು ವಿದ್ಯಾಶಂಕರ ದೇವಸ್ಥಾನ. ಇದನ್ನು ೧೪ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರಾದ ಹುಕ್ಕ-ಬುಕ್ಕರ ಗುರು ಮಹರ್ಷಿ ವಿದ್ಯಾರಣ್ಯರು ಕಟ್ಟಿಸಿದರು. ಈ ದೇವಾಲಯದ ಶಾಸನಗಳಲ್ಲಿ ನಂತರದ ಅನೇಕ ವಿಜಯನಗರದ ಅರಸರು ಈ ದೇವಾಲಯಕ್ಕೆ ಕೊಟ್ಟ ಕಾಣಿಕೆಗಳ ದಾಖಲೆಗಳಿವೆ. ವಿಜಯನಗರ ಕಾಲದಲ್ಲಿ ಕಟ್ಟಿಸಿದ್ದಾದರೂ ಈ ದೇವಾಲಯ ಇನ್ನೂ ಹಿಂದಿನ ಹೊಯ್ಸಳ ದೇವಾಲಯದ ಸ್ಥಾನದಲ್ಲಿ ಕಟ್ಟಿದ್ದೆಂದು ನಂಬಲಾಗಿದೆ.
  • ವಿಜಯನಗರದ ಕಾಲದ ಶಿಲ್ಪಕಲೆ ಮತ್ತು ಹೊಯ್ಸಳ ಶಿಲ್ಪಕಲೆ - ಎರಡರ ಸಮಾಗಮವನ್ನು ಈ ದೇವಸ್ಥಾನದಲ್ಲಿ ಕಾಣಬಹುದು. ವಿದ್ಯಾಶಂಕರ ದೇವಾಲಯದಲ್ಲಿ ಮೇಷಾದಿ ರಾಶಿ ಸೂಚಕ ಕಂಬಗಳಿವೆ. ಈ ರಾಶಿ ಕಂಬಗಳ ವೈಶಿಷ್ಟ್ಯವೆಂದರೆ ಸೂರ್ಯ ಯಾವ ರಾಶಿಯಲ್ಲಿರುತ್ತಾನೊ ಆ ರಾಶಿ ಸೂಚಕ ಕಂಬದ ಮೇಲೆ ಪ್ರಥಮ ಉಷಾ ಕಿರಣಗಳು ಬೀಳುತ್ತವೆ.
  • ಶೃಂಗೇರಿಯ ಇತಿಹಾಸಕ್ಕೆ ನೇರವಾಗಿ ಸಂಬಂಧಿಸಿದ ಎರಡು ಪ್ರಮುಖ ದೇವಾಲಯಗಳಿವೆ. ಮೊದಲನೆಯದು, ಋಷ್ಯಶೃಂಗರ ತಂದೆಯವರಾದ ವಿಭಾಂಡಕ ಮಹರ್ಷಿಗಳು ತಾವು ಪೂಜಿಸುತ್ತಿದ್ದ ಶಿವಲಿಂಗದಲ್ಲಿ ಐಕ್ಯರಾದರೆಂಬ ಪ್ರತೀತಿ ಇದೆ. ಅದು ಶೃಂಗೇರಿಪಟ್ಟಣದ ಹತ್ತಿರದ ಒಂದು ಗುಡ್ಡದ ಮೇಲಿದೆ. ಇದಕ್ಕೆ ಮಲಹಾನಿಕೇಶ್ವರ ಎಂಬ ಹೆಸರಿದ್ದು, ಈ ಸ್ಥಳದಲ್ಲಿ ಒಂದು ದೇವಾಲಯವನ್ನು ಕಟ್ಟಲಾಗಿದೆ. ಎರಡನೆಯದು, ಶೃಂಗೇರಿಯಿಂದ ೧೦ ಕಿ. ಮೀ. ದೂರದಲ್ಲಿ ಕಿಗ್ಗ ಅಥವಾ ಋಶ್ಯಶೃಂಗಪುರವೆಂಬ ಊರಿದೆ. ಇಲ್ಲಿ ಋಶ್ಯಶೃಂಗರ ಆತ್ಮಜ್ಯೋತಿ,ತಾವು ನಿತ್ಯವೂ ಆರಾಧಿಸುತ್ತಿದ್ದ ಶಿವಲಿಂಗದೊಳಗೆ ಐಕ್ಯವಾಯಿತೆಂಬ ಪ್ರತೀತಿ ಇದೆ. ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.
  • ಶೃಂಗೇರಿ ತಾಲೂಕು ಕೊಪ್ಪ, ನರಸಿಂಹರಾಜಪುರನ್ನೊಳಗೊಂಡ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದೆ.
  • ಇದು ಜಿಲ್ಲಾ ಕೇಂದ್ರವಾದ ಚಿಕ್ಕಮಗಳೂರಿನಿಂದ ೮೯ ಕಿ. ಮೀ.ಗಳ ದೂರದಲ್ಲಿದೆ. ಬೀರೂರು ಮತ್ತು ಶಿವಮೊಗ್ಗದ ರೈಲ್ವೆ ಸ್ಥಾನಕದಿಂದ ಶೃಂಗೇರಿ ಸುಮಾರು ೯೬ ಕಿ.ಮೀ.ದೂರದಲ್ಲಿದೆ. ರಸ್ತೆಯಲ್ಲಿ ಪ್ರಯಾಣ ಮಾಡಿದರೆ, ಮಂಗಳೂರು ಇಲ್ಲಿಗೆ ೧೦೭ ಕಿ.ಮೀ.ದೂರದಲ್ಲಿದೆ. ೩೨೦ ಕಿ. ಮೀ. ದೂರದ ಬೆಂಗಳೂರಿಗೆ ಹಗಲು-ರಾತ್ರಿಗಳ ಬಸ್ ಸೌಲಭ್ಯವಿದ್ದು,ಕಾಡು, ಕಣಿವೆ, ಗಿರಿಗಳ ಮಧ್ಯೆ, ನಿಸರ್ಗದ ರುದ್ರರಮಣೀಯತೆಯನ್ನು, ಪ್ರಯಾಣಿಸುವಾಗ ನೋಡಿ ಅನುಭವಿಸಬಹುದಾಗಿದೆ.https://www.makemytrip.com/routeplanner/bangalore-sringeri.html
  • ಇಲ್ಲಿನ ಬಹುಪಾಲು ಜನ ಜೀವನಕ್ಕೆ ಕೃಷಿಯನ್ನು ಅವಲಂಬಿಸಿದ್ದಾರೆ. ಅಡಿಕೆ ಹಾಗು ಭತ್ತ ಇಲ್ಲಿನ ಮುಖ್ಯ ಬೆಳೆಗಳಾಗಿವೆ. ಕಾಫಿ , ಬಾಳೆ ,ವೆನಿಲ್ಲಾ, ವೀಳ್ಯದೆಲೆ, ಕರಿಮೆಣಸು ಮತ್ತು ಏಲಕ್ಕಿಯನ್ನು ಅಡಿಕೆಯೊಂದಿಗೆ ಮಿಶ್ರಬೆಳೆಗಳಾಗಿ ಬೆಳೆಯಲಾಗುತ್ತದೆ.

ಶ್ರೀಶಂಕರಾಚಾರ್ಯ ವಿದ್ಯಾಮಾತೆಸಂಪಾದಿಸಿ

ಆದಿ ಶಂಕರಾಚಾರ್ಯರು ಆಜನ್ಮ ಬ್ರಹ್ಮಚಾರಿಗಳು. ಇವರು ವಿಶ್ವರೂಪರ ಮಡದಿ ಉಭಯಭಾರತಿಯವರ ಶಾಸ್ತ್ರಸಂಪನ್ನತೆ, ಅಪ್ರತಿಮ ಪಾಂಡಿತ್ಯವನ್ನು ಸೂಕ್ಷ್ಮವಾಗಿ ಗಮನಿಸಿದ್ದರು. ಆಕೆಯ ಪ್ರತಿಭೆಗೆ ಮೆಚ್ಚಿ ಶ್ರೀಶಂಕರಾಚಾರ್ಯರು ಉಭಯಭಾರತಿ ಅವರಿಗೆ ನ್ಯಾಯಾಧೀಶರ ಪಟ್ಟವನ್ನು ಕೊಡುತ್ತಾರೆ. ಮುಂದೆ ಉಭಯಭಾರತಿ ಅವರು ವಿರಾಗಿಣಿಯಾಗಬೇಕೆಂದಾಗ, ಶ್ರೀಶಂಕರಾಚಾರ್ಯರು "ಅಮ್ಮಾ ತಾವು ಬ್ರಹ್ಮವಿದ್ಯಾಸ್ವರೂಪಿಣಿಯೇ ಆಗಿದ್ದೀರಿ, ತಾವು ಇರುವ ಸ್ಥಳವೇ ಶಾರದಾಮಂಡಲಪ್ರಭಾವಲಯವಾಗುತ್ತದೆ. ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿರುವ ಶೃಂಗೇರಿಯಲ್ಲಿ ನೀವು ನೆಲೆಸಿ, ವಿದ್ವಾಂಸರನ್ನು ಅನುಗ್ರಹಿಸಬೇಕು. ನನ್ನ ಮಾನಸ ಮತ್ತು ಧೀಃಶಕ್ತಿಯ ಅಧಿದೇವತೆಯಾಗಿ, ಸರಸ್ವತಿಯಾಗಿ, ಮಾತೃಸ್ಥಾನದಲ್ಲಿ ನೆಲೆಸಿ" ಎಂದು ನಮ್ರವಾಗಿ ಕೋರುತ್ತಾರೆ. ಅವರ ಮಾತಿನಂತೆ ಉಭಯಭಾರತಿ ಅವರು ಶೃಂಗೇರಿಯಲ್ಲಿ ನೆಲೆಸುತ್ತಾರೆ.

ಪ್ರೇಕ್ಷಣೀಯ ಸ್ಥಳಗಳುಸಂಪಾದಿಸಿ

ಶೃಂಗೇರಿ ಪಟ್ಟಣದಲ್ಲಿ ಅನೇಕ ದೇವಾಲಯಗಳಿದ್ದು ಅವುಗಳದ್ದೇ ಆದ ಮಹತ್ವ ಹೊಂದಿರುತ್ತದೆ. ಆವುಗಳಲ್ಲಿ ಕಾಳಿಕಾಂಬ ದೇವಸ್ತಾನ, ದುರ್ಗಾ ದೇವಸ್ತಾನ, ಕೆರೆ ಆಂಜನೇಯ ದೇವಸ್ಥಾನ, ಕಾಲ ಭೈರವ ದೇವಸ್ಥಾನ (ಇವು ೪ ದಿಕ್ ಪಾಲಕ ದೇವರುಗಳಾಗಿದ್ದು, ಇವನ್ನು ಆದಿ ಶಂಕರರು ಸ್ತಾಪಿಸಿರುತ್ತಾರೆ). ಇವಲ್ಲದೆ, ಬೆಟ್ಟದ ಮಲಹಾನಿಕೇಶ್ವರ ದೇವಾಲಯ(ಋಷ್ಯಶೃಂಗ ಮುನಿಗಳ ತಂದೆ), ಚಪ್ಪರದಾಂಜನೇಯ ದೇವಾಲಯ, ವೆಂಕಟರಮಣ ದೇವಾಲಯಗಳನ್ನೂ ಸಹ ನೋಡಬಹುದಾಗಿದೆ. ಶೃಂಗೇರಿ ಪಟ್ಟಣದ ಮಧ್ಯಭಾಗದಲ್ಲೇ ಪುರಾತನವಾದ ಪಾರ್ಶ್ವನಾಥ ತೀರ್ಥಂಕರರ ಜೈನ ಬಸದಿಯೊಂದಿದೆ. ಶೃಂಗೇರಿಯು ತುಂಗಾ ನದೀ ತೀರದಲ್ಲಿ ಇದೆ.

  1. ಸಿರಿಮನೆ ಜಲಪಾತ- ಇದೊಂದು ಸುಂದರ ನಿಸರ್ಗದ ಮಡಿಲಲ್ಲಿರುವ ಪುಟ್ಟ ಜಲಪಾತ. ಈ ಜಲಪಾತವು ಕಿಗ್ಗಾ ಋಷ್ಯಶೃಂಗೇಶ್ವರ ದೇವಸ್ಥಾನದಿಂದ ಕೇವಲ ಐದು ಕಿಲೋ ಮೀಟರುಗಳ ದೂರದಲ್ಲಿದೆ.
  2. ಮಘೇಬೈಲು ಜಲಪಾತ - ಇದು ಸಿರಿಮನೆಗೆ ಹತ್ತಿರವಿರುವ ಇನ್ನೊಂದು ಜಲಪಾತ.
  3. ನರಸಿಂಹ ವನ - ತುಂಗಾ ನದಿಯ ಇನ್ನೊಂದು ಪಕ್ಕದಲ್ಲಿ ನರಸಿಂಹ ವನವಿದೆ. ಇಲ್ಲಿ ಜಗದ್ಗುರುಗಳ ನಿವಾಸವಿದ್ದು ಪ್ರತಿ ದಿನ ಭಕ್ತರಿಗೆ ದರ್ಶನ ಕೊಡುತ್ತಾರೆ. ಇದಲ್ಲದೆ ವೇದ ಪಾಠಶಾಲೆ, ಸಂಸ್ಕ್ರತ ಗ್ರಂಥಾಲಯವಿದೆ. ಇಲ್ಲಿಯೇ ಗೋಶಾಲೆ, ಗಜ ಶಾಲೆ ಕೂಡ ಇದೆ.
  4. ಕುದುರೆಮುಖ - ಕುದುರೆಮುಖ ಸುಂದರ ಗಿರಿಧಾಮವಾಗಿದ್ದು , ಕರ್ನಾಟಕದ ಅತ್ಯಂತ ಸುಂದರ ಪರಿಸರ ತಾಣಗಳಲ್ಲಿ ಒಂದಾಗಿದೆ. ಚಾರಣಿಗರ ಸ್ವರ್ಗವೆನಿಸಿದೆ. ಇದು ಶೃಂಗೇರಿಯಿಂದ ೫೦ ಕಿ.ಮೀ. ದೂರದಲ್ಲಿದೆ.
  5. ಗಂಗಾಮೂಲ - ತುಂಗಾ ಭದ್ರಾಹಾಗೂ ನೇತ್ರಾ ನದಿಗಳ ಉಗಮ ಸ್ಥಾನ.
  6. ನರಸಿಂಹ ಪರ್ವತ - ಚಾರಣಪ್ರಿಯರಿಗೆ ಇದೊಂದು ಸುಂದರ ಸ್ಥಳ. ಇದು ಕಿಗ್ಗಾ ಊರಿನ ಸಮೀಪವಿದೆ.
  7. ಹನುಮಾನ್ ಗುಂಡಿ (ಸೂತನಬ್ಬಿ) ಜಲಪಾತ- ಇದು ಗಂಗಾಮೂಲದ ಸಮೀಪವಿದೆ. ಕೆರೆಕಟ್ಟೆಯಿಂದ ಕುದುರೆಮುಖಕ್ಕೆ ಹೋಗುವ ಮಾರ್ಗದಲ್ಲಿದೆ.

ಹೋಬಳಿಗಳುಸಂಪಾದಿಸಿ

ಗ್ರಾಮ ಪಂಚಾಯಿತಿಗಳುಸಂಪಾದಿಸಿ

  1. ಅಡ್ಡಗದ್ದೆ ಗ್ರಾಮ ಪಂಚಾಯಿತಿ-(ಗ್ರಾಮಗಳು-ಬೆಳಂದೂರು,ಕಾವಡಿ)
  2. ಹೊಳೇಕೊಪ್ಪ [೧]
  3. ಮರ್ಕಲ್ (ಕೋಗೋಡು, ಗಂಡಘಟ್ಟ, ಯಡದಳ್ಳಿ, ಯಡದಾಳು)
  4. ಕೂತಗೋಡು
  5. ಕೆರೆಕಟ್ಟೆ (ಕೆರೆ)
  6. ನೆಮ್ಮಾರುhttp://www.brandbharat.com/english/karnataka/districts/Chikmagalur/Chikmagalur_SRINGERI_NEMMAR_NEMMAR%20GRAM.html Archived 2021-05-08 ವೇಬ್ಯಾಕ್ ಮೆಷಿನ್ ನಲ್ಲಿ.
  7. ವಿದ್ಯಾರಣ್ಯಪುರ

ತಲುಪಲು ಮಾರ್ಗಗಳುಸಂಪಾದಿಸಿ

  • ಜಿಲ್ಲಾ ಕೇಂದ್ರವಾದ ಚಿಕ್ಕಮಗಳೂರಿನಂದ ರಸ್ತೆ ಮಾರ್ಗವಾಗಿ ಆಲ್ದೂರು, ಬಾಳೆಹೊನ್ನೂರು, ಜಯಪುರ ಮೂಲಕ ಶೃಂಗೇರಿಗೆ ( ಸುಮಾರು ೯೦ ಕಿ. ಮೀ.).ಚಿಕ್ಕಮಗಳೂರಿನಿಂದ ಖಾಸಗಿ ಹಾಗು ಸರಕಾರಿ ಬಸ್ ಗಳ ನೇರ ಸಂಪರ್ಕವಿದೆ. ಸಮೀಪದ ರೈಲ್ವೆ ನಿಲ್ದಾಣ ಕಡೂರಿನಿಂದ ಚಿಕ್ಕಮಗಳೂರು ಮೂಲಕ ಶೃಂಗೇರಿಗೆ ತಲುಪಬಹುದು.
  1. ಉಡುಪಿಯಿಂದ ಹಿರಿಯಡಕ, ಹೆಬ್ರಿ, ಆಗುಂಬೆ, ಬಿದರಗೋಡು,
  2. ಶಿವಮೊಗ್ಗದಿಂದ,ನರಸಿಂಹರಾಜಪುರ,ಕೊಪ್ಪ ಮಾರ್ಗವಾಗಿ ಶೃಂಗೇರಿಗೆ ತಲುಪಬಹುದು (ಅಂದಾಜು ೧೦೫ ಕಿ. ಮೀ.).
  3. ಶಿವಮೊಗ್ಗದಿಂದ ತೀರ್ಥಹಳ್ಳಿ,ಕೊಪ್ಪ ಮಾರ್ಗವಾಗಿಯೂ ಶೃಂಗೇರಿಯನ್ನು ತಲುಪಬಹುದು. ಇದು ರಾಷ್ಟ್ರೀಯ ಹೆದ್ದಾರಿ ೧೩ ವ್ಯಾಪ್ತಿಗೆ ಸೇರುತ್ತದೆ.
  4. ಸಮೀಪದ ವಿಮಾನ ನಿಲ್ದಾಣ ಮಂಗಳೂರಿನಲ್ಲಿದೆ. ಇಲ್ಲಿಂದ ಮೂಡಬಿದಿರೆ, ಕಾರ್ಕಳ, ಕೆರೆಕಟ್ಟೆ ಮೂಲಕ ಶೃಂಗೇರಿಗೆ ರಸ್ತೆ ಸಂಪರ್ಕವಿದೆ (ಅಂದಾಜು ೧೧೬ ಕಿ. ಮೀ.). ಬೆಂಗಳೂರು, ಮೈಸೂರು, ಮಂಡ್ಯ, ಮೇಲುಕೋಟೆ, ಕೋಲಾರ, ಮಡಿಕೇರಿ, ಹಾಸನ, ಚನ್ನರಾಯಪಟ್ಟಣ (ಶ್ರವಣಬೆಳಗೊಳ)ದಿಂದ ಶೃಂಗೇರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಸೌಕರ್ಯವಿದೆ. ಸಮೀಪದ ಪ್ರೇಕ್ಷಣೀಯ ಸ್ಥಳಗಳೆಂದರೆ ಹೊರನಾಡು (೬೦ ಕಿಮೀ), ಉಡುಪಿ (೮೫ ಕಿಮೀ), ಆಗುಂಬೆ (೨೫ ಕಿಮೀ) ಜೈನ ಯಾತ್ರಾ ಸ್ಥಳಗಳಾದ ನರಸಿಂಹರಾಜಪುರ (೫೫ ಕಿಮೀ), ಹುಂಚ (೮೦ ಕಿಮೀ).

ಸಂಬಂಧಪಟ್ಟ ಲೇಖನಗಳುಸಂಪಾದಿಸಿ

ಆಕರಗಳುಸಂಪಾದಿಸಿ

  1. "ಆರ್ಕೈವ್ ನಕಲು". Archived from the original on 2009-06-19. Retrieved 2009-09-23.

ಹೊರಗಿನ ಸಂಪರ್ಕಗಳುಸಂಪಾದಿಸಿ

ಉಲ್ಲೇಖಗಳುಸಂಪಾದಿಸಿ

"https://kn.wikipedia.org/w/index.php?title=ಶೃಂಗೇರಿ&oldid=1132751" ಇಂದ ಪಡೆಯಲ್ಪಟ್ಟಿದೆ