ಶಿರಸಿ ಶ್ರೀ ಮಾರಿಕಾಂಬಾ ದೇವಸ್ಥಾನ

ಸಿರ್ಸಿಯಲ್ಲಿರುವ ದುರ್ಗಾದೇವಿ ದೇವಸ್ಥಾನ
(ಶ್ರೀ ಮಾರಿಕಾಂಬಾ ದೇವಾಲಯ ಇಂದ ಪುನರ್ನಿರ್ದೇಶಿತ)
ಸಿರ್ಸಿ ಶ್ರೀ ಮಾರಿಕಾಂಬಾ ದೇವಸ್ಥಾನ
ಮಾರಿಗುಡಿ
ಭೂಗೋಳ
ದೇಶಭಾರತ
ರಾಜ್ಯಕರ್ನಾಟಕ
ಜಿಲ್ಲೆಉತ್ತರ ಕನ್ನಡ
ಸ್ಥಳಸಿರ್ಸಿ
ಇತಿಹಾಸ ಮತ್ತು ಆಡಳಿತ
ಆಡಳಿತ ಮಂಡಳಿಧರ್ಮದರ್ಶಿ
ಅಧೀಕೃತ ಜಾಲತಾಣmarikambatemple.com
ಸಿರ್ಸಿ ಶ್ರೀ ಮಾರಿಕಾಂಬಾ ದೇವಿ
ಜಗದಂಬೆ
ಶಕ್ತಿದೇವತೆ, ಮಾತೃದೇವತೆ, ಮಳೆದೇವತೆ.
ಸಿರ್ಸಿ ಶ್ರೀ ಮಾರಿಕಾಂಬಾ ದೇವಿ
ಇತರ ಹೆಸರುಗಳುಸಿರ್ಸಿ ಅಮ್ಮ
ಮಾರಿಅಮ್ಮ
ದುರ್ಗಾದೇವಿ
ಭುವನೇಶ್ವರಿ
ಮಹಿಷಾಸುರಮರ್ದಿನಿ
ಸಂಲಗ್ನತೆಪಾರ್ವತಿ, ದುರ್ಗಾ, ಕಾಳಿ
ನೆಲೆಸಿರ್ಸಿ
ಮಂತ್ರಓಂ ಶ್ರೀ ಸಿರ್ಸಿ ಮಾರಿಕಾಂಬೆಯೆ ನಮಃ
ದಿನಮಂಗಳವಾರ ಮತ್ತು ಶುಕ್ರವಾರ
ಬಣ್ಣ  ಹಳದಿ ( ಅರಿಶಿಣ )
  ಕೆಂಪು ( ಕುಂಕುಮ )
ಸಂಗಾತಿಶಿವ
ವಾಹನಹುಲಿ
ಗ್ರಂಥಗಳುಜಾನಪದ , ಮಹಾಭಾರತ
ಪ್ರದೇಶಮಲೆನಾಡು
ಹಬ್ಬಗಳುಸಿರ್ಸಿ ಜಾತ್ರೆ, ಹೊಳಿ, ಯುಗಾದಿ, ನವರಾತ್ರಿ, ವಿಜಯದಶಮಿ, ದುರ್ಗಾಪೂಜೆ,
ಜನ್ಮಸ್ಥಳವಿರಾಟನಗರ (ಹಾನಗಲ್)
Sirsi Fair
ಸಿರ್ಸಿ ಜಾತ್ರೆ
ಸಿರ್ಸಿ ಮಾರಿಕಾಂಬೆ ರಥೋತ್ಸವ
(ರಾಕ್ಷಸ ಮಹಿಷಾಸುರನನ್ನು ಸಂಹರಿಸಲು ಸಿರ್ಸಿ ಮಾರಿಕಾಂಬೆಯು ಮಹಿಷಮಂಡಲ/ಬಿಡ್ಕಿಬೈಲ್ ಕಡೆಗೆ ಧಾವಿಸುತ್ತಿರುವುದು)
(ದಿನ ೧)
ಶಿವ-ಸಿರ್ಸಿ ಮಾರಿಕಾಂಬೆ ವಿವಾಹ
(ಪಾರ್ವತಿ ಅವತಾರ)
(ದಿನ ೨)
ಸಿರ್ಸಿ ಮಾರಿಕಾಂಬೆಯು ಮಹಿಷಾಸುರನನ್ನು ಸಂಹರಿಸುತ್ತಿರುವುದು
(ದುರ್ಗಾ ಅವತಾರ)
(ದಿನ ೯)
ರೌದ್ರ ಸಿರ್ಸಿ ಮಾರಿಕಾಂಬೆಯ ನಡಿಗೆ
(ಕಾಳಿ ಅವತಾರ)
ಸ್ಥಿತಿಸಕ್ರಿಯ
ಪ್ರಕಾರಜಾತ್ರೆ
ಆವರ್ತನಪ್ರತಿ 2 ವರ್ಷಕ್ಕೊಮ್ಮೆ
ಸ್ಥಳಸಿರ್ಸಿ
ಸಕ್ರಿಯ ವರ್ಷಗಳು335–336
ಉದ್ಘಾಟನೆ1688 (1688)
Founderಸಿರ್ಸಿ ಗ್ರಾಮಸ್ಥರು
ಇತ್ತೀಚಿನ2022
ಹಿಂದಿನ2020
ಮುಂದಿನ2024
ಹಾಜರಿ25,00,000+ [೧]
Organised byಸಿರ್ಸಿ ಮಾರಿಕಾಂಬಾ ದೇವಸ್ಥಾನ
2022
ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆ [೨]

ಇತಿಹಾಸ ಬದಲಾಯಿಸಿ

ಅಂದಿನ ವಿರಾಟ ನಗರವಾಗಿದ್ದ ಈಗಿನ ಹಾನಗಲ್ಲಿನಲ್ಲಿ ಧರ್ಮರಾಯನು ದೇವಿಯನ್ನು ಆರಧಿಸುತ್ತಿದ್ದನ್ನು ಎಂದು ಮಹಾಭಾರತದಲ್ಲಿ ಹೇಳಲಾಗಿದೆ. ಚಾಲುಕ್ಯರ ಕಾಲದ ಶಾಸನದಲ್ಲಿ ಕೂಡ ಇದರ ಉಲ್ಲೇಖವಿದೆ,ಹಾನಗಲ್ಲಿನಲ್ಲಿ ಜಾತ್ರೆ ಮುಗಿದ ನಂತರ ಆಭರಣಗಳ ಸಮೇತವಾಗಿ ದೇವಿಯನ್ನು ಒಂದು ಪೆಟ್ಟಿಗೆಯಲ್ಲಿ ಹಾಕಿ ಇಟ್ಟಿದ್ದರು. ಅದನ್ನು ಕೆಲವು ಕಳ್ಳರು ಅಪಹರಿಸಿ ಸಿರ್ಸಿಗೆ ತಂದರು. ಆಭರಣಗಳನ್ನು ಹಂಚಿಕೊಂಡ ನಂತರ ಆ ವಿಗ್ರಹವನ್ನು ಪೆಟ್ಟಿಗೆಯಲ್ಲಿಟ್ಟು ಕೆರೆಗೆ ಎಸೆದರು. ಆ ಕೆರೆಯು ಸಿರ್ಸಿಯ ದೇವಿಕೆರೆ ಎಂದು ಹೆಸರಾಗಿದೆ.

ಭಕ್ತನೊಬ್ಬ ಪ್ರತಿ ವರ್ಷ ಚಂದ್ರಗುತ್ತಿಯ ಜಾತ್ರೆಗೆ ಹೋಗುತ್ತಿದ್ದ. ಆದರೆ ಒಂದು ಬಾರಿ ಅವನನ್ನು ಜನರು ತಡೆದು ಪೀಡಿಸಿದರು. ಅದರಿಂದ ಬೇಸರಗೊಂಡು ಅವನು ಮುಂದಿನ ವರ್ಷ ಜಾತ್ರೆಗೆ ಹೋಗದೆ ಸಿರ್ಸಿಯಲ್ಲಿಯೇ ದೇವಿಯ ಆರಾಧನೆ ಮಾಡಿದನು. ಒಂದು ರಾತ್ರಿ ದೇವಿ ಅವನಿಗೆ "ನಾನು ಮಾರಮ್ಮ. ನಾನು ನಿಮ್ಮ ಊರಿನ ಕೆರೆಯಲ್ಲಿದ್ದೇನೆ. ನನ್ನನ್ನು ಮೇಲೆತ್ತು" ಎಂದು ಹೇಳಿದಂತೆ ಕನಸು ಬಿತ್ತು. ಅವನು ಅದನ್ನು ಆ ಊರಿನ ಪ್ರಮುಖರಿಗೆ ತಿಳಿಸಿದನು. ಅದರಂತೆ ಊರವರು ಕೆರೆಯ ಸುತ್ತ ಸೇರಲಾಗಿ ಭಕ್ತನು ಮೂರು ಸುತ್ತು ಕೆರೆಯನ್ನು ಸುತ್ತಿ ದೇವಿಯನ್ನು ಪ್ರಾರ್ಥಿಸಿದನು. ಕೆರೆಯ ಮೇಲೆ ತೇಲುತ್ತಿರುವ ಪೆಟ್ಟಿಗೆಯು ಕಂಡುಬಂದಿತು. ಅದರಲ್ಲಿನ ವಿಗ್ರಹದ ಭಾಗಗಳನ್ನು ಒಟ್ಟು ಸೇರಿಸಲಾಗಿ ದೇವಿಯ ವಿಗ್ರಹವು ಮೂಡಿಬಂದಿತು.

ಗ್ರಾಮಸ್ಥರು ದೇವಿಯ ವಿಗ್ರಹವನ್ನು ಸಿರ್ಸಿಯಲ್ಲಿ ಸ್ಥಾಪಿಸಲು ಅನುಮತಿ ಕೋರಿ ಸೋಂದಾ ಸಂಸ್ಥಾನದ ಮಹಾರಾಜರನ್ನು ಕೇಳಿದರು. ಅದರಂತೆ ಕ್ರಿ.ಶ. ೧೬೮೯ರಲ್ಲಿ, ಅಂದರೆ ಶಾಲಿವಾಹನ ಶಕೆ ೧೬೧೧ರ ಶುಕ್ಲ ಸಂವತ್ಸರದ ವೈಶಾಖ ಶುದ್ಧ ಅಷ್ಟಮಿಯಂದು, ಮಂಗಳವಾರ ದೇವಿಯನ್ನು ಈಗಿನ ಮಾರಿಕಾಂಬಾ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.[೩]

ಸಿರ್ಸಿ ಜಾತ್ರೆ ಬದಲಾಯಿಸಿ

ಪ್ರತಿ ಎರಡು ವರ್ಷಗಳಿಗೊಮ್ಮೆ ಸರ್ವತ್ರ ಸುಭಿಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ-ಉತ್ಸವಗಳಿಂದೊಡಗೂಡಿದ ಶ್ರೀ ಮಾರಿಕಾಂಬಾ ಜಾತ್ರೆಯನ್ನು ಅತೀ ವಿಜ್ರಂಭಣೆಯಿಂದ ನಡೆಸಲಾಗುತ್ತದೆ. ಇದು ಭಾರತದಲ್ಲಿಯೇ ಅತೀದೊಡ್ಡ ಜಾತ್ರೆ, ಈ ಜಾತ್ರೆಗೆ ದೇಶದ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತದೆ. ಅನೇಕಾನೇಕ ಮನರಂಜನಾ ಕಾರ್ಯಕ್ರಮಗಳು ಜಾನಪದ ಕಲೆಗಳ ಪ್ರದರ್ಶನಗಳು, ರಸ್ತೆಯ ಬದಿಗಳಲ್ಲಿ ಬಗೆ ಬಗೆಯ ಅಂಗಡಿ ಮುಗ್ಗಟ್ಟುಗಳು, ಝಗ ಝಗಿಸುವ ದೀಪದ ಅಲಂಕಾರಗಳು ಜಾತ್ರೆಯ ಸೊಬಗನ್ನು ಹೆಚ್ಚಿಸುತ್ತವೆ.[೪]

  • ವಿಧಿ ವಿಧಾನಗಳು

ಸಿರ್ಸಿಯ ಜಾತ್ರೆ ೯ ದಿನಗಳ ಕಾಲ ಜರುಗುವ ಅದ್ದೂರಿ ಜಾತ್ರೆ ಇಲ್ಲಿ ಜಾತ್ರೆ ಪ್ರಾರಂಭ ಆಗುವ ಎರಡು ತಿಂಗಳು ಮೊದಲಿನಿಂದಲೆ ಜಾತ್ರೆಯ ವಿಧಿ ವಿಧಾನಗಳು ಪ್ರಾರಂಭವಾಗುತ್ತವೆ. ಜಾತ್ರೆಯ ಮುಹೂರ್ತ ನಿಶ್ಚಯಿಸಲು ಪುಷ್ಯ ಮಾಸದ ಒಂದು ದಿನ ವಿಶೇಷ ಸಭೆ ಕರೆಯಲಾಗುತ್ತದೆ. ಈ ಸಭೆಯಲ್ಲಿ ಊರಿನ ಗಣ್ಯರು, ಸಾರ್ವಜನಿಕರು,ಬಾಬುದಾರರು, ಧರ್ಮದತ್ತಿ ಗಳು ಭಾಗವಹಿಸಿರುತ್ತಾರೆ. ಜಾತ್ರೆಯ ದಿನ ನಿಗದಿಯಾದ ನಂತರ ಸಂಪ್ರದಾಯದಂತೆ ಜಾತ್ರೆಯ ಪೂರ್ವದ ಮೂರು ಮಂಗಳವಾರ ಎರಡು ಶುಕ್ರವಾರದ ದಿನಗಳಂದು ಐದು ಹೊರಬೀಡುಗಳು ಆಗುತ್ತವೆ.


ಹೊರಬೀಡು ಎಂದರೆ ರಾತ್ರಿ ಗಡಿ ಗದ್ದುಗೆಗಳಿಗೆ ಹೋಗಿ ಜಗನ್ಮಾತೆಯ ಸೇವೆಗೆ ಉಪಯೋಗಿಸುವ ಆಯುಧಗಳು ವಾದ್ಯಗಳು, ಕಹಳೆ, ಹಲಗೆ, ದೀವಟಿಗೆ ಮೊದಲಾದವುಗಳನ್ನು ದೇವಿಯ ಎದುರಿಟ್ಟು ಪೂಜಿಸಿ ಪ್ರಾರ್ಥಿಸುವುದು. ಐದು ಹೊರಬೀಡಿನಲ್ಲಿ ಮೂರು ಮಂಗಳವಾರಗಳಂದು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆಯೊಂದಿಗೆ ಪೂರ್ವ ದಿಕ್ಕಿನ ಕಡೆಗೆ ಹೋದರೆ, ಉಳಿದೆರಡು ಶುಕ್ರವಾರ ಪಡಲಿಗೆಯು ಉತ್ತರ ದಿಕ್ಕಿನ ಗಡಿಯ ನಿಶ್ಚಿತ ಗದ್ದುಗೆಗೆ ಹೋಗುತ್ತದೆ. ಎಲ್ಲ ಹೊರಬೀಡಿನಲ್ಲಿ ರಾತ್ರಿ ಮೆರವಣಿಗೆಗಳು ಶ್ರೀ ದೇವಿಗೆ ಉಡಿ ತುಂಬಿದ ನಂತರ ಮರ್ಕಿ ದುರ್ಗಿ ದೇವಸ್ಥಾನಕ್ಕೆ ಹೊಗುವವು ಅಲ್ಲಿ ದೇವತೆಗಳಿಗೆ ಉಡಿ ಸಮರ್ಪಣೆಯಾದ ನಂತರ ಜಾತ್ರೆಯ ಗದ್ದುಗೆಗೆ ಹೋಗಿ ಅಲ್ಲಿ ಹೊರಬೀಡಿನನುಗುಣವಾಗಿ ಉತ್ಸವ ಮೂರ್ತಿಯನ್ನು ಪಡಲಿಗೆಯನ್ನು ಇಟ್ಟು ಪೂಜಿಸುತ್ತಾರೆ. ಮಂಗಳವಾರದ ಹೋರಬೀಡುಗಳಲ್ಲಿ ಪಲ್ಲಕ್ಕಿಯು ಪುರ್ವ ದಿಕ್ಕಿನ ಕೊನೆಯ ಗದ್ದುಗೆಗೆ ಬರುತ್ತದೆ. ನಂತರ ಮೆರವಣಿಗೆಯು ಪೂನಃ ಮರ್ಕಿ ದುರ್ಗಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ಮಾರಿಗುಡಿಗೆ ಹೋಗಿ ಪೂಜೆ ನೆರವೇರಿಸಿ ವಿಸರ್ಜನೆಯಾಗುತ್ತದೆ.

ಈ ಜಾತ್ರೆಯಲ್ಲಿ ಅಮ್ಮನವರು ಸವಾರಿ ಮಾಡುವ ರಥವನ್ನು ಕಟ್ಟುವುದು ತುಂಬಾ ವಿಶೇಷ. ನಾಲ್ಕನೆ ಹೊರಬೀಡಿನ ಮರುದಿನ ಮಂಗಳವಾದ್ಯದೊಂದಿಗೆ ಕಾಡಿಗೆ ಹೋಗಿ ಮೊದಲೆ ನಿಶ್ಚಯಿಸಿದ 'ತಾರಿ' ಮರವನ್ನು ಕಡಿಯುತ್ತಾರೆ. ನಂತರ ಐದನೇ ಹೊರಬೀಡಿನ ದಿನ ಮುಂಜಾನೆ ರಷ್ಮಿ ಮೂಡವ ಸಮಯದಲ್ಲಿ ಮಂಗಳವಾದ್ಯದೊಂದಿಗೆ ಮೆರವಣಿಗೆಯ ಮುಕಾಂತರ ಮರವನ್ನು ತಂದು ದೇವಾಲಯದ ಎದರು ಪೂಜೆ ಸಲ್ಲಿಸಲಾಗುತ್ತದೆ. ಜಾತ್ರೆ ಪ್ರಾರಂಭವಾಗುವ ಏಳು ದಿನಗಳ ಮೊದಲೆ ರಥ ಕಟ್ಟಲು ಪ್ರಾರಂಭಿಸುತ್ತಾರೆ ಬಾಬುದಾರರು ಬಡಿಗೆರರು ಆಚಾರಿಗಳು ಉಪ್ಪಾರರು ರಥ ಕಟ್ಟುವ ಕಾರ್ಯ ಮಾಡುತ್ತಾರೆ.

ಹೊರಬೀಡಿನ ನಂತರ ಮಾರಿ ಕೋಣವನ್ನು ಮೆರೆವಣಿಗೆ ಮುಖಾಂತರ ಮರ್ಕಿ ದುರ್ಗಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ, ನಂತರ ಅಲ್ಲಿಂದ ಗದ್ದುಗೆಯತ್ತ ಸಾಗುತ್ತದೆ ಅಲ್ಲಿ ಅಸಾದಿಯರು ಮತ್ತು ಮೇತ್ರಿಯರು ರಂಗವಿಧಾನ ನೆರೆವೆರಿಸಿ ಪಟ್ಟದ ಕೋಣಕ್ಕೆ ಕಂಕಣ ಧಾರಣೆ ಮಾಡುತ್ತಾರೆ ಇದನ್ನು ಅಂಕೆ ಹಾಕುವುದು ಎನ್ನುತ್ತಾರೆ. ಅಂಕೆ ಹಾಕಿದ ದಿನ ಅಮ್ಮನವರ ವಿಗ್ರಹ ವಿಸರ್ಜನೆ ಮಾಡಿ ಬಣ್ಣಕ್ಕೆ ಕಳುಹಿಸುವ ಸಂಪ್ರದಾಯ ಇರುತ್ತದೆ.

ಜಾತ್ರೆಯ ಗದ್ದುಗೆಯಲ್ಲಿ ನಾಡಿಗ ಬಾಬುದಾರರಿಂದ ಮಂಗಳಾರತಿ ನಡೆಯುತ್ತದೆ ಈ ಮಂಗಳಾರಾತಿಯಿಂದ ಒಂದು ವಿಶೇಷ ಹಣತೆ ಹಚ್ಚುತ್ತಾರೆ ಈ ಹಣತೆಯನ್ನು ಜಾತ್ರೆ ಮುಗಿಯುವವರೆಗೆ ಶಾಂತವಾಗದಂತೆ ಕಾಯಬೇಕು ಮೇಟಿಯವರು ದೀಪ ಆರದಂತೆ ಕಾಯುವ ಕೆಲಸ ಮಾಡುತ್ತಾರೆ. ಇದನ್ನು ಮೇಟ ದೀಪ ಎನ್ನುತ್ತಾರೆ

ಅಂಕೆ ಹಾಕಿದ ನಂತರ ಬರುವ ಮೊದಲ ಮಂಗಳವಾರ ಶ್ರೀದೇವಿಗೆ ಕಲ್ಯಾಣ ಮಹೋತ್ಸವ ಮಾಡಲಾಗುತ್ತದೆ. ಅದೆ ದಿನ ರಥಕ್ಕೆ ಕಳಸಾರೋಹಣ ನೆರವೇರುತ್ತದೆ. ಶ್ರೀ ದೇವಿಯ ಮದುವೆಯ ಸಮಾರಂಭದಲ್ಲಿ ವಿಶೆಷವಾಗಿ ನಾಡಿಗರು, ಬಾಬುದಾರರು ಊರ ಗಣ್ಯರು ಸಕಲ ಭಕ್ತಾದಿಗಳು ಪಾಲ್ಗೊಳ್ಳುತ್ತಾರೆ ಶ್ರೀದೇವಿಯು ಸರ್ವಾಲಂಕಾರ ಭುಷಿತಳಾಗಿ ರಾರಜಿಸುತ್ತಿರುತ್ತಾಳೆ. ಶ್ರೀ ದೇವಿಯ ಮದುವೆಯ ಸಂಪ್ರದಾಯಂದತೆ ಶ್ರೀ ದೇವಿಗೆ ಮಂಗಳ ಸೂತ್ರ ಧಾರಣೆ, ಗುಡಿಗಾರರ ದ್ರಷ್ಟಿ ಪೂಜೆ, ನಾಡಿಗರ ಪೂಜೆ , ಚಕ್ರಸಾಲಿ ಪೂಜೆ ,ಕೇದಾರಿಮನೆತನದ ಪೂಜೆ ಹಾಗು ಪೂಜಾರರ ಪೂಜೆಗಳು ನೆರವೇರುತ್ತವೆ. ಈ ಕಲ್ಯಾಣೊತ್ಸವದಲ್ಲಿ ಘಟ್ಟದ ಕೆಳಗಿನ ಜನರು ಹಾಗು ಬಯಲು ಸೀಮೆಯ ಲಂಬಾಣಿ ಜನಾಗಂದ ಜನರು ವಿಶೇಷವಾಗಿ ಮಹಿಳೆಯರು ತಮ್ಮ ಸಂಪ್ರದಾಯ ಉಡುಗೆ ಧರಿಸಿ ನೃತ್ಯ ಮಾಡುವುದುದು ಮತ್ತು ಸಂಗೀತ ವಾದ್ಯಗಳನ್ನು ನುಡಿಸುವುದು ಮದುವೆಯ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದು ಕೊಡುತ್ತದೆ.

ಬುಧವಾರ ಮುಂಜಾನೆ ಶ್ರೀದೇವಿಯನ್ನು ರಥದ ಮೆಲೆ ಪ್ರತಿಷ್ಠಾಪನೆ ಮಾಡುವ ಮೊದಲು ದೇವಾಲಯದ ಮುಂಭಾಗದ ಭೂತರಾಜನಿಗೆ ಸಾತ್ವಿಕ ಬಲಿ ಸಮರ್ಪಣೆ ಮಾಡಲಾಗುತ್ತದೆ. ರಥೋತ್ಸವದೊಂದಿಗೆ ಶ್ರೀದೇವಿಯ ಶೋಭಾಯಾತ್ರೆ ಅದ್ದೂರಿಯಾಗಿ ಮಾರಿಗುಡಿಯಿಂದ ಊರ ಮದ್ಯದ ಬಿಡಕಿ ಬೈಲಿನ ಜಾತ್ರಾ ಗದ್ದುಗೆಗೆ ಬಂದು ತಲುಪುತ್ತದೆ. ಶ್ರೀ ದೇವಿಯ ಉ ಶೋಭಾಯಾತ್ರೆಯಲ್ಲಿ ಬರುವಾಗ ಭಕ್ತರ ಭಕ್ತಿಯ ಪರಾಕಾಷ್ಠೆಯ ತುತ್ತತುದಿಯಲ್ಲಿರುತ್ತದೆ ಜೋಗತಿಯರು ನೃತ್ಯ ಮಾಡುತ್ತಿರುತ್ತಿದ್ದರೆ ಅಸಾದಿಯರ ಕೋಲಾಟ, ಡೊಳ್ಳು ಕುಣಿತ, ವಾಲಗ ಕಹಳೆಯ ನಿನಾದ ಝೇಂಕರಿಸುತ್ತಿರುತ್ತದೆ.

ಇತರ ಭಕ್ತರು ರಥಕ್ಕೆ ಬಾಳೆಹಣ್ಣನ್ನು ಹಾಕುತಿದ್ದರೆ ಇನ್ನೂ ಕೆಲ ಭಕ್ತರು ಹಾರುಗೋಳಿ ಅಂದರೆ ಕೋಳಿಯನ್ನು ಹಾರಿ ಬಿಡುತ್ತರೆ. ಶೋಭಾಯಾತ್ರೆ ಮುಗಿದ ಮೇಲೆ ಅಮ್ಮನವರನ್ನು ಜಾತ್ರಾ ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ‌. ೮ ದಿನಗಳ ಕಾಲ ಜಗನ್ಮಾತೆ ಸಕಲ ಸರ್ವಾಲಂಕಾರ ಭುಷಿತಳಾಗಿ ನಗರ ಮದ್ಯಭಾಗದಲ್ಲಿನ ಗದ್ದುಗೆಯ ಮೇಲೆ ಕುಳಿತು ಜನರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಶ್ರೀದೇವಿಗೆ ಭಕ್ತರು ಸಲ್ಲಿಸಬೇಕಾದ ಸೇವೆಗಳೆಲ್ಲವು ಮರುದಿನ ಗುರುವಾರದಿಂದ ಪ್ರಾರಂಭವಾಗುತ್ತದೆ. ೮ ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಜಾತ್ರೆಗೆ ಪ್ರತಿನಿತ್ಯವು ಲಕ್ಷಾಂತರ ಜನ ಬರುತ್ತಾರೆ.

ಜಾತ್ರೆ ಪ್ರಾರಂಭವಾದ ೮ ದಿನಗಳ ನಂತರ ಬುಧವಾರ ಜಾತ್ರಾ ವಿಸರ್ಜನಾ ವಿಧಿವಿಧಾನಗಳು ನೆರವೇರುತ್ತವೆ ನಾಡಿಗ ಬಾಬುದಾರರಿಂದ ಕೊನೆಯ ಮಂಗಳಾರತಿ, ಶ್ರೀದೇವಿಯನ್ನು ಗದ್ದುಗೆಯಿಂದ ಇಳಿಸಿ ಮಂಟಪದ ಮಧ್ಯಭಾಗದಲ್ಲಿ ಕುಡಿಸಿದಾಗ ಅಸಾದಿಯರು ಹುಲುಸು ಪ್ರಸಾದವನ್ನು ಪೂಜಿಸಿ ರೈತರಿಗೆ ವಿತರಿಸುತ್ತಾರೆ ರೈತರು ಅದನ್ನು ತಮ್ಮ ಹೊಲದಲ್ಲಿ ಬಿತ್ತುತ್ತಾರೆ. ಶ್ರೀ ದೇವಿಯು ಜಾತ್ರೆಯ ಮಂಟಪದಿಂದ ರಥದಲ್ಲಿ ಮರಳುವುದಿಲ್ಲ ಬದಲಾಗಿ ವಿಶೆಷವಾಗಿ ಸಿದ್ದಗೊಳಿಸಿದ ಅಟ್ಟಲಿನಲ್ಲಿ ಮರಳುತ್ತಾಳೆ. ಜಾತ್ರೆ ಕೊನೆಯ ವಿಧಾನಗಳಲ್ಲಿ ಮಾತಂಗಿ ಚಪ್ಪರ ಸುಡುವುದು ಒಂದು, ದೇವಿ ಗದ್ದುಗೆಯಿಂದ ಮೆರವಣಿಗೆಯಲ್ಲಿ ಹೋಗುವಾಗ ಮಹಿಷಾಸುರನ ಸಂಹಾರ ಸಂಕೇತವಾಗಿ ಮಾತಂಗಿ ಚಪ್ಪರ ಸುಡುತ್ತಾರೆ‌. ಜಾತ್ರೆಯ ಕಟ್ಟಕಡೆಯ ವಿಧಾನ ಪೂರ್ವ ದಿಕ್ಕಿನ ಗಡಿಯ ಗದ್ದುಗೆಗೆ ಹೋಗಿ ಮುಕ್ತಾಯದ ವಿಧಿ ನೆರೆವೆರಿಸಲಾಗುತ್ತದೆ ಅಲ್ಲಿ ಶ್ರೀದೇವಿಯ ಮೂರ್ತಿಯನ್ನು ವಿಸರ್ಜಿಸಲಾಗುತ್ತದೆ. ಹೀಗೆ ಜಾತ್ರೆ ಸಂಪನ್ನಗೊಳ್ಳುತ್ತದೆ.

ಈ ಜಾತ್ರೆಯಲ್ಲಿ ಜನರಿಗೆ ಮನರಂಜನೆಗೆನು ಕೊರತೆ ಇಲ್ಲ ಮಕ್ಕಳು ಯುವಕರಿಂದ ಹಿಡಿದು ವೃದ್ದರಿಗೆಲ್ಲರಿಗು ಇಲ್ಲಿ ಮನರಂಜನೆಯ ಮಹಾಪೂರವೆ ಇರುತ್ತದೆ. ಕಲಾಸಕ್ತರಿಗೆ ವಿವಿಧ ನಾಟಕ ಕಂಪನಿಗಳಿಂದ ನಾಟಕ, ಯಕ್ಷಗಾನ, ಸರ್ಕಸ್ಸುಗಳು‌ ಇರುತ್ತವೆ , ದೈತ್ಯ ತೊಟ್ಟಿಲು ಜೋಕಾಲಿಗಳು ಮತ್ತು ವಿವಿಧ ಆಟಿಕೆಗಳು , ಜಾದು ಚಮತ್ಕಾರಗಳು, ಶ್ವಾನ ಪ್ರದರ್ಶನ , ಪುಸ್ತಕ ಪ್ರಿಯರಿಗೆ ಪುಸ್ತಕ ಪ್ರದರ್ಶನ, ಕೆರೆಯಲ್ಲಿ ಬೋಟಿಂಗ್ , ತಿಂಡಿ ಪ್ರಿಯರಿಗೆ ವಿವಿಧ ಭಗೆಯ ತಿನುಸುಗಳು, ಮಹಿಳೆಯರ ಪ್ರಿಯ ಸೌಂದರ್ಯ ವರ್ಧಕ ಆಭರಣ ಬೆಳೆಗಳ ಮಳಿಗೆಗಳು, ಬಟ್ಟೆ ಬ್ಯಾಗು ಮಕ್ಕಳ ಆಟಿಕೆಗಳ ಮಳಿಗೆಗಳು, ಮಹಿಳಿಯರಿಗೆ ಗೃಹೊಪಕರಣಗಳ ಮಳಿಗೆಗಳು ಹೀಗೆ ಸಕಲ ರೀತಿಯ ಮನರಂಜನೆ ಈ ಜಾತ್ರೆಯಲ್ಲಿ ಇರುತ್ತದೆ.

 
Fair@night

ವಿಶೆಷವಾಗಿ ಈ ಜಾತ್ರೆಯಲ್ಲಿ ಎಲ್ಲೂ ಪ್ರಾಣಿ ಹಿಂಸೆ ಇಲ್ಲ ,ಬಹುಶಃ ಒಂದು ಗ್ರಾಮ ದೇವತೆ‌ ಈಗ ಇಡಿ ನಾಡಿಗೆ ಅಧಿದೇವತೆ ಆಗಿರೋದನ್ನ ನಾವು ಸಿರ್ಸಿ ಯಲ್ಲಿ ಮಾತ್ರ ಕಾಣಬಹುದು.

ಸಿರ್ಸಿಗೆ ಪರ ಊರಿನಿಂದ ಬರುವ ಭಕ್ತಾದಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆಯ ಸಂಸ್ಥೆಯು ಕುಂದಾಪುರ, ಬೈಂದೂರು, ಕಾರವಾರ, ಶಿವಮೊಗ್ಗ, ಸಾಗರ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ ದಾವಣಗೆರೆಗಳಿಂದ ಹೆಚ್ಚಿನ ಬಸ್ ಕಲ್ಪಿಸಿರುತ್ತದೆ, ಬಂದ ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಇರುತ್ತದೆ , ಮತ್ತು ನಗರದ ಅಲ್ಲಲ್ಲಿ ಭಕ್ತರಿಂದ ಉಚಿತ ಮಜ್ಜಿಗೆ ಪಾನಕಗಳು ಮತ್ತು ದಾಸೋಹ ಸೇವೆಗಳು ಇರುತ್ತವೆ.

[೫]

ಸ್ಥಳ ಮತ್ತು ವೈಶಿಷ್ಟ ಬದಲಾಯಿಸಿ

ಭಾರತ ದೇಶ ಸಾಂಸ್ಕೃತಿಕ ಕಲೆ ಆಚಾರ ವಿಚಾರಗಳ ಪರಂಪರೆಯ ದೇಶ ಇಲ್ಲಿ ಎಲ್ಲ ರಾಜ್ಯಗಳು ತಮ್ಮದೆ ಆದ ಸಂಸ್ಕೃತಿ ಹೊಂದಿವೆ ಅದರಲ್ಲೂ ಕರ್ನಾಟಕ ಸಾಂಸ್ಕೃತಿಕ ರಾಯಬಾರಿ ಎಂದರೆ ತಪ್ಪಾಗಲಾರದು ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಅಂತ ಹೇಳುತ್ತಾರೆ ಕಾರಣ ಈ ನಾಡಿನ ಪ್ರತಿಯೊಂದು ಜಿಲ್ಲೆಯು ತನ್ನದೆ ಆದ ಪರಂಪರೆಯ ಸಂಸ್ಕೃತಿ ಹೊಂದಿದೆ ವಿಶಾಲ ಕರ್ನಾಟಕದಲ್ಲಿ ಸಿರ್ಸಿ ಕೂಡಾ ಒಂದು ಶ್ರೀಮಂತ ಸಂಸ್ಕೃತಿಯ ಊರು. ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದ ಘಟ್ಟದ ಮೆಲಿನ ಒಂದು ಸುಂದರ ನಗರ. ಇದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಇರುವುದರಿಂದ ಇದು ತನ್ನ ಸುತ್ತಲೂ ಅದೆಷ್ಟೋ ಜಲಪಾತಗಳಿಂದ ಸುತ್ತಲ್ಪಟ್ಟಿದೆ. ನಗರದ ಮದ್ಯದಲ್ಲಿ ಅಘನಾಶಿನಿ ನದಿ ಉಗಮ ವಾಗಿದ್ದರೆ ಕೆಲವೆ ಮೈಲುಗಳಷ್ಟು ದೂರದಲ್ಲಿ ಶಾಲ್ಮಲೆ ವರದೆಯರು ಸುತ್ತು ವರೆದಿದ್ದಾರೆ . ದಟ್ಟ ಅರಣ್ಯ ಅಡಿಕೆ ತೋಟ ಹಚ್ಚ ಹಸುರಿನ ಪ್ರಕೃತಿಯ ಮದ್ಯ ಇರುವ ಸಿರ್ಸಿ ಎಂದ ತಕ್ಷಣ ಎಲ್ಲರಿಗು ನೆನಪಾಗೊದು ಜಗನ್ಮಾತೆ ಶ್ರೀ ಮಾರಿಕಾಂಬೆ.

ಈ ಭರತ ಖಂಡದ ೫೧ ಶಕ್ತಿ ಪೀಠಗಳಲ್ಲಿ ಒಂದಾದ ಸಿರ್ಸಿ ಮಾರಿಕಾಂಬೆ ಕರ್ನಾಟಕದ ಜಾಗೃತ ಶಕ್ತಿ ಪೀಠ.ಸಿರ್ಸಿಯ ಜನರಿಗೆ ಜಗನ್ಮಾತೆ ಮಾರಿಕಾಂಬೆ ಪ್ರೀತಿಯ ಅಮ್ಮ ಆಗಿದ್ದಾಳೆ. ಈ ತಾಯಿಯ ಆಲಯಕ್ಕೆ ಇಲ್ಲಿನ ಜನ ಪ್ರೀತಿ ಮತ್ತು ಭಕ್ತಿಯಿಂದ ಮಾರಿಗುಡಿ ಎಂದು ಕರೆಯುತ್ತಾರೆ. ಈ ದೇವಾಲಯದಲ್ಲಿ ದಿನವು ಮೂರು ಹೊತ್ತು ಪುಜೆ ಇಡೀ ದಿನವು ಮಂಗಳಾರತಿ , ಮಹಾ ಮಂಗಳಾರತಿ, ಅರ್ಚನೆ, ಭಕ್ತರಿಂದ ಉಡಿ ತುಂಬವ ಸೇವೆ ನಡೆದರೆ ಉಳಿದಂತೆ ವರ್ಷದ ಉತ್ಸವ ಎಂದರೆ ದಸರ, ಯುಗಾದಿ, ಕಾರ್ತಿಕ, ಅಮ್ಮನವರ ಜಯಂತಿ ಉತ್ಸವಗಳು ಅದ್ದೂರಿಯಾಗಿ ನೆರೆವೇರುತ್ತವೆ. ಇಲ್ಲಿ ಎರಡು ವರ್ಷಗಳಿಗೊಮ್ಮೆ ಜರುಗುವ ಮಾರಿಕಾಂಬಾ ಜಾತ್ರೆ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಸಿದ್ದಿ ಹೊಂದಿದೆ ಕರ್ನಾಟಕದ ಮೂಲೆಮೂಲೆಗಳಿಂದ ಅಷ್ಟೇ ಅಲ್ಲದೆ ಕೇರಳ, ಆಂದ್ರ, ತೆಲಂಗಾಣ, ಗೋವೆ ಮಹಾರಾಷ್ಟ್ರದಿಂದ ಸರಿಸುಮಾರು ೧೫ ರಿಂದ ೨೦ ಲಕ್ಷ ಜನ ಜಾತ್ರೆಯಲ್ಲಿ ಸೇರಿರುತ್ತಾರೆ.

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಸರ್ವಾಲಂಕೃತ ಭೂಷಿತಳಾದ ಶ್ರೀ ಮಾರಿಕಾಂಬಾ ದೇವಿಯ ವಿಗ್ರಹ, ದೇವಾಲಯದ ಸೌಂದರ್ಯ, ಘಂಟೆ-ಜಾಗಟೆಗಳ ಸದ್ದಿಗೆ ಪ್ರತಿಯೊಬ್ಬ ಭಕ್ತನ ಮನಸ್ಸು ಭಕ್ತಿಯಿಂದ ಮೈಪುಳಕಗೊಳ್ಳುತ್ತದೆ. ೧೬೮೮ರಲ್ಲಿ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನವನ್ನು ನಿರ್ಮಿಸಲಾಯಿತು. ಈ ದೇವಾಲಯದ ಅರ್ಚಕರು ವಿಶ್ವಕರ್ಮ ಜಾತಿಗೆ ಸೇರಿದವರಾಗಿದ್ದಾರೆ. ಈ ಮಾರಿಕಾಂಬಾ ದೇವಿಯು ದುರ್ಗಾದೇವಿಯ ಇನ್ನೊಂದು ಅವತಾರ. ಕರ್ನಾಟಕದ ಎಲ್ಲಾ ಮಾರಿಯಮ್ಮಗಳ ಹಿರಿಯ ಸಹೋದರಿಯಾದ ಈ ದೇವಿಯ ದೇವಾಲಯವನ್ನು 'ದೊಡ್ಡಮ್ಮನ ದೇವಸ್ಥಾನ' ಎಂದು ಕೂಡಾ ಕರೆಯುತ್ತಾರೆ.[೬]

ದೇವಾಲಯಕ್ಕೆ ಗಾಂಧೀಜಿ ಭೇಟಿ ಬದಲಾಯಿಸಿ

೧೯೩೩ರ ವೇಳೆ ಮಹಾತ್ಮಗಾಂಧಿ ಸಿರ್ಸಿಯ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಎಂಬ ಉಲ್ಲೇಖ ಕೂಡಾ ಇದೆ. ತದ ನಂತರ ಗಾಂಧೀಜಿಯವರ ಅನುಯಾಯಿಗಳು ಜನಸಾಮಾನ್ಯರಿಗೆ ಅಹಿಂಸಾ ತತ್ವಗಳನ್ನು ಭೋಧಿಸಿ ಅವರ ಮೂಢ ನಂಬಿಕೆಗಳನ್ನು ತೊಡೆದು ಹಾಕಿ ಹಿಂಸಾತ್ಮಕವಾದ ಈ ಪ್ರಾಣಿಬಲಿಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾದರು ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ಈಗ ಜಾತ್ರೆಯ ಸಂದರ್ಭದಲ್ಲಿ ಕೋಣನ ಬಲಿಕೊಡುವ ಪದ್ದತಿಯನ್ನು ನಿಷೇಧಿಸಲಾಗಿದೆ. ಶ್ರೀ ಮಾರಿಕಾಂಬಾ ದೇವಿಯ ದೇವಾಲಯದ ಸುತ್ತಲು ಗೋಡೆಗಳ ಮೇಲೆ ಹಿಂದಿನ ಕಾಲದ ಸುಂದರ ವರ್ಣಚಿತ್ರಗಳು, ರಾಮಾಯಣ ಮಹಾಭಾರತದ ಘಟನೆಗಳನ್ನು ವರ್ಣಿಸುವ ಚಿತ್ರಗಳು, ಶಿರಸಿಯ ಜಾತ್ರೆ, ಜಾತ್ರೆಯ ಸೊಬಗು ಪ್ರತಿಯೊಬ್ಬರ ಮನಸಿನಲ್ಲಿಯೂ ಅಚ್ಛಳಿಯದೇ ಉಳಿಯುವಂತದ್ದಾಗಿದೆ. ಒಟ್ಟಿನಲ್ಲಿ ಇಲ್ಲಿನ ಸೊಬಗು ಸೌಂದರ್ಯ ವರ್ಣಿಸಲಸಾಧ್ಯವಾದದ್ದಾಗಿದೆ.

ಚಿತ್ರಗಳು ಬದಲಾಯಿಸಿ

ದೇವಸ್ಥಾನದ ಮುಂಭಾಗ
ದೇವಸ್ಥಾನದ ಸಭಾಂಗಣ
ದೇವಸ್ಥಾನದ ಒಳಗಡೆ ಇರುವ ಮಹಿಷಾಸುರಮರ್ದಿನಿ ಚಿತ್ರ
ದೇವಸ್ಥಾನದ ಒಳಗಡೆ ಇರುವ ಕಾಳಿ ಚಿತ್ರ

ಇವನ್ನೂ ನೋಡಿ ಬದಲಾಯಿಸಿ

ಹೊರಗಿನ ಸಂಪರ್ಕಗಳು ಬದಲಾಯಿಸಿ


ಉಲ್ಲೇಖಗಳು ಬದಲಾಯಿಸಿ

  1. https://vijaykarnataka.com/news/uttara-kannada/sirsi-marikamba-jatre-creates-rs-42-lakh-income-for-city-municipal-council/articleshow/90498405.cms
  2. https://kannada.news18.com/news/state/sirsi-marikamba-devi-jathra-mahotsava-was-inaugurated-yesterday-dkk-ach-742386.html
  3. http://kanarasaraswat.in/Admin/Master/MagzineDocs.aspx?MagzineID=9b867d28-3a80-417c-a38a-6231b61a7c0f&FileName=sep2010.pdf[ಶಾಶ್ವತವಾಗಿ ಮಡಿದ ಕೊಂಡಿ]
  4. "ಮಾರಿಕಾಂಬಾ ಜಾತ್ರೆ". Archived from the original on 2022-11-14. Retrieved 2015-11-03.
  5. "ಮಾರಿಕಾಂಬಾ ಜಾತ್ರೆ".
  6. "ದುರ್ಗಾ ಪೂಜೆ".